Homeಕರ್ನಾಟಕಕಸಾಪ ಅಧ್ಯಕ್ಷರ ಆರೋಪಕ್ಕೆ ಪ್ರೊ.ಪುರುಷೋತ್ತಮ ಬಿಳಿಮಲೆ ತೀಕ್ಷ್ಣ ಪ್ರತಿಕ್ರಿಯೆ

ಕಸಾಪ ಅಧ್ಯಕ್ಷರ ಆರೋಪಕ್ಕೆ ಪ್ರೊ.ಪುರುಷೋತ್ತಮ ಬಿಳಿಮಲೆ ತೀಕ್ಷ್ಣ ಪ್ರತಿಕ್ರಿಯೆ

- Advertisement -
- Advertisement -

“ನಾನು ಮತ್ತು ನನ್ನಂಥ ಹಲವರು ಪರಿಷತ್ತಿನ ಬಗ್ಗೆ ಎತ್ತಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಗೊತ್ತಿಲ್ಲದ ಜೋಷಿಯವರು ವೈಯಕ್ತಿಕವಾಗಿ ಮಾನಹಾನಿಯಾಗುವಂಥ ಮಾತುಗಳನ್ನು ಆಡಿದ್ದಾರೆ” ಎಂದು ಹಿರಿಯ ವಿದ್ವಾಂಸರಾದ ಪ್ರೊ.ಪುರುಷೋತ್ತಮ ಬಿಳಿಮಲೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಬರಹಗಾರರನ್ನು ಕಡೆಗಣಿಸಿರುವ ಕುರಿತು ಪ್ರಜ್ಞಾವಂತ ಸಾಹಿತ್ಯ ವಲಯ ಬೇಸರ ವ್ಯಕ್ತಪಡಿಸಿದೆ. ಜೊತೆಗೆ ಪ್ರತಿರೋಧಾತ್ಮಕವಾಗಿ ‘ಜನ ಸಾಹಿತ್ಯ ಸಮ್ಮೇಳನ’ ನಡೆಸಲು ನಿರ್ಧರಿಸಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಕಸಾಪ ಅಧ್ಯಕ್ಷರು ಆರೋಪಗಳನ್ನು ಮಾಡಿದ್ದಾರೆ.

ಮುಸ್ಲಿಂ ಬರಹಗಾರರನ್ನು ಹೊರಗಿಟ್ಟಿರುವ ಕುರಿತು ಪ್ರಶ್ನಿಸಿದವರಲ್ಲಿ ಮುಂಚೂಣಿಯಲ್ಲಿರುವ ಪುರುಷೋತ್ತಮ ಬಿಳಿಮಲೆಯವರ ಕುರಿತು ಆರೋಪಗಳನ್ನು ಹೊರಿಸಿರುವ ಮಹೇಶ ಜೋಶಿ, “ಲೇಖಕ ಪುರುಷೋತ್ತಮ ಬಿಳಿಮಲೆ ಅವರು ದೂರವಾಣಿ ಕರೆ ಮಾಡಿ, ‘ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ಪೆಂಡಾಲ್‌ (ಪೆಂಡಾಲ್‌) ಹಾಕಲು ಪರಿಚಿತರಾದ ಮುಸ್ಲಿಂ ವ್ಯಾಪಾರಿಯೊಬ್ಬರಿಗೆ ಕೊಡಿಸಿ’ ಎಂದು ಕೇಳಿದ್ದರು. ಅದಕ್ಕೆ ನಾನು ‘ಅದು ಜಿಲ್ಲಾಡಳಿತದ ವ್ಯಾಪ್ತಿಗೆ ಬರುತ್ತದೆ. ಅದು ನನ್ನ ಕ್ಷೇತ್ರವಲ್ಲ’ ಎಂದು ಹೇಳಿದ್ದೆ. ಇದನ್ನೇ ನೆಪವಾಗಿಟ್ಟುಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ” ಎಂದಿದ್ದರು.

ಇದಕ್ಕೆ ಬಿಳಿಮಲೆಯವರು ತೀಕ್ಷ್ಮಣವಾಗಿ ಪ್ರತಿಕ್ರಿಯಿಸಿದ್ದು, “ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ ಜೋಷಿಯವರು ನನ್ನ ಮೇಲೆ ಮಾಡಿದ ಆರೋಪಗಳನ್ನು ಗಮನಿಸಿದೆ. ಪರಿಷತ್ತಿನ ಕಾರ್ಯ ವಿಧಾನಗಳ ಬಗ್ಗೆ ನಾನು ಅಸಮಾಧಾನ ಸೂಚಿಸಿದ್ದು ನಿಜ. ಹಾವೇರಿ ಸಮ್ಮೇಳನದಲ್ಲಿ ಎಲ್ಲ ವರ್ಗಗಳಿಗೆ ಸರಿಯಾದ ಪ್ರಾತಿನಿಧ್ಯ ದೊರಕಿಲ್ಲ ಎಂಬ ಅನೇಕರ ಮಾತಿಗೆ ನಾನೂ ದನಿಗೂಡಿಸಿದ್ದೇನೆ. ಇದು ಪ್ರಜಾಪ್ರಭುತ್ವ ನನಗೆ ತಂದುಕೊಟ್ಟ ಹಕ್ಕು, ಮತ್ತು ಹೀಗೆ ಬರೆಯುವುದು ನನ್ನ ಕರ್ತವ್ಯ ಎಂದು ನಾನು ನಂಬಿದ್ದೇನೆ. ಇದರ ಹೊರತಾಗಿ ನಾನು ಜೋಷಿಯವರ ಸಹಿತವಾಗಿ ಯಾರ ವೈಯಕ್ತಿಕ ವಿಚಾರಗಳ ಬಗ್ಗೆಯೂ ಬರೆದಿಲ್ಲ. ಅವರು ಹಾವೇರಿ ಸಮ್ಮೇಳನಕ್ಕೆ ನನ್ನನ್ನು ಕರೆದಿದ್ದರು. ನನ್ನದೇ ಕಾರಣಗಳಿಗಾಗಿ ಬರಲಾಗುವುದಿಲ್ಲ ಎಂದು ಹೇಳಿದ್ದೇನೆ. ಅದಕ್ಕೆ ಅವರು ಇಷ್ಟೊಂದು ಆರೋಪಗಳನ್ನು ಮಾಡುವ ಅಗತ್ಯ ಇರಲಿಲ್ಲ” ಎಂದು ತಿಳಿಸಿದ್ದಾರೆ.

ಮುಂದುವರಿದು, “ನಾನು ಮತ್ತು ನನ್ನಂಥ ಹಲವರು ಪರಿಷತ್ತಿನ ಬಗ್ಗೆ ಎತ್ತಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಗೊತ್ತಿಲ್ಲದ ಜೋಷಿಯವರು ವೈಯಕ್ತಿಕವಾಗಿ ಮಾನಹಾನಿಯಾಗುವಂಥ ಮಾತುಗಳನ್ನು ಆಡಿದ್ದಾರೆ. ಈ ಮಾತುಗಳ ಮೂಲಕ ಅವರು ಸಾಹಿತ್ಯ ಪರಿಷತ್ತು ಇವತ್ತು ಎಂಥವರ ಕೈಯಲ್ಲಿದೆ ಎಂಬುದನ್ನು ಮತ್ತೆ ಸಾರ್ವಜನಿಕರಿಗೆ ತಿಳಿಯಪಡಿಸಿದ್ದಾರೆ. ಅವರು ಪೆಂಡಾಲ್‌ ಬಗ್ಗೆ ಹೇಳಿದ ಮಾತುಗಳು ಅತ್ಯಂತ ಹಾಸ್ಯಾಸ್ಪದವಾದದ್ದು. ಅವರದನ್ನು ಸಾಬೀತು ಪಡಿಸಬೇಕು, ಸಾಬೀತು ಪಡಿಸಲಾಗದಿದ್ದರೆ ಪರಿಷತ್ತಿನ ಅಧ್ಯಕ್ಷ ಪೀಠಕ್ಕೆ ಅವರು ಯೋಗ್ಯರಲ್ಲ ಎಂದೇ ಭಾವಿಸಬೇಕಾಗುತ್ತದೆ. ಸಾರ್ವಜನಿಕ ಸಂಘ ಸಂಸ್ಥೆಗಳ ಜವಾಬ್ದಾರಿ ಹೊತ್ತವರು ಲಜ್ಜೆಗೆಟ್ಟು ಯಾವ ನೀಚ ಮಟ್ಟಕ್ಕೆ ಇಳಿಯಬಹುದು ಎಂಬುದಕ್ಕೆ ಮಹೇಶ್‌ ಜೋಷಿಯವರ ಮಾತುಗಳೇ ಸಾಕ್ಷಿ” ಎಂದು ಹೇಳಿದ್ದಾರೆ.

“ಇಂಥದ್ದರ ವಿರುದ್ಧವಾಗಿ ಪ್ರತ್ಯೇಕ ಸಮ್ಮೇಳನಗಳನ್ನು ಸಂಘಟಿಸಿಕೊಳ್ಳಬೇಕಾದ್ದು ಇವತ್ತಿನ ತುರ್ತು ಅಗತ್ಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Sri Purushotham Bilimalai is not an ordinary man like Joshi who came from the background of rss that everyone knows it , while defaming others ,Joshi must keep up gentleman’s decency (unlike politicians)

  2. ಕನ್ನಡ ಸಾಹಿತ್ಯ ಪರಿಷತ್ತು ಮನುವಾದಿಗಳ ಬಾಲಬಡುಕರ ಕೈಸೇರಿರುವುದು, ನಮ್ಮ ದುರಂತ.

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...