Homeಮುಖಪುಟವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವಿನ ಕಂದರವನ್ನು ಮೀರಿದ ಪ್ರೊ. ರೊದ್ದಂ ನರಸಿಂಹ

ವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವಿನ ಕಂದರವನ್ನು ಮೀರಿದ ಪ್ರೊ. ರೊದ್ದಂ ನರಸಿಂಹ

ಪ್ರೊ ನರಸಿಂಹ ಅವರು ತಮ್ಮ ವ್ಯಕ್ತಿತ್ವವನ್ನು ನೆಲದ ಬೇರುಗಳ ಜೊತೆಗೆ ಉಳಸಿಕೊಂಡಿದ್ದರಿಂದ, ಪ್ರಾಚೀನ ಭಾರತೀಯ ವಿಜ್ಞಾನದ ಸಾಧನೆಗಳ ನೈಜವಾದ ಪ್ರತಿಪಾದನೆಗಳು ಮತ್ತು ಅತಿರಂಜಿತ ಪ್ರತಿಪಾದನೆಗಳ ನಡುವಿನ ವ್ಯತ್ಯಾಸವನ್ನು ಸುಲಭವಾಗಿ ಕಂಡುಹಿಡಿಯಬಲ್ಲವರಾಗಿದ್ದರು.

- Advertisement -
- Advertisement -
ನುಡಿನಮನ

ರೊದ್ದಂ ನರಸಿಂ

(20 ಜುಲೈ 1933, – 14 ಡಿಸೆಂಬರ್ 2020)

ವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವೆ ಇರುವ ಕಂದರವನ್ನು ಮೀರಲು ಕೆಲವೇ ವಿಜ್ಞಾನಿಗಳಿಗೆ ಸಾಧ್ಯ. ಅಂತಹವರಲ್ಲಿ ಪ್ರೊ ರೊದ್ದಂ ನರಸಿಂಹ ಒಬ್ಬರು. ಫ್ಲುಯಿಡ್ ಡೈನಾಮಿಕ್ಸ್‌ನ ವಿಜ್ಞಾನದಲ್ಲಿ ಮುಂಚೂಣಿಯ ಹೆಸರಾಗಿದ್ದ ನರಸಿಂಹ ಅವರಿಗೆ ಮಾನವಿಕ ಶಾಸ್ತ್ರದಲ್ಲಿ ಆಳವಾದ ಆಸಕ್ತಿ ಇತ್ತು. ಆದೇ ಆಸಕ್ತಿ ಅವರನ್ನು ವಿಜ್ಞಾನದ ತತ್ವಶಾಸ್ತ್ರದ ಕಡೆಗೆ ಕೊಂಡೊಯ್ಯಿತು. ವಿಜ್ಞಾನಕ್ಕೆ ವಿವಿಧ ಪರಂಪರೆಗಳಲ್ಲಿ ಇರುವ ವಿಭಿನ್ನ ದೃಷ್ಟಿಕೋನಗಳ ಬಗ್ಗೆ ಅವರು ವಿಶೇಷವಾಗಿ ಆಕರ್ಷಿತರಾಗಿದ್ದರು. ಅವರು ಎಲ್ಲರೊಂದಿಗೆ ಸುಲಭವಾಗಿ ಬೆರೆಯಬಲ್ಲವರಾಗಿದ್ದರು ಹಾಗೂ ಅತ್ಯಂತ ಕ್ಲಿಷ್ಟಕರವಾದ ವಿಷಯಗಳ ಸಾರವನ್ನು ಸರಳವಾದ ಪದಗಳಲ್ಲಿ ಹೇಳಿಕೊಡಬಲ್ಲ ವಿಶಿಷ್ಟ ಸಾಮರ್ಥ್ಯ ಉಳ್ಳವರಾಗಿದ್ದರು. ಅದರಿಂದ, ಅವರೊಂದಿಗೆ ಮಾಡಿದ ಸಹಜ ಮಾತುಕತೆಗಳೂ ಸಹ ವಿಶಿಷ್ಟ ಒಳನೋಟಗಳನ್ನು ಒದಗಿಸುತ್ತಿದ್ದವು. ಕೆಲವೇ ತಿಂಗಳುಗಳ ಹಿಂದೆ ರಸ್ತೆ ಬದಿಯಲ್ಲಿ ನಿಂತು ಮಾಡಿದ ಮಾತುಕತೆಯಲ್ಲಿ ತಿಳಿದಿದ್ದೇನೆಂದರೆ, ಭಾರತದಲ್ಲಿ ಶಿಕ್ಷೆಯ ರೂಪದಲ್ಲಿ ವ್ಯಕ್ತಿಗಳ ಮೂಗನ್ನು ಕತ್ತರಿಸಲಾಗುತ್ತಿತ್ತಂತೆ ಮತ್ತು ಮೂಗು ಕತ್ತರಿಸುವ ಪಾರಂಪರಿಕ ಭಾರತೀಯ ವಿಧಾನವು ಪ್ಲಾಸ್ಟಿಕ್ ಸರ್ಜರಿಯ ಪಾರಂಪರಿಕ ವಿಧಾನದ ಬೆಳವಣಿಗೆಗೆ ಕೊಡುಗೆ ನೀಡಿದ್ದನ್ನು ಹೇಳಿದ್ದರು. ಮೂಗು ಕತ್ತರಿಸಿಕೊಂಡ ವ್ಯಕ್ತಿಗಳನ್ನು ಒಂದು ವರ್ಷದ ಬಳಿಕ ನೋಡಿದಾಗ ಮೂಗು ಅದೇ ಸ್ಥಾನಕ್ಕೆ ಮರಳಿ ಬಂದಿದ್ದನ್ನು ನೋಡಿ ಬ್ರಿಟಿಷರು ಆಶ್ಚರ್ಯಚಕಿತರಾಗಿದ್ದರು ಎಂಬುದರ ಬಗ್ಗೆಯೂ ಹೇಳಿದ್ದರು.

ಪ್ರೊ ನರಸಿಂಹ ಅವರು ತಮ್ಮ ವ್ಯಕ್ತಿತ್ವವನ್ನು ನೆಲದ ಬೇರುಗಳ ಜೊತೆಗೆ ಉಳಸಿಕೊಂಡಿದ್ದರಿಂದ, ಪ್ರಾಚೀನ ಭಾರತೀಯ ವಿಜ್ಞಾನದ ಸಾಧನೆಗಳ ನೈಜವಾದ ಪ್ರತಿಪಾದನೆಗಳು ಮತ್ತು ಅತಿರಂಜಿತ ಪ್ರತಿಪಾದನೆಗಳ ನಡುವಿನ ವ್ಯತ್ಯಾಸವನ್ನು ಸುಲಭವಾಗಿ ಕಂಡುಹಿಡಿಯಬಲ್ಲವರಾಗಿದ್ದರು. ಅವರು ಪ್ರಾಚೀನ ಭಾರತದ ನಿರ್ದಿಷ್ಟ ಪಠ್ಯಗಳನ್ನು ಉಲ್ಲೇಖಿಸಬಲ್ಲವರಾಗಿದ್ದರು; ಉದಾಹರಣೆಗೆ ಕ್ರಿ,ಪೂ ಆರನೇ ಶತಮಾನದ ಸುಲ್ವ ಸೂತ್ರ: ಅದು ಉದ್ದದ ವರ್ಗ (ಸ್ಕ್ವೇರ್ ಆಫ್ ಲೆಂತ್) ಹಾಗೂ ಅಗಲದ ವರ್ಗದ (ಸ್ಕ್ವೇರ್ ಆಫ್ ಬ್ರೆಡ್ತ್) ಮೊತ್ತವು ಕರ್ಣರೇಖೆಯ ವರ್ಗಕ್ಕೆ (ಸ್ಕ್ವೇರ್ ಆಫ್ ಡಯಾಗನಲ್) ಸಮನಾಗಿರುತ್ತೆ ಎಂಬುದರ ಸಾರ, ಮುಂದೆ ಪೈಥಾಗರಸ್ ಥಿಯೋರಮ್ ಆಗಿ ವರ್ಣಿಸಲಾಯಿತು ಎಂದು ವಿವರಿಸಿದ್ದರು. ಅದೇ ಸಮಯದಲ್ಲಿ, ಪ್ರಾಚೀನ ಭಾರತೀಯ ವಿಜ್ಞಾನದ ವೈಭವ-ಆಡಂಬರದ ಕಲ್ಪನೆಗಳು ಒಬ್ಬ ವಿಜ್ಞಾನಿಯಾಗಿ ಅವರ ಕೆಲಸದ ಮೇಲೆ ಪ್ರಭಾವ ಬೀರುವ ಪ್ರಶ್ನೆ ಎಂದೂ ಬರಲಿಲ್ಲ, ಅದರಲ್ಲೂ ವಿಶೇಷವಾಗಿ, ಎನ್‌ಎಎಲ್‌ನಲ್ಲಿ ಲೈಟ್ ಕೊಂಬ್ಯಾಟ್ ಏರ್‌ಕ್ರಾಫ್ಟ್‌ನ ರಚನೆಯಲ್ಲಿ ಅವರ ಒಂದು ಪಾತ್ರವಿತ್ತು, ಅಲ್ಲಿಯೂ ಪ್ರಾಚೀನ ಕಲ್ಪನೆಗಳು ಪ್ರಭಾವ ಬೀರಲಿಲ್ಲ.

ವಿಜ್ಞಾನ ಮತ್ತು ವಿಜ್ಞಾನದ ಆಡಳಿತದಲ್ಲಿ ಅವರ ಸಾಧನೆಗಳಿಗಿಂತ, ಸಮಾಜದ ಎಲ್ಲಾ ಸ್ತರದ ಜನರೊಂದಿಗೆ ಬೆರೆದು, ಅವರು ವಿದ್ಯಾರ್ಥಿಗಳಾಗಿರಲಿ, ಜೊತೆಗೆ ಕೆಲಸ ಮಾಡುವವರಾಗಿರಲಿ, ದೊಡ್ಡ ಸಾಧನೆ ಮಾಡಿದ ವಿಜ್ಞಾನಿಗಳಾಗಿರಲಿ ಅಥವಾ ಯಾವುದೇ ಪರಿಚಯಸ್ಥರಾಗಿರಲಿ, ಅವರೆಲ್ಲರ ಜೊತೆಗೆ ವಿಜ್ಞಾನದ ಬಗ್ಗೆ ಮಾತನಾಡುವ ಅವರ ಸಾಮರ್ಥ್ಯದಿಂದಲೇ ಅವರನ್ನು ನೆನಪಿಸಿಕೊಳ್ಳಲಾಗುವುದು. ಇದನ್ನು ಮಾಡಲು ಸಾಧ್ಯವಾಗಿದ್ದು ಕೇವಲ ವಿಜ್ಞಾನದ ಮೇಲಿದ್ದ ಪಾಂಡಿತ್ಯದಿಂದ ಅಲ್ಲ, ಅದಕ್ಕಿಂತ ಮುಖ್ಯವಾಗಿ, ಕಲಿಯಲು ಮತ್ತು ಕಲಿಸಲು ಅವರಿಗೆ ಜೀವನದುದ್ದಕ್ಕೂ ಇದ್ದ ಬದ್ಧತೆಯ ಕಾರಣದಿಂದ.

ಪ್ರೊ. ನರೇಂದ್ರ ಪಾಣಿ
ಬೆಂಗಳೂರಿನ ಎನ್‌ಐಎಎಸ್ ಸಂಸ್ಥೆಯ ಸಮಾಜ ಶಾಸ್ತ್ರ ವಿಭಾಗದ ಡೀನ್


ಇದನ್ನೂ ಓದಿ: ಹೆಸರಾಂತ ಹಿರಿಯ ವಿಜ್ಞಾನಿ ಪ್ರೊ.ರೊದ್ದಾಂ ನರಸಿಂಹ ನಿಧನ: ಗಣ್ಯರ ಸಂತಾಪ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...