Homeಕರ್ನಾಟಕಕಸಾಪ ಅಧ್ಯಕ್ಷರ ಆರೋಪಕ್ಕೆ ಪ್ರೊ.ಪುರುಷೋತ್ತಮ ಬಿಳಿಮಲೆ ತೀಕ್ಷ್ಣ ಪ್ರತಿಕ್ರಿಯೆ

ಕಸಾಪ ಅಧ್ಯಕ್ಷರ ಆರೋಪಕ್ಕೆ ಪ್ರೊ.ಪುರುಷೋತ್ತಮ ಬಿಳಿಮಲೆ ತೀಕ್ಷ್ಣ ಪ್ರತಿಕ್ರಿಯೆ

- Advertisement -
- Advertisement -

“ನಾನು ಮತ್ತು ನನ್ನಂಥ ಹಲವರು ಪರಿಷತ್ತಿನ ಬಗ್ಗೆ ಎತ್ತಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಗೊತ್ತಿಲ್ಲದ ಜೋಷಿಯವರು ವೈಯಕ್ತಿಕವಾಗಿ ಮಾನಹಾನಿಯಾಗುವಂಥ ಮಾತುಗಳನ್ನು ಆಡಿದ್ದಾರೆ” ಎಂದು ಹಿರಿಯ ವಿದ್ವಾಂಸರಾದ ಪ್ರೊ.ಪುರುಷೋತ್ತಮ ಬಿಳಿಮಲೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಬರಹಗಾರರನ್ನು ಕಡೆಗಣಿಸಿರುವ ಕುರಿತು ಪ್ರಜ್ಞಾವಂತ ಸಾಹಿತ್ಯ ವಲಯ ಬೇಸರ ವ್ಯಕ್ತಪಡಿಸಿದೆ. ಜೊತೆಗೆ ಪ್ರತಿರೋಧಾತ್ಮಕವಾಗಿ ‘ಜನ ಸಾಹಿತ್ಯ ಸಮ್ಮೇಳನ’ ನಡೆಸಲು ನಿರ್ಧರಿಸಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಕಸಾಪ ಅಧ್ಯಕ್ಷರು ಆರೋಪಗಳನ್ನು ಮಾಡಿದ್ದಾರೆ.

ಮುಸ್ಲಿಂ ಬರಹಗಾರರನ್ನು ಹೊರಗಿಟ್ಟಿರುವ ಕುರಿತು ಪ್ರಶ್ನಿಸಿದವರಲ್ಲಿ ಮುಂಚೂಣಿಯಲ್ಲಿರುವ ಪುರುಷೋತ್ತಮ ಬಿಳಿಮಲೆಯವರ ಕುರಿತು ಆರೋಪಗಳನ್ನು ಹೊರಿಸಿರುವ ಮಹೇಶ ಜೋಶಿ, “ಲೇಖಕ ಪುರುಷೋತ್ತಮ ಬಿಳಿಮಲೆ ಅವರು ದೂರವಾಣಿ ಕರೆ ಮಾಡಿ, ‘ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ಪೆಂಡಾಲ್‌ (ಪೆಂಡಾಲ್‌) ಹಾಕಲು ಪರಿಚಿತರಾದ ಮುಸ್ಲಿಂ ವ್ಯಾಪಾರಿಯೊಬ್ಬರಿಗೆ ಕೊಡಿಸಿ’ ಎಂದು ಕೇಳಿದ್ದರು. ಅದಕ್ಕೆ ನಾನು ‘ಅದು ಜಿಲ್ಲಾಡಳಿತದ ವ್ಯಾಪ್ತಿಗೆ ಬರುತ್ತದೆ. ಅದು ನನ್ನ ಕ್ಷೇತ್ರವಲ್ಲ’ ಎಂದು ಹೇಳಿದ್ದೆ. ಇದನ್ನೇ ನೆಪವಾಗಿಟ್ಟುಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ” ಎಂದಿದ್ದರು.

ಇದಕ್ಕೆ ಬಿಳಿಮಲೆಯವರು ತೀಕ್ಷ್ಮಣವಾಗಿ ಪ್ರತಿಕ್ರಿಯಿಸಿದ್ದು, “ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ ಜೋಷಿಯವರು ನನ್ನ ಮೇಲೆ ಮಾಡಿದ ಆರೋಪಗಳನ್ನು ಗಮನಿಸಿದೆ. ಪರಿಷತ್ತಿನ ಕಾರ್ಯ ವಿಧಾನಗಳ ಬಗ್ಗೆ ನಾನು ಅಸಮಾಧಾನ ಸೂಚಿಸಿದ್ದು ನಿಜ. ಹಾವೇರಿ ಸಮ್ಮೇಳನದಲ್ಲಿ ಎಲ್ಲ ವರ್ಗಗಳಿಗೆ ಸರಿಯಾದ ಪ್ರಾತಿನಿಧ್ಯ ದೊರಕಿಲ್ಲ ಎಂಬ ಅನೇಕರ ಮಾತಿಗೆ ನಾನೂ ದನಿಗೂಡಿಸಿದ್ದೇನೆ. ಇದು ಪ್ರಜಾಪ್ರಭುತ್ವ ನನಗೆ ತಂದುಕೊಟ್ಟ ಹಕ್ಕು, ಮತ್ತು ಹೀಗೆ ಬರೆಯುವುದು ನನ್ನ ಕರ್ತವ್ಯ ಎಂದು ನಾನು ನಂಬಿದ್ದೇನೆ. ಇದರ ಹೊರತಾಗಿ ನಾನು ಜೋಷಿಯವರ ಸಹಿತವಾಗಿ ಯಾರ ವೈಯಕ್ತಿಕ ವಿಚಾರಗಳ ಬಗ್ಗೆಯೂ ಬರೆದಿಲ್ಲ. ಅವರು ಹಾವೇರಿ ಸಮ್ಮೇಳನಕ್ಕೆ ನನ್ನನ್ನು ಕರೆದಿದ್ದರು. ನನ್ನದೇ ಕಾರಣಗಳಿಗಾಗಿ ಬರಲಾಗುವುದಿಲ್ಲ ಎಂದು ಹೇಳಿದ್ದೇನೆ. ಅದಕ್ಕೆ ಅವರು ಇಷ್ಟೊಂದು ಆರೋಪಗಳನ್ನು ಮಾಡುವ ಅಗತ್ಯ ಇರಲಿಲ್ಲ” ಎಂದು ತಿಳಿಸಿದ್ದಾರೆ.

ಮುಂದುವರಿದು, “ನಾನು ಮತ್ತು ನನ್ನಂಥ ಹಲವರು ಪರಿಷತ್ತಿನ ಬಗ್ಗೆ ಎತ್ತಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಗೊತ್ತಿಲ್ಲದ ಜೋಷಿಯವರು ವೈಯಕ್ತಿಕವಾಗಿ ಮಾನಹಾನಿಯಾಗುವಂಥ ಮಾತುಗಳನ್ನು ಆಡಿದ್ದಾರೆ. ಈ ಮಾತುಗಳ ಮೂಲಕ ಅವರು ಸಾಹಿತ್ಯ ಪರಿಷತ್ತು ಇವತ್ತು ಎಂಥವರ ಕೈಯಲ್ಲಿದೆ ಎಂಬುದನ್ನು ಮತ್ತೆ ಸಾರ್ವಜನಿಕರಿಗೆ ತಿಳಿಯಪಡಿಸಿದ್ದಾರೆ. ಅವರು ಪೆಂಡಾಲ್‌ ಬಗ್ಗೆ ಹೇಳಿದ ಮಾತುಗಳು ಅತ್ಯಂತ ಹಾಸ್ಯಾಸ್ಪದವಾದದ್ದು. ಅವರದನ್ನು ಸಾಬೀತು ಪಡಿಸಬೇಕು, ಸಾಬೀತು ಪಡಿಸಲಾಗದಿದ್ದರೆ ಪರಿಷತ್ತಿನ ಅಧ್ಯಕ್ಷ ಪೀಠಕ್ಕೆ ಅವರು ಯೋಗ್ಯರಲ್ಲ ಎಂದೇ ಭಾವಿಸಬೇಕಾಗುತ್ತದೆ. ಸಾರ್ವಜನಿಕ ಸಂಘ ಸಂಸ್ಥೆಗಳ ಜವಾಬ್ದಾರಿ ಹೊತ್ತವರು ಲಜ್ಜೆಗೆಟ್ಟು ಯಾವ ನೀಚ ಮಟ್ಟಕ್ಕೆ ಇಳಿಯಬಹುದು ಎಂಬುದಕ್ಕೆ ಮಹೇಶ್‌ ಜೋಷಿಯವರ ಮಾತುಗಳೇ ಸಾಕ್ಷಿ” ಎಂದು ಹೇಳಿದ್ದಾರೆ.

“ಇಂಥದ್ದರ ವಿರುದ್ಧವಾಗಿ ಪ್ರತ್ಯೇಕ ಸಮ್ಮೇಳನಗಳನ್ನು ಸಂಘಟಿಸಿಕೊಳ್ಳಬೇಕಾದ್ದು ಇವತ್ತಿನ ತುರ್ತು ಅಗತ್ಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Sri Purushotham Bilimalai is not an ordinary man like Joshi who came from the background of rss that everyone knows it , while defaming others ,Joshi must keep up gentleman’s decency (unlike politicians)

  2. ಕನ್ನಡ ಸಾಹಿತ್ಯ ಪರಿಷತ್ತು ಮನುವಾದಿಗಳ ಬಾಲಬಡುಕರ ಕೈಸೇರಿರುವುದು, ನಮ್ಮ ದುರಂತ.

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...