Homeಕರ್ನಾಟಕಪ್ರೊ.ಗಣೇಶ ದೇವಿಯವರ 'ಮಹಾಭಾರತ: ಭೂಮಕಾವ್ಯ ಮತ್ತು ಭಾರತರಾಷ್ಟ್ರ' ಪುಸ್ತಕ ಬಿಡುಗಡೆ

ಪ್ರೊ.ಗಣೇಶ ದೇವಿಯವರ ‘ಮಹಾಭಾರತ: ಭೂಮಕಾವ್ಯ ಮತ್ತು ಭಾರತರಾಷ್ಟ್ರ’ ಪುಸ್ತಕ ಬಿಡುಗಡೆ

ಮಾರ್ಚ್ 20ರ ಭಾನುವಾರ ಬೆಳಿಗ್ಗೆ 11.30ಕ್ಕೆ ರಂಗಶಂಕರದಲ್ಲಿ Celebrating Books ಕಾರ್ಯಕ್ರಮದ ಭಾಗವಾಗಿ ಈ ಪುಸ್ತಕದ ಕುರಿತು ಸಂವಾದವಿರುತ್ತದೆ.

- Advertisement -
- Advertisement -

ಖ್ಯಾತ ಚಿಂತಕ ಮತ್ತು ಭಾಷಾ ಶಾಸ್ತ್ರಜ್ಞ ಪ್ರೊ.ಗಣೇಶ ದೇವಿಯವರು ಬರೆದ ಮಹಾಭಾರತ – ದಿ ಎಪಿಕ್ ಎಂಡ್ ನೇಶನ್’ ಪುಸ್ತಕದ ಕನ್ನಡ ಅನುವಾದವಾದ ‘ಮಹಾಭಾರತ: ಭೂಮಕಾವ್ಯ ಮತ್ತು ಭಾರತರಾಷ್ಟ್ರ’ ಪುಸ್ತಕವು ಮಾರ್ಚ್ 19ರ ಇದೇ ಶನಿವಾರ ಬೆಂಗಳೂರಿನಲ್ಲಿ ಬಿಡುಗಡೆಯಾಗಲಿದೆ.

ಸಮಗ್ರ ಮಹಾಭಾರತವನ್ನು ಅಖಂಡವಾಗಿ ಗ್ರಹಿಸಿದ ರಾಜಶೇಖರ, ಅಭಿನವಗುಪ್ತ, ಅರವಿಂದರು ಮೊದಲಾದವರಿರುವ ಪೌರ್ವಾತ್ಯ ಮಹಾಭಾರತ ವ್ಯಾಖ್ಯಾನ ಪರಂಪರೆಯನ್ನು ಗಣೇಶ ದೇವಿಯವರು ಮುಂದುವರೆಸಿದ್ದಾರೆ. ಆ ಮೂಲಕ ಸಮಕಾಲೀನ ಭಾರತಕ್ಕೆ ಪ್ರಸ್ತುತವಾದ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳವ ಪ್ರಯತ್ನ ಪುಸ್ತಕದಲ್ಲಿದೆ. ಸದ್ಯ ಮುನ್ನೆಲೆಗೆ ಬರಲು ಹಪಹಪಿಸುತ್ತಿರುವ ಮತ್ತು ಅಧಿಕೃತಗೊಳ್ಳಲು ಎಲ್ಲಾ ಉಪಕರಣಗಳನ್ನೂ ಬಳಸುತ್ತಿರುವ ರಾಷ್ಟ್ರ, ಚರಿತ್ರೆ ಮತ್ತು ಸಮಾಜದ ಕಲ್ಪನೆಗಳನ್ನು ರಾಷ್ಟ್ರೀಯ ಕಾವ್ಯವೆಂದು ಮನ್ನಣೆ ಪಡೆದಿರುವ ಮಹಾಭಾರತಕ್ಕೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎನ್ನುವುದು ದೇವಿಯವರ ಮಹಾಭಾರತ ವ್ಯಾಖಾನದ ಕೇಂದ್ರ ಗ್ರಹೀತಗಳಲ್ಲೊಂದು. ಅಂದರೆ ವಸಾಹತುಶಾಹಿ ವಿಕಲ್ಪಗಳಿಗೆ ನೇತುಬಿದ್ದಿರುವ ವರ್ತಮಾನದ ರಾಜಕೀಯಕ್ಕೆ ಪರಂಪರೆಯ ವಿವೇಕವನ್ನು ನೆನಪಿಸುವ ಉದ್ದೇಶದ ಕೃತಿಯಿದು. ಈ ಮಹತ್ವದ ಕೃತಿಯನ್ನು ಡಾ.ಎಂ.ಜಿ ಹೆಗಡೆ ಕನ್ನಡಕ್ಕೆ ಅನುವಾದಿಸಿದ್ದು, ಕ್ರಿಯಾ ಮಾಧ್ಯಮ ಪ್ರಕಟಿಸಿದೆ.

ಮಾರ್ಚ್ 19ರ ಶನಿವಾರ ಸಂಜೆ 4.30ಕ್ಕೆ ಬೆಂಗಳೂರಿನ ಎನ್.ಆರ್.ಕಾಲೊನಿಯ 3ನೆಯ ಮುಖ್ಯ ರಸ್ತೆಯಲ್ಲಿರುವ ಬಿ.ಎಂ.ಶ್ರೀ ಪ್ರತಿಷ್ಠಾನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಖ್ಯಾತ ವಿಮರ್ಶಕ. ಚಿಂತಕ ಪ್ರೊ.ಸಿ.ಎನ್.ರಾಮಚಂದ್ರನ್ ಪುಸ್ತಕ ಬಿಡುಗಡೆಗೊಳಿಸಿ ವಿಮರ್ಶಾತ್ಮಕ ಪರಿಚಯ ಮಾಡಿಕೊಡಲಿದ್ದಾರೆ. ಕರ್ತೃ ಪ್ರೊ. ಗಣೇಶ ದೇವಿ ಮತ್ತು ಕನ್ನಡಕ್ಕೆ ಅನುವಾದಿಸಿರುವ ಡಾ.ಎಂ.ಜಿ ಹೆಗಡೆ ಯವರ ಉಪಸ್ಥಿತರಿದ್ದು ಸಂವಾದದಲ್ಲಿ ಭಾಗವಹಿಸುತ್ತಾರೆ.

ಮಾರ್ಚ್ 20ರ ಭಾನುವಾರ ಬೆಳಿಗ್ಗೆ 11.30ಕ್ಕೆ ರಂಗಶಂಕರದಲ್ಲಿ Celebrating Books ಕಾರ್ಯಕ್ರಮದ ಭಾಗವಾಗಿ ಈ ಪುಸ್ತಕದ ಕುರಿತು ಸಂವಾದವಿರುತ್ತದೆ. ಎರಡು ಕಡೆ ಈ ಪುಸ್ತಕ ವಿಶೇಷ ರಿಯಾಯಿತಿಯಲ್ಲಿ ಲಭ್ಯವಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಅಪ್ಪು ನುಡಿನಮನ; ಮಿಂಚಿ ಮರೆಯಾದ ಜನಮನದ ಹುಡುಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...