Homeಕರ್ನಾಟಕಕಸಾಪ ಅಧ್ಯಕ್ಷರ ಆರೋಪಕ್ಕೆ ಪ್ರೊ.ಪುರುಷೋತ್ತಮ ಬಿಳಿಮಲೆ ತೀಕ್ಷ್ಣ ಪ್ರತಿಕ್ರಿಯೆ

ಕಸಾಪ ಅಧ್ಯಕ್ಷರ ಆರೋಪಕ್ಕೆ ಪ್ರೊ.ಪುರುಷೋತ್ತಮ ಬಿಳಿಮಲೆ ತೀಕ್ಷ್ಣ ಪ್ರತಿಕ್ರಿಯೆ

- Advertisement -
- Advertisement -

“ನಾನು ಮತ್ತು ನನ್ನಂಥ ಹಲವರು ಪರಿಷತ್ತಿನ ಬಗ್ಗೆ ಎತ್ತಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಗೊತ್ತಿಲ್ಲದ ಜೋಷಿಯವರು ವೈಯಕ್ತಿಕವಾಗಿ ಮಾನಹಾನಿಯಾಗುವಂಥ ಮಾತುಗಳನ್ನು ಆಡಿದ್ದಾರೆ” ಎಂದು ಹಿರಿಯ ವಿದ್ವಾಂಸರಾದ ಪ್ರೊ.ಪುರುಷೋತ್ತಮ ಬಿಳಿಮಲೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಬರಹಗಾರರನ್ನು ಕಡೆಗಣಿಸಿರುವ ಕುರಿತು ಪ್ರಜ್ಞಾವಂತ ಸಾಹಿತ್ಯ ವಲಯ ಬೇಸರ ವ್ಯಕ್ತಪಡಿಸಿದೆ. ಜೊತೆಗೆ ಪ್ರತಿರೋಧಾತ್ಮಕವಾಗಿ ‘ಜನ ಸಾಹಿತ್ಯ ಸಮ್ಮೇಳನ’ ನಡೆಸಲು ನಿರ್ಧರಿಸಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಕಸಾಪ ಅಧ್ಯಕ್ಷರು ಆರೋಪಗಳನ್ನು ಮಾಡಿದ್ದಾರೆ.

ಮುಸ್ಲಿಂ ಬರಹಗಾರರನ್ನು ಹೊರಗಿಟ್ಟಿರುವ ಕುರಿತು ಪ್ರಶ್ನಿಸಿದವರಲ್ಲಿ ಮುಂಚೂಣಿಯಲ್ಲಿರುವ ಪುರುಷೋತ್ತಮ ಬಿಳಿಮಲೆಯವರ ಕುರಿತು ಆರೋಪಗಳನ್ನು ಹೊರಿಸಿರುವ ಮಹೇಶ ಜೋಶಿ, “ಲೇಖಕ ಪುರುಷೋತ್ತಮ ಬಿಳಿಮಲೆ ಅವರು ದೂರವಾಣಿ ಕರೆ ಮಾಡಿ, ‘ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ಪೆಂಡಾಲ್‌ (ಪೆಂಡಾಲ್‌) ಹಾಕಲು ಪರಿಚಿತರಾದ ಮುಸ್ಲಿಂ ವ್ಯಾಪಾರಿಯೊಬ್ಬರಿಗೆ ಕೊಡಿಸಿ’ ಎಂದು ಕೇಳಿದ್ದರು. ಅದಕ್ಕೆ ನಾನು ‘ಅದು ಜಿಲ್ಲಾಡಳಿತದ ವ್ಯಾಪ್ತಿಗೆ ಬರುತ್ತದೆ. ಅದು ನನ್ನ ಕ್ಷೇತ್ರವಲ್ಲ’ ಎಂದು ಹೇಳಿದ್ದೆ. ಇದನ್ನೇ ನೆಪವಾಗಿಟ್ಟುಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ” ಎಂದಿದ್ದರು.

ಇದಕ್ಕೆ ಬಿಳಿಮಲೆಯವರು ತೀಕ್ಷ್ಮಣವಾಗಿ ಪ್ರತಿಕ್ರಿಯಿಸಿದ್ದು, “ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ ಜೋಷಿಯವರು ನನ್ನ ಮೇಲೆ ಮಾಡಿದ ಆರೋಪಗಳನ್ನು ಗಮನಿಸಿದೆ. ಪರಿಷತ್ತಿನ ಕಾರ್ಯ ವಿಧಾನಗಳ ಬಗ್ಗೆ ನಾನು ಅಸಮಾಧಾನ ಸೂಚಿಸಿದ್ದು ನಿಜ. ಹಾವೇರಿ ಸಮ್ಮೇಳನದಲ್ಲಿ ಎಲ್ಲ ವರ್ಗಗಳಿಗೆ ಸರಿಯಾದ ಪ್ರಾತಿನಿಧ್ಯ ದೊರಕಿಲ್ಲ ಎಂಬ ಅನೇಕರ ಮಾತಿಗೆ ನಾನೂ ದನಿಗೂಡಿಸಿದ್ದೇನೆ. ಇದು ಪ್ರಜಾಪ್ರಭುತ್ವ ನನಗೆ ತಂದುಕೊಟ್ಟ ಹಕ್ಕು, ಮತ್ತು ಹೀಗೆ ಬರೆಯುವುದು ನನ್ನ ಕರ್ತವ್ಯ ಎಂದು ನಾನು ನಂಬಿದ್ದೇನೆ. ಇದರ ಹೊರತಾಗಿ ನಾನು ಜೋಷಿಯವರ ಸಹಿತವಾಗಿ ಯಾರ ವೈಯಕ್ತಿಕ ವಿಚಾರಗಳ ಬಗ್ಗೆಯೂ ಬರೆದಿಲ್ಲ. ಅವರು ಹಾವೇರಿ ಸಮ್ಮೇಳನಕ್ಕೆ ನನ್ನನ್ನು ಕರೆದಿದ್ದರು. ನನ್ನದೇ ಕಾರಣಗಳಿಗಾಗಿ ಬರಲಾಗುವುದಿಲ್ಲ ಎಂದು ಹೇಳಿದ್ದೇನೆ. ಅದಕ್ಕೆ ಅವರು ಇಷ್ಟೊಂದು ಆರೋಪಗಳನ್ನು ಮಾಡುವ ಅಗತ್ಯ ಇರಲಿಲ್ಲ” ಎಂದು ತಿಳಿಸಿದ್ದಾರೆ.

ಮುಂದುವರಿದು, “ನಾನು ಮತ್ತು ನನ್ನಂಥ ಹಲವರು ಪರಿಷತ್ತಿನ ಬಗ್ಗೆ ಎತ್ತಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಗೊತ್ತಿಲ್ಲದ ಜೋಷಿಯವರು ವೈಯಕ್ತಿಕವಾಗಿ ಮಾನಹಾನಿಯಾಗುವಂಥ ಮಾತುಗಳನ್ನು ಆಡಿದ್ದಾರೆ. ಈ ಮಾತುಗಳ ಮೂಲಕ ಅವರು ಸಾಹಿತ್ಯ ಪರಿಷತ್ತು ಇವತ್ತು ಎಂಥವರ ಕೈಯಲ್ಲಿದೆ ಎಂಬುದನ್ನು ಮತ್ತೆ ಸಾರ್ವಜನಿಕರಿಗೆ ತಿಳಿಯಪಡಿಸಿದ್ದಾರೆ. ಅವರು ಪೆಂಡಾಲ್‌ ಬಗ್ಗೆ ಹೇಳಿದ ಮಾತುಗಳು ಅತ್ಯಂತ ಹಾಸ್ಯಾಸ್ಪದವಾದದ್ದು. ಅವರದನ್ನು ಸಾಬೀತು ಪಡಿಸಬೇಕು, ಸಾಬೀತು ಪಡಿಸಲಾಗದಿದ್ದರೆ ಪರಿಷತ್ತಿನ ಅಧ್ಯಕ್ಷ ಪೀಠಕ್ಕೆ ಅವರು ಯೋಗ್ಯರಲ್ಲ ಎಂದೇ ಭಾವಿಸಬೇಕಾಗುತ್ತದೆ. ಸಾರ್ವಜನಿಕ ಸಂಘ ಸಂಸ್ಥೆಗಳ ಜವಾಬ್ದಾರಿ ಹೊತ್ತವರು ಲಜ್ಜೆಗೆಟ್ಟು ಯಾವ ನೀಚ ಮಟ್ಟಕ್ಕೆ ಇಳಿಯಬಹುದು ಎಂಬುದಕ್ಕೆ ಮಹೇಶ್‌ ಜೋಷಿಯವರ ಮಾತುಗಳೇ ಸಾಕ್ಷಿ” ಎಂದು ಹೇಳಿದ್ದಾರೆ.

“ಇಂಥದ್ದರ ವಿರುದ್ಧವಾಗಿ ಪ್ರತ್ಯೇಕ ಸಮ್ಮೇಳನಗಳನ್ನು ಸಂಘಟಿಸಿಕೊಳ್ಳಬೇಕಾದ್ದು ಇವತ್ತಿನ ತುರ್ತು ಅಗತ್ಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Sri Purushotham Bilimalai is not an ordinary man like Joshi who came from the background of rss that everyone knows it , while defaming others ,Joshi must keep up gentleman’s decency (unlike politicians)

  2. ಕನ್ನಡ ಸಾಹಿತ್ಯ ಪರಿಷತ್ತು ಮನುವಾದಿಗಳ ಬಾಲಬಡುಕರ ಕೈಸೇರಿರುವುದು, ನಮ್ಮ ದುರಂತ.

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...