Homeನ್ಯಾಯ ಪಥಎಚ್ ಎಸ್ ದೊರೆಸ್ವಾಮಿ ಶ್ರದ್ಧಾಂಜಲಿ; ನಮ್ಮ ಕಾಲದ ಪ್ರಾಣವಾಯು: ಪ್ರೊ. ಎಂ ಎಸ್ ಆಶಾದೇವಿ

ಎಚ್ ಎಸ್ ದೊರೆಸ್ವಾಮಿ ಶ್ರದ್ಧಾಂಜಲಿ; ನಮ್ಮ ಕಾಲದ ಪ್ರಾಣವಾಯು: ಪ್ರೊ. ಎಂ ಎಸ್ ಆಶಾದೇವಿ

- Advertisement -
- Advertisement -

ದುರಿತ ಕಾಲವೆಂದರೇನೆನ್ನುವುದನ್ನು ಅದರೆಲ್ಲ ಅರ್ಥಬಾಹುಳ್ಯದಲ್ಲಿ, ಕಾರ್ಯಮಾದರಿಗಳಲ್ಲಿ ಕಂಡುಣ್ಣುತ್ತಿರುವ ದಾರುಣ ಸನ್ನಿವೇಶದಲ್ಲಿ ನಾವಿದ್ದೇವೆ. ಸಾವಿರ ಬಾರಿ ಯೇಟ್ಸ್‌ನ ಈ ಮಾತು ಬುದ್ಧು ಭಾವಗಳಲ್ಲಿ ಅನುರಣಿಸುತ್ತದೆ.

“ಸಜ್ಜನರು ದುರ್ಬಲರಾಗಿಬಿಟ್ಟಿದ್ದಾರೆ
ದುಷ್ಟರೋ ಅವರೆಲ್ಲ ಶಕ್ತಿಯಲ್ಲಿ ಅಟ್ಟಹಾಸ ಮಾಡುತ್ತಿದ್ದಾರೆ”

ಈ ಮಾತು ಸುಳ್ಳು ಎನಿಸುವ ಭರವಸೆ ಮೂಡಿಸುತ್ತಿದ್ದ ಬೆರಳೆಣಿಕೆಯ ವ್ಯಕ್ತಿತ್ವಗಳಲ್ಲಿ ದೊರೆಸ್ವಾಮಿಯವರು ಮೊದಲನೆಯವರು. ಮನುಷ್ಯ ಚೈತನ್ಯದಲ್ಲಿ ಅವರಿಗಿದ್ದ ನಂಬಿಕೆಯ ಮೂಲ ಯಾವುದು ಎನ್ನುವ ಪ್ರಶ್ನೆ ಅವರನ್ನು ನೋಡಿದಾಗಲೆಲ್ಲ ಕಾಡುತ್ತಿತ್ತು. ಲಂಕೇಶರ ದಾರ್ಶನಿಕ ಎನ್ನಬಹುದಾದ ಹೇಳಿಕೆಗಳಲ್ಲಿ ಒಂದೆಂದರೆ, ’ಮನುಷ್ಯ ಮೂಲತಃ ನೀಚ’ ಎನ್ನುವುದು. ಆದರೆ ತನ್ನ, ತನ್ನ ಪರಿಸರದಲ್ಲಿರುವ ಮನುಷ್ಯರ ನೀಚತನವನ್ನು ಮೀರಿಕೊಳ್ಳಲು ಯತ್ನಿಸಬೇಕಾಗಿರುವುದೇ ನಾಗರಿಕತೆಯ ಆದ್ಯ ಕೆಲಸಗಳಲ್ಲೊಂದು ಎನ್ನುವುದನ್ನೂ ಲಂಕೇಶರು ಅಷ್ಟೇ ಗಾಢವಾಗಿ ನಂಬಿದವರಾಗಿದ್ದರು. ದೊರೆಸ್ವಾಮಿಯವರು ಈ ಮಾದರಿಯವರು. ಗಾಂಧಿವಾದ ಎನ್ನುವ ಮಾತನ್ನು ಬಳಸುವುದೇ ಅಪಾರ ಹಿಂಜರಿಕೆಯ ಸಂಗತಿಯಾಗಿರುವ ಈ ಕಾಲದಲ್ಲಿ ದೊರೆಸ್ವಾಮಿಯವರು ನಮ್ಮಲ್ಲಿ ನಮಗೇ ಕಳೆದುಹೋಗುತ್ತಿರುವ ನಂಬಿಕೆಯನ್ನು ಹುಟ್ಟಿಸಬಲ್ಲಷ್ಟು ಅದಮ್ಯ ಆಶಾವಾದಿಯಾಗಿದ್ದರು ಎನ್ನುವುದೊಂದು ಸೋಜಿಗ.

ಅವರ ಹಸನ್ಮುಖವನ್ನು ನೋಡಿದಾಗಲೆಲ್ಲ ’ಅಳು ನುಂಗಿ ನಗು ಒಮ್ಮೆ ಎನ್ನುವ ಬೇಂದ್ರೆಯವರ ಮಾತು ಮನಸ್ಸಿನಲ್ಲಿ ಹಾದುಹೋಗುತ್ತಿತ್ತು. ತೀವ್ರವಾದ ಹೋರಾಟದ ಸಂದರ್ಭದಲ್ಲಿಯೂ ಪರಿಚಿತರನ್ನು ಕಂಡಾಗ ಅವರ ಮುಖದಲ್ಲಿ ಅರಳುತ್ತಿದ್ದ ಮುಗುಳ್ನಗೆಯೇ ಅವರ ವ್ಯಕ್ತಿತ್ವದ ರೂಪಕ. ಎಂಥ ವಿಷಮ ಸನ್ನಿವೇಶವನ್ನೂ ಮನೋಬಲದಿಂದ, ನೈತಿಕ ಬಲದಿಂದ ಎದುರಿಸಬಲ್ಲೆನೆನ್ನುವ ಅಖಂಡ ಆತ್ಮವಿಶ್ವಾಸದಿಂದ ಮಾತ್ರ ಅದು ಹುಟ್ಟುತ್ತದೆಯೇನೋ.

ಅನೇಕ ಕಾರ್ಯಕ್ರಮಗಳಲ್ಲಿ ಅವರೊಡನೆ ಪಾಲ್ಗೊಂಡ ಅನುಭವಗಳನ್ನು ಹಂಚಿಕೊಳ್ಳುವುದೆಂದರೆ, ನಮ್ಮ ಕಾಲದ ಸಾಕ್ಷಿಪ್ರಜ್ಞೆಯ ಎದುರು ನಾವು ಕಕ್ಕಾಬಿಕ್ಕಿಯಾದದ್ದನ್ನು ಹೇಳಿಕೊಳ್ಳುವುದೆಂದೇ ಅರ್ಥ. ನಮ್ಮಲ್ಲಿ ನಮಗೆ ನಾಚಿಕೆ, ಆತ್ಮವಿಮರ್ಶೆ ಹುಟ್ಟುವಂತೆ ಮಾಡುತ್ತಿತ್ತು ಅವರ ಉಪಸ್ಥಿತಿ ಮತ್ತು ಮಾತು. ಕಾರ್ಯಕ್ರಮವೊಂದರಲ್ಲಿ ನಾವಿಬ್ಬರೂ ಮುಖ್ಯ ಅತಿಥಿಗಳು. ಆದರೆ ಆಯೋಜಕರು ಕರೆದಿದ್ದ ಇತರ ’ಗಣ್ಯರ ಮಾತುಗಳು ಮುಗಿಯುತ್ತಲೇ ಇಲ್ಲ. ಒಬ್ಬರಾದ ಮೇಲೊಬ್ಬರು ಮಾತಿನಮಲ್ಲರು, ಮಾತಿನ ಮಳೆ ಸುರಿಸುತ್ತಲೇ ಇದ್ದರು. ಕೊನೆಗೆ ಉಳಿದ ನಮ್ಮಿಬ್ಬರಲ್ಲಿ ಮೊದಲು ದೊರೆಸ್ವಾಮಿಯವರನ್ನು ಆಹ್ವಾನಿಸಿದಾಗ ಈ ಹಿರಿಯರು, ಇರಿ ಮೊದಲು ಆಶಾತಾಯಿಯವರ ಮಾತು ಕೇಳೋಣ ಎಂದು ಒತ್ತಾಯಿಸಿ ನನಗೇ ಮೊದಲು ಮಾತನಾಡಹಚ್ಚಿದರು. ಒಳಗಿದ್ದ ಅಸಹನೆಯನ್ನೆಲ್ಲ ಮಾತಿನಲ್ಲಿ ನಾನು ಹೊರಹಾಕಿದೆ. ಗಾಂಧಿಯವರೇನಾದರೂ ಈ ಸಭೆಯಲ್ಲಿ ಇದ್ದಿದ್ದರೆ, ಅಯ್ಯಾ, ಪುರುಷೋತ್ತಮರಿರಾ,

ಶತಮಾನಗಳಿಂದ ನೀವು ಆಡಿದ್ದು, ಹೆಣ್ಣುಮಕ್ಕಳು ಕೇಳಿದ್ದೇ ಆಯಿತು, ಈಗಲಾದರೂ ಅವರಿಗೆ
ಮೊದಲೇ ಮಾತನಾಡೋಕೆ ಅವಕಾಶ ಮಾಡಿಕೊಡಿ ಅಂತ ಹೇಳುತ್ತಿದ್ದರು ಎನ್ನುವ ಖಾತ್ರಿ ನನಗಿದೆ ಎಂದೆ. ಮಾತು ಮುಗಿಸಿದ ಮೇಲೆ ದೊರೆಸ್ವಾಮಿಯವರು, ನಾನು ಹೇಳಬೇಕು ಅಂದಿದ್ದನ್ನ ನೀವೇ ಹೇಳಿದ್ದು ಒಳ್ಳೆಯದಾಯಿತು ಎಂದರಲ್ಲದೆ, ಆಯೋಜಕರಿಗೆ, ಈ ಪಾಟಿ ಜನರನ್ನು ಯಾಕ್ರಿ ಮಾತನಾಡಿಸ್ತೀರಾ, ಸಮಯ ವ್ಯರ್ಥ ಅಲ್ವಾ ಅಂತ ಮುಲಾಜಿಲ್ಲದೆ ತರಾಟೆಗೆ ತೆಗೆದುಕೊಂಡರು.

ನಮ್ಮ ಕಾಲೇಜು ವಿಶ್ವವಿದ್ಯಾಲಯವಾಗುವ ಪ್ರಕ್ರಿಯೆ ನಡೆಯುತ್ತಿತ್ತು. ಅದಕ್ಕೆ ಅನೇಕ ತೊಡಕುಗಳು. ದೊರೆಸ್ವಾಮಿಯವರು ಸಿಕ್ಕಾಗೊಮ್ಮೆ, ಇದಕ್ಕೆ ಏನಾದರೂ ಮಾಡಬೇಕು ಅಂದೆ, ’ಅದಕ್ಕೇನು, ನಡಿಯಮ್ಮ, ಯಾವತ್ತು, ಎಲ್ಲಿ, ಎಷ್ಟು ಹೊತ್ತಿಗೆ ಬರಬೇಕು ಹೇಳಿ’ ಅಂತ ನಿಂತ ಕಾಲ ಮೇಲೆ ಹೇಳಿದರು. ಅಲ್ಲಾ, ನಿಮಗೆ ತೊಂದರೆ.. ಅಂತ ನಾನು ತೊದಲಿದರೆ, ’ಇಂಥ ಕೆಲಸಗಳನ್ನ ಮಾಡದೇ ಇದ್ದರೆ ತೊಂದರೆ’ ಎಂದು ನನ್ನ ಸಂಕೋಚವನ್ನು ಅಲ್ಲಿಯೇ ತೊಡೆದರು. ಗೆಳತಿ ಗೌರಿಯ ಹತ್ಯೆಯ ಸಂದರ್ಭದಲ್ಲಿ ಎಲ್ಲರಿಗೂ ಅವರು ತುಂಬಿದ ಧೈರ್ಯದ ಬಗ್ಗೆ ಹೆಚ್ಚು ಹೇಳಬೇಕಿಲ್ಲ. ಒಂದು ಪತ್ರಿಕಾಗೋಷ್ಠಿಯನ್ನು ಆಯೋಜಿಸಿ ಕವಿತಾ, ಶಿವಸುಂದರ್ ಎಲ್ಲರೂ ಯಾರು ಯಾರು ಬರುತ್ತಾರೋ, ಬರುವುದಿಲ್ಲವೋ ಎಂದು ಪ್ರೆಸ್‌ಕ್ಲಬ್‌ನಲ್ಲಿ ಕಾಯುತ್ತಾ ಕೂತಿದ್ದಾಗ,
ಶಿವಸುಂದರ್ ’ಬಂದ್ರಲ್ಲಾ ಎಂದರು. ದೂರದಲ್ಲಿ ದೊರೆಸ್ವಾಮಿಯವರನ್ನು ನೋಡಿದ್ದೇ ಇನ್ನು ಯಾರು ಬಂದರೇನು, ಬಿಟ್ಟರೇನು ಅನ್ನಿಸಿ ಬಿಟ್ಟಿತು ನಮಗೆಲ್ಲ! ಟೌನ್‌ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು, ಪ್ರಜಾಪ್ರಭುತ್ವವನ್ನು ಕುರಿತಂತೆ, ಈ ಹೊತ್ತಿನಲ್ಲಿ ನಾವು ಮೈಮರೆತರೆ ಅನುಭವಿಸಬೇಕಾದ ನರಕದ ಬಗ್ಗೆ ಆಡಿದ ಮಾತುಗಳು, ಅವುಗಳಲ್ಲಿದ್ದ ಕಾಣ್ಕೆ, ಸದ್ಯ ಭಾರತದ ಸಂದರ್ಭವನ್ನು ಕುರಿತಂತೆ ಸತ್ಯದ ನವದರ್ಶನ ಮಾಡಿಸಿತು.

ಅವರೊಡನೆಯ ಕೊನೆಯ ಭೇಟಿ ಆನ್‌ಲೈನ್‌ನಲ್ಲಿ ಏಪ್ರಿಲ್ 10ರಂದು ನಡೆದ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ. ನಾವೆಲ್ಲ ಅವರ ಬಗ್ಗೆ ಮಾತನಾಡುತ್ತಿದ್ದರೆ, ಸಂಕೋಚದಿಂದ ಮುದುಡಿದ ದೇಹದಲ್ಲಿ, ಆದರೆ ಆಗಲೂ ಅದೇ ಮುಗುಳ್ನಗೆ ಅವರ ಮುಖದಲ್ಲಿ ಅವರಿದ್ದರು. ನಾನೇನೋ ಬಹಳ ಸಾಧನೆ ಮಾಡಿದವನ ಹಾಗೆ ಇವರೆಲ್ಲ ಮಾತನಾಡುತ್ತಿದ್ದಾರೆ, ಆದರೆ ಇದೆಲ್ಲ ನಾನು, ನಾವು ಮಾಡಲೇಬೇಕಾದ ಕೆಲಸಗಳಲ್ಲವೆ ಎಂದರು. ಅಹಂಕಾರ, ಸ್ವಾರ್ಥ ಸೋಕದ ವ್ಯಕ್ತಿತ್ವ ಹೇಗಿರುತ್ತದೆ ಎನ್ನುವುದರ ಸಾಕಾರ ರೂಪ ದೊರೆಸ್ವಾಮಿಯವರು.

104ರ ವಯಸ್ಸಿನಲ್ಲಿ ತೀರಿಕೊಂಡ ದೊರೆಸ್ವಾಮಿಯವರ ಬಗೆಗೆ ಇದನ್ನು ಬಯಸುವುದು ದುರಾಸೆಯೇನೋ, ಆದರೂ ಕವಿತೆಯ ಆ ಸಾಲು ನೆನಪಾಗುತ್ತದೆ ಅಯಾಚಿತವಾಗಿ..
’ಮಹಾತ್ಮಾ ನೀನಿನ್ನೀಸು ಕಾಲ ಬದುಕಬೇಕಿತ್ತು’

ಪ್ರೊ. ಎಂ.ಎಸ್ ಆಶಾದೇವಿ
ವಿಮರ್ಶಕಿ, ಲೇಖಕಿ ಮತ್ತು ಪ್ರಾಧ್ಯಾಪಕಿ. ಪ್ರಸ್ತುತ ಬೆಂಗಳೂರಿನ
ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಸ್ತ್ರೀಮತವನುತ್ತರಿಸಲಾಗದೆ’, ‘ನಡುವೆ ಸುಳಿವಾತ್ಮ ಅವರ ವಿಮರ್ಶಾ ಕೃತಿಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...