Homeಕರ್ನಾಟಕಪ್ರೊ.ಗಣೇಶ ದೇವಿಯವರ 'ಮಹಾಭಾರತ: ಭೂಮಕಾವ್ಯ ಮತ್ತು ಭಾರತರಾಷ್ಟ್ರ' ಪುಸ್ತಕ ಬಿಡುಗಡೆ

ಪ್ರೊ.ಗಣೇಶ ದೇವಿಯವರ ‘ಮಹಾಭಾರತ: ಭೂಮಕಾವ್ಯ ಮತ್ತು ಭಾರತರಾಷ್ಟ್ರ’ ಪುಸ್ತಕ ಬಿಡುಗಡೆ

ಮಾರ್ಚ್ 20ರ ಭಾನುವಾರ ಬೆಳಿಗ್ಗೆ 11.30ಕ್ಕೆ ರಂಗಶಂಕರದಲ್ಲಿ Celebrating Books ಕಾರ್ಯಕ್ರಮದ ಭಾಗವಾಗಿ ಈ ಪುಸ್ತಕದ ಕುರಿತು ಸಂವಾದವಿರುತ್ತದೆ.

- Advertisement -
- Advertisement -

ಖ್ಯಾತ ಚಿಂತಕ ಮತ್ತು ಭಾಷಾ ಶಾಸ್ತ್ರಜ್ಞ ಪ್ರೊ.ಗಣೇಶ ದೇವಿಯವರು ಬರೆದ ಮಹಾಭಾರತ – ದಿ ಎಪಿಕ್ ಎಂಡ್ ನೇಶನ್’ ಪುಸ್ತಕದ ಕನ್ನಡ ಅನುವಾದವಾದ ‘ಮಹಾಭಾರತ: ಭೂಮಕಾವ್ಯ ಮತ್ತು ಭಾರತರಾಷ್ಟ್ರ’ ಪುಸ್ತಕವು ಮಾರ್ಚ್ 19ರ ಇದೇ ಶನಿವಾರ ಬೆಂಗಳೂರಿನಲ್ಲಿ ಬಿಡುಗಡೆಯಾಗಲಿದೆ.

ಸಮಗ್ರ ಮಹಾಭಾರತವನ್ನು ಅಖಂಡವಾಗಿ ಗ್ರಹಿಸಿದ ರಾಜಶೇಖರ, ಅಭಿನವಗುಪ್ತ, ಅರವಿಂದರು ಮೊದಲಾದವರಿರುವ ಪೌರ್ವಾತ್ಯ ಮಹಾಭಾರತ ವ್ಯಾಖ್ಯಾನ ಪರಂಪರೆಯನ್ನು ಗಣೇಶ ದೇವಿಯವರು ಮುಂದುವರೆಸಿದ್ದಾರೆ. ಆ ಮೂಲಕ ಸಮಕಾಲೀನ ಭಾರತಕ್ಕೆ ಪ್ರಸ್ತುತವಾದ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳವ ಪ್ರಯತ್ನ ಪುಸ್ತಕದಲ್ಲಿದೆ. ಸದ್ಯ ಮುನ್ನೆಲೆಗೆ ಬರಲು ಹಪಹಪಿಸುತ್ತಿರುವ ಮತ್ತು ಅಧಿಕೃತಗೊಳ್ಳಲು ಎಲ್ಲಾ ಉಪಕರಣಗಳನ್ನೂ ಬಳಸುತ್ತಿರುವ ರಾಷ್ಟ್ರ, ಚರಿತ್ರೆ ಮತ್ತು ಸಮಾಜದ ಕಲ್ಪನೆಗಳನ್ನು ರಾಷ್ಟ್ರೀಯ ಕಾವ್ಯವೆಂದು ಮನ್ನಣೆ ಪಡೆದಿರುವ ಮಹಾಭಾರತಕ್ಕೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎನ್ನುವುದು ದೇವಿಯವರ ಮಹಾಭಾರತ ವ್ಯಾಖಾನದ ಕೇಂದ್ರ ಗ್ರಹೀತಗಳಲ್ಲೊಂದು. ಅಂದರೆ ವಸಾಹತುಶಾಹಿ ವಿಕಲ್ಪಗಳಿಗೆ ನೇತುಬಿದ್ದಿರುವ ವರ್ತಮಾನದ ರಾಜಕೀಯಕ್ಕೆ ಪರಂಪರೆಯ ವಿವೇಕವನ್ನು ನೆನಪಿಸುವ ಉದ್ದೇಶದ ಕೃತಿಯಿದು. ಈ ಮಹತ್ವದ ಕೃತಿಯನ್ನು ಡಾ.ಎಂ.ಜಿ ಹೆಗಡೆ ಕನ್ನಡಕ್ಕೆ ಅನುವಾದಿಸಿದ್ದು, ಕ್ರಿಯಾ ಮಾಧ್ಯಮ ಪ್ರಕಟಿಸಿದೆ.

ಮಾರ್ಚ್ 19ರ ಶನಿವಾರ ಸಂಜೆ 4.30ಕ್ಕೆ ಬೆಂಗಳೂರಿನ ಎನ್.ಆರ್.ಕಾಲೊನಿಯ 3ನೆಯ ಮುಖ್ಯ ರಸ್ತೆಯಲ್ಲಿರುವ ಬಿ.ಎಂ.ಶ್ರೀ ಪ್ರತಿಷ್ಠಾನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಖ್ಯಾತ ವಿಮರ್ಶಕ. ಚಿಂತಕ ಪ್ರೊ.ಸಿ.ಎನ್.ರಾಮಚಂದ್ರನ್ ಪುಸ್ತಕ ಬಿಡುಗಡೆಗೊಳಿಸಿ ವಿಮರ್ಶಾತ್ಮಕ ಪರಿಚಯ ಮಾಡಿಕೊಡಲಿದ್ದಾರೆ. ಕರ್ತೃ ಪ್ರೊ. ಗಣೇಶ ದೇವಿ ಮತ್ತು ಕನ್ನಡಕ್ಕೆ ಅನುವಾದಿಸಿರುವ ಡಾ.ಎಂ.ಜಿ ಹೆಗಡೆ ಯವರ ಉಪಸ್ಥಿತರಿದ್ದು ಸಂವಾದದಲ್ಲಿ ಭಾಗವಹಿಸುತ್ತಾರೆ.

ಮಾರ್ಚ್ 20ರ ಭಾನುವಾರ ಬೆಳಿಗ್ಗೆ 11.30ಕ್ಕೆ ರಂಗಶಂಕರದಲ್ಲಿ Celebrating Books ಕಾರ್ಯಕ್ರಮದ ಭಾಗವಾಗಿ ಈ ಪುಸ್ತಕದ ಕುರಿತು ಸಂವಾದವಿರುತ್ತದೆ. ಎರಡು ಕಡೆ ಈ ಪುಸ್ತಕ ವಿಶೇಷ ರಿಯಾಯಿತಿಯಲ್ಲಿ ಲಭ್ಯವಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಅಪ್ಪು ನುಡಿನಮನ; ಮಿಂಚಿ ಮರೆಯಾದ ಜನಮನದ ಹುಡುಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...