Homeಮುಖಪುಟ'ನಾನು ಕಣ್ಣೀರು ಸುರಿಸುವುದಿಲ್ಲ, ಆದಿವಾಸಿಗಳು, ಒಬಿಸಿಗಳ ಕಣ್ಣೀರಿಗೆ ಬೆಲೆಯಿಲ್ಲ': ಹೇಮಂತ್‌ ಸೊರೆನ್‌ ಭಾವುಕ

‘ನಾನು ಕಣ್ಣೀರು ಸುರಿಸುವುದಿಲ್ಲ, ಆದಿವಾಸಿಗಳು, ಒಬಿಸಿಗಳ ಕಣ್ಣೀರಿಗೆ ಬೆಲೆಯಿಲ್ಲ’: ಹೇಮಂತ್‌ ಸೊರೆನ್‌ ಭಾವುಕ

- Advertisement -
- Advertisement -

ಜಾರ್ಖಂಡ್‌ನ ನೂತನ ಸಿಎಂ ಚಂಪೈ ಸೊರೇನ್ ಸರ್ಕಾರ ಇಂದು ರಾಜ್ಯ ವಿಧಾನಸಭೆಯಲ್ಲಿ ಬಹುಮತವನ್ನು  ಸಾಬೀತುಪಡಿಸಿದೆ. ಈ ವೇಳೆ ಸದನಕ್ಕೆ ಮಾಜಿ ಸಿಎಂ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ಹೇಮಂತ್‌ ಸೊರೆನ್ ಭಾಗವಹಿಸಿದ್ದರು. ವಿಶ್ವಾಸ ಮತಯಾಚನೆ ವೇಳೆ ರಾಜ್ಯ ವಿಧಾನಸಭೆಯಲ್ಲಿ ಮಾತನಾಡಿದ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್, ನಾನು ಕಣ್ಣೀರು ಸುರಿಸುವುದಿಲ್ಲ, ಆದಿವಾಸಿಗಳು ಮತ್ತು ಹಿಂದುಳಿದ ವರ್ಗಗಳ ಜನರ ಕಣ್ಣೀರಿಗೆ ಬೆಲೆಯಿಲ್ಲ ಎಂದು ಭಾವುಕವಾಗಿ ಹೇಳಿದ್ದಾರೆ.

ಹೇಮಂತ್ ಸೊರೇನ್ ಅವರು ನ್ಯಾಯಾಲಯದ ಅನುಮತಿಯೊಂದಿಗೆ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಗೆ ಹಾಜರಾಗಿದ್ದರು. ವಿಶ್ವಾಸಮತ ಯಾಚನೆಗೂ ಮುನ್ನ ಚಂಪೈ ಸೊರೇನ್, ತಮ್ಮ ಸರ್ಕಾರವನ್ನು “ಹೇಮಂತ್ ಸೊರೇನ್ ಭಾಗ – 2” ಎಂದು ಹೇಳಲು ಇಷ್ಟಪಡುವುದಾಗಿ ಹೇಳಿದ್ದರು.

ಅಕ್ರಮ ಹಣ ವರ್ಗಾವಣೆ ಆರೋಪದ ನಡುವೆ ಜನವರಿ 31ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ  ಸೊರೆನ್‌ ರಾಜೀನಾಮೆ ನೀಡಿದ್ದರು, ನಾನು ಪಿತೂರಿ ನಡೆಸಿದ ಶಕ್ತಿಗಳಿಗೆ ಸೂಕ್ತ ಸಮಯದಲ್ಲಿ ತಕ್ಕ ಉತ್ತರವನ್ನು ನೀಡುತ್ತೇನೆ ಎಂದು ಹೇಳಿದ್ದಾರೆ. ರಾಜ್ಯಪಾಲರ ಕಚೇರಿ ವಿರುದ್ಧ ಗಂಭೀರ ಆರೋಪ ಮಾಡಿದ ಅವರು, ತಮ್ಮ ಬಂಧನದಲ್ಲಿ ರಾಜಭವನವೂ ಭಾಗಿಯಾಗಿದೆ ಎಂದು ಆರೋಪಿಸಿದ್ದಾರೆ.

ನನ್ನನ್ನು ಬಂಧಿಸಲು ದೀರ್ಘಕಾಲದವರೆಗೆ ಪಿತೂರಿ ನಡೆಸಲಾಗಿದೆ. ಇದು ಕಡಿಮೆ ಉರಿಯಲ್ಲಿ ಬೇಯುತ್ತಿತ್ತು. ಬಳಿಕ ಉತ್ತಮ ರೀತಿಯಲ್ಲಿ ಕಾರ್ಯಗತಗೊಳಿಸಲಾಗಿದೆ. ಆದಿವಾಸಿಗಳು ಕಾಡಿನಲ್ಲೇ ವಾಸಿಸುವುದನ್ನು ಮುಂದುವರಿಸಬೇಕೆಂದು ಹೇಳಲು ಕೆಲವರು ಹಿಂಜರಿಯುವುದಿಲ್ಲ. ನಾವು ಕಾಡು ತೊರೆದು ಬಂದು ಅವರ ಪಕ್ಕದಲ್ಲಿ ಕುಳಿತೆವು. ಇದರಿಂದ ಅವರ ಬಟ್ಟೆಗಳು ಕೊಳೆಯಾದವು. ಅವರು ನಮ್ಮನ್ನು ಅಸ್ಪೃಶ್ಯರಂತೆ ನೋಡುತ್ತಾರೆ. ನಾನು ವಿಮಾನದಲ್ಲಿ ಪ್ರಯಾಣಿಸುವುದನ್ನು, ಪಂಚತಾರಾ ಹೋಟೆಲ್‌ಗಳಲ್ಲಿ ಉಳಿದುಕೊಳ್ಳುವುದು ಹಾಗೂ ಬಿಎಂಡಬ್ಲ್ಯು ಕಾರಿನಲ್ಲಿ ತೆರಳುವುದು ಅವರಿಗೆ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹೇಮಂತ್ ಸೋರೆನ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಜೆಎಂಎಂ, ಕಾಂಗ್ರೆಸ್ ಮತ್ತು ಇತರ ಮಿತ್ರಪಕ್ಷಗಳ ಶಾಸಕರ ಬೆಂಬಲದೊಂದಿಗೆ, ಸೊರೆನ್ ಅವರ ಆಪ್ತ ಸಹಾಯಕ ಚಂಪೈ ಸೊರೆನ್ ಫೆಬ್ರವರಿ 2ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಇಂದು ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸಿದ್ದಾರೆ.

ಜನವರಿ 31 ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನ. ರಾಜಭವನದ ಆದೇಶದ ಮೇರೆಗೆ ಮುಖ್ಯಮಂತ್ರಿಯೊಬ್ಬರನ್ನು ಬಂಧಿಸಲಾಗಿದೆ. ಜಾರ್ಖಂಡ್‌ನಲ್ಲಿ ಬುಡಕಟ್ಟು ಸಮುದಾಯದ ಸಿಎಂ 5 ವರ್ಷಗಳನ್ನು ಪೂರ್ಣಗೊಳಿಸಲು ಬಿಜೆಪಿ ಬಯಸುವುದಿಲ್ಲ, ಅವರು ತಮ್ಮ ಆಡಳಿತದಲ್ಲಿಯೂ ಇದನ್ನು ಅನುಮತಿಸಿರಲಿಲ್ಲ ಎಂದು  ಹೇಮಂತ್ ಸೊರೆನ್ ಹೇಳಿದ್ದಾರೆ.

ಬಿಜೆಪಿ ಆದಿವಾಸಿಗಳನ್ನು “ಅಸ್ಪೃಶ್ಯರು” ಎಂದು ಪರಿಗಣಿಸುತ್ತದೆ, ದೇಶದಲ್ಲಿ ಈಗಿನ ಆಡಳಿತದಲ್ಲಿ ಆದಿವಾಸಿಗಳು ಮತ್ತು ದಲಿತರು ಸುರಕ್ಷಿತವಾಗಿಲ್ಲ. ನಾನು ಇನ್ನಷ್ಟು ಬಲದೊಂದಿಗೆ ಮರಳಿ ಬರುತ್ತೇನೆ. ಪ್ರತಿಪಕ್ಷಗಳ ಷಡ್ಯಂತ್ರವನ್ನು ವಿಫಲಗೊಳಿಸುತ್ತೇನೆ. ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಶಂಕುಸ್ಥಾಪನೆ ಸಮಾರಂಭ ನಡೆದಾಗ ಬಿಜೆಪಿಯು ರಾಮರಾಜ್ಯವನ್ನು ತರುವುದಾಗಿ ಹೇಳಿತ್ತು, ಈಗ ಅವರು ಬಿಹಾರದಲ್ಲಿ ಮತ್ತು ನಂತರ ಜಾರ್ಖಂಡ್‌ನಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸಿದ್ದಾರೆ ಎಂದು ಹೇಮಂತ್ ಸೊರೆನ್ ಹೇಳಿದ್ದಾರೆ.

ನಾನು ಸೋಲನ್ನು ಒಪ್ಪಿಕೊಂಡಿಲ್ಲ, ತಮ್ಮ ಕುತಂತ್ರಗಳಲ್ಲಿ ಅವರು ಯಶಸ್ವಿಯಾಗುತ್ತಾರೆ ಎಂದು ಅವರು ಭಾವಿಸುತ್ತಾರೆ. ಆದರೆ ಇದು ಜಾರ್ಖಂಡ್, ಆದಿವಾಸಿಗಳು ಮತ್ತು ದಲಿತರು ತ್ಯಾಗ ಮಾಡಿದ ರಾಜ್ಯ, ಕೋಟಿಗಟ್ಟಲೆ ಲೂಟಿ ಮಾಡಿ ವಿದೇಶಕ್ಕೆ ಪಲಾಯನ ಮಾಡಿದವರನ್ನು ಕೇಂದ್ರೀಯ ಸಂಸ್ಥೆಗಳಿಗೆ ಏನನ್ನೂ ಮಾಡಲು ಸಾಧ್ಯವಾಗಿಲ್ಲ. ಅವರು ಏನು ಮಾಡುತ್ತಾರೆಂದು ಆದಿವಾಸಿಗಳು ಮತ್ತು ಅಮಾಯಕರನ್ನು ಗುರಿಯಾಗಿಸುತ್ತಿದ್ದಾರೆ? ಆದಿವಾಸಿಗಳ ಕಣ್ಣೀರು ನಿಮಗೆ ಲೆಕ್ಕಕ್ಕಿಲ್ಲ ಎಂಬ ಕಾರಣಕ್ಕೆ ನಾನು ಅಳುವುದಿಲ್ಲ, ಸೂಕ್ತ ಸಮಯದಲ್ಲಿ ಪ್ರತಿಯೊಂದು ಷಡ್ಯಂತ್ರಕ್ಕೂ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ.

ಇಂದು ಜೈಲಿನಿಂದ ವಿಧಾನಸಭೆಗೆ ಹೇಮಂತ್ ಸೊರೆನ್‌ ಆಗಮಿಸಿದಾಗ ಆಡಳಿತರೂಢ ಜೆಎಂಎಂ ನೇತೃತ್ವದ ಮೈತ್ರಿಕೂಟದ ಶಾಸಕರು ಹೇಮಂತ್ ಸೊರೇನ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದ್ದಾರೆ.

ಇದನ್ನು ಓದಿ: ಸಾವಿತ್ರಿಬಾಯಿ ಫುಲೆ ವಿವಿಯಲ್ಲಿ ABVP ಕಾರ್ಯಕರ್ತರಿಂದ ದಾಂಧಲೆ: ಕ್ರಮ ಕೈಗೊಳ್ಳದ ಅಧಿಕಾರಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...