Homeನ್ಯಾಯ ಪಥಎಚ್ ಎಸ್ ದೊರೆಸ್ವಾಮಿ ಶ್ರದ್ಧಾಂಜಲಿ; ನಮ್ಮ ಕಾಲದ ಪ್ರಾಣವಾಯು: ಪ್ರೊ. ಎಂ ಎಸ್ ಆಶಾದೇವಿ

ಎಚ್ ಎಸ್ ದೊರೆಸ್ವಾಮಿ ಶ್ರದ್ಧಾಂಜಲಿ; ನಮ್ಮ ಕಾಲದ ಪ್ರಾಣವಾಯು: ಪ್ರೊ. ಎಂ ಎಸ್ ಆಶಾದೇವಿ

- Advertisement -
- Advertisement -

ದುರಿತ ಕಾಲವೆಂದರೇನೆನ್ನುವುದನ್ನು ಅದರೆಲ್ಲ ಅರ್ಥಬಾಹುಳ್ಯದಲ್ಲಿ, ಕಾರ್ಯಮಾದರಿಗಳಲ್ಲಿ ಕಂಡುಣ್ಣುತ್ತಿರುವ ದಾರುಣ ಸನ್ನಿವೇಶದಲ್ಲಿ ನಾವಿದ್ದೇವೆ. ಸಾವಿರ ಬಾರಿ ಯೇಟ್ಸ್‌ನ ಈ ಮಾತು ಬುದ್ಧು ಭಾವಗಳಲ್ಲಿ ಅನುರಣಿಸುತ್ತದೆ.

“ಸಜ್ಜನರು ದುರ್ಬಲರಾಗಿಬಿಟ್ಟಿದ್ದಾರೆ
ದುಷ್ಟರೋ ಅವರೆಲ್ಲ ಶಕ್ತಿಯಲ್ಲಿ ಅಟ್ಟಹಾಸ ಮಾಡುತ್ತಿದ್ದಾರೆ”

ಈ ಮಾತು ಸುಳ್ಳು ಎನಿಸುವ ಭರವಸೆ ಮೂಡಿಸುತ್ತಿದ್ದ ಬೆರಳೆಣಿಕೆಯ ವ್ಯಕ್ತಿತ್ವಗಳಲ್ಲಿ ದೊರೆಸ್ವಾಮಿಯವರು ಮೊದಲನೆಯವರು. ಮನುಷ್ಯ ಚೈತನ್ಯದಲ್ಲಿ ಅವರಿಗಿದ್ದ ನಂಬಿಕೆಯ ಮೂಲ ಯಾವುದು ಎನ್ನುವ ಪ್ರಶ್ನೆ ಅವರನ್ನು ನೋಡಿದಾಗಲೆಲ್ಲ ಕಾಡುತ್ತಿತ್ತು. ಲಂಕೇಶರ ದಾರ್ಶನಿಕ ಎನ್ನಬಹುದಾದ ಹೇಳಿಕೆಗಳಲ್ಲಿ ಒಂದೆಂದರೆ, ’ಮನುಷ್ಯ ಮೂಲತಃ ನೀಚ’ ಎನ್ನುವುದು. ಆದರೆ ತನ್ನ, ತನ್ನ ಪರಿಸರದಲ್ಲಿರುವ ಮನುಷ್ಯರ ನೀಚತನವನ್ನು ಮೀರಿಕೊಳ್ಳಲು ಯತ್ನಿಸಬೇಕಾಗಿರುವುದೇ ನಾಗರಿಕತೆಯ ಆದ್ಯ ಕೆಲಸಗಳಲ್ಲೊಂದು ಎನ್ನುವುದನ್ನೂ ಲಂಕೇಶರು ಅಷ್ಟೇ ಗಾಢವಾಗಿ ನಂಬಿದವರಾಗಿದ್ದರು. ದೊರೆಸ್ವಾಮಿಯವರು ಈ ಮಾದರಿಯವರು. ಗಾಂಧಿವಾದ ಎನ್ನುವ ಮಾತನ್ನು ಬಳಸುವುದೇ ಅಪಾರ ಹಿಂಜರಿಕೆಯ ಸಂಗತಿಯಾಗಿರುವ ಈ ಕಾಲದಲ್ಲಿ ದೊರೆಸ್ವಾಮಿಯವರು ನಮ್ಮಲ್ಲಿ ನಮಗೇ ಕಳೆದುಹೋಗುತ್ತಿರುವ ನಂಬಿಕೆಯನ್ನು ಹುಟ್ಟಿಸಬಲ್ಲಷ್ಟು ಅದಮ್ಯ ಆಶಾವಾದಿಯಾಗಿದ್ದರು ಎನ್ನುವುದೊಂದು ಸೋಜಿಗ.

ಅವರ ಹಸನ್ಮುಖವನ್ನು ನೋಡಿದಾಗಲೆಲ್ಲ ’ಅಳು ನುಂಗಿ ನಗು ಒಮ್ಮೆ ಎನ್ನುವ ಬೇಂದ್ರೆಯವರ ಮಾತು ಮನಸ್ಸಿನಲ್ಲಿ ಹಾದುಹೋಗುತ್ತಿತ್ತು. ತೀವ್ರವಾದ ಹೋರಾಟದ ಸಂದರ್ಭದಲ್ಲಿಯೂ ಪರಿಚಿತರನ್ನು ಕಂಡಾಗ ಅವರ ಮುಖದಲ್ಲಿ ಅರಳುತ್ತಿದ್ದ ಮುಗುಳ್ನಗೆಯೇ ಅವರ ವ್ಯಕ್ತಿತ್ವದ ರೂಪಕ. ಎಂಥ ವಿಷಮ ಸನ್ನಿವೇಶವನ್ನೂ ಮನೋಬಲದಿಂದ, ನೈತಿಕ ಬಲದಿಂದ ಎದುರಿಸಬಲ್ಲೆನೆನ್ನುವ ಅಖಂಡ ಆತ್ಮವಿಶ್ವಾಸದಿಂದ ಮಾತ್ರ ಅದು ಹುಟ್ಟುತ್ತದೆಯೇನೋ.

ಅನೇಕ ಕಾರ್ಯಕ್ರಮಗಳಲ್ಲಿ ಅವರೊಡನೆ ಪಾಲ್ಗೊಂಡ ಅನುಭವಗಳನ್ನು ಹಂಚಿಕೊಳ್ಳುವುದೆಂದರೆ, ನಮ್ಮ ಕಾಲದ ಸಾಕ್ಷಿಪ್ರಜ್ಞೆಯ ಎದುರು ನಾವು ಕಕ್ಕಾಬಿಕ್ಕಿಯಾದದ್ದನ್ನು ಹೇಳಿಕೊಳ್ಳುವುದೆಂದೇ ಅರ್ಥ. ನಮ್ಮಲ್ಲಿ ನಮಗೆ ನಾಚಿಕೆ, ಆತ್ಮವಿಮರ್ಶೆ ಹುಟ್ಟುವಂತೆ ಮಾಡುತ್ತಿತ್ತು ಅವರ ಉಪಸ್ಥಿತಿ ಮತ್ತು ಮಾತು. ಕಾರ್ಯಕ್ರಮವೊಂದರಲ್ಲಿ ನಾವಿಬ್ಬರೂ ಮುಖ್ಯ ಅತಿಥಿಗಳು. ಆದರೆ ಆಯೋಜಕರು ಕರೆದಿದ್ದ ಇತರ ’ಗಣ್ಯರ ಮಾತುಗಳು ಮುಗಿಯುತ್ತಲೇ ಇಲ್ಲ. ಒಬ್ಬರಾದ ಮೇಲೊಬ್ಬರು ಮಾತಿನಮಲ್ಲರು, ಮಾತಿನ ಮಳೆ ಸುರಿಸುತ್ತಲೇ ಇದ್ದರು. ಕೊನೆಗೆ ಉಳಿದ ನಮ್ಮಿಬ್ಬರಲ್ಲಿ ಮೊದಲು ದೊರೆಸ್ವಾಮಿಯವರನ್ನು ಆಹ್ವಾನಿಸಿದಾಗ ಈ ಹಿರಿಯರು, ಇರಿ ಮೊದಲು ಆಶಾತಾಯಿಯವರ ಮಾತು ಕೇಳೋಣ ಎಂದು ಒತ್ತಾಯಿಸಿ ನನಗೇ ಮೊದಲು ಮಾತನಾಡಹಚ್ಚಿದರು. ಒಳಗಿದ್ದ ಅಸಹನೆಯನ್ನೆಲ್ಲ ಮಾತಿನಲ್ಲಿ ನಾನು ಹೊರಹಾಕಿದೆ. ಗಾಂಧಿಯವರೇನಾದರೂ ಈ ಸಭೆಯಲ್ಲಿ ಇದ್ದಿದ್ದರೆ, ಅಯ್ಯಾ, ಪುರುಷೋತ್ತಮರಿರಾ,

ಶತಮಾನಗಳಿಂದ ನೀವು ಆಡಿದ್ದು, ಹೆಣ್ಣುಮಕ್ಕಳು ಕೇಳಿದ್ದೇ ಆಯಿತು, ಈಗಲಾದರೂ ಅವರಿಗೆ
ಮೊದಲೇ ಮಾತನಾಡೋಕೆ ಅವಕಾಶ ಮಾಡಿಕೊಡಿ ಅಂತ ಹೇಳುತ್ತಿದ್ದರು ಎನ್ನುವ ಖಾತ್ರಿ ನನಗಿದೆ ಎಂದೆ. ಮಾತು ಮುಗಿಸಿದ ಮೇಲೆ ದೊರೆಸ್ವಾಮಿಯವರು, ನಾನು ಹೇಳಬೇಕು ಅಂದಿದ್ದನ್ನ ನೀವೇ ಹೇಳಿದ್ದು ಒಳ್ಳೆಯದಾಯಿತು ಎಂದರಲ್ಲದೆ, ಆಯೋಜಕರಿಗೆ, ಈ ಪಾಟಿ ಜನರನ್ನು ಯಾಕ್ರಿ ಮಾತನಾಡಿಸ್ತೀರಾ, ಸಮಯ ವ್ಯರ್ಥ ಅಲ್ವಾ ಅಂತ ಮುಲಾಜಿಲ್ಲದೆ ತರಾಟೆಗೆ ತೆಗೆದುಕೊಂಡರು.

ನಮ್ಮ ಕಾಲೇಜು ವಿಶ್ವವಿದ್ಯಾಲಯವಾಗುವ ಪ್ರಕ್ರಿಯೆ ನಡೆಯುತ್ತಿತ್ತು. ಅದಕ್ಕೆ ಅನೇಕ ತೊಡಕುಗಳು. ದೊರೆಸ್ವಾಮಿಯವರು ಸಿಕ್ಕಾಗೊಮ್ಮೆ, ಇದಕ್ಕೆ ಏನಾದರೂ ಮಾಡಬೇಕು ಅಂದೆ, ’ಅದಕ್ಕೇನು, ನಡಿಯಮ್ಮ, ಯಾವತ್ತು, ಎಲ್ಲಿ, ಎಷ್ಟು ಹೊತ್ತಿಗೆ ಬರಬೇಕು ಹೇಳಿ’ ಅಂತ ನಿಂತ ಕಾಲ ಮೇಲೆ ಹೇಳಿದರು. ಅಲ್ಲಾ, ನಿಮಗೆ ತೊಂದರೆ.. ಅಂತ ನಾನು ತೊದಲಿದರೆ, ’ಇಂಥ ಕೆಲಸಗಳನ್ನ ಮಾಡದೇ ಇದ್ದರೆ ತೊಂದರೆ’ ಎಂದು ನನ್ನ ಸಂಕೋಚವನ್ನು ಅಲ್ಲಿಯೇ ತೊಡೆದರು. ಗೆಳತಿ ಗೌರಿಯ ಹತ್ಯೆಯ ಸಂದರ್ಭದಲ್ಲಿ ಎಲ್ಲರಿಗೂ ಅವರು ತುಂಬಿದ ಧೈರ್ಯದ ಬಗ್ಗೆ ಹೆಚ್ಚು ಹೇಳಬೇಕಿಲ್ಲ. ಒಂದು ಪತ್ರಿಕಾಗೋಷ್ಠಿಯನ್ನು ಆಯೋಜಿಸಿ ಕವಿತಾ, ಶಿವಸುಂದರ್ ಎಲ್ಲರೂ ಯಾರು ಯಾರು ಬರುತ್ತಾರೋ, ಬರುವುದಿಲ್ಲವೋ ಎಂದು ಪ್ರೆಸ್‌ಕ್ಲಬ್‌ನಲ್ಲಿ ಕಾಯುತ್ತಾ ಕೂತಿದ್ದಾಗ,
ಶಿವಸುಂದರ್ ’ಬಂದ್ರಲ್ಲಾ ಎಂದರು. ದೂರದಲ್ಲಿ ದೊರೆಸ್ವಾಮಿಯವರನ್ನು ನೋಡಿದ್ದೇ ಇನ್ನು ಯಾರು ಬಂದರೇನು, ಬಿಟ್ಟರೇನು ಅನ್ನಿಸಿ ಬಿಟ್ಟಿತು ನಮಗೆಲ್ಲ! ಟೌನ್‌ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು, ಪ್ರಜಾಪ್ರಭುತ್ವವನ್ನು ಕುರಿತಂತೆ, ಈ ಹೊತ್ತಿನಲ್ಲಿ ನಾವು ಮೈಮರೆತರೆ ಅನುಭವಿಸಬೇಕಾದ ನರಕದ ಬಗ್ಗೆ ಆಡಿದ ಮಾತುಗಳು, ಅವುಗಳಲ್ಲಿದ್ದ ಕಾಣ್ಕೆ, ಸದ್ಯ ಭಾರತದ ಸಂದರ್ಭವನ್ನು ಕುರಿತಂತೆ ಸತ್ಯದ ನವದರ್ಶನ ಮಾಡಿಸಿತು.

ಅವರೊಡನೆಯ ಕೊನೆಯ ಭೇಟಿ ಆನ್‌ಲೈನ್‌ನಲ್ಲಿ ಏಪ್ರಿಲ್ 10ರಂದು ನಡೆದ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ. ನಾವೆಲ್ಲ ಅವರ ಬಗ್ಗೆ ಮಾತನಾಡುತ್ತಿದ್ದರೆ, ಸಂಕೋಚದಿಂದ ಮುದುಡಿದ ದೇಹದಲ್ಲಿ, ಆದರೆ ಆಗಲೂ ಅದೇ ಮುಗುಳ್ನಗೆ ಅವರ ಮುಖದಲ್ಲಿ ಅವರಿದ್ದರು. ನಾನೇನೋ ಬಹಳ ಸಾಧನೆ ಮಾಡಿದವನ ಹಾಗೆ ಇವರೆಲ್ಲ ಮಾತನಾಡುತ್ತಿದ್ದಾರೆ, ಆದರೆ ಇದೆಲ್ಲ ನಾನು, ನಾವು ಮಾಡಲೇಬೇಕಾದ ಕೆಲಸಗಳಲ್ಲವೆ ಎಂದರು. ಅಹಂಕಾರ, ಸ್ವಾರ್ಥ ಸೋಕದ ವ್ಯಕ್ತಿತ್ವ ಹೇಗಿರುತ್ತದೆ ಎನ್ನುವುದರ ಸಾಕಾರ ರೂಪ ದೊರೆಸ್ವಾಮಿಯವರು.

104ರ ವಯಸ್ಸಿನಲ್ಲಿ ತೀರಿಕೊಂಡ ದೊರೆಸ್ವಾಮಿಯವರ ಬಗೆಗೆ ಇದನ್ನು ಬಯಸುವುದು ದುರಾಸೆಯೇನೋ, ಆದರೂ ಕವಿತೆಯ ಆ ಸಾಲು ನೆನಪಾಗುತ್ತದೆ ಅಯಾಚಿತವಾಗಿ..
’ಮಹಾತ್ಮಾ ನೀನಿನ್ನೀಸು ಕಾಲ ಬದುಕಬೇಕಿತ್ತು’

ಪ್ರೊ. ಎಂ.ಎಸ್ ಆಶಾದೇವಿ
ವಿಮರ್ಶಕಿ, ಲೇಖಕಿ ಮತ್ತು ಪ್ರಾಧ್ಯಾಪಕಿ. ಪ್ರಸ್ತುತ ಬೆಂಗಳೂರಿನ
ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಸ್ತ್ರೀಮತವನುತ್ತರಿಸಲಾಗದೆ’, ‘ನಡುವೆ ಸುಳಿವಾತ್ಮ ಅವರ ವಿಮರ್ಶಾ ಕೃತಿಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....