Homeಮುಖಪುಟಪೆಗಾಸಸ್ ಹಗರಣ ತನಿಖೆಗೆ ಸಮಿತಿ ರಚನೆ: ಸುಪ್ರೀಂ ಹೇಳಿಕೆ

ಪೆಗಾಸಸ್ ಹಗರಣ ತನಿಖೆಗೆ ಸಮಿತಿ ರಚನೆ: ಸುಪ್ರೀಂ ಹೇಳಿಕೆ

- Advertisement -
- Advertisement -

ದೇಶಾದ್ಯಂತ ಭಾರೀ ಟೀಕೆಗಳಿಗೆ ಕಾರಣವಾಗಿದ್ದ ಪೆಗಾಸಸ್ ಹಗರಣದ ಕುರಿತು ತನಿಖೆ ನಡೆಸಲು ಸಮಿತಿ ರಚಿಸುವುದಾಗಿ ಸುಪ್ರೀಂ ಹೇಳಿದೆ. ಈ ವಿಚಾರದ ಕುರಿತು ಒಂದು ವಾರದಲ್ಲಿ ಔಪಚಾರಿಕ ಆದೇಶ ಹೊರಬೀಳಬಹುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪ್ರಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣರವರು ಈ ವಿಷಯ ಬಹಿರಂಗಪಡಿಸಿದ್ದಾರೆ. “ಕಳೆದ ವಾರವೇ ಪೆಗಾಸಸ್ ತನಿಖಾ ಸಮಿತಿ ಕುರಿತು ಆದೇಶ ಹೊರಡಿಸಲು ಬಯಸಿದ್ದೆವು. ಆದರೆ ನಾವು ಪರಿಗಣಿಸಿದ್ದ ಕೆಲವು ಸದಸ್ಯರು ವೈಯಕ್ತಿಕ ಕಾರಣಗಳಿಂದಾಗಿ ಈ ಸಮಿತಿಯ ಭಾಗವಾಗಿರಲು ನಿರಾಕರಿಸಿದರು. ಆದ್ದರಿಂದ ವಿಳಂಬವಾಗಿದೆ. ನಾವು ಮುಂದಿನ ವಾರ ಆದೇಶ ರವಾನಿಸಲು ಪ್ರಯತ್ನಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಪೆಗಾಸಸ್ ಗೂಢಚಾರ ಹಗರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಸುಪ್ರಿಂಕೊರ್ಟ್‌ಗೆ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ವಿವರವಾದ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದು ಒಕ್ಕೂಟ ಸರ್ಕಾರ ಸೆಪ್ಟಂಬರ್ 13 ರಂದು ಹೇಳಿದೆ.

ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದ ಸುಪ್ರೀಂ “ಕಳೆದ ಬಾರಿಯೂ ರಾಷ್ಟ್ರೀಯ ಭದ್ರತೆ ಕುರಿತು ಹೇಳಲಾಯಿತು… ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುವ ರೀತಿಯಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ. ವೈಯಕ್ತಿಕ ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆಯೆ ಎಂದು ನಾವು ನಿಮ್ಮನ್ನು ಕೇಳಿದ್ದೇವೆ … ಹಾಗಾಗಿ ಅದು ಅಧಿಕೃತವಾಗಿದೆಯೇ ಎಂದು ನಿಮ್ಮ ಅಫಿಡವಿಟ್ ಸಲ್ಲಿಸಿ” ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದರು.

ಇದಕ್ಕೂ ಮೊದಲು ಒಕ್ಕೂಟ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತ್ತು. ಆದರೆ ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುವಂತಹ ಯಾವುದೇ ವಿಷಯವನ್ನು ಸರ್ಕಾರ ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು ಅದು ಸ್ಪಷ್ಟಪಡಿಸಿತ್ತು. ಈಗ ತನಿಖೆಗೆ ಸಮಿತಿ ರಚನೆ ಮಾಡಲು ಹೊರಟಿದೆ.

ಪೆಗಾಸಸ್‌‌ ಗೂಢಚಾರ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿ ಸೇರಿದಂತೆ ಹಲವು ಅರ್ಜಿಗಳನ್ನು ನ್ಯಾಯಾಲಯವು ಒಂದು ಬ್ಯಾಚ್‌‌‌ನಡಿ ವಿಚಾರಣೆ ನಡೆಸುತ್ತಿದೆ.

ಇಸ್ರೇಲ್ ಮೂಲದ NSO ಸಂಸ್ಥೆಯ ಗೂಢಚಾರ ತಂತ್ರಾಂಶವಾದ ಪೆಗಾಸಸ್ ಅನ್ನು ಬಳಸಿಕೊಂಡು ಭಾರತದ ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಮೇಲೆ ಗೂಢಚಾರ ಮಾಡಿದ ಬಗ್ಗೆ ಕೆಲ ತಿಂಗಳಿಂದ ವಿವಾದವೆದ್ದಿದೆ.

ಪೆಗಾಸಸ್ ಬಳಸಿ ಕಣ್ಗಾವಲು ಮಾಡುವ ಸಂಭಾವ್ಯ ಗುರಿಗಳ ಪಟ್ಟಿಯಲ್ಲಿ 300 ಕ್ಕೂ ಹೆಚ್ಚು ಭಾರತೀಯ ಮೊಬೈಲ್ ಫೋನ್ ಸಂಖ್ಯೆಗಳಿವೆ ಎಂದು ಅಂತರಾಷ್ಟ್ರೀಯ ಮಾಧ್ಯಮ ಒಕ್ಕೂಟ ತನ್ನ ವರದಿಯಲ್ಲಿ ಹೇಳಿತ್ತು. ಭಾರತದ ದಿ ವೈರ್ ಈ ಕುರಿತು ವಿವರವಾದ ತನಿಖಾ ವರದಿಗಳನ್ನು ಪ್ರಕಟಿಸಿತ್ತು.


ಇದನ್ನೂ ಓದಿ: ಪೆಗಾಸಸ್ ಗೂಢಚರ್ಯೆ ಸಮಸ್ಯೆಯಲ್ಲ: ವಿವಾದಿತ ಹೇಳಿಕೆ ನೀಡಿದ ಕೇಂದ್ರ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...