Homeಮುಖಪುಟಪ್ರೊ. ಅಲಿ ಖಾನ್ ಪ್ರಕರಣ: ಎಸ್‌ಐಟಿಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ಪ್ರೊ. ಅಲಿ ಖಾನ್ ಪ್ರಕರಣ: ಎಸ್‌ಐಟಿಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

- Advertisement -
- Advertisement -

ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮೂದಾಬಾದ್ ಅವರ ‘ಆಪರೇಷನ್ ಸಿಂಧೂರ’ ಕುರಿತ ಎರಡು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳ ತನಿಖೆಗಾಗಿ ರಚಿಸಲಾದ ಹರಿಯಾಣ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) “ತನ್ನನ್ನು ತಾನೇ ದಾರಿ ತಪ್ಪಿಸುತ್ತಿದೆ” ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ಕೇವಲ ಎರಡು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತನಿಖೆ ಮಾಡಲು ಮಾತ್ರ ಎಸ್‌ಐಟಿಯನ್ನು ರಚಿಸಲಾಗಿದೆ ಎಂಬುವುದನ್ನು ಪುನರುಚ್ಚರಿಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು, ಎಸ್‌ಐಟಿ ತನ್ನ ತನಿಖಾ ವ್ಯಾಪ್ತಿಯನ್ನು ವಿಸ್ತರಿಸುತ್ತಿರುವುದು ಏಕೆ? ಎಂದು ಪ್ರಶ್ನಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 28ರಂದು ಆದೇಶ ನೀಡಿದ್ದ ನ್ಯಾಯಾಲಯ, ಎಸ್‌ಐಟಿಯ ತನಿಖೆ ಅಲಿ ಖಾನ್ ಅವರ ಎರಡು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಮಾತ್ರ ಸೀಮಿತವಾಗಿರಬೇಕು ಎಂದು ಹೇಳಿತ್ತು. ಆದರೆ, ಎಸ್‌ಐಟಿ ಅಲಿ ಖಾನ್ ಅವರ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದೆ. ಅಲ್ಲದೆ, ಕಳೆದ ಹತ್ತು ವರ್ಷಗಳ ಅವರ ವಿದೇಶ ಪ್ರವಾಸಗಳ ಬಗ್ಗೆ ಕೇಳುತ್ತಿದೆ ಎಂದು ಅಲಿ ಖಾನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಪೀಠದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಅಲಿ ಖಾನ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ನಿಜವಾದ ಅರ್ಥವನ್ನು ತಿಳಿದುಕೊಳ್ಳಲು ಮತ್ತು ಅವುಗಳಿಂದ ಯಾವ ಅಪರಾಧ ನಡೆದಿದೆ ಎಂಬುವುದನ್ನು ಸ್ಪಷ್ಟಪಡಿಸಲು ಎಸ್‌ಐಟಿಯನ್ನು ನಿರ್ದಿಷ್ಟವಾಗಿ ರಚಿಸಲಾಗಿದೆ. ಹೀಗಿರುವಾಗ ಅರ್ಜಿದಾರರ ಎಲೆಕ್ಟ್ರಾನಿಕ್ ಸಾಧನಗಳನ್ನು ಏಕೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಎಂದು ನ್ಯಾಯಾಲಯ ಪ್ರಶ್ನಿಸಿತು.

ಎಸ್‌ಐಟಿಯವರು ಯಾವ ಉದ್ದೇಶಕ್ಕೆ ಅಲಿ ಖಾನ್ ಅವರ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬುವುದು ನಮಗೆ ಗೊತ್ತಾಗಬೇಕಿದೆ. ಈ ಬಗ್ಗೆ ನಾವು ಅಧಿಕಾರಿಗಳನ್ನು ಕರೆದು ಕೇಳುತ್ತೇವೆ ಎಂದು ನ್ಯಾಯಮೂರ್ತಿ ಕಾಂತ್ ಅವರು ರಾಜ್ಯ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರಿಗೆ ತಿಳಿಸಿದರು.

“ಎಸ್‌ಐಟಿ ಅಲಿ ಖಾನ್ ಅವರ ಪೋಸ್ಟ್‌ಗಳನ್ನು ಮಾತ್ರ ಪರಿಶೀಲಿಸಬೇಕಿತ್ತು. ಆದರೆ, ತನ್ನನ್ನು ತಾನೇ ದಾರಿ ಅದು ತಪ್ಪಿಸುತ್ತಿರುವುದು ಏಕೆ? ಇದು ನಮಗೆ ಗೊತ್ತಾಗಬೇಕು” ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು, “ತನಿಖೆಯನ್ನು ಹೇಗೆ ನಡೆಸಬೇಕು ಎಂಬುದು ತನಿಖಾಧಿಕಾರಿಯ ವಿಶೇಷ ಹಕ್ಕು ಮತ್ತು ಅವರು ಎಲ್ಲಾ ಅಪರಾಧ ಅಂಶಗಳನ್ನು ಪರಿಶೀಲಿಸಬೇಕಿದೆ ಎಂದರು. ಇದಕ್ಕೆ ಕೌಂಟರ್ ಕೊಟ್ಟ ವಕೀಲ ಸಿಬಲ್ “ಸಂಚಾರ ವಿಚಾರಣೆ” ಸಾಧ್ಯವಿಲ್ಲ. ಅರ್ಜಿದಾರರಿಗೆ ನಾಲ್ಕು ಬಾರಿ ಸಮನ್ಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ಅರ್ಜಿದಾರರು (ಅಲಿ ಖಾನ್) ತನಿಖೆಗೆ ಸಹಕರಿಸಿದ್ದಾರೆ ಮತ್ತು ತಮ್ಮ ಎಲೆಕ್ಟ್ರಾನಿಕ್ಸ್‌ ಸಾಧನಗಳನ್ನು ಒಪ್ಪಿಸಿದ್ದಾರೆ ಎಂದು ಗಮನಿಸಿದ ನ್ಯಾಯಾಲಯ, ಅವರಿಗೆ ಮತ್ತೆ ಸಮನ್ಸ್ ನೀಡಬಾರದು ಎಂದು ನಿರ್ದೇಶಿತು. ಅಲ್ಲದೆ, “ತನಿಖೆ ನಡೆಸುವುದಕ್ಕೆ ನಿಮಗೆ ಅವರ ಅಗತ್ಯ ಇಲ್ಲ. ಒಂದು ನಿಘಂಟಿನ ಅವಶ್ಯಕತೆ ಇದೆ” ಎಂದು ಛೀಮಾರಿ ಹಾಕಿತು.

ನಂತರ, ನ್ಯಾಯಾಲಯವು ಮೇ 28 ರ ಆದೇಶವನ್ನು ಎಸ್‌ಐಟಿಗೆ ನೆನಪಿಸಿತು. ನಾಲ್ಕು ವಾರಗಳಲ್ಲಿ ತನಿಖೆಯನ್ನು ಮುಗಿಸಲು ನಿರ್ದೇಶಿಸಿತು.

ಮಧ್ಯಂತರ ಜಾಮೀನು ನೀಡುವಾಗ ವಿಧಿಸಲಾದ ಷರತ್ತುಗಳ ಪ್ರಕಾರ ಅರ್ಜಿದಾರರು ಸಬ್-ಜುಡಿಸ್ ವಿಷಯಗಳ ಬಗ್ಗೆ ಪ್ರತಿಕ್ರಿಯಿಸುವುದನ್ನು ಮಾತ್ರ ನಿರ್ಬಂಧಿಸಲಾಗಿದೆ. ಅವರು ಇತರ ವಿಷಯಗಳ ಬಗ್ಗೆ ಬರೆಯಲು ಅಥವಾ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸ್ವತಂತ್ರರು ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.

ಮೇ 21ರಂದು, ನ್ಯಾಯಾಲಯವು ಪ್ರಾಧ್ಯಾಪಕ ಅಲಿ ಖಾನ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು ಮತ್ತು ಅವರ ಎರಡು ಸಾಮಾಜಿಕ ಜಾಲತಾಣ ಪೋಸ್ಟ್‌ಗಳಲ್ಲಿ ಬಳಸಲಾದ ಕೆಲವು ಅಭಿವ್ಯಕ್ತಿಗಳ ಸರಿಯಾದ ತಿಳುವಳಿಕೆಗಾಗಿ ಮತ್ತು ಬಳಸಿದ ಪದಗುಚ್ಛಗಳ ಸಂಕೀರ್ಣತೆಯನ್ನು ಸಮಗ್ರವಾಗಿ ಅರ್ಥಮಾಡಿಕೊಳ್ಳಲು ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಹರಿಯಾಣ ಡಿಜಿಪಿಗೆ ನಿರ್ದೇಶಿಸಿತ್ತು.

ಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆ: ಮೂರು ಪ್ರಮುಖ ನಿರ್ಣಯಗಳ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...