Homeಕರ್ನಾಟಕಪ್ರೊ.ಗಣೇಶ ದೇವಿಯವರ 'ಮಹಾಭಾರತ: ಭೂಮಕಾವ್ಯ ಮತ್ತು ಭಾರತರಾಷ್ಟ್ರ' ಪುಸ್ತಕ ಬಿಡುಗಡೆ

ಪ್ರೊ.ಗಣೇಶ ದೇವಿಯವರ ‘ಮಹಾಭಾರತ: ಭೂಮಕಾವ್ಯ ಮತ್ತು ಭಾರತರಾಷ್ಟ್ರ’ ಪುಸ್ತಕ ಬಿಡುಗಡೆ

ಮಾರ್ಚ್ 20ರ ಭಾನುವಾರ ಬೆಳಿಗ್ಗೆ 11.30ಕ್ಕೆ ರಂಗಶಂಕರದಲ್ಲಿ Celebrating Books ಕಾರ್ಯಕ್ರಮದ ಭಾಗವಾಗಿ ಈ ಪುಸ್ತಕದ ಕುರಿತು ಸಂವಾದವಿರುತ್ತದೆ.

- Advertisement -
- Advertisement -

ಖ್ಯಾತ ಚಿಂತಕ ಮತ್ತು ಭಾಷಾ ಶಾಸ್ತ್ರಜ್ಞ ಪ್ರೊ.ಗಣೇಶ ದೇವಿಯವರು ಬರೆದ ಮಹಾಭಾರತ – ದಿ ಎಪಿಕ್ ಎಂಡ್ ನೇಶನ್’ ಪುಸ್ತಕದ ಕನ್ನಡ ಅನುವಾದವಾದ ‘ಮಹಾಭಾರತ: ಭೂಮಕಾವ್ಯ ಮತ್ತು ಭಾರತರಾಷ್ಟ್ರ’ ಪುಸ್ತಕವು ಮಾರ್ಚ್ 19ರ ಇದೇ ಶನಿವಾರ ಬೆಂಗಳೂರಿನಲ್ಲಿ ಬಿಡುಗಡೆಯಾಗಲಿದೆ.

ಸಮಗ್ರ ಮಹಾಭಾರತವನ್ನು ಅಖಂಡವಾಗಿ ಗ್ರಹಿಸಿದ ರಾಜಶೇಖರ, ಅಭಿನವಗುಪ್ತ, ಅರವಿಂದರು ಮೊದಲಾದವರಿರುವ ಪೌರ್ವಾತ್ಯ ಮಹಾಭಾರತ ವ್ಯಾಖ್ಯಾನ ಪರಂಪರೆಯನ್ನು ಗಣೇಶ ದೇವಿಯವರು ಮುಂದುವರೆಸಿದ್ದಾರೆ. ಆ ಮೂಲಕ ಸಮಕಾಲೀನ ಭಾರತಕ್ಕೆ ಪ್ರಸ್ತುತವಾದ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳವ ಪ್ರಯತ್ನ ಪುಸ್ತಕದಲ್ಲಿದೆ. ಸದ್ಯ ಮುನ್ನೆಲೆಗೆ ಬರಲು ಹಪಹಪಿಸುತ್ತಿರುವ ಮತ್ತು ಅಧಿಕೃತಗೊಳ್ಳಲು ಎಲ್ಲಾ ಉಪಕರಣಗಳನ್ನೂ ಬಳಸುತ್ತಿರುವ ರಾಷ್ಟ್ರ, ಚರಿತ್ರೆ ಮತ್ತು ಸಮಾಜದ ಕಲ್ಪನೆಗಳನ್ನು ರಾಷ್ಟ್ರೀಯ ಕಾವ್ಯವೆಂದು ಮನ್ನಣೆ ಪಡೆದಿರುವ ಮಹಾಭಾರತಕ್ಕೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎನ್ನುವುದು ದೇವಿಯವರ ಮಹಾಭಾರತ ವ್ಯಾಖಾನದ ಕೇಂದ್ರ ಗ್ರಹೀತಗಳಲ್ಲೊಂದು. ಅಂದರೆ ವಸಾಹತುಶಾಹಿ ವಿಕಲ್ಪಗಳಿಗೆ ನೇತುಬಿದ್ದಿರುವ ವರ್ತಮಾನದ ರಾಜಕೀಯಕ್ಕೆ ಪರಂಪರೆಯ ವಿವೇಕವನ್ನು ನೆನಪಿಸುವ ಉದ್ದೇಶದ ಕೃತಿಯಿದು. ಈ ಮಹತ್ವದ ಕೃತಿಯನ್ನು ಡಾ.ಎಂ.ಜಿ ಹೆಗಡೆ ಕನ್ನಡಕ್ಕೆ ಅನುವಾದಿಸಿದ್ದು, ಕ್ರಿಯಾ ಮಾಧ್ಯಮ ಪ್ರಕಟಿಸಿದೆ.

ಮಾರ್ಚ್ 19ರ ಶನಿವಾರ ಸಂಜೆ 4.30ಕ್ಕೆ ಬೆಂಗಳೂರಿನ ಎನ್.ಆರ್.ಕಾಲೊನಿಯ 3ನೆಯ ಮುಖ್ಯ ರಸ್ತೆಯಲ್ಲಿರುವ ಬಿ.ಎಂ.ಶ್ರೀ ಪ್ರತಿಷ್ಠಾನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಖ್ಯಾತ ವಿಮರ್ಶಕ. ಚಿಂತಕ ಪ್ರೊ.ಸಿ.ಎನ್.ರಾಮಚಂದ್ರನ್ ಪುಸ್ತಕ ಬಿಡುಗಡೆಗೊಳಿಸಿ ವಿಮರ್ಶಾತ್ಮಕ ಪರಿಚಯ ಮಾಡಿಕೊಡಲಿದ್ದಾರೆ. ಕರ್ತೃ ಪ್ರೊ. ಗಣೇಶ ದೇವಿ ಮತ್ತು ಕನ್ನಡಕ್ಕೆ ಅನುವಾದಿಸಿರುವ ಡಾ.ಎಂ.ಜಿ ಹೆಗಡೆ ಯವರ ಉಪಸ್ಥಿತರಿದ್ದು ಸಂವಾದದಲ್ಲಿ ಭಾಗವಹಿಸುತ್ತಾರೆ.

ಮಾರ್ಚ್ 20ರ ಭಾನುವಾರ ಬೆಳಿಗ್ಗೆ 11.30ಕ್ಕೆ ರಂಗಶಂಕರದಲ್ಲಿ Celebrating Books ಕಾರ್ಯಕ್ರಮದ ಭಾಗವಾಗಿ ಈ ಪುಸ್ತಕದ ಕುರಿತು ಸಂವಾದವಿರುತ್ತದೆ. ಎರಡು ಕಡೆ ಈ ಪುಸ್ತಕ ವಿಶೇಷ ರಿಯಾಯಿತಿಯಲ್ಲಿ ಲಭ್ಯವಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಅಪ್ಪು ನುಡಿನಮನ; ಮಿಂಚಿ ಮರೆಯಾದ ಜನಮನದ ಹುಡುಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...