Homeಮುಖಪುಟವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವಿನ ಕಂದರವನ್ನು ಮೀರಿದ ಪ್ರೊ. ರೊದ್ದಂ ನರಸಿಂಹ

ವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವಿನ ಕಂದರವನ್ನು ಮೀರಿದ ಪ್ರೊ. ರೊದ್ದಂ ನರಸಿಂಹ

ಪ್ರೊ ನರಸಿಂಹ ಅವರು ತಮ್ಮ ವ್ಯಕ್ತಿತ್ವವನ್ನು ನೆಲದ ಬೇರುಗಳ ಜೊತೆಗೆ ಉಳಸಿಕೊಂಡಿದ್ದರಿಂದ, ಪ್ರಾಚೀನ ಭಾರತೀಯ ವಿಜ್ಞಾನದ ಸಾಧನೆಗಳ ನೈಜವಾದ ಪ್ರತಿಪಾದನೆಗಳು ಮತ್ತು ಅತಿರಂಜಿತ ಪ್ರತಿಪಾದನೆಗಳ ನಡುವಿನ ವ್ಯತ್ಯಾಸವನ್ನು ಸುಲಭವಾಗಿ ಕಂಡುಹಿಡಿಯಬಲ್ಲವರಾಗಿದ್ದರು.

- Advertisement -
- Advertisement -
ನುಡಿನಮನ

ರೊದ್ದಂ ನರಸಿಂ

(20 ಜುಲೈ 1933, – 14 ಡಿಸೆಂಬರ್ 2020)

ವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವೆ ಇರುವ ಕಂದರವನ್ನು ಮೀರಲು ಕೆಲವೇ ವಿಜ್ಞಾನಿಗಳಿಗೆ ಸಾಧ್ಯ. ಅಂತಹವರಲ್ಲಿ ಪ್ರೊ ರೊದ್ದಂ ನರಸಿಂಹ ಒಬ್ಬರು. ಫ್ಲುಯಿಡ್ ಡೈನಾಮಿಕ್ಸ್‌ನ ವಿಜ್ಞಾನದಲ್ಲಿ ಮುಂಚೂಣಿಯ ಹೆಸರಾಗಿದ್ದ ನರಸಿಂಹ ಅವರಿಗೆ ಮಾನವಿಕ ಶಾಸ್ತ್ರದಲ್ಲಿ ಆಳವಾದ ಆಸಕ್ತಿ ಇತ್ತು. ಆದೇ ಆಸಕ್ತಿ ಅವರನ್ನು ವಿಜ್ಞಾನದ ತತ್ವಶಾಸ್ತ್ರದ ಕಡೆಗೆ ಕೊಂಡೊಯ್ಯಿತು. ವಿಜ್ಞಾನಕ್ಕೆ ವಿವಿಧ ಪರಂಪರೆಗಳಲ್ಲಿ ಇರುವ ವಿಭಿನ್ನ ದೃಷ್ಟಿಕೋನಗಳ ಬಗ್ಗೆ ಅವರು ವಿಶೇಷವಾಗಿ ಆಕರ್ಷಿತರಾಗಿದ್ದರು. ಅವರು ಎಲ್ಲರೊಂದಿಗೆ ಸುಲಭವಾಗಿ ಬೆರೆಯಬಲ್ಲವರಾಗಿದ್ದರು ಹಾಗೂ ಅತ್ಯಂತ ಕ್ಲಿಷ್ಟಕರವಾದ ವಿಷಯಗಳ ಸಾರವನ್ನು ಸರಳವಾದ ಪದಗಳಲ್ಲಿ ಹೇಳಿಕೊಡಬಲ್ಲ ವಿಶಿಷ್ಟ ಸಾಮರ್ಥ್ಯ ಉಳ್ಳವರಾಗಿದ್ದರು. ಅದರಿಂದ, ಅವರೊಂದಿಗೆ ಮಾಡಿದ ಸಹಜ ಮಾತುಕತೆಗಳೂ ಸಹ ವಿಶಿಷ್ಟ ಒಳನೋಟಗಳನ್ನು ಒದಗಿಸುತ್ತಿದ್ದವು. ಕೆಲವೇ ತಿಂಗಳುಗಳ ಹಿಂದೆ ರಸ್ತೆ ಬದಿಯಲ್ಲಿ ನಿಂತು ಮಾಡಿದ ಮಾತುಕತೆಯಲ್ಲಿ ತಿಳಿದಿದ್ದೇನೆಂದರೆ, ಭಾರತದಲ್ಲಿ ಶಿಕ್ಷೆಯ ರೂಪದಲ್ಲಿ ವ್ಯಕ್ತಿಗಳ ಮೂಗನ್ನು ಕತ್ತರಿಸಲಾಗುತ್ತಿತ್ತಂತೆ ಮತ್ತು ಮೂಗು ಕತ್ತರಿಸುವ ಪಾರಂಪರಿಕ ಭಾರತೀಯ ವಿಧಾನವು ಪ್ಲಾಸ್ಟಿಕ್ ಸರ್ಜರಿಯ ಪಾರಂಪರಿಕ ವಿಧಾನದ ಬೆಳವಣಿಗೆಗೆ ಕೊಡುಗೆ ನೀಡಿದ್ದನ್ನು ಹೇಳಿದ್ದರು. ಮೂಗು ಕತ್ತರಿಸಿಕೊಂಡ ವ್ಯಕ್ತಿಗಳನ್ನು ಒಂದು ವರ್ಷದ ಬಳಿಕ ನೋಡಿದಾಗ ಮೂಗು ಅದೇ ಸ್ಥಾನಕ್ಕೆ ಮರಳಿ ಬಂದಿದ್ದನ್ನು ನೋಡಿ ಬ್ರಿಟಿಷರು ಆಶ್ಚರ್ಯಚಕಿತರಾಗಿದ್ದರು ಎಂಬುದರ ಬಗ್ಗೆಯೂ ಹೇಳಿದ್ದರು.

ಪ್ರೊ ನರಸಿಂಹ ಅವರು ತಮ್ಮ ವ್ಯಕ್ತಿತ್ವವನ್ನು ನೆಲದ ಬೇರುಗಳ ಜೊತೆಗೆ ಉಳಸಿಕೊಂಡಿದ್ದರಿಂದ, ಪ್ರಾಚೀನ ಭಾರತೀಯ ವಿಜ್ಞಾನದ ಸಾಧನೆಗಳ ನೈಜವಾದ ಪ್ರತಿಪಾದನೆಗಳು ಮತ್ತು ಅತಿರಂಜಿತ ಪ್ರತಿಪಾದನೆಗಳ ನಡುವಿನ ವ್ಯತ್ಯಾಸವನ್ನು ಸುಲಭವಾಗಿ ಕಂಡುಹಿಡಿಯಬಲ್ಲವರಾಗಿದ್ದರು. ಅವರು ಪ್ರಾಚೀನ ಭಾರತದ ನಿರ್ದಿಷ್ಟ ಪಠ್ಯಗಳನ್ನು ಉಲ್ಲೇಖಿಸಬಲ್ಲವರಾಗಿದ್ದರು; ಉದಾಹರಣೆಗೆ ಕ್ರಿ,ಪೂ ಆರನೇ ಶತಮಾನದ ಸುಲ್ವ ಸೂತ್ರ: ಅದು ಉದ್ದದ ವರ್ಗ (ಸ್ಕ್ವೇರ್ ಆಫ್ ಲೆಂತ್) ಹಾಗೂ ಅಗಲದ ವರ್ಗದ (ಸ್ಕ್ವೇರ್ ಆಫ್ ಬ್ರೆಡ್ತ್) ಮೊತ್ತವು ಕರ್ಣರೇಖೆಯ ವರ್ಗಕ್ಕೆ (ಸ್ಕ್ವೇರ್ ಆಫ್ ಡಯಾಗನಲ್) ಸಮನಾಗಿರುತ್ತೆ ಎಂಬುದರ ಸಾರ, ಮುಂದೆ ಪೈಥಾಗರಸ್ ಥಿಯೋರಮ್ ಆಗಿ ವರ್ಣಿಸಲಾಯಿತು ಎಂದು ವಿವರಿಸಿದ್ದರು. ಅದೇ ಸಮಯದಲ್ಲಿ, ಪ್ರಾಚೀನ ಭಾರತೀಯ ವಿಜ್ಞಾನದ ವೈಭವ-ಆಡಂಬರದ ಕಲ್ಪನೆಗಳು ಒಬ್ಬ ವಿಜ್ಞಾನಿಯಾಗಿ ಅವರ ಕೆಲಸದ ಮೇಲೆ ಪ್ರಭಾವ ಬೀರುವ ಪ್ರಶ್ನೆ ಎಂದೂ ಬರಲಿಲ್ಲ, ಅದರಲ್ಲೂ ವಿಶೇಷವಾಗಿ, ಎನ್‌ಎಎಲ್‌ನಲ್ಲಿ ಲೈಟ್ ಕೊಂಬ್ಯಾಟ್ ಏರ್‌ಕ್ರಾಫ್ಟ್‌ನ ರಚನೆಯಲ್ಲಿ ಅವರ ಒಂದು ಪಾತ್ರವಿತ್ತು, ಅಲ್ಲಿಯೂ ಪ್ರಾಚೀನ ಕಲ್ಪನೆಗಳು ಪ್ರಭಾವ ಬೀರಲಿಲ್ಲ.

ವಿಜ್ಞಾನ ಮತ್ತು ವಿಜ್ಞಾನದ ಆಡಳಿತದಲ್ಲಿ ಅವರ ಸಾಧನೆಗಳಿಗಿಂತ, ಸಮಾಜದ ಎಲ್ಲಾ ಸ್ತರದ ಜನರೊಂದಿಗೆ ಬೆರೆದು, ಅವರು ವಿದ್ಯಾರ್ಥಿಗಳಾಗಿರಲಿ, ಜೊತೆಗೆ ಕೆಲಸ ಮಾಡುವವರಾಗಿರಲಿ, ದೊಡ್ಡ ಸಾಧನೆ ಮಾಡಿದ ವಿಜ್ಞಾನಿಗಳಾಗಿರಲಿ ಅಥವಾ ಯಾವುದೇ ಪರಿಚಯಸ್ಥರಾಗಿರಲಿ, ಅವರೆಲ್ಲರ ಜೊತೆಗೆ ವಿಜ್ಞಾನದ ಬಗ್ಗೆ ಮಾತನಾಡುವ ಅವರ ಸಾಮರ್ಥ್ಯದಿಂದಲೇ ಅವರನ್ನು ನೆನಪಿಸಿಕೊಳ್ಳಲಾಗುವುದು. ಇದನ್ನು ಮಾಡಲು ಸಾಧ್ಯವಾಗಿದ್ದು ಕೇವಲ ವಿಜ್ಞಾನದ ಮೇಲಿದ್ದ ಪಾಂಡಿತ್ಯದಿಂದ ಅಲ್ಲ, ಅದಕ್ಕಿಂತ ಮುಖ್ಯವಾಗಿ, ಕಲಿಯಲು ಮತ್ತು ಕಲಿಸಲು ಅವರಿಗೆ ಜೀವನದುದ್ದಕ್ಕೂ ಇದ್ದ ಬದ್ಧತೆಯ ಕಾರಣದಿಂದ.

ಪ್ರೊ. ನರೇಂದ್ರ ಪಾಣಿ
ಬೆಂಗಳೂರಿನ ಎನ್‌ಐಎಎಸ್ ಸಂಸ್ಥೆಯ ಸಮಾಜ ಶಾಸ್ತ್ರ ವಿಭಾಗದ ಡೀನ್


ಇದನ್ನೂ ಓದಿ: ಹೆಸರಾಂತ ಹಿರಿಯ ವಿಜ್ಞಾನಿ ಪ್ರೊ.ರೊದ್ದಾಂ ನರಸಿಂಹ ನಿಧನ: ಗಣ್ಯರ ಸಂತಾಪ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...