Homeಮುಖಪುಟವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವಿನ ಕಂದರವನ್ನು ಮೀರಿದ ಪ್ರೊ. ರೊದ್ದಂ ನರಸಿಂಹ

ವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವಿನ ಕಂದರವನ್ನು ಮೀರಿದ ಪ್ರೊ. ರೊದ್ದಂ ನರಸಿಂಹ

ಪ್ರೊ ನರಸಿಂಹ ಅವರು ತಮ್ಮ ವ್ಯಕ್ತಿತ್ವವನ್ನು ನೆಲದ ಬೇರುಗಳ ಜೊತೆಗೆ ಉಳಸಿಕೊಂಡಿದ್ದರಿಂದ, ಪ್ರಾಚೀನ ಭಾರತೀಯ ವಿಜ್ಞಾನದ ಸಾಧನೆಗಳ ನೈಜವಾದ ಪ್ರತಿಪಾದನೆಗಳು ಮತ್ತು ಅತಿರಂಜಿತ ಪ್ರತಿಪಾದನೆಗಳ ನಡುವಿನ ವ್ಯತ್ಯಾಸವನ್ನು ಸುಲಭವಾಗಿ ಕಂಡುಹಿಡಿಯಬಲ್ಲವರಾಗಿದ್ದರು.

- Advertisement -
- Advertisement -
ನುಡಿನಮನ

ರೊದ್ದಂ ನರಸಿಂ

(20 ಜುಲೈ 1933, – 14 ಡಿಸೆಂಬರ್ 2020)

ವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವೆ ಇರುವ ಕಂದರವನ್ನು ಮೀರಲು ಕೆಲವೇ ವಿಜ್ಞಾನಿಗಳಿಗೆ ಸಾಧ್ಯ. ಅಂತಹವರಲ್ಲಿ ಪ್ರೊ ರೊದ್ದಂ ನರಸಿಂಹ ಒಬ್ಬರು. ಫ್ಲುಯಿಡ್ ಡೈನಾಮಿಕ್ಸ್‌ನ ವಿಜ್ಞಾನದಲ್ಲಿ ಮುಂಚೂಣಿಯ ಹೆಸರಾಗಿದ್ದ ನರಸಿಂಹ ಅವರಿಗೆ ಮಾನವಿಕ ಶಾಸ್ತ್ರದಲ್ಲಿ ಆಳವಾದ ಆಸಕ್ತಿ ಇತ್ತು. ಆದೇ ಆಸಕ್ತಿ ಅವರನ್ನು ವಿಜ್ಞಾನದ ತತ್ವಶಾಸ್ತ್ರದ ಕಡೆಗೆ ಕೊಂಡೊಯ್ಯಿತು. ವಿಜ್ಞಾನಕ್ಕೆ ವಿವಿಧ ಪರಂಪರೆಗಳಲ್ಲಿ ಇರುವ ವಿಭಿನ್ನ ದೃಷ್ಟಿಕೋನಗಳ ಬಗ್ಗೆ ಅವರು ವಿಶೇಷವಾಗಿ ಆಕರ್ಷಿತರಾಗಿದ್ದರು. ಅವರು ಎಲ್ಲರೊಂದಿಗೆ ಸುಲಭವಾಗಿ ಬೆರೆಯಬಲ್ಲವರಾಗಿದ್ದರು ಹಾಗೂ ಅತ್ಯಂತ ಕ್ಲಿಷ್ಟಕರವಾದ ವಿಷಯಗಳ ಸಾರವನ್ನು ಸರಳವಾದ ಪದಗಳಲ್ಲಿ ಹೇಳಿಕೊಡಬಲ್ಲ ವಿಶಿಷ್ಟ ಸಾಮರ್ಥ್ಯ ಉಳ್ಳವರಾಗಿದ್ದರು. ಅದರಿಂದ, ಅವರೊಂದಿಗೆ ಮಾಡಿದ ಸಹಜ ಮಾತುಕತೆಗಳೂ ಸಹ ವಿಶಿಷ್ಟ ಒಳನೋಟಗಳನ್ನು ಒದಗಿಸುತ್ತಿದ್ದವು. ಕೆಲವೇ ತಿಂಗಳುಗಳ ಹಿಂದೆ ರಸ್ತೆ ಬದಿಯಲ್ಲಿ ನಿಂತು ಮಾಡಿದ ಮಾತುಕತೆಯಲ್ಲಿ ತಿಳಿದಿದ್ದೇನೆಂದರೆ, ಭಾರತದಲ್ಲಿ ಶಿಕ್ಷೆಯ ರೂಪದಲ್ಲಿ ವ್ಯಕ್ತಿಗಳ ಮೂಗನ್ನು ಕತ್ತರಿಸಲಾಗುತ್ತಿತ್ತಂತೆ ಮತ್ತು ಮೂಗು ಕತ್ತರಿಸುವ ಪಾರಂಪರಿಕ ಭಾರತೀಯ ವಿಧಾನವು ಪ್ಲಾಸ್ಟಿಕ್ ಸರ್ಜರಿಯ ಪಾರಂಪರಿಕ ವಿಧಾನದ ಬೆಳವಣಿಗೆಗೆ ಕೊಡುಗೆ ನೀಡಿದ್ದನ್ನು ಹೇಳಿದ್ದರು. ಮೂಗು ಕತ್ತರಿಸಿಕೊಂಡ ವ್ಯಕ್ತಿಗಳನ್ನು ಒಂದು ವರ್ಷದ ಬಳಿಕ ನೋಡಿದಾಗ ಮೂಗು ಅದೇ ಸ್ಥಾನಕ್ಕೆ ಮರಳಿ ಬಂದಿದ್ದನ್ನು ನೋಡಿ ಬ್ರಿಟಿಷರು ಆಶ್ಚರ್ಯಚಕಿತರಾಗಿದ್ದರು ಎಂಬುದರ ಬಗ್ಗೆಯೂ ಹೇಳಿದ್ದರು.

ಪ್ರೊ ನರಸಿಂಹ ಅವರು ತಮ್ಮ ವ್ಯಕ್ತಿತ್ವವನ್ನು ನೆಲದ ಬೇರುಗಳ ಜೊತೆಗೆ ಉಳಸಿಕೊಂಡಿದ್ದರಿಂದ, ಪ್ರಾಚೀನ ಭಾರತೀಯ ವಿಜ್ಞಾನದ ಸಾಧನೆಗಳ ನೈಜವಾದ ಪ್ರತಿಪಾದನೆಗಳು ಮತ್ತು ಅತಿರಂಜಿತ ಪ್ರತಿಪಾದನೆಗಳ ನಡುವಿನ ವ್ಯತ್ಯಾಸವನ್ನು ಸುಲಭವಾಗಿ ಕಂಡುಹಿಡಿಯಬಲ್ಲವರಾಗಿದ್ದರು. ಅವರು ಪ್ರಾಚೀನ ಭಾರತದ ನಿರ್ದಿಷ್ಟ ಪಠ್ಯಗಳನ್ನು ಉಲ್ಲೇಖಿಸಬಲ್ಲವರಾಗಿದ್ದರು; ಉದಾಹರಣೆಗೆ ಕ್ರಿ,ಪೂ ಆರನೇ ಶತಮಾನದ ಸುಲ್ವ ಸೂತ್ರ: ಅದು ಉದ್ದದ ವರ್ಗ (ಸ್ಕ್ವೇರ್ ಆಫ್ ಲೆಂತ್) ಹಾಗೂ ಅಗಲದ ವರ್ಗದ (ಸ್ಕ್ವೇರ್ ಆಫ್ ಬ್ರೆಡ್ತ್) ಮೊತ್ತವು ಕರ್ಣರೇಖೆಯ ವರ್ಗಕ್ಕೆ (ಸ್ಕ್ವೇರ್ ಆಫ್ ಡಯಾಗನಲ್) ಸಮನಾಗಿರುತ್ತೆ ಎಂಬುದರ ಸಾರ, ಮುಂದೆ ಪೈಥಾಗರಸ್ ಥಿಯೋರಮ್ ಆಗಿ ವರ್ಣಿಸಲಾಯಿತು ಎಂದು ವಿವರಿಸಿದ್ದರು. ಅದೇ ಸಮಯದಲ್ಲಿ, ಪ್ರಾಚೀನ ಭಾರತೀಯ ವಿಜ್ಞಾನದ ವೈಭವ-ಆಡಂಬರದ ಕಲ್ಪನೆಗಳು ಒಬ್ಬ ವಿಜ್ಞಾನಿಯಾಗಿ ಅವರ ಕೆಲಸದ ಮೇಲೆ ಪ್ರಭಾವ ಬೀರುವ ಪ್ರಶ್ನೆ ಎಂದೂ ಬರಲಿಲ್ಲ, ಅದರಲ್ಲೂ ವಿಶೇಷವಾಗಿ, ಎನ್‌ಎಎಲ್‌ನಲ್ಲಿ ಲೈಟ್ ಕೊಂಬ್ಯಾಟ್ ಏರ್‌ಕ್ರಾಫ್ಟ್‌ನ ರಚನೆಯಲ್ಲಿ ಅವರ ಒಂದು ಪಾತ್ರವಿತ್ತು, ಅಲ್ಲಿಯೂ ಪ್ರಾಚೀನ ಕಲ್ಪನೆಗಳು ಪ್ರಭಾವ ಬೀರಲಿಲ್ಲ.

ವಿಜ್ಞಾನ ಮತ್ತು ವಿಜ್ಞಾನದ ಆಡಳಿತದಲ್ಲಿ ಅವರ ಸಾಧನೆಗಳಿಗಿಂತ, ಸಮಾಜದ ಎಲ್ಲಾ ಸ್ತರದ ಜನರೊಂದಿಗೆ ಬೆರೆದು, ಅವರು ವಿದ್ಯಾರ್ಥಿಗಳಾಗಿರಲಿ, ಜೊತೆಗೆ ಕೆಲಸ ಮಾಡುವವರಾಗಿರಲಿ, ದೊಡ್ಡ ಸಾಧನೆ ಮಾಡಿದ ವಿಜ್ಞಾನಿಗಳಾಗಿರಲಿ ಅಥವಾ ಯಾವುದೇ ಪರಿಚಯಸ್ಥರಾಗಿರಲಿ, ಅವರೆಲ್ಲರ ಜೊತೆಗೆ ವಿಜ್ಞಾನದ ಬಗ್ಗೆ ಮಾತನಾಡುವ ಅವರ ಸಾಮರ್ಥ್ಯದಿಂದಲೇ ಅವರನ್ನು ನೆನಪಿಸಿಕೊಳ್ಳಲಾಗುವುದು. ಇದನ್ನು ಮಾಡಲು ಸಾಧ್ಯವಾಗಿದ್ದು ಕೇವಲ ವಿಜ್ಞಾನದ ಮೇಲಿದ್ದ ಪಾಂಡಿತ್ಯದಿಂದ ಅಲ್ಲ, ಅದಕ್ಕಿಂತ ಮುಖ್ಯವಾಗಿ, ಕಲಿಯಲು ಮತ್ತು ಕಲಿಸಲು ಅವರಿಗೆ ಜೀವನದುದ್ದಕ್ಕೂ ಇದ್ದ ಬದ್ಧತೆಯ ಕಾರಣದಿಂದ.

ಪ್ರೊ. ನರೇಂದ್ರ ಪಾಣಿ
ಬೆಂಗಳೂರಿನ ಎನ್‌ಐಎಎಸ್ ಸಂಸ್ಥೆಯ ಸಮಾಜ ಶಾಸ್ತ್ರ ವಿಭಾಗದ ಡೀನ್


ಇದನ್ನೂ ಓದಿ: ಹೆಸರಾಂತ ಹಿರಿಯ ವಿಜ್ಞಾನಿ ಪ್ರೊ.ರೊದ್ದಾಂ ನರಸಿಂಹ ನಿಧನ: ಗಣ್ಯರ ಸಂತಾಪ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...