Homeಮುಖಪುಟ10 ವರ್ಷಗಳ ಬಳಿಕ ಪ್ರೊ. ಜಿಎನ್ ಸಾಯಿಬಾಬಾ ಜೈಲಿನಿಂದ ಬಿಡುಗಡೆ

10 ವರ್ಷಗಳ ಬಳಿಕ ಪ್ರೊ. ಜಿಎನ್ ಸಾಯಿಬಾಬಾ ಜೈಲಿನಿಂದ ಬಿಡುಗಡೆ

ಪ್ರೊ. ಸಾಯಿಬಾಬಾ, ಇತರ ಐವರನ್ನು ಬಾಂಬೆ ಹೈಕೋರ್ಟ್ ದೋಷಮುಕ್ತಗೊಳಿಸಿತ್ತು

- Advertisement -
- Advertisement -

ಮಾವೋವಾದಿಗಳ ಜೊತೆ ನಂಟು ಆರೋಪದಲ್ಲಿ ಬಂಧಿತರಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಪ್ರೊ. ಜಿಎನ್ ಸಾಯಿಬಾಬಾ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಹತ್ತು ವರ್ಷಗಳ ಕಾಲ ಜೈಲು ವಾಸ ಅನುಭವಿಸಿದ್ದ ಸಾಯಿಬಾಬಾ ಅವರು ದೋಷ ಮುಕ್ತರಾಗಿ ಹೊರ ಬಂದಿದ್ದಾರೆ.

ಮಾರ್ಚ್‌ 5ರಂದು ಪ್ರೊ. ಜಿ.ಎನ್‌ ಸಾಯಿಬಾಬಾ ಮತ್ತು ಇತರ ಐವರನ್ನು ಬಾಂಬೆ ಹೈಕೋರ್ಟ್ ನಿರ್ದೋಷಿಗಳೆಂದು ಘೋಷಿಸಿತ್ತು.

2014ರಲ್ಲಿ ಬಂಧಿತರಾದ ಸಾಯಿಬಾಬಾ ಮತ್ತು ಇತರರನ್ನು 2017ರಲ್ಲಿ ಗಡ್ಚಿರೋಲಿಯ ಸೆಷನ್ಸ್ ನ್ಯಾಯಾಲಯವು ದೋಷಿಗಳೆಂದು ಘೋಷಿಸಿತ್ತು. ಅಕ್ಟೋಬರ್ 14,2022ರಂದು ಅಂಗವೈಕಲ್ಯ ಹೊಂದಿರುವ ಸಾಯಿಬಾಬಾ ಅವರನ್ನು ಬಾಂಬೆ ಹೈಕೋರ್ಟ್‌ ಖುಲಾಸೆಗೊಳಿಸಿತ್ತು. ಆದರೆ, ಸುಪ್ರೀಂ ಕೋರ್ಟ್ ಅದನ್ನು ರದ್ದುಗೊಳಿಸಿ, ಪ್ರಕರಣದ ಹೊಸ ವಿಚಾರಣೆಗಾಗಿ ಹೈಕೋರ್ಟ್‌ಗೆ ಹಿಂತಿರುಗಿಸಿತ್ತು. ಹಾಗಾಗಿ, ಸಾಯಿಬಾಬಾ ಅವರು ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿದ್ದರು.

2017ರಲ್ಲಿ, ಗಡ್ಚಿರೋಲಿಯ ಸೆಷನ್ಸ್ ನ್ಯಾಯಾಲಯವು ಸಾಯಿಬಾಬಾ ಮತ್ತು ಇತರರನ್ನು ಮಾವೋವಾದಿಗಳ ಜೊತೆ ನಂಟು ಮತ್ತು ದೇಶದ ವಿರುದ್ಧ ಯುದ್ಧ ಸಾರುವ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಪ್ರಕರಣದಲ್ಲಿ ದೋಷಿಗಳು ಎಂದು ತೀರ್ಪು ನೀಡಿತ್ತು. ಸಾಯಿಬಾಬಾ ಅವರು ಗಡ್ಚಿರೋಲಿ ಮತ್ತು ಇತರ ಪ್ರದೇಶಗಳಲ್ಲಿ ಮಾವೋವಾದಿಗಳಿಗೆ ಹಿಂಸಾಚಾರವನ್ನು ಪ್ರಚೋದಿಸುವ ಸಾಹಿತ್ಯಗಳನ್ನು ನೀಡಲು ಉದ್ದೇಶಿಸಿದ್ದರು ಎಂದು ನ್ಯಾಯಾಲಯ ಹೇಳಿತ್ತು.

ಸೆಷನ್ಸ್‌ ಕೋರ್ಟ್‌ ತೀರ್ಪನ್ನು ಸಾಯಿಬಾಬಾ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಹೈಕೋರ್ಟ್‌ ನ್ಯಾಯಮೂರ್ತಿಗಳಾದ ವಿನಯ್ ಜೋಶಿ ಮತ್ತು ವಾಲ್ಮೀಕಿ ಎಸ್‌ಎ ಮೆನೇಜಸ್ ಅವರ ವಿಭಾಗೀಯ ಪೀಠವು, ಪ್ರಾಸಿಕ್ಯೂಷನ್ ಸಾಯಿಬಾಬಾ ಅವರ ವಿರುದ್ಧದ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿದೆ ಎಂದು ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ನಿಬಂಧನೆಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಆರೋಪ ಹೊರಿಸಲು ಪ್ರಾಸಿಕ್ಯೂಷನ್ ನೀಡಿದ ಅನುಮತಿಯನ್ನೂ ಹೈಕೋರ್ಟ್‌ ರದ್ದುಗೊಳಿಸಿದೆ.

ಇದನ್ನೂ ಓದಿ : ಗೋಧ್ರಾ ಗಲಭೆಯ 22 ವರ್ಷಗಳ ನಂತರ ಸಾಮರಸ್ಯಕ್ಕೆ ಸಾಕ್ಷಿಯಾದ ಗುಲ್ಬರ್ಗ್ ಸೊಸೈಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...