Homeಕರ್ನಾಟಕರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮಕೈಗೊಳ್ಳಿ: ಸಿದ್ದರಾಮಯ್ಯ ಆಗ್ರಹ

ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮಕೈಗೊಳ್ಳಿ: ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಪಠ್ಯಪುಸ್ತಕ ಮರು ಪರಿಶೀಲನ ಸಮಿತಿ ಕಾರ್ಯ ಮುಗಿದಿದ್ದು ಅದನ್ನು ವಿಸರ್ಜನೆ ಮಾಡಲಾಗಿದೆ ಎಂದಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ವಿಸರ್ಜನೆ ಮಾಡಬೇಕಾಗಿರುವು ಪರಿಷ್ಕೃತ ಪಠ್ಯವನ್ನು, ಈಗಾಗಲೇ ಅವಧಿ ಮುಗಿದಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ” ಎಂದು ತಿಳಿಸಿದ್ದಾರೆ. ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನು ಕಿತ್ತುಹಾಕಿದ ಮೇಲೆ ಸಮಿತಿ ಶಿಫಾರಸು ಮಾಡಿರುವ ಪಠ್ಯವನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ? ಎಂದು ಅವರು ಶನಿವಾರ ಪ್ರಶ್ನಿಸಿದ್ದಾರೆ.

“ಜನತೆಯಲ್ಲಿ ಮೂಡಿರುವ ಗೊಂದಲವನ್ನು ಪರಿಹರಿಸುವಂತಹ ಸ್ಪಷ್ಟತೆ ರಾಜ್ಯದ ಮುಖ್ಯಮಂತ್ರಿಗಳ ಮಾತಿನಲ್ಲಿ ಇರಬೇಕು. ಇವರ ಮಾತು ಇನ್ನಷ್ಟು ಗೊಂದಲಗಳನ್ನು ಸೃಷ್ಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರು ಬೋದಿಸಲಿರುವುದು ಹಳೆಯ ಪಠ್ಯವೇ? ಪರಿಷ್ಕೃತ ಪಠ್ಯವೇ?” ಎಂದು ಅವರು ಕೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಸವಣ್ಣನವರ ವಿಚಾರವೂ ಸೇರಿದಂತೆ ಆಕ್ಷೇಪ ವ್ಯಕ್ತವಾಗಿರುವ ಅಂಶಗಳನ್ನು ಪರಿಷ್ಕರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಹಾಗಿದ್ದರೆ ಈಗಿನ ಪರಿಷ್ಕೃತ ಪಠ್ಯವನ್ನು ಕೈಬಿಡಲಾಗುವುದೇ? ಇದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು” ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಹುತ್ವಕ್ಕೆ ಮಾರಕವಾದ ಪಠ್ಯ ಹೇರಲು ಕಾಂಗ್ರೆಸ್ ಬಿಡುವುದಿಲ್ಲ: ರಾಹುಲ್ ಗಾಂಧಿ

“ನಾಡಿನ ಹಲವಾರು ಹಿರಿಯ ಸಾಹಿತಿಗಳು ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗಿರುವ ತಮ್ಮ ಕೃತಿಗಳನ್ನು ವಾಪಸು ಪಡೆದಿದ್ದಾರೆ. ರಾಜ್ಯ ಸರ್ಕಾರ ತಮ್ಮ ಅಭಿಪ್ರಾಯವನ್ನು ಧಿಕ್ಕರಿಸಿದರೆ ಕಾನೂನು ಹೋರಾಟ ಮಾಡುವುದಾಗಿ ಈ ಸಾಹಿತಿಗಳು ಎಚ್ಚರಿಕೆ ನೀಡಿದ್ದಾರೆ. ಇಂತಹ ವಿವಾದಾತ್ಮಕ ಪಠ್ಯವನ್ನು ಬೋಧಿಸಲು ಹೇಗೆ ಸಾಧ್ಯ?” ಎಂದು ಅವರು ಕೇಳಿದ್ದಾರೆ.

“ಪಠ್ಯ ಪರಿಷ್ಕರಣಾ ಸಮಿತಿಗೆ ಅನರ್ಹರ ನೇಮಕ ಮತ್ತು ಅದರಿಂದ ಸೃಷ್ಟಿಯಾಗಿರುವ ವಿವಾದಕ್ಕೆ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಯಾವ ಪಠ್ಯವನ್ನು ಓದಬೇಕೆಂಬ ಬಗ್ಗೆ ವಿದ್ಯಾರ್ಥಿಗಳು, ಯಾವುದನ್ನು ಬೋಧಿಸಬೇಕೆಂದು ಶಿಕ್ಷಕರು ಗೊಂದಲಕ್ಕೀಡಾಗಿದ್ದಾರೆ. ಇದಕ್ಕೆ ಏನು ಪರಿಹಾರ?” ಎಂದು ಸ್ಪಷ್ಟಪಡಿಸುವಂತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಕೇಳಿದ್ದಾರೆ.

“ಈಗಿನ ಗೊಂದಲಗಳಿಗೆ ಇರುವ ಏಕೈಕ ಪರಿಹಾರವೆಂದರೆ ನಾಡದ್ರೋಹಿ ಅಧ್ಯಕ್ಷನ ಸಮಿತಿ ಪರಿಷ್ಕರಿಸಿರುವ ಪಠ್ಯವನ್ನು ರದ್ದುಮಾಡಿ. ನೂತನ ಪರಿಷ್ಕೃತ ಪಠ್ಯ ರಚನೆಯಾಗುವವರೆಗೆ ಹಳೆಯ ಪಠ್ಯವನ್ನೇ ಮುಂದುವರಿಸುವುದು. ಮುಖ್ಯಮಂತ್ರಿಗಳು ಜಿದ್ದಿಗೆ ಬೀಳದೆ ಈ ನಿರ್ಧಾರ ಕೈಗೊಳ್ಳಬೇಕು” ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ತೇಜಸ್ವಿ ಬರೆದ ಕವಿತೆಯನ್ನು ‘ನೈಂಟಿ ಎಮ್ಮೆಲ್‌ ಕವಿತೆ’ ಎಂದಿದ್ದ ಚಕ್ರತೀರ್ಥ; ಕಮೆಂಟ್‌ ವೈರಲ್‌

“ನಾಡಗೀತೆ ಮತ್ತು ರಾಷ್ಟ್ರಕವಿ ಕುವೆಂಪು ಅವರನ್ನು ಗೇಲಿಮಾಡಿರುವ, ಸಮಾಜ ಸುಧಾರಕರಾದ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಮಾತ್ರವಲ್ಲ ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದಲೂ ಕಿತ್ತುಹಾಕಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಕಳೆದ ಹತ್ತು ವರ್ಷಗಳಿಂದ ಕನ್ನಡ ನುಡಿ, ಸಾಹಿತ್ಯ ಮತ್ತು ಸಾಹಿತಿಗಳನ್ನು ಗೇಲಿ ಮಾಡುತ್ತಾ ಬಂದಿರುವ, ಸಾಮಾಜಿಕ ಜಾಲತಾಣಗಳಲ್ಲಿ ವಿಕೃತಿಯ ಅಭಿಪ್ರಾಯಗಳನ್ನು ಹಂಚಿಕೊಂಡು ಸಾಮಾಜಿಕ ಆರೋಗ್ಯವನ್ನು ಹಾಳುಗೆಡಹುತ್ತಾ ಬಂದಿರುವ ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಅವರು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ವೋಟಿನ ಆಸೆಗಾಗಿ ಅಧಿಕಾರದ ಲಾಲಸೆಗಾಗಿ ಮತಾಂಧರನ್ನು ಮತೀಯರನ್ನು ಬೆಂಬಲಿಸುವವರು ಕಿಡಿಗೇಡಿಗಳು ಭಾರತೀಯತೆಯನ್ನು ಬೆಂಬಲಿಸುವವರು ಕಿಡಿಗೇಡಿಗಳ ಅಲ್ಲ ವಂದನೆಗಳು

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...