Homeಕರ್ನಾಟಕಕಸಾಪ ಅಧ್ಯಕ್ಷರ ಆರೋಪಕ್ಕೆ ಪ್ರೊ.ಪುರುಷೋತ್ತಮ ಬಿಳಿಮಲೆ ತೀಕ್ಷ್ಣ ಪ್ರತಿಕ್ರಿಯೆ

ಕಸಾಪ ಅಧ್ಯಕ್ಷರ ಆರೋಪಕ್ಕೆ ಪ್ರೊ.ಪುರುಷೋತ್ತಮ ಬಿಳಿಮಲೆ ತೀಕ್ಷ್ಣ ಪ್ರತಿಕ್ರಿಯೆ

- Advertisement -
- Advertisement -

“ನಾನು ಮತ್ತು ನನ್ನಂಥ ಹಲವರು ಪರಿಷತ್ತಿನ ಬಗ್ಗೆ ಎತ್ತಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಗೊತ್ತಿಲ್ಲದ ಜೋಷಿಯವರು ವೈಯಕ್ತಿಕವಾಗಿ ಮಾನಹಾನಿಯಾಗುವಂಥ ಮಾತುಗಳನ್ನು ಆಡಿದ್ದಾರೆ” ಎಂದು ಹಿರಿಯ ವಿದ್ವಾಂಸರಾದ ಪ್ರೊ.ಪುರುಷೋತ್ತಮ ಬಿಳಿಮಲೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಬರಹಗಾರರನ್ನು ಕಡೆಗಣಿಸಿರುವ ಕುರಿತು ಪ್ರಜ್ಞಾವಂತ ಸಾಹಿತ್ಯ ವಲಯ ಬೇಸರ ವ್ಯಕ್ತಪಡಿಸಿದೆ. ಜೊತೆಗೆ ಪ್ರತಿರೋಧಾತ್ಮಕವಾಗಿ ‘ಜನ ಸಾಹಿತ್ಯ ಸಮ್ಮೇಳನ’ ನಡೆಸಲು ನಿರ್ಧರಿಸಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಕಸಾಪ ಅಧ್ಯಕ್ಷರು ಆರೋಪಗಳನ್ನು ಮಾಡಿದ್ದಾರೆ.

ಮುಸ್ಲಿಂ ಬರಹಗಾರರನ್ನು ಹೊರಗಿಟ್ಟಿರುವ ಕುರಿತು ಪ್ರಶ್ನಿಸಿದವರಲ್ಲಿ ಮುಂಚೂಣಿಯಲ್ಲಿರುವ ಪುರುಷೋತ್ತಮ ಬಿಳಿಮಲೆಯವರ ಕುರಿತು ಆರೋಪಗಳನ್ನು ಹೊರಿಸಿರುವ ಮಹೇಶ ಜೋಶಿ, “ಲೇಖಕ ಪುರುಷೋತ್ತಮ ಬಿಳಿಮಲೆ ಅವರು ದೂರವಾಣಿ ಕರೆ ಮಾಡಿ, ‘ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ಪೆಂಡಾಲ್‌ (ಪೆಂಡಾಲ್‌) ಹಾಕಲು ಪರಿಚಿತರಾದ ಮುಸ್ಲಿಂ ವ್ಯಾಪಾರಿಯೊಬ್ಬರಿಗೆ ಕೊಡಿಸಿ’ ಎಂದು ಕೇಳಿದ್ದರು. ಅದಕ್ಕೆ ನಾನು ‘ಅದು ಜಿಲ್ಲಾಡಳಿತದ ವ್ಯಾಪ್ತಿಗೆ ಬರುತ್ತದೆ. ಅದು ನನ್ನ ಕ್ಷೇತ್ರವಲ್ಲ’ ಎಂದು ಹೇಳಿದ್ದೆ. ಇದನ್ನೇ ನೆಪವಾಗಿಟ್ಟುಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ” ಎಂದಿದ್ದರು.

ಇದಕ್ಕೆ ಬಿಳಿಮಲೆಯವರು ತೀಕ್ಷ್ಮಣವಾಗಿ ಪ್ರತಿಕ್ರಿಯಿಸಿದ್ದು, “ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ ಜೋಷಿಯವರು ನನ್ನ ಮೇಲೆ ಮಾಡಿದ ಆರೋಪಗಳನ್ನು ಗಮನಿಸಿದೆ. ಪರಿಷತ್ತಿನ ಕಾರ್ಯ ವಿಧಾನಗಳ ಬಗ್ಗೆ ನಾನು ಅಸಮಾಧಾನ ಸೂಚಿಸಿದ್ದು ನಿಜ. ಹಾವೇರಿ ಸಮ್ಮೇಳನದಲ್ಲಿ ಎಲ್ಲ ವರ್ಗಗಳಿಗೆ ಸರಿಯಾದ ಪ್ರಾತಿನಿಧ್ಯ ದೊರಕಿಲ್ಲ ಎಂಬ ಅನೇಕರ ಮಾತಿಗೆ ನಾನೂ ದನಿಗೂಡಿಸಿದ್ದೇನೆ. ಇದು ಪ್ರಜಾಪ್ರಭುತ್ವ ನನಗೆ ತಂದುಕೊಟ್ಟ ಹಕ್ಕು, ಮತ್ತು ಹೀಗೆ ಬರೆಯುವುದು ನನ್ನ ಕರ್ತವ್ಯ ಎಂದು ನಾನು ನಂಬಿದ್ದೇನೆ. ಇದರ ಹೊರತಾಗಿ ನಾನು ಜೋಷಿಯವರ ಸಹಿತವಾಗಿ ಯಾರ ವೈಯಕ್ತಿಕ ವಿಚಾರಗಳ ಬಗ್ಗೆಯೂ ಬರೆದಿಲ್ಲ. ಅವರು ಹಾವೇರಿ ಸಮ್ಮೇಳನಕ್ಕೆ ನನ್ನನ್ನು ಕರೆದಿದ್ದರು. ನನ್ನದೇ ಕಾರಣಗಳಿಗಾಗಿ ಬರಲಾಗುವುದಿಲ್ಲ ಎಂದು ಹೇಳಿದ್ದೇನೆ. ಅದಕ್ಕೆ ಅವರು ಇಷ್ಟೊಂದು ಆರೋಪಗಳನ್ನು ಮಾಡುವ ಅಗತ್ಯ ಇರಲಿಲ್ಲ” ಎಂದು ತಿಳಿಸಿದ್ದಾರೆ.

ಮುಂದುವರಿದು, “ನಾನು ಮತ್ತು ನನ್ನಂಥ ಹಲವರು ಪರಿಷತ್ತಿನ ಬಗ್ಗೆ ಎತ್ತಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಗೊತ್ತಿಲ್ಲದ ಜೋಷಿಯವರು ವೈಯಕ್ತಿಕವಾಗಿ ಮಾನಹಾನಿಯಾಗುವಂಥ ಮಾತುಗಳನ್ನು ಆಡಿದ್ದಾರೆ. ಈ ಮಾತುಗಳ ಮೂಲಕ ಅವರು ಸಾಹಿತ್ಯ ಪರಿಷತ್ತು ಇವತ್ತು ಎಂಥವರ ಕೈಯಲ್ಲಿದೆ ಎಂಬುದನ್ನು ಮತ್ತೆ ಸಾರ್ವಜನಿಕರಿಗೆ ತಿಳಿಯಪಡಿಸಿದ್ದಾರೆ. ಅವರು ಪೆಂಡಾಲ್‌ ಬಗ್ಗೆ ಹೇಳಿದ ಮಾತುಗಳು ಅತ್ಯಂತ ಹಾಸ್ಯಾಸ್ಪದವಾದದ್ದು. ಅವರದನ್ನು ಸಾಬೀತು ಪಡಿಸಬೇಕು, ಸಾಬೀತು ಪಡಿಸಲಾಗದಿದ್ದರೆ ಪರಿಷತ್ತಿನ ಅಧ್ಯಕ್ಷ ಪೀಠಕ್ಕೆ ಅವರು ಯೋಗ್ಯರಲ್ಲ ಎಂದೇ ಭಾವಿಸಬೇಕಾಗುತ್ತದೆ. ಸಾರ್ವಜನಿಕ ಸಂಘ ಸಂಸ್ಥೆಗಳ ಜವಾಬ್ದಾರಿ ಹೊತ್ತವರು ಲಜ್ಜೆಗೆಟ್ಟು ಯಾವ ನೀಚ ಮಟ್ಟಕ್ಕೆ ಇಳಿಯಬಹುದು ಎಂಬುದಕ್ಕೆ ಮಹೇಶ್‌ ಜೋಷಿಯವರ ಮಾತುಗಳೇ ಸಾಕ್ಷಿ” ಎಂದು ಹೇಳಿದ್ದಾರೆ.

“ಇಂಥದ್ದರ ವಿರುದ್ಧವಾಗಿ ಪ್ರತ್ಯೇಕ ಸಮ್ಮೇಳನಗಳನ್ನು ಸಂಘಟಿಸಿಕೊಳ್ಳಬೇಕಾದ್ದು ಇವತ್ತಿನ ತುರ್ತು ಅಗತ್ಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Sri Purushotham Bilimalai is not an ordinary man like Joshi who came from the background of rss that everyone knows it , while defaming others ,Joshi must keep up gentleman’s decency (unlike politicians)

  2. ಕನ್ನಡ ಸಾಹಿತ್ಯ ಪರಿಷತ್ತು ಮನುವಾದಿಗಳ ಬಾಲಬಡುಕರ ಕೈಸೇರಿರುವುದು, ನಮ್ಮ ದುರಂತ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...