Homeಮುಖಪುಟವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವಿನ ಕಂದರವನ್ನು ಮೀರಿದ ಪ್ರೊ. ರೊದ್ದಂ ನರಸಿಂಹ

ವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವಿನ ಕಂದರವನ್ನು ಮೀರಿದ ಪ್ರೊ. ರೊದ್ದಂ ನರಸಿಂಹ

ಪ್ರೊ ನರಸಿಂಹ ಅವರು ತಮ್ಮ ವ್ಯಕ್ತಿತ್ವವನ್ನು ನೆಲದ ಬೇರುಗಳ ಜೊತೆಗೆ ಉಳಸಿಕೊಂಡಿದ್ದರಿಂದ, ಪ್ರಾಚೀನ ಭಾರತೀಯ ವಿಜ್ಞಾನದ ಸಾಧನೆಗಳ ನೈಜವಾದ ಪ್ರತಿಪಾದನೆಗಳು ಮತ್ತು ಅತಿರಂಜಿತ ಪ್ರತಿಪಾದನೆಗಳ ನಡುವಿನ ವ್ಯತ್ಯಾಸವನ್ನು ಸುಲಭವಾಗಿ ಕಂಡುಹಿಡಿಯಬಲ್ಲವರಾಗಿದ್ದರು.

- Advertisement -
- Advertisement -
ನುಡಿನಮನ

ರೊದ್ದಂ ನರಸಿಂ

(20 ಜುಲೈ 1933, – 14 ಡಿಸೆಂಬರ್ 2020)

ವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವೆ ಇರುವ ಕಂದರವನ್ನು ಮೀರಲು ಕೆಲವೇ ವಿಜ್ಞಾನಿಗಳಿಗೆ ಸಾಧ್ಯ. ಅಂತಹವರಲ್ಲಿ ಪ್ರೊ ರೊದ್ದಂ ನರಸಿಂಹ ಒಬ್ಬರು. ಫ್ಲುಯಿಡ್ ಡೈನಾಮಿಕ್ಸ್‌ನ ವಿಜ್ಞಾನದಲ್ಲಿ ಮುಂಚೂಣಿಯ ಹೆಸರಾಗಿದ್ದ ನರಸಿಂಹ ಅವರಿಗೆ ಮಾನವಿಕ ಶಾಸ್ತ್ರದಲ್ಲಿ ಆಳವಾದ ಆಸಕ್ತಿ ಇತ್ತು. ಆದೇ ಆಸಕ್ತಿ ಅವರನ್ನು ವಿಜ್ಞಾನದ ತತ್ವಶಾಸ್ತ್ರದ ಕಡೆಗೆ ಕೊಂಡೊಯ್ಯಿತು. ವಿಜ್ಞಾನಕ್ಕೆ ವಿವಿಧ ಪರಂಪರೆಗಳಲ್ಲಿ ಇರುವ ವಿಭಿನ್ನ ದೃಷ್ಟಿಕೋನಗಳ ಬಗ್ಗೆ ಅವರು ವಿಶೇಷವಾಗಿ ಆಕರ್ಷಿತರಾಗಿದ್ದರು. ಅವರು ಎಲ್ಲರೊಂದಿಗೆ ಸುಲಭವಾಗಿ ಬೆರೆಯಬಲ್ಲವರಾಗಿದ್ದರು ಹಾಗೂ ಅತ್ಯಂತ ಕ್ಲಿಷ್ಟಕರವಾದ ವಿಷಯಗಳ ಸಾರವನ್ನು ಸರಳವಾದ ಪದಗಳಲ್ಲಿ ಹೇಳಿಕೊಡಬಲ್ಲ ವಿಶಿಷ್ಟ ಸಾಮರ್ಥ್ಯ ಉಳ್ಳವರಾಗಿದ್ದರು. ಅದರಿಂದ, ಅವರೊಂದಿಗೆ ಮಾಡಿದ ಸಹಜ ಮಾತುಕತೆಗಳೂ ಸಹ ವಿಶಿಷ್ಟ ಒಳನೋಟಗಳನ್ನು ಒದಗಿಸುತ್ತಿದ್ದವು. ಕೆಲವೇ ತಿಂಗಳುಗಳ ಹಿಂದೆ ರಸ್ತೆ ಬದಿಯಲ್ಲಿ ನಿಂತು ಮಾಡಿದ ಮಾತುಕತೆಯಲ್ಲಿ ತಿಳಿದಿದ್ದೇನೆಂದರೆ, ಭಾರತದಲ್ಲಿ ಶಿಕ್ಷೆಯ ರೂಪದಲ್ಲಿ ವ್ಯಕ್ತಿಗಳ ಮೂಗನ್ನು ಕತ್ತರಿಸಲಾಗುತ್ತಿತ್ತಂತೆ ಮತ್ತು ಮೂಗು ಕತ್ತರಿಸುವ ಪಾರಂಪರಿಕ ಭಾರತೀಯ ವಿಧಾನವು ಪ್ಲಾಸ್ಟಿಕ್ ಸರ್ಜರಿಯ ಪಾರಂಪರಿಕ ವಿಧಾನದ ಬೆಳವಣಿಗೆಗೆ ಕೊಡುಗೆ ನೀಡಿದ್ದನ್ನು ಹೇಳಿದ್ದರು. ಮೂಗು ಕತ್ತರಿಸಿಕೊಂಡ ವ್ಯಕ್ತಿಗಳನ್ನು ಒಂದು ವರ್ಷದ ಬಳಿಕ ನೋಡಿದಾಗ ಮೂಗು ಅದೇ ಸ್ಥಾನಕ್ಕೆ ಮರಳಿ ಬಂದಿದ್ದನ್ನು ನೋಡಿ ಬ್ರಿಟಿಷರು ಆಶ್ಚರ್ಯಚಕಿತರಾಗಿದ್ದರು ಎಂಬುದರ ಬಗ್ಗೆಯೂ ಹೇಳಿದ್ದರು.

ಪ್ರೊ ನರಸಿಂಹ ಅವರು ತಮ್ಮ ವ್ಯಕ್ತಿತ್ವವನ್ನು ನೆಲದ ಬೇರುಗಳ ಜೊತೆಗೆ ಉಳಸಿಕೊಂಡಿದ್ದರಿಂದ, ಪ್ರಾಚೀನ ಭಾರತೀಯ ವಿಜ್ಞಾನದ ಸಾಧನೆಗಳ ನೈಜವಾದ ಪ್ರತಿಪಾದನೆಗಳು ಮತ್ತು ಅತಿರಂಜಿತ ಪ್ರತಿಪಾದನೆಗಳ ನಡುವಿನ ವ್ಯತ್ಯಾಸವನ್ನು ಸುಲಭವಾಗಿ ಕಂಡುಹಿಡಿಯಬಲ್ಲವರಾಗಿದ್ದರು. ಅವರು ಪ್ರಾಚೀನ ಭಾರತದ ನಿರ್ದಿಷ್ಟ ಪಠ್ಯಗಳನ್ನು ಉಲ್ಲೇಖಿಸಬಲ್ಲವರಾಗಿದ್ದರು; ಉದಾಹರಣೆಗೆ ಕ್ರಿ,ಪೂ ಆರನೇ ಶತಮಾನದ ಸುಲ್ವ ಸೂತ್ರ: ಅದು ಉದ್ದದ ವರ್ಗ (ಸ್ಕ್ವೇರ್ ಆಫ್ ಲೆಂತ್) ಹಾಗೂ ಅಗಲದ ವರ್ಗದ (ಸ್ಕ್ವೇರ್ ಆಫ್ ಬ್ರೆಡ್ತ್) ಮೊತ್ತವು ಕರ್ಣರೇಖೆಯ ವರ್ಗಕ್ಕೆ (ಸ್ಕ್ವೇರ್ ಆಫ್ ಡಯಾಗನಲ್) ಸಮನಾಗಿರುತ್ತೆ ಎಂಬುದರ ಸಾರ, ಮುಂದೆ ಪೈಥಾಗರಸ್ ಥಿಯೋರಮ್ ಆಗಿ ವರ್ಣಿಸಲಾಯಿತು ಎಂದು ವಿವರಿಸಿದ್ದರು. ಅದೇ ಸಮಯದಲ್ಲಿ, ಪ್ರಾಚೀನ ಭಾರತೀಯ ವಿಜ್ಞಾನದ ವೈಭವ-ಆಡಂಬರದ ಕಲ್ಪನೆಗಳು ಒಬ್ಬ ವಿಜ್ಞಾನಿಯಾಗಿ ಅವರ ಕೆಲಸದ ಮೇಲೆ ಪ್ರಭಾವ ಬೀರುವ ಪ್ರಶ್ನೆ ಎಂದೂ ಬರಲಿಲ್ಲ, ಅದರಲ್ಲೂ ವಿಶೇಷವಾಗಿ, ಎನ್‌ಎಎಲ್‌ನಲ್ಲಿ ಲೈಟ್ ಕೊಂಬ್ಯಾಟ್ ಏರ್‌ಕ್ರಾಫ್ಟ್‌ನ ರಚನೆಯಲ್ಲಿ ಅವರ ಒಂದು ಪಾತ್ರವಿತ್ತು, ಅಲ್ಲಿಯೂ ಪ್ರಾಚೀನ ಕಲ್ಪನೆಗಳು ಪ್ರಭಾವ ಬೀರಲಿಲ್ಲ.

ವಿಜ್ಞಾನ ಮತ್ತು ವಿಜ್ಞಾನದ ಆಡಳಿತದಲ್ಲಿ ಅವರ ಸಾಧನೆಗಳಿಗಿಂತ, ಸಮಾಜದ ಎಲ್ಲಾ ಸ್ತರದ ಜನರೊಂದಿಗೆ ಬೆರೆದು, ಅವರು ವಿದ್ಯಾರ್ಥಿಗಳಾಗಿರಲಿ, ಜೊತೆಗೆ ಕೆಲಸ ಮಾಡುವವರಾಗಿರಲಿ, ದೊಡ್ಡ ಸಾಧನೆ ಮಾಡಿದ ವಿಜ್ಞಾನಿಗಳಾಗಿರಲಿ ಅಥವಾ ಯಾವುದೇ ಪರಿಚಯಸ್ಥರಾಗಿರಲಿ, ಅವರೆಲ್ಲರ ಜೊತೆಗೆ ವಿಜ್ಞಾನದ ಬಗ್ಗೆ ಮಾತನಾಡುವ ಅವರ ಸಾಮರ್ಥ್ಯದಿಂದಲೇ ಅವರನ್ನು ನೆನಪಿಸಿಕೊಳ್ಳಲಾಗುವುದು. ಇದನ್ನು ಮಾಡಲು ಸಾಧ್ಯವಾಗಿದ್ದು ಕೇವಲ ವಿಜ್ಞಾನದ ಮೇಲಿದ್ದ ಪಾಂಡಿತ್ಯದಿಂದ ಅಲ್ಲ, ಅದಕ್ಕಿಂತ ಮುಖ್ಯವಾಗಿ, ಕಲಿಯಲು ಮತ್ತು ಕಲಿಸಲು ಅವರಿಗೆ ಜೀವನದುದ್ದಕ್ಕೂ ಇದ್ದ ಬದ್ಧತೆಯ ಕಾರಣದಿಂದ.

ಪ್ರೊ. ನರೇಂದ್ರ ಪಾಣಿ
ಬೆಂಗಳೂರಿನ ಎನ್‌ಐಎಎಸ್ ಸಂಸ್ಥೆಯ ಸಮಾಜ ಶಾಸ್ತ್ರ ವಿಭಾಗದ ಡೀನ್


ಇದನ್ನೂ ಓದಿ: ಹೆಸರಾಂತ ಹಿರಿಯ ವಿಜ್ಞಾನಿ ಪ್ರೊ.ರೊದ್ದಾಂ ನರಸಿಂಹ ನಿಧನ: ಗಣ್ಯರ ಸಂತಾಪ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...