Homeನ್ಯಾಯ ಪಥಎಚ್ ಎಸ್ ದೊರೆಸ್ವಾಮಿ ಶ್ರದ್ಧಾಂಜಲಿ; ನಮ್ಮ ಕಾಲದ ಪ್ರಾಣವಾಯು: ಪ್ರೊ. ಎಂ ಎಸ್ ಆಶಾದೇವಿ

ಎಚ್ ಎಸ್ ದೊರೆಸ್ವಾಮಿ ಶ್ರದ್ಧಾಂಜಲಿ; ನಮ್ಮ ಕಾಲದ ಪ್ರಾಣವಾಯು: ಪ್ರೊ. ಎಂ ಎಸ್ ಆಶಾದೇವಿ

- Advertisement -
- Advertisement -

ದುರಿತ ಕಾಲವೆಂದರೇನೆನ್ನುವುದನ್ನು ಅದರೆಲ್ಲ ಅರ್ಥಬಾಹುಳ್ಯದಲ್ಲಿ, ಕಾರ್ಯಮಾದರಿಗಳಲ್ಲಿ ಕಂಡುಣ್ಣುತ್ತಿರುವ ದಾರುಣ ಸನ್ನಿವೇಶದಲ್ಲಿ ನಾವಿದ್ದೇವೆ. ಸಾವಿರ ಬಾರಿ ಯೇಟ್ಸ್‌ನ ಈ ಮಾತು ಬುದ್ಧು ಭಾವಗಳಲ್ಲಿ ಅನುರಣಿಸುತ್ತದೆ.

“ಸಜ್ಜನರು ದುರ್ಬಲರಾಗಿಬಿಟ್ಟಿದ್ದಾರೆ
ದುಷ್ಟರೋ ಅವರೆಲ್ಲ ಶಕ್ತಿಯಲ್ಲಿ ಅಟ್ಟಹಾಸ ಮಾಡುತ್ತಿದ್ದಾರೆ”

ಈ ಮಾತು ಸುಳ್ಳು ಎನಿಸುವ ಭರವಸೆ ಮೂಡಿಸುತ್ತಿದ್ದ ಬೆರಳೆಣಿಕೆಯ ವ್ಯಕ್ತಿತ್ವಗಳಲ್ಲಿ ದೊರೆಸ್ವಾಮಿಯವರು ಮೊದಲನೆಯವರು. ಮನುಷ್ಯ ಚೈತನ್ಯದಲ್ಲಿ ಅವರಿಗಿದ್ದ ನಂಬಿಕೆಯ ಮೂಲ ಯಾವುದು ಎನ್ನುವ ಪ್ರಶ್ನೆ ಅವರನ್ನು ನೋಡಿದಾಗಲೆಲ್ಲ ಕಾಡುತ್ತಿತ್ತು. ಲಂಕೇಶರ ದಾರ್ಶನಿಕ ಎನ್ನಬಹುದಾದ ಹೇಳಿಕೆಗಳಲ್ಲಿ ಒಂದೆಂದರೆ, ’ಮನುಷ್ಯ ಮೂಲತಃ ನೀಚ’ ಎನ್ನುವುದು. ಆದರೆ ತನ್ನ, ತನ್ನ ಪರಿಸರದಲ್ಲಿರುವ ಮನುಷ್ಯರ ನೀಚತನವನ್ನು ಮೀರಿಕೊಳ್ಳಲು ಯತ್ನಿಸಬೇಕಾಗಿರುವುದೇ ನಾಗರಿಕತೆಯ ಆದ್ಯ ಕೆಲಸಗಳಲ್ಲೊಂದು ಎನ್ನುವುದನ್ನೂ ಲಂಕೇಶರು ಅಷ್ಟೇ ಗಾಢವಾಗಿ ನಂಬಿದವರಾಗಿದ್ದರು. ದೊರೆಸ್ವಾಮಿಯವರು ಈ ಮಾದರಿಯವರು. ಗಾಂಧಿವಾದ ಎನ್ನುವ ಮಾತನ್ನು ಬಳಸುವುದೇ ಅಪಾರ ಹಿಂಜರಿಕೆಯ ಸಂಗತಿಯಾಗಿರುವ ಈ ಕಾಲದಲ್ಲಿ ದೊರೆಸ್ವಾಮಿಯವರು ನಮ್ಮಲ್ಲಿ ನಮಗೇ ಕಳೆದುಹೋಗುತ್ತಿರುವ ನಂಬಿಕೆಯನ್ನು ಹುಟ್ಟಿಸಬಲ್ಲಷ್ಟು ಅದಮ್ಯ ಆಶಾವಾದಿಯಾಗಿದ್ದರು ಎನ್ನುವುದೊಂದು ಸೋಜಿಗ.

ಅವರ ಹಸನ್ಮುಖವನ್ನು ನೋಡಿದಾಗಲೆಲ್ಲ ’ಅಳು ನುಂಗಿ ನಗು ಒಮ್ಮೆ ಎನ್ನುವ ಬೇಂದ್ರೆಯವರ ಮಾತು ಮನಸ್ಸಿನಲ್ಲಿ ಹಾದುಹೋಗುತ್ತಿತ್ತು. ತೀವ್ರವಾದ ಹೋರಾಟದ ಸಂದರ್ಭದಲ್ಲಿಯೂ ಪರಿಚಿತರನ್ನು ಕಂಡಾಗ ಅವರ ಮುಖದಲ್ಲಿ ಅರಳುತ್ತಿದ್ದ ಮುಗುಳ್ನಗೆಯೇ ಅವರ ವ್ಯಕ್ತಿತ್ವದ ರೂಪಕ. ಎಂಥ ವಿಷಮ ಸನ್ನಿವೇಶವನ್ನೂ ಮನೋಬಲದಿಂದ, ನೈತಿಕ ಬಲದಿಂದ ಎದುರಿಸಬಲ್ಲೆನೆನ್ನುವ ಅಖಂಡ ಆತ್ಮವಿಶ್ವಾಸದಿಂದ ಮಾತ್ರ ಅದು ಹುಟ್ಟುತ್ತದೆಯೇನೋ.

ಅನೇಕ ಕಾರ್ಯಕ್ರಮಗಳಲ್ಲಿ ಅವರೊಡನೆ ಪಾಲ್ಗೊಂಡ ಅನುಭವಗಳನ್ನು ಹಂಚಿಕೊಳ್ಳುವುದೆಂದರೆ, ನಮ್ಮ ಕಾಲದ ಸಾಕ್ಷಿಪ್ರಜ್ಞೆಯ ಎದುರು ನಾವು ಕಕ್ಕಾಬಿಕ್ಕಿಯಾದದ್ದನ್ನು ಹೇಳಿಕೊಳ್ಳುವುದೆಂದೇ ಅರ್ಥ. ನಮ್ಮಲ್ಲಿ ನಮಗೆ ನಾಚಿಕೆ, ಆತ್ಮವಿಮರ್ಶೆ ಹುಟ್ಟುವಂತೆ ಮಾಡುತ್ತಿತ್ತು ಅವರ ಉಪಸ್ಥಿತಿ ಮತ್ತು ಮಾತು. ಕಾರ್ಯಕ್ರಮವೊಂದರಲ್ಲಿ ನಾವಿಬ್ಬರೂ ಮುಖ್ಯ ಅತಿಥಿಗಳು. ಆದರೆ ಆಯೋಜಕರು ಕರೆದಿದ್ದ ಇತರ ’ಗಣ್ಯರ ಮಾತುಗಳು ಮುಗಿಯುತ್ತಲೇ ಇಲ್ಲ. ಒಬ್ಬರಾದ ಮೇಲೊಬ್ಬರು ಮಾತಿನಮಲ್ಲರು, ಮಾತಿನ ಮಳೆ ಸುರಿಸುತ್ತಲೇ ಇದ್ದರು. ಕೊನೆಗೆ ಉಳಿದ ನಮ್ಮಿಬ್ಬರಲ್ಲಿ ಮೊದಲು ದೊರೆಸ್ವಾಮಿಯವರನ್ನು ಆಹ್ವಾನಿಸಿದಾಗ ಈ ಹಿರಿಯರು, ಇರಿ ಮೊದಲು ಆಶಾತಾಯಿಯವರ ಮಾತು ಕೇಳೋಣ ಎಂದು ಒತ್ತಾಯಿಸಿ ನನಗೇ ಮೊದಲು ಮಾತನಾಡಹಚ್ಚಿದರು. ಒಳಗಿದ್ದ ಅಸಹನೆಯನ್ನೆಲ್ಲ ಮಾತಿನಲ್ಲಿ ನಾನು ಹೊರಹಾಕಿದೆ. ಗಾಂಧಿಯವರೇನಾದರೂ ಈ ಸಭೆಯಲ್ಲಿ ಇದ್ದಿದ್ದರೆ, ಅಯ್ಯಾ, ಪುರುಷೋತ್ತಮರಿರಾ,

ಶತಮಾನಗಳಿಂದ ನೀವು ಆಡಿದ್ದು, ಹೆಣ್ಣುಮಕ್ಕಳು ಕೇಳಿದ್ದೇ ಆಯಿತು, ಈಗಲಾದರೂ ಅವರಿಗೆ
ಮೊದಲೇ ಮಾತನಾಡೋಕೆ ಅವಕಾಶ ಮಾಡಿಕೊಡಿ ಅಂತ ಹೇಳುತ್ತಿದ್ದರು ಎನ್ನುವ ಖಾತ್ರಿ ನನಗಿದೆ ಎಂದೆ. ಮಾತು ಮುಗಿಸಿದ ಮೇಲೆ ದೊರೆಸ್ವಾಮಿಯವರು, ನಾನು ಹೇಳಬೇಕು ಅಂದಿದ್ದನ್ನ ನೀವೇ ಹೇಳಿದ್ದು ಒಳ್ಳೆಯದಾಯಿತು ಎಂದರಲ್ಲದೆ, ಆಯೋಜಕರಿಗೆ, ಈ ಪಾಟಿ ಜನರನ್ನು ಯಾಕ್ರಿ ಮಾತನಾಡಿಸ್ತೀರಾ, ಸಮಯ ವ್ಯರ್ಥ ಅಲ್ವಾ ಅಂತ ಮುಲಾಜಿಲ್ಲದೆ ತರಾಟೆಗೆ ತೆಗೆದುಕೊಂಡರು.

ನಮ್ಮ ಕಾಲೇಜು ವಿಶ್ವವಿದ್ಯಾಲಯವಾಗುವ ಪ್ರಕ್ರಿಯೆ ನಡೆಯುತ್ತಿತ್ತು. ಅದಕ್ಕೆ ಅನೇಕ ತೊಡಕುಗಳು. ದೊರೆಸ್ವಾಮಿಯವರು ಸಿಕ್ಕಾಗೊಮ್ಮೆ, ಇದಕ್ಕೆ ಏನಾದರೂ ಮಾಡಬೇಕು ಅಂದೆ, ’ಅದಕ್ಕೇನು, ನಡಿಯಮ್ಮ, ಯಾವತ್ತು, ಎಲ್ಲಿ, ಎಷ್ಟು ಹೊತ್ತಿಗೆ ಬರಬೇಕು ಹೇಳಿ’ ಅಂತ ನಿಂತ ಕಾಲ ಮೇಲೆ ಹೇಳಿದರು. ಅಲ್ಲಾ, ನಿಮಗೆ ತೊಂದರೆ.. ಅಂತ ನಾನು ತೊದಲಿದರೆ, ’ಇಂಥ ಕೆಲಸಗಳನ್ನ ಮಾಡದೇ ಇದ್ದರೆ ತೊಂದರೆ’ ಎಂದು ನನ್ನ ಸಂಕೋಚವನ್ನು ಅಲ್ಲಿಯೇ ತೊಡೆದರು. ಗೆಳತಿ ಗೌರಿಯ ಹತ್ಯೆಯ ಸಂದರ್ಭದಲ್ಲಿ ಎಲ್ಲರಿಗೂ ಅವರು ತುಂಬಿದ ಧೈರ್ಯದ ಬಗ್ಗೆ ಹೆಚ್ಚು ಹೇಳಬೇಕಿಲ್ಲ. ಒಂದು ಪತ್ರಿಕಾಗೋಷ್ಠಿಯನ್ನು ಆಯೋಜಿಸಿ ಕವಿತಾ, ಶಿವಸುಂದರ್ ಎಲ್ಲರೂ ಯಾರು ಯಾರು ಬರುತ್ತಾರೋ, ಬರುವುದಿಲ್ಲವೋ ಎಂದು ಪ್ರೆಸ್‌ಕ್ಲಬ್‌ನಲ್ಲಿ ಕಾಯುತ್ತಾ ಕೂತಿದ್ದಾಗ,
ಶಿವಸುಂದರ್ ’ಬಂದ್ರಲ್ಲಾ ಎಂದರು. ದೂರದಲ್ಲಿ ದೊರೆಸ್ವಾಮಿಯವರನ್ನು ನೋಡಿದ್ದೇ ಇನ್ನು ಯಾರು ಬಂದರೇನು, ಬಿಟ್ಟರೇನು ಅನ್ನಿಸಿ ಬಿಟ್ಟಿತು ನಮಗೆಲ್ಲ! ಟೌನ್‌ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು, ಪ್ರಜಾಪ್ರಭುತ್ವವನ್ನು ಕುರಿತಂತೆ, ಈ ಹೊತ್ತಿನಲ್ಲಿ ನಾವು ಮೈಮರೆತರೆ ಅನುಭವಿಸಬೇಕಾದ ನರಕದ ಬಗ್ಗೆ ಆಡಿದ ಮಾತುಗಳು, ಅವುಗಳಲ್ಲಿದ್ದ ಕಾಣ್ಕೆ, ಸದ್ಯ ಭಾರತದ ಸಂದರ್ಭವನ್ನು ಕುರಿತಂತೆ ಸತ್ಯದ ನವದರ್ಶನ ಮಾಡಿಸಿತು.

ಅವರೊಡನೆಯ ಕೊನೆಯ ಭೇಟಿ ಆನ್‌ಲೈನ್‌ನಲ್ಲಿ ಏಪ್ರಿಲ್ 10ರಂದು ನಡೆದ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ. ನಾವೆಲ್ಲ ಅವರ ಬಗ್ಗೆ ಮಾತನಾಡುತ್ತಿದ್ದರೆ, ಸಂಕೋಚದಿಂದ ಮುದುಡಿದ ದೇಹದಲ್ಲಿ, ಆದರೆ ಆಗಲೂ ಅದೇ ಮುಗುಳ್ನಗೆ ಅವರ ಮುಖದಲ್ಲಿ ಅವರಿದ್ದರು. ನಾನೇನೋ ಬಹಳ ಸಾಧನೆ ಮಾಡಿದವನ ಹಾಗೆ ಇವರೆಲ್ಲ ಮಾತನಾಡುತ್ತಿದ್ದಾರೆ, ಆದರೆ ಇದೆಲ್ಲ ನಾನು, ನಾವು ಮಾಡಲೇಬೇಕಾದ ಕೆಲಸಗಳಲ್ಲವೆ ಎಂದರು. ಅಹಂಕಾರ, ಸ್ವಾರ್ಥ ಸೋಕದ ವ್ಯಕ್ತಿತ್ವ ಹೇಗಿರುತ್ತದೆ ಎನ್ನುವುದರ ಸಾಕಾರ ರೂಪ ದೊರೆಸ್ವಾಮಿಯವರು.

104ರ ವಯಸ್ಸಿನಲ್ಲಿ ತೀರಿಕೊಂಡ ದೊರೆಸ್ವಾಮಿಯವರ ಬಗೆಗೆ ಇದನ್ನು ಬಯಸುವುದು ದುರಾಸೆಯೇನೋ, ಆದರೂ ಕವಿತೆಯ ಆ ಸಾಲು ನೆನಪಾಗುತ್ತದೆ ಅಯಾಚಿತವಾಗಿ..
’ಮಹಾತ್ಮಾ ನೀನಿನ್ನೀಸು ಕಾಲ ಬದುಕಬೇಕಿತ್ತು’

ಪ್ರೊ. ಎಂ.ಎಸ್ ಆಶಾದೇವಿ
ವಿಮರ್ಶಕಿ, ಲೇಖಕಿ ಮತ್ತು ಪ್ರಾಧ್ಯಾಪಕಿ. ಪ್ರಸ್ತುತ ಬೆಂಗಳೂರಿನ
ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಸ್ತ್ರೀಮತವನುತ್ತರಿಸಲಾಗದೆ’, ‘ನಡುವೆ ಸುಳಿವಾತ್ಮ ಅವರ ವಿಮರ್ಶಾ ಕೃತಿಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...