Homeಕರ್ನಾಟಕರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮಕೈಗೊಳ್ಳಿ: ಸಿದ್ದರಾಮಯ್ಯ ಆಗ್ರಹ

ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮಕೈಗೊಳ್ಳಿ: ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಪಠ್ಯಪುಸ್ತಕ ಮರು ಪರಿಶೀಲನ ಸಮಿತಿ ಕಾರ್ಯ ಮುಗಿದಿದ್ದು ಅದನ್ನು ವಿಸರ್ಜನೆ ಮಾಡಲಾಗಿದೆ ಎಂದಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ವಿಸರ್ಜನೆ ಮಾಡಬೇಕಾಗಿರುವು ಪರಿಷ್ಕೃತ ಪಠ್ಯವನ್ನು, ಈಗಾಗಲೇ ಅವಧಿ ಮುಗಿದಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ” ಎಂದು ತಿಳಿಸಿದ್ದಾರೆ. ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನು ಕಿತ್ತುಹಾಕಿದ ಮೇಲೆ ಸಮಿತಿ ಶಿಫಾರಸು ಮಾಡಿರುವ ಪಠ್ಯವನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ? ಎಂದು ಅವರು ಶನಿವಾರ ಪ್ರಶ್ನಿಸಿದ್ದಾರೆ.

“ಜನತೆಯಲ್ಲಿ ಮೂಡಿರುವ ಗೊಂದಲವನ್ನು ಪರಿಹರಿಸುವಂತಹ ಸ್ಪಷ್ಟತೆ ರಾಜ್ಯದ ಮುಖ್ಯಮಂತ್ರಿಗಳ ಮಾತಿನಲ್ಲಿ ಇರಬೇಕು. ಇವರ ಮಾತು ಇನ್ನಷ್ಟು ಗೊಂದಲಗಳನ್ನು ಸೃಷ್ಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರು ಬೋದಿಸಲಿರುವುದು ಹಳೆಯ ಪಠ್ಯವೇ? ಪರಿಷ್ಕೃತ ಪಠ್ಯವೇ?” ಎಂದು ಅವರು ಕೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಸವಣ್ಣನವರ ವಿಚಾರವೂ ಸೇರಿದಂತೆ ಆಕ್ಷೇಪ ವ್ಯಕ್ತವಾಗಿರುವ ಅಂಶಗಳನ್ನು ಪರಿಷ್ಕರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಹಾಗಿದ್ದರೆ ಈಗಿನ ಪರಿಷ್ಕೃತ ಪಠ್ಯವನ್ನು ಕೈಬಿಡಲಾಗುವುದೇ? ಇದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು” ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಹುತ್ವಕ್ಕೆ ಮಾರಕವಾದ ಪಠ್ಯ ಹೇರಲು ಕಾಂಗ್ರೆಸ್ ಬಿಡುವುದಿಲ್ಲ: ರಾಹುಲ್ ಗಾಂಧಿ

“ನಾಡಿನ ಹಲವಾರು ಹಿರಿಯ ಸಾಹಿತಿಗಳು ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗಿರುವ ತಮ್ಮ ಕೃತಿಗಳನ್ನು ವಾಪಸು ಪಡೆದಿದ್ದಾರೆ. ರಾಜ್ಯ ಸರ್ಕಾರ ತಮ್ಮ ಅಭಿಪ್ರಾಯವನ್ನು ಧಿಕ್ಕರಿಸಿದರೆ ಕಾನೂನು ಹೋರಾಟ ಮಾಡುವುದಾಗಿ ಈ ಸಾಹಿತಿಗಳು ಎಚ್ಚರಿಕೆ ನೀಡಿದ್ದಾರೆ. ಇಂತಹ ವಿವಾದಾತ್ಮಕ ಪಠ್ಯವನ್ನು ಬೋಧಿಸಲು ಹೇಗೆ ಸಾಧ್ಯ?” ಎಂದು ಅವರು ಕೇಳಿದ್ದಾರೆ.

“ಪಠ್ಯ ಪರಿಷ್ಕರಣಾ ಸಮಿತಿಗೆ ಅನರ್ಹರ ನೇಮಕ ಮತ್ತು ಅದರಿಂದ ಸೃಷ್ಟಿಯಾಗಿರುವ ವಿವಾದಕ್ಕೆ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಯಾವ ಪಠ್ಯವನ್ನು ಓದಬೇಕೆಂಬ ಬಗ್ಗೆ ವಿದ್ಯಾರ್ಥಿಗಳು, ಯಾವುದನ್ನು ಬೋಧಿಸಬೇಕೆಂದು ಶಿಕ್ಷಕರು ಗೊಂದಲಕ್ಕೀಡಾಗಿದ್ದಾರೆ. ಇದಕ್ಕೆ ಏನು ಪರಿಹಾರ?” ಎಂದು ಸ್ಪಷ್ಟಪಡಿಸುವಂತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಕೇಳಿದ್ದಾರೆ.

“ಈಗಿನ ಗೊಂದಲಗಳಿಗೆ ಇರುವ ಏಕೈಕ ಪರಿಹಾರವೆಂದರೆ ನಾಡದ್ರೋಹಿ ಅಧ್ಯಕ್ಷನ ಸಮಿತಿ ಪರಿಷ್ಕರಿಸಿರುವ ಪಠ್ಯವನ್ನು ರದ್ದುಮಾಡಿ. ನೂತನ ಪರಿಷ್ಕೃತ ಪಠ್ಯ ರಚನೆಯಾಗುವವರೆಗೆ ಹಳೆಯ ಪಠ್ಯವನ್ನೇ ಮುಂದುವರಿಸುವುದು. ಮುಖ್ಯಮಂತ್ರಿಗಳು ಜಿದ್ದಿಗೆ ಬೀಳದೆ ಈ ನಿರ್ಧಾರ ಕೈಗೊಳ್ಳಬೇಕು” ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ತೇಜಸ್ವಿ ಬರೆದ ಕವಿತೆಯನ್ನು ‘ನೈಂಟಿ ಎಮ್ಮೆಲ್‌ ಕವಿತೆ’ ಎಂದಿದ್ದ ಚಕ್ರತೀರ್ಥ; ಕಮೆಂಟ್‌ ವೈರಲ್‌

“ನಾಡಗೀತೆ ಮತ್ತು ರಾಷ್ಟ್ರಕವಿ ಕುವೆಂಪು ಅವರನ್ನು ಗೇಲಿಮಾಡಿರುವ, ಸಮಾಜ ಸುಧಾರಕರಾದ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಮಾತ್ರವಲ್ಲ ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದಲೂ ಕಿತ್ತುಹಾಕಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಕಳೆದ ಹತ್ತು ವರ್ಷಗಳಿಂದ ಕನ್ನಡ ನುಡಿ, ಸಾಹಿತ್ಯ ಮತ್ತು ಸಾಹಿತಿಗಳನ್ನು ಗೇಲಿ ಮಾಡುತ್ತಾ ಬಂದಿರುವ, ಸಾಮಾಜಿಕ ಜಾಲತಾಣಗಳಲ್ಲಿ ವಿಕೃತಿಯ ಅಭಿಪ್ರಾಯಗಳನ್ನು ಹಂಚಿಕೊಂಡು ಸಾಮಾಜಿಕ ಆರೋಗ್ಯವನ್ನು ಹಾಳುಗೆಡಹುತ್ತಾ ಬಂದಿರುವ ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಅವರು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ವೋಟಿನ ಆಸೆಗಾಗಿ ಅಧಿಕಾರದ ಲಾಲಸೆಗಾಗಿ ಮತಾಂಧರನ್ನು ಮತೀಯರನ್ನು ಬೆಂಬಲಿಸುವವರು ಕಿಡಿಗೇಡಿಗಳು ಭಾರತೀಯತೆಯನ್ನು ಬೆಂಬಲಿಸುವವರು ಕಿಡಿಗೇಡಿಗಳ ಅಲ್ಲ ವಂದನೆಗಳು

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...