Homeಕರ್ನಾಟಕರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮಕೈಗೊಳ್ಳಿ: ಸಿದ್ದರಾಮಯ್ಯ ಆಗ್ರಹ

ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮಕೈಗೊಳ್ಳಿ: ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಪಠ್ಯಪುಸ್ತಕ ಮರು ಪರಿಶೀಲನ ಸಮಿತಿ ಕಾರ್ಯ ಮುಗಿದಿದ್ದು ಅದನ್ನು ವಿಸರ್ಜನೆ ಮಾಡಲಾಗಿದೆ ಎಂದಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ವಿಸರ್ಜನೆ ಮಾಡಬೇಕಾಗಿರುವು ಪರಿಷ್ಕೃತ ಪಠ್ಯವನ್ನು, ಈಗಾಗಲೇ ಅವಧಿ ಮುಗಿದಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ” ಎಂದು ತಿಳಿಸಿದ್ದಾರೆ. ಪೂರ್ವಗ್ರಹ ಪೀಡಿತ ಅಧ್ಯಕ್ಷನನ್ನು ಕಿತ್ತುಹಾಕಿದ ಮೇಲೆ ಸಮಿತಿ ಶಿಫಾರಸು ಮಾಡಿರುವ ಪಠ್ಯವನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ? ಎಂದು ಅವರು ಶನಿವಾರ ಪ್ರಶ್ನಿಸಿದ್ದಾರೆ.

“ಜನತೆಯಲ್ಲಿ ಮೂಡಿರುವ ಗೊಂದಲವನ್ನು ಪರಿಹರಿಸುವಂತಹ ಸ್ಪಷ್ಟತೆ ರಾಜ್ಯದ ಮುಖ್ಯಮಂತ್ರಿಗಳ ಮಾತಿನಲ್ಲಿ ಇರಬೇಕು. ಇವರ ಮಾತು ಇನ್ನಷ್ಟು ಗೊಂದಲಗಳನ್ನು ಸೃಷ್ಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರು ಬೋದಿಸಲಿರುವುದು ಹಳೆಯ ಪಠ್ಯವೇ? ಪರಿಷ್ಕೃತ ಪಠ್ಯವೇ?” ಎಂದು ಅವರು ಕೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಸವಣ್ಣನವರ ವಿಚಾರವೂ ಸೇರಿದಂತೆ ಆಕ್ಷೇಪ ವ್ಯಕ್ತವಾಗಿರುವ ಅಂಶಗಳನ್ನು ಪರಿಷ್ಕರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಹಾಗಿದ್ದರೆ ಈಗಿನ ಪರಿಷ್ಕೃತ ಪಠ್ಯವನ್ನು ಕೈಬಿಡಲಾಗುವುದೇ? ಇದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು” ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಹುತ್ವಕ್ಕೆ ಮಾರಕವಾದ ಪಠ್ಯ ಹೇರಲು ಕಾಂಗ್ರೆಸ್ ಬಿಡುವುದಿಲ್ಲ: ರಾಹುಲ್ ಗಾಂಧಿ

“ನಾಡಿನ ಹಲವಾರು ಹಿರಿಯ ಸಾಹಿತಿಗಳು ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗಿರುವ ತಮ್ಮ ಕೃತಿಗಳನ್ನು ವಾಪಸು ಪಡೆದಿದ್ದಾರೆ. ರಾಜ್ಯ ಸರ್ಕಾರ ತಮ್ಮ ಅಭಿಪ್ರಾಯವನ್ನು ಧಿಕ್ಕರಿಸಿದರೆ ಕಾನೂನು ಹೋರಾಟ ಮಾಡುವುದಾಗಿ ಈ ಸಾಹಿತಿಗಳು ಎಚ್ಚರಿಕೆ ನೀಡಿದ್ದಾರೆ. ಇಂತಹ ವಿವಾದಾತ್ಮಕ ಪಠ್ಯವನ್ನು ಬೋಧಿಸಲು ಹೇಗೆ ಸಾಧ್ಯ?” ಎಂದು ಅವರು ಕೇಳಿದ್ದಾರೆ.

“ಪಠ್ಯ ಪರಿಷ್ಕರಣಾ ಸಮಿತಿಗೆ ಅನರ್ಹರ ನೇಮಕ ಮತ್ತು ಅದರಿಂದ ಸೃಷ್ಟಿಯಾಗಿರುವ ವಿವಾದಕ್ಕೆ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಯಾವ ಪಠ್ಯವನ್ನು ಓದಬೇಕೆಂಬ ಬಗ್ಗೆ ವಿದ್ಯಾರ್ಥಿಗಳು, ಯಾವುದನ್ನು ಬೋಧಿಸಬೇಕೆಂದು ಶಿಕ್ಷಕರು ಗೊಂದಲಕ್ಕೀಡಾಗಿದ್ದಾರೆ. ಇದಕ್ಕೆ ಏನು ಪರಿಹಾರ?” ಎಂದು ಸ್ಪಷ್ಟಪಡಿಸುವಂತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಕೇಳಿದ್ದಾರೆ.

“ಈಗಿನ ಗೊಂದಲಗಳಿಗೆ ಇರುವ ಏಕೈಕ ಪರಿಹಾರವೆಂದರೆ ನಾಡದ್ರೋಹಿ ಅಧ್ಯಕ್ಷನ ಸಮಿತಿ ಪರಿಷ್ಕರಿಸಿರುವ ಪಠ್ಯವನ್ನು ರದ್ದುಮಾಡಿ. ನೂತನ ಪರಿಷ್ಕೃತ ಪಠ್ಯ ರಚನೆಯಾಗುವವರೆಗೆ ಹಳೆಯ ಪಠ್ಯವನ್ನೇ ಮುಂದುವರಿಸುವುದು. ಮುಖ್ಯಮಂತ್ರಿಗಳು ಜಿದ್ದಿಗೆ ಬೀಳದೆ ಈ ನಿರ್ಧಾರ ಕೈಗೊಳ್ಳಬೇಕು” ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ತೇಜಸ್ವಿ ಬರೆದ ಕವಿತೆಯನ್ನು ‘ನೈಂಟಿ ಎಮ್ಮೆಲ್‌ ಕವಿತೆ’ ಎಂದಿದ್ದ ಚಕ್ರತೀರ್ಥ; ಕಮೆಂಟ್‌ ವೈರಲ್‌

“ನಾಡಗೀತೆ ಮತ್ತು ರಾಷ್ಟ್ರಕವಿ ಕುವೆಂಪು ಅವರನ್ನು ಗೇಲಿಮಾಡಿರುವ, ಸಮಾಜ ಸುಧಾರಕರಾದ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಬಸವಣ್ಣನವರನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಮಾತ್ರವಲ್ಲ ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದಲೂ ಕಿತ್ತುಹಾಕಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಕಳೆದ ಹತ್ತು ವರ್ಷಗಳಿಂದ ಕನ್ನಡ ನುಡಿ, ಸಾಹಿತ್ಯ ಮತ್ತು ಸಾಹಿತಿಗಳನ್ನು ಗೇಲಿ ಮಾಡುತ್ತಾ ಬಂದಿರುವ, ಸಾಮಾಜಿಕ ಜಾಲತಾಣಗಳಲ್ಲಿ ವಿಕೃತಿಯ ಅಭಿಪ್ರಾಯಗಳನ್ನು ಹಂಚಿಕೊಂಡು ಸಾಮಾಜಿಕ ಆರೋಗ್ಯವನ್ನು ಹಾಳುಗೆಡಹುತ್ತಾ ಬಂದಿರುವ ರೋಹಿತ್ ಚಕ್ರತೀರ್ಥ ಎಂಬ ಕಿಡಿಗೇಡಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಅವರು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ವೋಟಿನ ಆಸೆಗಾಗಿ ಅಧಿಕಾರದ ಲಾಲಸೆಗಾಗಿ ಮತಾಂಧರನ್ನು ಮತೀಯರನ್ನು ಬೆಂಬಲಿಸುವವರು ಕಿಡಿಗೇಡಿಗಳು ಭಾರತೀಯತೆಯನ್ನು ಬೆಂಬಲಿಸುವವರು ಕಿಡಿಗೇಡಿಗಳ ಅಲ್ಲ ವಂದನೆಗಳು

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....