Homeಮುಖಪುಟವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವಿನ ಕಂದರವನ್ನು ಮೀರಿದ ಪ್ರೊ. ರೊದ್ದಂ ನರಸಿಂಹ

ವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವಿನ ಕಂದರವನ್ನು ಮೀರಿದ ಪ್ರೊ. ರೊದ್ದಂ ನರಸಿಂಹ

ಪ್ರೊ ನರಸಿಂಹ ಅವರು ತಮ್ಮ ವ್ಯಕ್ತಿತ್ವವನ್ನು ನೆಲದ ಬೇರುಗಳ ಜೊತೆಗೆ ಉಳಸಿಕೊಂಡಿದ್ದರಿಂದ, ಪ್ರಾಚೀನ ಭಾರತೀಯ ವಿಜ್ಞಾನದ ಸಾಧನೆಗಳ ನೈಜವಾದ ಪ್ರತಿಪಾದನೆಗಳು ಮತ್ತು ಅತಿರಂಜಿತ ಪ್ರತಿಪಾದನೆಗಳ ನಡುವಿನ ವ್ಯತ್ಯಾಸವನ್ನು ಸುಲಭವಾಗಿ ಕಂಡುಹಿಡಿಯಬಲ್ಲವರಾಗಿದ್ದರು.

- Advertisement -
- Advertisement -
ನುಡಿನಮನ

ರೊದ್ದಂ ನರಸಿಂ

(20 ಜುಲೈ 1933, – 14 ಡಿಸೆಂಬರ್ 2020)

ವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವೆ ಇರುವ ಕಂದರವನ್ನು ಮೀರಲು ಕೆಲವೇ ವಿಜ್ಞಾನಿಗಳಿಗೆ ಸಾಧ್ಯ. ಅಂತಹವರಲ್ಲಿ ಪ್ರೊ ರೊದ್ದಂ ನರಸಿಂಹ ಒಬ್ಬರು. ಫ್ಲುಯಿಡ್ ಡೈನಾಮಿಕ್ಸ್‌ನ ವಿಜ್ಞಾನದಲ್ಲಿ ಮುಂಚೂಣಿಯ ಹೆಸರಾಗಿದ್ದ ನರಸಿಂಹ ಅವರಿಗೆ ಮಾನವಿಕ ಶಾಸ್ತ್ರದಲ್ಲಿ ಆಳವಾದ ಆಸಕ್ತಿ ಇತ್ತು. ಆದೇ ಆಸಕ್ತಿ ಅವರನ್ನು ವಿಜ್ಞಾನದ ತತ್ವಶಾಸ್ತ್ರದ ಕಡೆಗೆ ಕೊಂಡೊಯ್ಯಿತು. ವಿಜ್ಞಾನಕ್ಕೆ ವಿವಿಧ ಪರಂಪರೆಗಳಲ್ಲಿ ಇರುವ ವಿಭಿನ್ನ ದೃಷ್ಟಿಕೋನಗಳ ಬಗ್ಗೆ ಅವರು ವಿಶೇಷವಾಗಿ ಆಕರ್ಷಿತರಾಗಿದ್ದರು. ಅವರು ಎಲ್ಲರೊಂದಿಗೆ ಸುಲಭವಾಗಿ ಬೆರೆಯಬಲ್ಲವರಾಗಿದ್ದರು ಹಾಗೂ ಅತ್ಯಂತ ಕ್ಲಿಷ್ಟಕರವಾದ ವಿಷಯಗಳ ಸಾರವನ್ನು ಸರಳವಾದ ಪದಗಳಲ್ಲಿ ಹೇಳಿಕೊಡಬಲ್ಲ ವಿಶಿಷ್ಟ ಸಾಮರ್ಥ್ಯ ಉಳ್ಳವರಾಗಿದ್ದರು. ಅದರಿಂದ, ಅವರೊಂದಿಗೆ ಮಾಡಿದ ಸಹಜ ಮಾತುಕತೆಗಳೂ ಸಹ ವಿಶಿಷ್ಟ ಒಳನೋಟಗಳನ್ನು ಒದಗಿಸುತ್ತಿದ್ದವು. ಕೆಲವೇ ತಿಂಗಳುಗಳ ಹಿಂದೆ ರಸ್ತೆ ಬದಿಯಲ್ಲಿ ನಿಂತು ಮಾಡಿದ ಮಾತುಕತೆಯಲ್ಲಿ ತಿಳಿದಿದ್ದೇನೆಂದರೆ, ಭಾರತದಲ್ಲಿ ಶಿಕ್ಷೆಯ ರೂಪದಲ್ಲಿ ವ್ಯಕ್ತಿಗಳ ಮೂಗನ್ನು ಕತ್ತರಿಸಲಾಗುತ್ತಿತ್ತಂತೆ ಮತ್ತು ಮೂಗು ಕತ್ತರಿಸುವ ಪಾರಂಪರಿಕ ಭಾರತೀಯ ವಿಧಾನವು ಪ್ಲಾಸ್ಟಿಕ್ ಸರ್ಜರಿಯ ಪಾರಂಪರಿಕ ವಿಧಾನದ ಬೆಳವಣಿಗೆಗೆ ಕೊಡುಗೆ ನೀಡಿದ್ದನ್ನು ಹೇಳಿದ್ದರು. ಮೂಗು ಕತ್ತರಿಸಿಕೊಂಡ ವ್ಯಕ್ತಿಗಳನ್ನು ಒಂದು ವರ್ಷದ ಬಳಿಕ ನೋಡಿದಾಗ ಮೂಗು ಅದೇ ಸ್ಥಾನಕ್ಕೆ ಮರಳಿ ಬಂದಿದ್ದನ್ನು ನೋಡಿ ಬ್ರಿಟಿಷರು ಆಶ್ಚರ್ಯಚಕಿತರಾಗಿದ್ದರು ಎಂಬುದರ ಬಗ್ಗೆಯೂ ಹೇಳಿದ್ದರು.

ಪ್ರೊ ನರಸಿಂಹ ಅವರು ತಮ್ಮ ವ್ಯಕ್ತಿತ್ವವನ್ನು ನೆಲದ ಬೇರುಗಳ ಜೊತೆಗೆ ಉಳಸಿಕೊಂಡಿದ್ದರಿಂದ, ಪ್ರಾಚೀನ ಭಾರತೀಯ ವಿಜ್ಞಾನದ ಸಾಧನೆಗಳ ನೈಜವಾದ ಪ್ರತಿಪಾದನೆಗಳು ಮತ್ತು ಅತಿರಂಜಿತ ಪ್ರತಿಪಾದನೆಗಳ ನಡುವಿನ ವ್ಯತ್ಯಾಸವನ್ನು ಸುಲಭವಾಗಿ ಕಂಡುಹಿಡಿಯಬಲ್ಲವರಾಗಿದ್ದರು. ಅವರು ಪ್ರಾಚೀನ ಭಾರತದ ನಿರ್ದಿಷ್ಟ ಪಠ್ಯಗಳನ್ನು ಉಲ್ಲೇಖಿಸಬಲ್ಲವರಾಗಿದ್ದರು; ಉದಾಹರಣೆಗೆ ಕ್ರಿ,ಪೂ ಆರನೇ ಶತಮಾನದ ಸುಲ್ವ ಸೂತ್ರ: ಅದು ಉದ್ದದ ವರ್ಗ (ಸ್ಕ್ವೇರ್ ಆಫ್ ಲೆಂತ್) ಹಾಗೂ ಅಗಲದ ವರ್ಗದ (ಸ್ಕ್ವೇರ್ ಆಫ್ ಬ್ರೆಡ್ತ್) ಮೊತ್ತವು ಕರ್ಣರೇಖೆಯ ವರ್ಗಕ್ಕೆ (ಸ್ಕ್ವೇರ್ ಆಫ್ ಡಯಾಗನಲ್) ಸಮನಾಗಿರುತ್ತೆ ಎಂಬುದರ ಸಾರ, ಮುಂದೆ ಪೈಥಾಗರಸ್ ಥಿಯೋರಮ್ ಆಗಿ ವರ್ಣಿಸಲಾಯಿತು ಎಂದು ವಿವರಿಸಿದ್ದರು. ಅದೇ ಸಮಯದಲ್ಲಿ, ಪ್ರಾಚೀನ ಭಾರತೀಯ ವಿಜ್ಞಾನದ ವೈಭವ-ಆಡಂಬರದ ಕಲ್ಪನೆಗಳು ಒಬ್ಬ ವಿಜ್ಞಾನಿಯಾಗಿ ಅವರ ಕೆಲಸದ ಮೇಲೆ ಪ್ರಭಾವ ಬೀರುವ ಪ್ರಶ್ನೆ ಎಂದೂ ಬರಲಿಲ್ಲ, ಅದರಲ್ಲೂ ವಿಶೇಷವಾಗಿ, ಎನ್‌ಎಎಲ್‌ನಲ್ಲಿ ಲೈಟ್ ಕೊಂಬ್ಯಾಟ್ ಏರ್‌ಕ್ರಾಫ್ಟ್‌ನ ರಚನೆಯಲ್ಲಿ ಅವರ ಒಂದು ಪಾತ್ರವಿತ್ತು, ಅಲ್ಲಿಯೂ ಪ್ರಾಚೀನ ಕಲ್ಪನೆಗಳು ಪ್ರಭಾವ ಬೀರಲಿಲ್ಲ.

ವಿಜ್ಞಾನ ಮತ್ತು ವಿಜ್ಞಾನದ ಆಡಳಿತದಲ್ಲಿ ಅವರ ಸಾಧನೆಗಳಿಗಿಂತ, ಸಮಾಜದ ಎಲ್ಲಾ ಸ್ತರದ ಜನರೊಂದಿಗೆ ಬೆರೆದು, ಅವರು ವಿದ್ಯಾರ್ಥಿಗಳಾಗಿರಲಿ, ಜೊತೆಗೆ ಕೆಲಸ ಮಾಡುವವರಾಗಿರಲಿ, ದೊಡ್ಡ ಸಾಧನೆ ಮಾಡಿದ ವಿಜ್ಞಾನಿಗಳಾಗಿರಲಿ ಅಥವಾ ಯಾವುದೇ ಪರಿಚಯಸ್ಥರಾಗಿರಲಿ, ಅವರೆಲ್ಲರ ಜೊತೆಗೆ ವಿಜ್ಞಾನದ ಬಗ್ಗೆ ಮಾತನಾಡುವ ಅವರ ಸಾಮರ್ಥ್ಯದಿಂದಲೇ ಅವರನ್ನು ನೆನಪಿಸಿಕೊಳ್ಳಲಾಗುವುದು. ಇದನ್ನು ಮಾಡಲು ಸಾಧ್ಯವಾಗಿದ್ದು ಕೇವಲ ವಿಜ್ಞಾನದ ಮೇಲಿದ್ದ ಪಾಂಡಿತ್ಯದಿಂದ ಅಲ್ಲ, ಅದಕ್ಕಿಂತ ಮುಖ್ಯವಾಗಿ, ಕಲಿಯಲು ಮತ್ತು ಕಲಿಸಲು ಅವರಿಗೆ ಜೀವನದುದ್ದಕ್ಕೂ ಇದ್ದ ಬದ್ಧತೆಯ ಕಾರಣದಿಂದ.

ಪ್ರೊ. ನರೇಂದ್ರ ಪಾಣಿ
ಬೆಂಗಳೂರಿನ ಎನ್‌ಐಎಎಸ್ ಸಂಸ್ಥೆಯ ಸಮಾಜ ಶಾಸ್ತ್ರ ವಿಭಾಗದ ಡೀನ್


ಇದನ್ನೂ ಓದಿ: ಹೆಸರಾಂತ ಹಿರಿಯ ವಿಜ್ಞಾನಿ ಪ್ರೊ.ರೊದ್ದಾಂ ನರಸಿಂಹ ನಿಧನ: ಗಣ್ಯರ ಸಂತಾಪ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...