Homeಕರ್ನಾಟಕಪ್ರೊ.ಗಣೇಶ ದೇವಿಯವರ 'ಮಹಾಭಾರತ: ಭೂಮಕಾವ್ಯ ಮತ್ತು ಭಾರತರಾಷ್ಟ್ರ' ಪುಸ್ತಕ ಬಿಡುಗಡೆ

ಪ್ರೊ.ಗಣೇಶ ದೇವಿಯವರ ‘ಮಹಾಭಾರತ: ಭೂಮಕಾವ್ಯ ಮತ್ತು ಭಾರತರಾಷ್ಟ್ರ’ ಪುಸ್ತಕ ಬಿಡುಗಡೆ

ಮಾರ್ಚ್ 20ರ ಭಾನುವಾರ ಬೆಳಿಗ್ಗೆ 11.30ಕ್ಕೆ ರಂಗಶಂಕರದಲ್ಲಿ Celebrating Books ಕಾರ್ಯಕ್ರಮದ ಭಾಗವಾಗಿ ಈ ಪುಸ್ತಕದ ಕುರಿತು ಸಂವಾದವಿರುತ್ತದೆ.

- Advertisement -
- Advertisement -

ಖ್ಯಾತ ಚಿಂತಕ ಮತ್ತು ಭಾಷಾ ಶಾಸ್ತ್ರಜ್ಞ ಪ್ರೊ.ಗಣೇಶ ದೇವಿಯವರು ಬರೆದ ಮಹಾಭಾರತ – ದಿ ಎಪಿಕ್ ಎಂಡ್ ನೇಶನ್’ ಪುಸ್ತಕದ ಕನ್ನಡ ಅನುವಾದವಾದ ‘ಮಹಾಭಾರತ: ಭೂಮಕಾವ್ಯ ಮತ್ತು ಭಾರತರಾಷ್ಟ್ರ’ ಪುಸ್ತಕವು ಮಾರ್ಚ್ 19ರ ಇದೇ ಶನಿವಾರ ಬೆಂಗಳೂರಿನಲ್ಲಿ ಬಿಡುಗಡೆಯಾಗಲಿದೆ.

ಸಮಗ್ರ ಮಹಾಭಾರತವನ್ನು ಅಖಂಡವಾಗಿ ಗ್ರಹಿಸಿದ ರಾಜಶೇಖರ, ಅಭಿನವಗುಪ್ತ, ಅರವಿಂದರು ಮೊದಲಾದವರಿರುವ ಪೌರ್ವಾತ್ಯ ಮಹಾಭಾರತ ವ್ಯಾಖ್ಯಾನ ಪರಂಪರೆಯನ್ನು ಗಣೇಶ ದೇವಿಯವರು ಮುಂದುವರೆಸಿದ್ದಾರೆ. ಆ ಮೂಲಕ ಸಮಕಾಲೀನ ಭಾರತಕ್ಕೆ ಪ್ರಸ್ತುತವಾದ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳವ ಪ್ರಯತ್ನ ಪುಸ್ತಕದಲ್ಲಿದೆ. ಸದ್ಯ ಮುನ್ನೆಲೆಗೆ ಬರಲು ಹಪಹಪಿಸುತ್ತಿರುವ ಮತ್ತು ಅಧಿಕೃತಗೊಳ್ಳಲು ಎಲ್ಲಾ ಉಪಕರಣಗಳನ್ನೂ ಬಳಸುತ್ತಿರುವ ರಾಷ್ಟ್ರ, ಚರಿತ್ರೆ ಮತ್ತು ಸಮಾಜದ ಕಲ್ಪನೆಗಳನ್ನು ರಾಷ್ಟ್ರೀಯ ಕಾವ್ಯವೆಂದು ಮನ್ನಣೆ ಪಡೆದಿರುವ ಮಹಾಭಾರತಕ್ಕೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ ಎನ್ನುವುದು ದೇವಿಯವರ ಮಹಾಭಾರತ ವ್ಯಾಖಾನದ ಕೇಂದ್ರ ಗ್ರಹೀತಗಳಲ್ಲೊಂದು. ಅಂದರೆ ವಸಾಹತುಶಾಹಿ ವಿಕಲ್ಪಗಳಿಗೆ ನೇತುಬಿದ್ದಿರುವ ವರ್ತಮಾನದ ರಾಜಕೀಯಕ್ಕೆ ಪರಂಪರೆಯ ವಿವೇಕವನ್ನು ನೆನಪಿಸುವ ಉದ್ದೇಶದ ಕೃತಿಯಿದು. ಈ ಮಹತ್ವದ ಕೃತಿಯನ್ನು ಡಾ.ಎಂ.ಜಿ ಹೆಗಡೆ ಕನ್ನಡಕ್ಕೆ ಅನುವಾದಿಸಿದ್ದು, ಕ್ರಿಯಾ ಮಾಧ್ಯಮ ಪ್ರಕಟಿಸಿದೆ.

ಮಾರ್ಚ್ 19ರ ಶನಿವಾರ ಸಂಜೆ 4.30ಕ್ಕೆ ಬೆಂಗಳೂರಿನ ಎನ್.ಆರ್.ಕಾಲೊನಿಯ 3ನೆಯ ಮುಖ್ಯ ರಸ್ತೆಯಲ್ಲಿರುವ ಬಿ.ಎಂ.ಶ್ರೀ ಪ್ರತಿಷ್ಠಾನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಖ್ಯಾತ ವಿಮರ್ಶಕ. ಚಿಂತಕ ಪ್ರೊ.ಸಿ.ಎನ್.ರಾಮಚಂದ್ರನ್ ಪುಸ್ತಕ ಬಿಡುಗಡೆಗೊಳಿಸಿ ವಿಮರ್ಶಾತ್ಮಕ ಪರಿಚಯ ಮಾಡಿಕೊಡಲಿದ್ದಾರೆ. ಕರ್ತೃ ಪ್ರೊ. ಗಣೇಶ ದೇವಿ ಮತ್ತು ಕನ್ನಡಕ್ಕೆ ಅನುವಾದಿಸಿರುವ ಡಾ.ಎಂ.ಜಿ ಹೆಗಡೆ ಯವರ ಉಪಸ್ಥಿತರಿದ್ದು ಸಂವಾದದಲ್ಲಿ ಭಾಗವಹಿಸುತ್ತಾರೆ.

ಮಾರ್ಚ್ 20ರ ಭಾನುವಾರ ಬೆಳಿಗ್ಗೆ 11.30ಕ್ಕೆ ರಂಗಶಂಕರದಲ್ಲಿ Celebrating Books ಕಾರ್ಯಕ್ರಮದ ಭಾಗವಾಗಿ ಈ ಪುಸ್ತಕದ ಕುರಿತು ಸಂವಾದವಿರುತ್ತದೆ. ಎರಡು ಕಡೆ ಈ ಪುಸ್ತಕ ವಿಶೇಷ ರಿಯಾಯಿತಿಯಲ್ಲಿ ಲಭ್ಯವಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಅಪ್ಪು ನುಡಿನಮನ; ಮಿಂಚಿ ಮರೆಯಾದ ಜನಮನದ ಹುಡುಗ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬಿಜೆಪಿಗೆ ಮತ ಹಾಕುವಂತೆ...

0
ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಅಧೀರ್ ರಂಜನ್ ಚೌಧರಿ ಅವರಿ ಬಿಜೆಪಿ ಪರ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ. ವಿಡಿಯೋದಲ್ಲಿ " ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷಕ್ಕೆ ಮತ...