Homeಮುಖಪುಟ'ನಾನು ಕಣ್ಣೀರು ಸುರಿಸುವುದಿಲ್ಲ, ಆದಿವಾಸಿಗಳು, ಒಬಿಸಿಗಳ ಕಣ್ಣೀರಿಗೆ ಬೆಲೆಯಿಲ್ಲ': ಹೇಮಂತ್‌ ಸೊರೆನ್‌ ಭಾವುಕ

‘ನಾನು ಕಣ್ಣೀರು ಸುರಿಸುವುದಿಲ್ಲ, ಆದಿವಾಸಿಗಳು, ಒಬಿಸಿಗಳ ಕಣ್ಣೀರಿಗೆ ಬೆಲೆಯಿಲ್ಲ’: ಹೇಮಂತ್‌ ಸೊರೆನ್‌ ಭಾವುಕ

- Advertisement -
- Advertisement -

ಜಾರ್ಖಂಡ್‌ನ ನೂತನ ಸಿಎಂ ಚಂಪೈ ಸೊರೇನ್ ಸರ್ಕಾರ ಇಂದು ರಾಜ್ಯ ವಿಧಾನಸಭೆಯಲ್ಲಿ ಬಹುಮತವನ್ನು  ಸಾಬೀತುಪಡಿಸಿದೆ. ಈ ವೇಳೆ ಸದನಕ್ಕೆ ಮಾಜಿ ಸಿಎಂ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ಹೇಮಂತ್‌ ಸೊರೆನ್ ಭಾಗವಹಿಸಿದ್ದರು. ವಿಶ್ವಾಸ ಮತಯಾಚನೆ ವೇಳೆ ರಾಜ್ಯ ವಿಧಾನಸಭೆಯಲ್ಲಿ ಮಾತನಾಡಿದ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್, ನಾನು ಕಣ್ಣೀರು ಸುರಿಸುವುದಿಲ್ಲ, ಆದಿವಾಸಿಗಳು ಮತ್ತು ಹಿಂದುಳಿದ ವರ್ಗಗಳ ಜನರ ಕಣ್ಣೀರಿಗೆ ಬೆಲೆಯಿಲ್ಲ ಎಂದು ಭಾವುಕವಾಗಿ ಹೇಳಿದ್ದಾರೆ.

ಹೇಮಂತ್ ಸೊರೇನ್ ಅವರು ನ್ಯಾಯಾಲಯದ ಅನುಮತಿಯೊಂದಿಗೆ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಗೆ ಹಾಜರಾಗಿದ್ದರು. ವಿಶ್ವಾಸಮತ ಯಾಚನೆಗೂ ಮುನ್ನ ಚಂಪೈ ಸೊರೇನ್, ತಮ್ಮ ಸರ್ಕಾರವನ್ನು “ಹೇಮಂತ್ ಸೊರೇನ್ ಭಾಗ – 2” ಎಂದು ಹೇಳಲು ಇಷ್ಟಪಡುವುದಾಗಿ ಹೇಳಿದ್ದರು.

ಅಕ್ರಮ ಹಣ ವರ್ಗಾವಣೆ ಆರೋಪದ ನಡುವೆ ಜನವರಿ 31ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ  ಸೊರೆನ್‌ ರಾಜೀನಾಮೆ ನೀಡಿದ್ದರು, ನಾನು ಪಿತೂರಿ ನಡೆಸಿದ ಶಕ್ತಿಗಳಿಗೆ ಸೂಕ್ತ ಸಮಯದಲ್ಲಿ ತಕ್ಕ ಉತ್ತರವನ್ನು ನೀಡುತ್ತೇನೆ ಎಂದು ಹೇಳಿದ್ದಾರೆ. ರಾಜ್ಯಪಾಲರ ಕಚೇರಿ ವಿರುದ್ಧ ಗಂಭೀರ ಆರೋಪ ಮಾಡಿದ ಅವರು, ತಮ್ಮ ಬಂಧನದಲ್ಲಿ ರಾಜಭವನವೂ ಭಾಗಿಯಾಗಿದೆ ಎಂದು ಆರೋಪಿಸಿದ್ದಾರೆ.

ನನ್ನನ್ನು ಬಂಧಿಸಲು ದೀರ್ಘಕಾಲದವರೆಗೆ ಪಿತೂರಿ ನಡೆಸಲಾಗಿದೆ. ಇದು ಕಡಿಮೆ ಉರಿಯಲ್ಲಿ ಬೇಯುತ್ತಿತ್ತು. ಬಳಿಕ ಉತ್ತಮ ರೀತಿಯಲ್ಲಿ ಕಾರ್ಯಗತಗೊಳಿಸಲಾಗಿದೆ. ಆದಿವಾಸಿಗಳು ಕಾಡಿನಲ್ಲೇ ವಾಸಿಸುವುದನ್ನು ಮುಂದುವರಿಸಬೇಕೆಂದು ಹೇಳಲು ಕೆಲವರು ಹಿಂಜರಿಯುವುದಿಲ್ಲ. ನಾವು ಕಾಡು ತೊರೆದು ಬಂದು ಅವರ ಪಕ್ಕದಲ್ಲಿ ಕುಳಿತೆವು. ಇದರಿಂದ ಅವರ ಬಟ್ಟೆಗಳು ಕೊಳೆಯಾದವು. ಅವರು ನಮ್ಮನ್ನು ಅಸ್ಪೃಶ್ಯರಂತೆ ನೋಡುತ್ತಾರೆ. ನಾನು ವಿಮಾನದಲ್ಲಿ ಪ್ರಯಾಣಿಸುವುದನ್ನು, ಪಂಚತಾರಾ ಹೋಟೆಲ್‌ಗಳಲ್ಲಿ ಉಳಿದುಕೊಳ್ಳುವುದು ಹಾಗೂ ಬಿಎಂಡಬ್ಲ್ಯು ಕಾರಿನಲ್ಲಿ ತೆರಳುವುದು ಅವರಿಗೆ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹೇಮಂತ್ ಸೋರೆನ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಜೆಎಂಎಂ, ಕಾಂಗ್ರೆಸ್ ಮತ್ತು ಇತರ ಮಿತ್ರಪಕ್ಷಗಳ ಶಾಸಕರ ಬೆಂಬಲದೊಂದಿಗೆ, ಸೊರೆನ್ ಅವರ ಆಪ್ತ ಸಹಾಯಕ ಚಂಪೈ ಸೊರೆನ್ ಫೆಬ್ರವರಿ 2ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಇಂದು ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸಿದ್ದಾರೆ.

ಜನವರಿ 31 ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನ. ರಾಜಭವನದ ಆದೇಶದ ಮೇರೆಗೆ ಮುಖ್ಯಮಂತ್ರಿಯೊಬ್ಬರನ್ನು ಬಂಧಿಸಲಾಗಿದೆ. ಜಾರ್ಖಂಡ್‌ನಲ್ಲಿ ಬುಡಕಟ್ಟು ಸಮುದಾಯದ ಸಿಎಂ 5 ವರ್ಷಗಳನ್ನು ಪೂರ್ಣಗೊಳಿಸಲು ಬಿಜೆಪಿ ಬಯಸುವುದಿಲ್ಲ, ಅವರು ತಮ್ಮ ಆಡಳಿತದಲ್ಲಿಯೂ ಇದನ್ನು ಅನುಮತಿಸಿರಲಿಲ್ಲ ಎಂದು  ಹೇಮಂತ್ ಸೊರೆನ್ ಹೇಳಿದ್ದಾರೆ.

ಬಿಜೆಪಿ ಆದಿವಾಸಿಗಳನ್ನು “ಅಸ್ಪೃಶ್ಯರು” ಎಂದು ಪರಿಗಣಿಸುತ್ತದೆ, ದೇಶದಲ್ಲಿ ಈಗಿನ ಆಡಳಿತದಲ್ಲಿ ಆದಿವಾಸಿಗಳು ಮತ್ತು ದಲಿತರು ಸುರಕ್ಷಿತವಾಗಿಲ್ಲ. ನಾನು ಇನ್ನಷ್ಟು ಬಲದೊಂದಿಗೆ ಮರಳಿ ಬರುತ್ತೇನೆ. ಪ್ರತಿಪಕ್ಷಗಳ ಷಡ್ಯಂತ್ರವನ್ನು ವಿಫಲಗೊಳಿಸುತ್ತೇನೆ. ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಶಂಕುಸ್ಥಾಪನೆ ಸಮಾರಂಭ ನಡೆದಾಗ ಬಿಜೆಪಿಯು ರಾಮರಾಜ್ಯವನ್ನು ತರುವುದಾಗಿ ಹೇಳಿತ್ತು, ಈಗ ಅವರು ಬಿಹಾರದಲ್ಲಿ ಮತ್ತು ನಂತರ ಜಾರ್ಖಂಡ್‌ನಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸಿದ್ದಾರೆ ಎಂದು ಹೇಮಂತ್ ಸೊರೆನ್ ಹೇಳಿದ್ದಾರೆ.

ನಾನು ಸೋಲನ್ನು ಒಪ್ಪಿಕೊಂಡಿಲ್ಲ, ತಮ್ಮ ಕುತಂತ್ರಗಳಲ್ಲಿ ಅವರು ಯಶಸ್ವಿಯಾಗುತ್ತಾರೆ ಎಂದು ಅವರು ಭಾವಿಸುತ್ತಾರೆ. ಆದರೆ ಇದು ಜಾರ್ಖಂಡ್, ಆದಿವಾಸಿಗಳು ಮತ್ತು ದಲಿತರು ತ್ಯಾಗ ಮಾಡಿದ ರಾಜ್ಯ, ಕೋಟಿಗಟ್ಟಲೆ ಲೂಟಿ ಮಾಡಿ ವಿದೇಶಕ್ಕೆ ಪಲಾಯನ ಮಾಡಿದವರನ್ನು ಕೇಂದ್ರೀಯ ಸಂಸ್ಥೆಗಳಿಗೆ ಏನನ್ನೂ ಮಾಡಲು ಸಾಧ್ಯವಾಗಿಲ್ಲ. ಅವರು ಏನು ಮಾಡುತ್ತಾರೆಂದು ಆದಿವಾಸಿಗಳು ಮತ್ತು ಅಮಾಯಕರನ್ನು ಗುರಿಯಾಗಿಸುತ್ತಿದ್ದಾರೆ? ಆದಿವಾಸಿಗಳ ಕಣ್ಣೀರು ನಿಮಗೆ ಲೆಕ್ಕಕ್ಕಿಲ್ಲ ಎಂಬ ಕಾರಣಕ್ಕೆ ನಾನು ಅಳುವುದಿಲ್ಲ, ಸೂಕ್ತ ಸಮಯದಲ್ಲಿ ಪ್ರತಿಯೊಂದು ಷಡ್ಯಂತ್ರಕ್ಕೂ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ.

ಇಂದು ಜೈಲಿನಿಂದ ವಿಧಾನಸಭೆಗೆ ಹೇಮಂತ್ ಸೊರೆನ್‌ ಆಗಮಿಸಿದಾಗ ಆಡಳಿತರೂಢ ಜೆಎಂಎಂ ನೇತೃತ್ವದ ಮೈತ್ರಿಕೂಟದ ಶಾಸಕರು ಹೇಮಂತ್ ಸೊರೇನ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದ್ದಾರೆ.

ಇದನ್ನು ಓದಿ: ಸಾವಿತ್ರಿಬಾಯಿ ಫುಲೆ ವಿವಿಯಲ್ಲಿ ABVP ಕಾರ್ಯಕರ್ತರಿಂದ ದಾಂಧಲೆ: ಕ್ರಮ ಕೈಗೊಳ್ಳದ ಅಧಿಕಾರಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...