Homeಮುಖಪುಟವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವಿನ ಕಂದರವನ್ನು ಮೀರಿದ ಪ್ರೊ. ರೊದ್ದಂ ನರಸಿಂಹ

ವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವಿನ ಕಂದರವನ್ನು ಮೀರಿದ ಪ್ರೊ. ರೊದ್ದಂ ನರಸಿಂಹ

ಪ್ರೊ ನರಸಿಂಹ ಅವರು ತಮ್ಮ ವ್ಯಕ್ತಿತ್ವವನ್ನು ನೆಲದ ಬೇರುಗಳ ಜೊತೆಗೆ ಉಳಸಿಕೊಂಡಿದ್ದರಿಂದ, ಪ್ರಾಚೀನ ಭಾರತೀಯ ವಿಜ್ಞಾನದ ಸಾಧನೆಗಳ ನೈಜವಾದ ಪ್ರತಿಪಾದನೆಗಳು ಮತ್ತು ಅತಿರಂಜಿತ ಪ್ರತಿಪಾದನೆಗಳ ನಡುವಿನ ವ್ಯತ್ಯಾಸವನ್ನು ಸುಲಭವಾಗಿ ಕಂಡುಹಿಡಿಯಬಲ್ಲವರಾಗಿದ್ದರು.

- Advertisement -
- Advertisement -
ನುಡಿನಮನ

ರೊದ್ದಂ ನರಸಿಂ

(20 ಜುಲೈ 1933, – 14 ಡಿಸೆಂಬರ್ 2020)

ವಿಜ್ಞಾನ ಮತ್ತು ಮಾನವಿಕ ಶಾಸ್ತ್ರಗಳ ನಡುವೆ ಇರುವ ಕಂದರವನ್ನು ಮೀರಲು ಕೆಲವೇ ವಿಜ್ಞಾನಿಗಳಿಗೆ ಸಾಧ್ಯ. ಅಂತಹವರಲ್ಲಿ ಪ್ರೊ ರೊದ್ದಂ ನರಸಿಂಹ ಒಬ್ಬರು. ಫ್ಲುಯಿಡ್ ಡೈನಾಮಿಕ್ಸ್‌ನ ವಿಜ್ಞಾನದಲ್ಲಿ ಮುಂಚೂಣಿಯ ಹೆಸರಾಗಿದ್ದ ನರಸಿಂಹ ಅವರಿಗೆ ಮಾನವಿಕ ಶಾಸ್ತ್ರದಲ್ಲಿ ಆಳವಾದ ಆಸಕ್ತಿ ಇತ್ತು. ಆದೇ ಆಸಕ್ತಿ ಅವರನ್ನು ವಿಜ್ಞಾನದ ತತ್ವಶಾಸ್ತ್ರದ ಕಡೆಗೆ ಕೊಂಡೊಯ್ಯಿತು. ವಿಜ್ಞಾನಕ್ಕೆ ವಿವಿಧ ಪರಂಪರೆಗಳಲ್ಲಿ ಇರುವ ವಿಭಿನ್ನ ದೃಷ್ಟಿಕೋನಗಳ ಬಗ್ಗೆ ಅವರು ವಿಶೇಷವಾಗಿ ಆಕರ್ಷಿತರಾಗಿದ್ದರು. ಅವರು ಎಲ್ಲರೊಂದಿಗೆ ಸುಲಭವಾಗಿ ಬೆರೆಯಬಲ್ಲವರಾಗಿದ್ದರು ಹಾಗೂ ಅತ್ಯಂತ ಕ್ಲಿಷ್ಟಕರವಾದ ವಿಷಯಗಳ ಸಾರವನ್ನು ಸರಳವಾದ ಪದಗಳಲ್ಲಿ ಹೇಳಿಕೊಡಬಲ್ಲ ವಿಶಿಷ್ಟ ಸಾಮರ್ಥ್ಯ ಉಳ್ಳವರಾಗಿದ್ದರು. ಅದರಿಂದ, ಅವರೊಂದಿಗೆ ಮಾಡಿದ ಸಹಜ ಮಾತುಕತೆಗಳೂ ಸಹ ವಿಶಿಷ್ಟ ಒಳನೋಟಗಳನ್ನು ಒದಗಿಸುತ್ತಿದ್ದವು. ಕೆಲವೇ ತಿಂಗಳುಗಳ ಹಿಂದೆ ರಸ್ತೆ ಬದಿಯಲ್ಲಿ ನಿಂತು ಮಾಡಿದ ಮಾತುಕತೆಯಲ್ಲಿ ತಿಳಿದಿದ್ದೇನೆಂದರೆ, ಭಾರತದಲ್ಲಿ ಶಿಕ್ಷೆಯ ರೂಪದಲ್ಲಿ ವ್ಯಕ್ತಿಗಳ ಮೂಗನ್ನು ಕತ್ತರಿಸಲಾಗುತ್ತಿತ್ತಂತೆ ಮತ್ತು ಮೂಗು ಕತ್ತರಿಸುವ ಪಾರಂಪರಿಕ ಭಾರತೀಯ ವಿಧಾನವು ಪ್ಲಾಸ್ಟಿಕ್ ಸರ್ಜರಿಯ ಪಾರಂಪರಿಕ ವಿಧಾನದ ಬೆಳವಣಿಗೆಗೆ ಕೊಡುಗೆ ನೀಡಿದ್ದನ್ನು ಹೇಳಿದ್ದರು. ಮೂಗು ಕತ್ತರಿಸಿಕೊಂಡ ವ್ಯಕ್ತಿಗಳನ್ನು ಒಂದು ವರ್ಷದ ಬಳಿಕ ನೋಡಿದಾಗ ಮೂಗು ಅದೇ ಸ್ಥಾನಕ್ಕೆ ಮರಳಿ ಬಂದಿದ್ದನ್ನು ನೋಡಿ ಬ್ರಿಟಿಷರು ಆಶ್ಚರ್ಯಚಕಿತರಾಗಿದ್ದರು ಎಂಬುದರ ಬಗ್ಗೆಯೂ ಹೇಳಿದ್ದರು.

ಪ್ರೊ ನರಸಿಂಹ ಅವರು ತಮ್ಮ ವ್ಯಕ್ತಿತ್ವವನ್ನು ನೆಲದ ಬೇರುಗಳ ಜೊತೆಗೆ ಉಳಸಿಕೊಂಡಿದ್ದರಿಂದ, ಪ್ರಾಚೀನ ಭಾರತೀಯ ವಿಜ್ಞಾನದ ಸಾಧನೆಗಳ ನೈಜವಾದ ಪ್ರತಿಪಾದನೆಗಳು ಮತ್ತು ಅತಿರಂಜಿತ ಪ್ರತಿಪಾದನೆಗಳ ನಡುವಿನ ವ್ಯತ್ಯಾಸವನ್ನು ಸುಲಭವಾಗಿ ಕಂಡುಹಿಡಿಯಬಲ್ಲವರಾಗಿದ್ದರು. ಅವರು ಪ್ರಾಚೀನ ಭಾರತದ ನಿರ್ದಿಷ್ಟ ಪಠ್ಯಗಳನ್ನು ಉಲ್ಲೇಖಿಸಬಲ್ಲವರಾಗಿದ್ದರು; ಉದಾಹರಣೆಗೆ ಕ್ರಿ,ಪೂ ಆರನೇ ಶತಮಾನದ ಸುಲ್ವ ಸೂತ್ರ: ಅದು ಉದ್ದದ ವರ್ಗ (ಸ್ಕ್ವೇರ್ ಆಫ್ ಲೆಂತ್) ಹಾಗೂ ಅಗಲದ ವರ್ಗದ (ಸ್ಕ್ವೇರ್ ಆಫ್ ಬ್ರೆಡ್ತ್) ಮೊತ್ತವು ಕರ್ಣರೇಖೆಯ ವರ್ಗಕ್ಕೆ (ಸ್ಕ್ವೇರ್ ಆಫ್ ಡಯಾಗನಲ್) ಸಮನಾಗಿರುತ್ತೆ ಎಂಬುದರ ಸಾರ, ಮುಂದೆ ಪೈಥಾಗರಸ್ ಥಿಯೋರಮ್ ಆಗಿ ವರ್ಣಿಸಲಾಯಿತು ಎಂದು ವಿವರಿಸಿದ್ದರು. ಅದೇ ಸಮಯದಲ್ಲಿ, ಪ್ರಾಚೀನ ಭಾರತೀಯ ವಿಜ್ಞಾನದ ವೈಭವ-ಆಡಂಬರದ ಕಲ್ಪನೆಗಳು ಒಬ್ಬ ವಿಜ್ಞಾನಿಯಾಗಿ ಅವರ ಕೆಲಸದ ಮೇಲೆ ಪ್ರಭಾವ ಬೀರುವ ಪ್ರಶ್ನೆ ಎಂದೂ ಬರಲಿಲ್ಲ, ಅದರಲ್ಲೂ ವಿಶೇಷವಾಗಿ, ಎನ್‌ಎಎಲ್‌ನಲ್ಲಿ ಲೈಟ್ ಕೊಂಬ್ಯಾಟ್ ಏರ್‌ಕ್ರಾಫ್ಟ್‌ನ ರಚನೆಯಲ್ಲಿ ಅವರ ಒಂದು ಪಾತ್ರವಿತ್ತು, ಅಲ್ಲಿಯೂ ಪ್ರಾಚೀನ ಕಲ್ಪನೆಗಳು ಪ್ರಭಾವ ಬೀರಲಿಲ್ಲ.

ವಿಜ್ಞಾನ ಮತ್ತು ವಿಜ್ಞಾನದ ಆಡಳಿತದಲ್ಲಿ ಅವರ ಸಾಧನೆಗಳಿಗಿಂತ, ಸಮಾಜದ ಎಲ್ಲಾ ಸ್ತರದ ಜನರೊಂದಿಗೆ ಬೆರೆದು, ಅವರು ವಿದ್ಯಾರ್ಥಿಗಳಾಗಿರಲಿ, ಜೊತೆಗೆ ಕೆಲಸ ಮಾಡುವವರಾಗಿರಲಿ, ದೊಡ್ಡ ಸಾಧನೆ ಮಾಡಿದ ವಿಜ್ಞಾನಿಗಳಾಗಿರಲಿ ಅಥವಾ ಯಾವುದೇ ಪರಿಚಯಸ್ಥರಾಗಿರಲಿ, ಅವರೆಲ್ಲರ ಜೊತೆಗೆ ವಿಜ್ಞಾನದ ಬಗ್ಗೆ ಮಾತನಾಡುವ ಅವರ ಸಾಮರ್ಥ್ಯದಿಂದಲೇ ಅವರನ್ನು ನೆನಪಿಸಿಕೊಳ್ಳಲಾಗುವುದು. ಇದನ್ನು ಮಾಡಲು ಸಾಧ್ಯವಾಗಿದ್ದು ಕೇವಲ ವಿಜ್ಞಾನದ ಮೇಲಿದ್ದ ಪಾಂಡಿತ್ಯದಿಂದ ಅಲ್ಲ, ಅದಕ್ಕಿಂತ ಮುಖ್ಯವಾಗಿ, ಕಲಿಯಲು ಮತ್ತು ಕಲಿಸಲು ಅವರಿಗೆ ಜೀವನದುದ್ದಕ್ಕೂ ಇದ್ದ ಬದ್ಧತೆಯ ಕಾರಣದಿಂದ.

ಪ್ರೊ. ನರೇಂದ್ರ ಪಾಣಿ
ಬೆಂಗಳೂರಿನ ಎನ್‌ಐಎಎಸ್ ಸಂಸ್ಥೆಯ ಸಮಾಜ ಶಾಸ್ತ್ರ ವಿಭಾಗದ ಡೀನ್


ಇದನ್ನೂ ಓದಿ: ಹೆಸರಾಂತ ಹಿರಿಯ ವಿಜ್ಞಾನಿ ಪ್ರೊ.ರೊದ್ದಾಂ ನರಸಿಂಹ ನಿಧನ: ಗಣ್ಯರ ಸಂತಾಪ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...