Homeಕರ್ನಾಟಕಕಸಾಪ ಅಧ್ಯಕ್ಷರ ಆರೋಪಕ್ಕೆ ಪ್ರೊ.ಪುರುಷೋತ್ತಮ ಬಿಳಿಮಲೆ ತೀಕ್ಷ್ಣ ಪ್ರತಿಕ್ರಿಯೆ

ಕಸಾಪ ಅಧ್ಯಕ್ಷರ ಆರೋಪಕ್ಕೆ ಪ್ರೊ.ಪುರುಷೋತ್ತಮ ಬಿಳಿಮಲೆ ತೀಕ್ಷ್ಣ ಪ್ರತಿಕ್ರಿಯೆ

- Advertisement -
- Advertisement -

“ನಾನು ಮತ್ತು ನನ್ನಂಥ ಹಲವರು ಪರಿಷತ್ತಿನ ಬಗ್ಗೆ ಎತ್ತಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಗೊತ್ತಿಲ್ಲದ ಜೋಷಿಯವರು ವೈಯಕ್ತಿಕವಾಗಿ ಮಾನಹಾನಿಯಾಗುವಂಥ ಮಾತುಗಳನ್ನು ಆಡಿದ್ದಾರೆ” ಎಂದು ಹಿರಿಯ ವಿದ್ವಾಂಸರಾದ ಪ್ರೊ.ಪುರುಷೋತ್ತಮ ಬಿಳಿಮಲೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಬರಹಗಾರರನ್ನು ಕಡೆಗಣಿಸಿರುವ ಕುರಿತು ಪ್ರಜ್ಞಾವಂತ ಸಾಹಿತ್ಯ ವಲಯ ಬೇಸರ ವ್ಯಕ್ತಪಡಿಸಿದೆ. ಜೊತೆಗೆ ಪ್ರತಿರೋಧಾತ್ಮಕವಾಗಿ ‘ಜನ ಸಾಹಿತ್ಯ ಸಮ್ಮೇಳನ’ ನಡೆಸಲು ನಿರ್ಧರಿಸಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಕಸಾಪ ಅಧ್ಯಕ್ಷರು ಆರೋಪಗಳನ್ನು ಮಾಡಿದ್ದಾರೆ.

ಮುಸ್ಲಿಂ ಬರಹಗಾರರನ್ನು ಹೊರಗಿಟ್ಟಿರುವ ಕುರಿತು ಪ್ರಶ್ನಿಸಿದವರಲ್ಲಿ ಮುಂಚೂಣಿಯಲ್ಲಿರುವ ಪುರುಷೋತ್ತಮ ಬಿಳಿಮಲೆಯವರ ಕುರಿತು ಆರೋಪಗಳನ್ನು ಹೊರಿಸಿರುವ ಮಹೇಶ ಜೋಶಿ, “ಲೇಖಕ ಪುರುಷೋತ್ತಮ ಬಿಳಿಮಲೆ ಅವರು ದೂರವಾಣಿ ಕರೆ ಮಾಡಿ, ‘ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ಪೆಂಡಾಲ್‌ (ಪೆಂಡಾಲ್‌) ಹಾಕಲು ಪರಿಚಿತರಾದ ಮುಸ್ಲಿಂ ವ್ಯಾಪಾರಿಯೊಬ್ಬರಿಗೆ ಕೊಡಿಸಿ’ ಎಂದು ಕೇಳಿದ್ದರು. ಅದಕ್ಕೆ ನಾನು ‘ಅದು ಜಿಲ್ಲಾಡಳಿತದ ವ್ಯಾಪ್ತಿಗೆ ಬರುತ್ತದೆ. ಅದು ನನ್ನ ಕ್ಷೇತ್ರವಲ್ಲ’ ಎಂದು ಹೇಳಿದ್ದೆ. ಇದನ್ನೇ ನೆಪವಾಗಿಟ್ಟುಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ” ಎಂದಿದ್ದರು.

ಇದಕ್ಕೆ ಬಿಳಿಮಲೆಯವರು ತೀಕ್ಷ್ಮಣವಾಗಿ ಪ್ರತಿಕ್ರಿಯಿಸಿದ್ದು, “ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ ಜೋಷಿಯವರು ನನ್ನ ಮೇಲೆ ಮಾಡಿದ ಆರೋಪಗಳನ್ನು ಗಮನಿಸಿದೆ. ಪರಿಷತ್ತಿನ ಕಾರ್ಯ ವಿಧಾನಗಳ ಬಗ್ಗೆ ನಾನು ಅಸಮಾಧಾನ ಸೂಚಿಸಿದ್ದು ನಿಜ. ಹಾವೇರಿ ಸಮ್ಮೇಳನದಲ್ಲಿ ಎಲ್ಲ ವರ್ಗಗಳಿಗೆ ಸರಿಯಾದ ಪ್ರಾತಿನಿಧ್ಯ ದೊರಕಿಲ್ಲ ಎಂಬ ಅನೇಕರ ಮಾತಿಗೆ ನಾನೂ ದನಿಗೂಡಿಸಿದ್ದೇನೆ. ಇದು ಪ್ರಜಾಪ್ರಭುತ್ವ ನನಗೆ ತಂದುಕೊಟ್ಟ ಹಕ್ಕು, ಮತ್ತು ಹೀಗೆ ಬರೆಯುವುದು ನನ್ನ ಕರ್ತವ್ಯ ಎಂದು ನಾನು ನಂಬಿದ್ದೇನೆ. ಇದರ ಹೊರತಾಗಿ ನಾನು ಜೋಷಿಯವರ ಸಹಿತವಾಗಿ ಯಾರ ವೈಯಕ್ತಿಕ ವಿಚಾರಗಳ ಬಗ್ಗೆಯೂ ಬರೆದಿಲ್ಲ. ಅವರು ಹಾವೇರಿ ಸಮ್ಮೇಳನಕ್ಕೆ ನನ್ನನ್ನು ಕರೆದಿದ್ದರು. ನನ್ನದೇ ಕಾರಣಗಳಿಗಾಗಿ ಬರಲಾಗುವುದಿಲ್ಲ ಎಂದು ಹೇಳಿದ್ದೇನೆ. ಅದಕ್ಕೆ ಅವರು ಇಷ್ಟೊಂದು ಆರೋಪಗಳನ್ನು ಮಾಡುವ ಅಗತ್ಯ ಇರಲಿಲ್ಲ” ಎಂದು ತಿಳಿಸಿದ್ದಾರೆ.

ಮುಂದುವರಿದು, “ನಾನು ಮತ್ತು ನನ್ನಂಥ ಹಲವರು ಪರಿಷತ್ತಿನ ಬಗ್ಗೆ ಎತ್ತಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಗೊತ್ತಿಲ್ಲದ ಜೋಷಿಯವರು ವೈಯಕ್ತಿಕವಾಗಿ ಮಾನಹಾನಿಯಾಗುವಂಥ ಮಾತುಗಳನ್ನು ಆಡಿದ್ದಾರೆ. ಈ ಮಾತುಗಳ ಮೂಲಕ ಅವರು ಸಾಹಿತ್ಯ ಪರಿಷತ್ತು ಇವತ್ತು ಎಂಥವರ ಕೈಯಲ್ಲಿದೆ ಎಂಬುದನ್ನು ಮತ್ತೆ ಸಾರ್ವಜನಿಕರಿಗೆ ತಿಳಿಯಪಡಿಸಿದ್ದಾರೆ. ಅವರು ಪೆಂಡಾಲ್‌ ಬಗ್ಗೆ ಹೇಳಿದ ಮಾತುಗಳು ಅತ್ಯಂತ ಹಾಸ್ಯಾಸ್ಪದವಾದದ್ದು. ಅವರದನ್ನು ಸಾಬೀತು ಪಡಿಸಬೇಕು, ಸಾಬೀತು ಪಡಿಸಲಾಗದಿದ್ದರೆ ಪರಿಷತ್ತಿನ ಅಧ್ಯಕ್ಷ ಪೀಠಕ್ಕೆ ಅವರು ಯೋಗ್ಯರಲ್ಲ ಎಂದೇ ಭಾವಿಸಬೇಕಾಗುತ್ತದೆ. ಸಾರ್ವಜನಿಕ ಸಂಘ ಸಂಸ್ಥೆಗಳ ಜವಾಬ್ದಾರಿ ಹೊತ್ತವರು ಲಜ್ಜೆಗೆಟ್ಟು ಯಾವ ನೀಚ ಮಟ್ಟಕ್ಕೆ ಇಳಿಯಬಹುದು ಎಂಬುದಕ್ಕೆ ಮಹೇಶ್‌ ಜೋಷಿಯವರ ಮಾತುಗಳೇ ಸಾಕ್ಷಿ” ಎಂದು ಹೇಳಿದ್ದಾರೆ.

“ಇಂಥದ್ದರ ವಿರುದ್ಧವಾಗಿ ಪ್ರತ್ಯೇಕ ಸಮ್ಮೇಳನಗಳನ್ನು ಸಂಘಟಿಸಿಕೊಳ್ಳಬೇಕಾದ್ದು ಇವತ್ತಿನ ತುರ್ತು ಅಗತ್ಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Sri Purushotham Bilimalai is not an ordinary man like Joshi who came from the background of rss that everyone knows it , while defaming others ,Joshi must keep up gentleman’s decency (unlike politicians)

  2. ಕನ್ನಡ ಸಾಹಿತ್ಯ ಪರಿಷತ್ತು ಮನುವಾದಿಗಳ ಬಾಲಬಡುಕರ ಕೈಸೇರಿರುವುದು, ನಮ್ಮ ದುರಂತ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....