Homeಕರ್ನಾಟಕಜಸ್ಟೀಸ್‌ ಲೋಯಾ ಸಾವಿನ ಮರುತನಿಖೆಗೆ ಬೆಂಗಳೂರಿನಲ್ಲೊಬ್ಬರ ಏಕಾಂಗಿ ವಿಶೇಷ ಪ್ರತಿಭಟನೆ...

ಜಸ್ಟೀಸ್‌ ಲೋಯಾ ಸಾವಿನ ಮರುತನಿಖೆಗೆ ಬೆಂಗಳೂರಿನಲ್ಲೊಬ್ಬರ ಏಕಾಂಗಿ ವಿಶೇಷ ಪ್ರತಿಭಟನೆ…

ಈ ಕೇಸಿನಲ್ಲಿ ತಮಗೆ ಅನುಕೂಲಕರ ತೀರ್ಪು ನೀಡುವಂತೆ ಲೋಯಾ ಅವರ ಮೇಲೆ ಭಾರೀ ಒತ್ತಡ ಇತ್ತು. ಅದಕ್ಕಾಗಿ ನೂರು ಕೋಟಿ ರೂಪಾಯಿಗಳ ಆಮಿಷವನ್ನೂ ಒಡ್ಡಲಾಗಿತ್ತು. ಆದರೆ ನ್ಯಾಯಪ್ರಜ್ಞೆಗೆ ಹೆಸರಾಗಿದ್ದ ಲೋಯಾ ಅವರು ಇಂಥ ಆಮಿಷವನ್ನು ತಿರಸ್ಕರಿಸಿದರು

- Advertisement -
- Advertisement -

ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದಿಂದ ನ್ಯಾಯಾಧೀಶರು, ವಕೀಲರು ಮತ್ತು ಕಕ್ಷಿದಾರರ ಕೆಲಸ ಮುಗಿಸಿ ಹೊರಬರುವಾಗ ಅವರೆದುರು ಅಚ್ಚರಿಯೊಂದು ಕಾದಿತ್ತು.

ಅದೆಂದರೆ “ಜಸ್ಟೀಸ್‌ ಲೋಯಾ ಸಾವಿನ ಮರುತನಿಖೆ ನಡೆಸಿ. ಸತ್ಯಮೇವ ಜಯತೆ, #ನ್ಯಾಯ” ಎಂದು ಆಂಗ್ಲ ಅಕ್ಷರಗಳಲ್ಲಿ ಬರೆದ ಭಿತ್ತಿಫಲಕವೊಂದು ಎಲ್ಲರ ಗಮನ ಸೆಳೆಯಿತು.

ನಡುವಯಸ್ಸಿನ ವ್ಯಕ್ತಿಯೊಬ್ಬ ಏಕಾಂಗಿಯಾಗಿ ಕೊರಳಿಗೆ ಈ ಬೇಡಿಕೆ ಫಲಕವನ್ನು ನೇತುಹಾಕಿಕೊಂಡು ಮೌನವಾಗಿ ನಿಲ್ಲುವ ಮೂಲಕ, ಅಲ್ಲಿ ಬರುವ ಜಡ್ಜ್‌ಗಳು ಹಾಗೂ ಕಕ್ಷಿದಾರರಿಗೆ ಈ ವಿಷಯ ಮುಟ್ಟಿಸಲು ಪ್ರಯತ್ನಿಸುತ್ತಿದ್ದರು.

ಯಾರು ಈ ಜಸ್ಟೀಸ್‌ ಲೋಯಾ?

ಬ್ರಜ್‍ಗೋಪಾಲ್ ಹರಕಿಷನ್ ಲೋಯಾ ಸಿಬಿಐ ಕೋರ್ಟಿನ ಜಡ್ಜ್. ಗುಜರಾತಿನ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‍ಕೌಂಟರ್ ಕೇಸಿನ ವಿಚಾರಣೆ ನಡೆಸುತ್ತಿದ್ದವರು. ಇವರು 2014ರ ಡಿಸೆಂಬರ್ 1ರಂದು ಸಂಬಂಧಿಕರ ಮದುವೆಗೆಂದು ನಾಗಪುರಕ್ಕೆ ತೆರಳಿದ್ದ ಸಂದರ್ಭದಲ್ಲಿ ಅನುಮಾನಾಸ್ಪ ರೀತಿಯಲ್ಲಿ ‘ಹೃದಯಾಘಾತ’ದಿಂದ ಸಾವನ್ನಪ್ಪಿದರು. ಅವರ ಅಂತ್ಯಕ್ರಿಯೆಗಳನ್ನೂ ಕೂಡ ತರಾತುರಿಯಲ್ಲಿ ಮುಗಿಸಲಾಗಿತ್ತು.

ಇದಾದ ಕೆಲದಿನಗಳಲ್ಲಿ ಜ.ಲೋಯಾ ಕುಟುಂಬದವರು ಸ್ಫೋಟಕ ವಿಷಯಗಳನ್ನು ಬಿಚ್ಚಿಟ್ಟರು. ಅವರ ಪ್ರಕಾರ ‘ಈ ಕೇಸಿನಲ್ಲಿ ತಮಗೆ ಅನುಕೂಲಕರ ತೀರ್ಪು ನೀಡುವಂತೆ ಲೋಯಾ ಅವರ ಮೇಲೆ ಭಾರೀ ಒತ್ತಡ ಇತ್ತು. ಅದಕ್ಕಾಗಿ ನೂರು ಕೋಟಿ ರೂಪಾಯಿಗಳ ಆಮಿಷವನ್ನೂ ಒಡ್ಡಲಾಗಿತ್ತು. ಆದರೆ ನ್ಯಾಯಪ್ರಜ್ಞೆಗೆ ಹೆಸರಾಗಿದ್ದ ಲೋಯಾ ಅವರು ಇಂಥ ಆಮಿಷವನ್ನು ತಿರಸ್ಕರಿಸಿದರು. ಬೆದರಿಕೆಗೆ ಅವರು ಸೊಪ್ಪು ಹಾಕಲಿಲ್ಲ. ಪರಿಣಾಮವಾಗಿಯೇ ಅವರನ್ನು ಕೊಲೆ ಮಾಡಲಾಗಿದೆ’ ಎಂಬ ಸ್ಫೋಟಕ ಸುದ್ದಿಗಳನ್ನು ಹೊರಹಾಕಿದ್ದರು.

ಇಷ್ಟಕ್ಕೂ ಈ ಕೇಸಿನಲ್ಲಿ ಆರೋಪಿ ಸ್ಥಾನದಲ್ಲಿದ್ದದ್ದು ಯಾರಂತೀರಿ? ಪ್ರಧಾನಿ ಮೋದಿಯವರಿಗೆ ಪರಮಾಪ್ತ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದು ಹಾಲಿ ಭಾರತದ ಗೃಹ ಸಚಿವ ಅಮಿತ್ ಶಾ. ಸೊಹ್ರಾಬುದ್ದೀನ್ ನಕಲಿ ಎನ್‍ಕೌಂಟರ್ ಕೇಸಿನಲ್ಲಿ 2010ರಲ್ಲಿ ಅಮಿತ್ ಶಾ 3 ತಿಂಗಳ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದರು. ಈ ಕೇಸಿನಲ್ಲಿ ಶಾ ಕೈವಾಡದ ಬಗ್ಗೆ ಅನೇಕ ಸಾಕ್ಷ್ಯಾಧಾರಗಳನ್ನು ಸುಪ್ರಿಂ ಕೋರ್ಟ್ ಪರಿಗಣಿಸಿತ್ತು. ಸಾಕ್ಷ್ಯನಾಶ ಮಾಡುವ ಸಾಧ್ಯತೆಯನ್ನು ಮನಗಂಡು ಇವರನ್ನು ಎರಡು ವರ್ಷಗಳ ಕಾಲ ಗುಜರಾತ್‍ನಿಂದ ಗಡಿಪಾರು ಮಾಡಿತ್ತು. ಅಂದಹಾಗೆ ಆಗ ಅಮಿತ್ ಶಾ ಗುಜರಾತ್‍ನ ಗೃಹಮಂತ್ರಿಯಾಗಿದ್ದರು ಎಂಬುದನ್ನು ಮರೆಯುವಂತಿಲ್ಲ.

ಈ ಕೇಸಿನಲ್ಲಿ ಅಮಿತ್ ಶಾ ಜೊತೆ ಡಿಐಜಿ ವಂಜಾರ ಒಳಗೊಂಡು 6 ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳೂ ಜೈಲು ಪಾಲಾಗಿದ್ದರು. ಮೋದಿ ಪ್ರಧಾನಿಯಾಗಿ ಪಂಜರದ ಗಿಳಿ ಕುಖ್ಯಾತಿಯ ಸಿಬಿಐ ಅವರ ಹಿಡಿತಕ್ಕೆ ಬಂದ ಮೇಲೆ ಈ ಅಧಿಕಾರಿಗಳಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದ್ದು ಕಾಕತಾಳಿಯವೇನಲ್ಲ.

ಗುಜರಾತ್‍ನಿಂದ ಹೊರಗಡೆ ಈ ಕೇಸಿನ ವಿಚಾರಣೆ ನಡೆಸಬೇಕೆಂಬ ಸುಪ್ರಿಂ ಆದೇಶದ ಪ್ರಕಾರ ಸಿಬಿಐ ಕೋರ್ಟ್ ವಿಚಾರಣೆ ನಡೆಸಿತ್ತು. ಈ ಹಿಂದೆ ವಿಚಾರಣೆ ನಡೆಸುತ್ತಿದ್ದ ಜ.ಉತ್ಪಾತ್ ಅವರು ಅಮಿತ್ ಶಾ ಕೋರ್ಟಿನ ಮುಂದೆ ಖುದ್ದು ಹಾಜರಾಗಬೇಕೆಂದು ಆದೇಶ ಹೊರಡಿಸಿದ ಕೆಲವೇ ದಿನಗಳಲ್ಲಿ ಎತ್ತಂಗಡಿಯಾದರು. ಅವರ ಸ್ಥಾನಕ್ಕೆ ಬಂದವರೇ ನತದೃಷ್ಟ ಜ.ಲೋಯಾ.

ಜಸ್ಟೀಸ್ ಲೋಯಾ ಅನುಮಾನಾಸ್ಪದ ಸಾವಿನ ನಂತರ ಏನಾಯ್ತು ಗೊತ್ತೆ? ಅವರ ಸ್ಥಾನಕ್ಕೆ ಬಂದ ಜ.ಗೋಸ್ವಾಮಿ ಎಂಬುವವರು ಈ ಕೇಸಿನಲ್ಲಿ ಅಮಿತ್ ಶಾಗೆ ಕ್ಲೀನ್ ಚಿಟ್ ದಯಪಾಲಿಸಿಬಿಟ್ಟರು. ಅಲ್ಲಿಗೆ ಒಂದು ಅಧ್ಯಾಯ ಮುಗಿದಂತಾಯ್ತು.

ನ್ಯಾಯಾಧೀಶರ ನಿಗೂಡ ಸಾವಿನ ತನಿಖೆ ಕೈಗೊಂಡ ಕ್ಯಾರವಾನ್ ಪತ್ರಿಕೆ ಅವರ ಕುಟುಂಬದವರು, ಬಂಧುಮಿತ್ರರು, ಸಹೋದ್ಯೋಗಿಗಳು ಮುಂತಾದವರಿಂದ ಮಾಹಿತಿ ಸಂಗ್ರಹಿಸಿ 2017ರ ನವೆಂಬರ್‌ನಲ್ಲಿ ತನಿಖಾ ವರದಿ ಪ್ರಕಟಿಸಿತು. ಮೂರು ವರ್ಷಗಳ ಹಿಂದೆ ಹೂತುಹೋಗಿದ್ದ ನಿಗೂಡ ಸಾವಿನ ಪ್ರಕರಣಕ್ಕೆ ಆಗಲೇ ಮರುಜೀವ ಬಂದಿದ್ದು. ಇಂಥಾ ಪ್ರಾಮಾಣಿಕ ನ್ಯಾಯಾಧೀಶರ ನಿಗೂಡ ಸಾವಿನ ಪೋಸ್ಟ್‌ ಮಾರ್ಟಂ ವರದಿ ಹಾಗೂ ಕಾನೂನು ಪ್ರಕ್ರಿಯೆಗಳಲ್ಲಿ ಹಲವಾರು ಲೋಪದೋಷಗಳು ಕಂಡುಬಂದಿರುವುದರಿಂದ ಸ್ವತಂತ್ರ ತನಿಖೆಗೆ ಆದೇಶಿಸಬೇಕೆಂದು ಕೋರಿ ಸುಪ್ರಿಂಕೋರ್ಟ್‍ನಲ್ಲಿ ಒಂದು ಪಿಐಎಲ್ ದಾಖಲಾಯಿತು. ಇದೇ ಅವಧಿಯಲ್ಲಿ ಬಾಂಬೆ ಹೈಕೋರ್ಟ್‍ನಲ್ಲೂ ಒಂದು ಪಿಐಎಲ್ ದಾಖಲಾಯ್ತು.

ಆದರೆ ಅವರೆಡೂ ಕೋರ್ಟ್‌‌ಗಳು ಸಹ ಜಸ್ಟೀಸ್‌ ಲೋಯಾರವರದು ಸಹಜ ಸಾವು ಎಂದೇಳಿ ಮರುಪರಿಶೀಲನಾ ಅರ್ಜಿಗಳನ್ನು ವಜಾ ಮಾಡಿವೆ. ಅಲ್ಲಿಗೆ ಪ್ರಕರಣಕ್ಕೆ ಎಳ್ಳುನೀರು ಬಿಟ್ಟೆವೆಂದು ಬಿಜೆಪಿಯವರು ಭಾವಿಸಿದ್ದರು. ಆದರೆ ಯಾವಾಗ ಮಹಾರಾಷ್ಟ್ರದಲ್ಲಿ ರಾಜಕೀಯ ಪಲ್ಲಟಗಳು ಸಂಭವಿಸಿ ಬಿಜೆಪಿ ಶಿವಸೇನೆ ಬದಲು ಶಿವಸೇನೆ, ಕಾಂಗ್ರೆಸ್‌ ಎನ್‌ಸಿಪಿ ಅಧಿಕಾರದ ಚುಕ್ಕಾಣಿ ಹಿಡಿದವೊ ಅಲ್ಲಿಗೆ ಈ ಕೇಸಿಗೆ ಮತ್ತೆ ಮರುಜೀವ ಬಂದಿದೆ.

ಸ್ಥಳೀಯ ಮರಾಠಿ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮಾತನಾಡಿ ’ನ್ಯಾಯಾಧೀಶ ಲೋಯಾ ಅವರ ಸಾವಿನ ಕುರಿತು ತನಿಖೆಯ ಬೇಡಿಕೆ ಮತ್ತು ಅಗತ್ಯವಿದ್ದರೆ ಪ್ರಕರಣವನ್ನು ಮರುಪರಿಶೀಲಿಸಬೇಕು’ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಶರದ್‌ ಪವಾರ್‌ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಲು ಸಜ್ಜಾಗಿದ್ದರು. ಆದರೆ ಪವಾರ್‌ ಇದು ಚುನಾವಣಾ ಸಮಯ ಎಂದು ತಿರುಗೇಟು ನೀಡಿದ್ದರು. ಚುನಾವಣಾ ಫಲಿತಾಂಶದ ನಂತರ ಪವಾರ್‌ ಕೈ ಮೇಲಾಗಿದ್ದು ಈಗ ಅಮಿತ್‌ ಶಾ ಆರೋಪಿಯಾಗಿರುವ ಮತ್ತು ಮಹಾರಾಷ್ಟ್ರದಲ್ಲಿಯೇ ಸಂಭವಿಸಿರುವ ಜಸ್ಟೀಸ್‌ ಲೋಯಾ ಕೇಸ್‌ ರೀಓಪನ್‌ ಮಾಡುತ್ತೇವೆ ಎನ್ನುವ ಮಾತು ಸಣ್ಣ ವಿಷಯವಲ್ಲ. ಇದೊಂದು ರೀತಿ ಅಮಿತ್‌ ಶಾಗೆ ಶರದ್‌ ಪವಾರ್‌ ಕೊಡುವ ಎಚ್ಚರಿಕೆಯೂ ಆಗಿದೆ ಎಂಬುದು ಹಲವಾರು ವಿಶ್ಲೇಷಕರ ಅಭಿಮತ.

ತನಿಖೆಗೆ ನಿಲ್ಲದ ಬೇಡಿಕೆ:

ಸುಪ್ರೀಂ ಕೋರ್ಟ್‌ ಸಾಕ್ಷಿಗಳಿಲ್ಲ ಎಂದೇ ಏನೇ ತೀರ್ಪು ನೀಡಿದ್ದರೂ ಸಹ ದೇಶದ ಹಲವಾರು ಜನ ಜಸ್ಟೀಸ್‌ ಲೋಯಾರವರ ಸಾವನ್ನು ಸಹಜ ಸಾವು ಎಂದು ಸ್ವೀಕರಿಸಲು ಸಿದ್ದರಿಲ್ಲ. ಹಾಗಾಗಿ ಮರುತನಿಖೆ ಮತ್ತು ನ್ಯಾಯಕ್ಕಾಗಿ ಒತ್ತಾಯಿಸುತ್ತಲೇ ಇದ್ದಾರೆ.

ಹಾಲಿ ಬೆಂಗಳೂರು ಕೋರ್ಟ್‌ ಮುಂದೆ ವಿಭಿನ್ನ ಪ್ರತಿಭಟನೆ ನಡೆಸುತ್ತಿರುವ ವ್ಯಕ್ತಿಯ ಹೆಸರು ಶ್ರೀನಿವಾಸ್. ಅವರ ಬಗ್ಗೆ ಮತ್ತಷ್ಟು ವಿವರಗಳನ್ನು ಕೇಳಿದಾಗ “ನಾನು ಈ ಹೋರಾಟ ನಡೆಸುತ್ತಿರುವುದು ಭಾರತದಲ್ಲಿ ಎಲ್ಲರಿಗೂ ನ್ಯಾಯ ಸಿಗಬೇಕೆಂದು. ಒಬ್ಬ ನ್ಯಾಯಾಧೀಶರ ಸಾವಿಗೆ ನ್ಯಾಯ ಸಿಗದಿದ್ದರೆ ಜನಸಾಮಾನ್ಯರ ಪರಿಸ್ಥಿತಿಯೇನು ಎಂಬುದನ್ನು ಜನರಿಗೆ ಮನವರಿಕೆ ಮಾಡಲು ಪ್ರಯತ್ನಿಸುತ್ತಿದ್ದೇನೆ. ನನಗೆ ಭಯವಾಗಲಿ, ಮತ್ತೊಂದು ಇಲ್ಲ. ಆದರೆ ನಾನು ಎತ್ತುತ್ತಿರುವ ವಿಷಯ ಚರ್ಚೆಯಾಗಬೇಕೆ ಹೊರತು ನನ್ನ ಬಗ್ಗೆ ಅಲ್ಲ” ಎನ್ನುತ್ತಾರೆ.

ನೀವು ಬಂದು ಮಾತನಾಡಿಸಿ, ವಿಷಯ ತಿಳಿದುಕೊಂಡಿದ್ದಕ್ಕೆ ಧನ್ಯವಾದಗಳು. ಇದೇ ರೀತಿ ಹೆಚ್ಚಿನ ಜನಕ್ಕೆ ಸತ್ಯ ತಲುಪಬೇಕು. ಮುಖ್ಯವಾಗಿ ವಕೀಲರು ಮತ್ತು ನ್ಯಾಯಾಧೀಶರಿಗೆ ಈ ವಿಚಾರ ತಲುಪಬೇಕು ಎಂಬುದು ನನ್ನ ಉದ್ದೇಶ ಎಂದು ಶ್ರೀನಿವಾಸ್‌ ಹೇಳುತ್ತಾರೆ.

ಏನೇ ಇರಲಿ ಎಲ್ಲರಿಗೂ ಸಮಾಧಾನ ತರುವ ರೀತಿಯಲ್ಲಿ ವಿಚಾರಣೆಯ ಪ್ರಕ್ರಿಯೆಗಳು ಮತ್ತು ತೀರ್ಪುಗಳು ಇರಬೇಕು. ಅಲ್ಲಿ ಅನುಮಾನಕ್ಕೆ ಆಸ್ಪದವಿರಬಾರದು. ಆ ನಿಟ್ಟಿನಲ್ಲಿ ಜಸ್ಟೀಸ್‌ ಲೋಯಾರವರ ಬಗ್ಗೆ ಸಮಗ್ರ ತನಿಖೆ ನಡೆಯಬೇಕೆಂಬುದು ಬಹಳ ಜನರ ಅಭಿಪ್ರಾಯ. ಶರದ್‌ ಪವಾರ್‌ ಕೂಡ ಅದೇ ಮಾತನ್ನಾಡಿದ್ದಾರೆ. ಏನಾಗಲಿದೆ ಎಂಬುದನ್ನು ಭವಿಷ್ಯವಷ್ಟೇ ಹೇಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನ್ಯಾಯಮೂರ್ತಿ ಲೋಯಾ ಅವರ ಅನುಮಾನಾಸ್ಪದ ಸಾವಿನ ಕುರಿತು ನ್ಯಾಯಯುತವಾಗಿ ತನಿಖೆ ನಡೆಯಬೇಕು. ಆದರೆ ಎಲ್ಲಿಯವರೆಗೂ ಕೇಂದ್ರದಲ್ಲಿ ಬಿ.ಜೆ.ಪಿ.ಅಧಿಕಾರದಲ್ಲಿ ಇರುತ್ತದೆಯೋ ಅಲ್ಲಿಯವರೆಗೂ ನ್ಯಾಯಯುತವಾದ ತನಿಖೆ ಸಾಧ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಡವರ ವಿರುದ್ಧದ ‘ಅಘೋಷಿತ ಯುದ್ಧ’: ಶಿವಸುಂದರ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಡವರ ವಿರುದ್ದದ 'ಅಘೋಷಿತ ಯುದ್ದ'ವಾಗಿದೆ. ಇದು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ ಚಿಂತಕ ಶಿವಸುಂದರ್ ಹೇಳಿದರು. ಕಲಬುರಗಿ...

ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಮುಂದಾದ ಯುಎಸ್ ಕಾಂಗ್ರೆಸ್

"ನಾನು ಶಾಂತಿದೂತ, ವಿಶ್ವ ಶಾಂತಿಯ ರಾಯಭಾರಿ, ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡಿರುವ ನನಗೆ 'ನೊಬೆಲ್ ಶಾಂತಿ ಪ್ರಶಸ್ತಿ' ಕೊಡಿ" ಎನ್ನುತ್ತಲೇ, ಸಿಕ್ಕ ಸಿಕ್ಕ ದೇಶಗಳ ಮೇಲೆ...

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...