Homeಮುಖಪುಟಗಾಂಧಿ ಹಂತಕ ಗೋಡ್ಸೆಯನ್ನು ಹೊಗಳಿದ್ದ ಪ್ರಾಧ್ಯಾಪಕಿಗೆ ಎನ್‌ಐಟಿ ಡೀನ್‌ ಆಗಿ ಭಡ್ತಿ : ತೀವ್ರ ವಿರೋಧ

ಗಾಂಧಿ ಹಂತಕ ಗೋಡ್ಸೆಯನ್ನು ಹೊಗಳಿದ್ದ ಪ್ರಾಧ್ಯಾಪಕಿಗೆ ಎನ್‌ಐಟಿ ಡೀನ್‌ ಆಗಿ ಭಡ್ತಿ : ತೀವ್ರ ವಿರೋಧ

- Advertisement -
- Advertisement -

ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಹೊಗಳಿ, ಕಳೆದ ವರ್ಷ ಪೊಲೀಸ್ ಪ್ರಕರಣದಲ್ಲಿ ಸಿಲುಕಿದ್ದ ವಿವಾದಿತ ಪ್ರೊಫೆಸರ್ ಶೈಜಾ ಆಂಡವನ್ ಅವರನ್ನು ಯೋಜನೆ ಮತ್ತು ಅಭಿವೃದ್ಧಿ ವಿಭಾಗದ ಡೀನ್ ಆಗಿ ಕ್ಯಾಲಿಕಟ್ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿ) ಭಡ್ತಿ ನೀಡಿದೆ. ಇದು ಭಾರೀ ವಿರೋಧಕ್ಕೆ ಕಾರಣವಾಗಿದೆ.

ಪ್ರೊ. ಶೈಜಾ ಡೀನ್ ಆಗಿ ನೇಮಿಸಿ ಫೆಬ್ರವರಿ 24 ರಂದು ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತು ಮಾತನಾಡಿರುವ ಅವರು, “ನನ್ನ ನೇಮಕ ಎನ್‌ಐಟಿ ಕ್ಯಾಲಿಕಟ್‌ನ ನಿರ್ದೇಶಕರು ತೆಗೆದುಕೊಂಡ ನಿರ್ಧಾರ” ಎಂದು ಹೇಳಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಕಳೆದ ವರ್ಷದ ಜನವರಿ 30ರ ಮಹಾತ್ಮ ಗಾಂಧಿಯವರ ಪುಣ್ಯಸ್ಮರಣೆಯಂದು ಹಿಂದುತ್ವ ರಾಜಕೀಯಕ್ಕೆ ಹೆಸರುವಾಸಿಯಾದ ವಕೀಲ ಕೃಷ್ಣ ರಾಜ್ ಹಾಕಿದ್ದ ಪೋಸ್ಟ್‌ ಒಂದಕ್ಕೆ “ಭಾರತವನ್ನು ಉಳಿಸಿದ್ದಕ್ಕಾಗಿ ಗೋಡ್ಸೆಯ ಬಗ್ಗೆ ಹೆಮ್ಮೆಯಿದೆ” ಎಂದು ಪ್ರೊ. ಶೈಜಾ ಕಾಮೆಂಟ್ ಮಾಡಿದ್ದರು. ಆಗ ಅವರು, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರಾಧ್ಯಾಪಕರಾಗಿದ್ದರು.

ವ್ಯಾಪಕ ವಿರೋಧ ವ್ಯಕ್ತವಾದ ನಂತರ ಶೈಜಾ ಅವರು ಆ ಕಾಮೆಂಟ್ ಅನ್ನು ಡಿಲಿಟ್ ಮಾಡಿದ್ದರು. ಆದರೆ, ಕುನ್ನಮಂಗಲಂ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಶೈಜಾ ನಂತರ ಜಾಮೀನು ಪಡೆದರು. ವಿವಾದಿತ ಕಾಮೆಂಟ್ ಕುರಿತು ತನಿಖೆ ನಡೆಸಲು ಎನ್‌ಐಟಿ ಒಂದು ಸಮಿತಿಯನ್ನು ರಚಿಸಿತ್ತು ಮತ್ತು ಆ ಸಮಿತಿಯ ವರದಿಯ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.

ಫೆಬ್ರವರಿ 2024 ರಂದು ದಿ ನ್ಯೂಸ್ ಮಿನಿಟ್‌ ಸುದ್ದಿ ಸಂಸ್ಥೆ ಜೊತೆ ಮಾತನಾಡಿದ್ದ ಪ್ರೊ. ಶೈಜಾ “ನಾನು ಮೊದಲು ಕಾಮೆಂಟ್ ಮಾಡಿದಾಗ ಅದರ ಬಗ್ಗೆ ಹೆಚ್ಚು ಯೋಚಿಸಿರಲಿಲ್ಲ. ನಾನು ‘ವೈ ಐ ಕಿಲ್ಡ್ ಗಾಂಧಿ’ ಪುಸ್ತಕವನ್ನು ಓದಿದ್ದೆ ಮತ್ತು ಅದರಲ್ಲಿ ಉಲ್ಲೇಖಿಸಲಾದ ಕೆಲವು ಅಂಶಗಳು ನಿಜವೆಂದು ಭಾವಿಸಿದ್ದೆ. ಆದ್ದರಿಂದ ನಾನು ಕಾಮೆಂಟ್ ಮಾಡಿದ್ದೆ. ಆದರೆ, ಈಗ, ನಾನು ಆ ಕಾಮೆಂಟ್ ಮಾಡಬಾರದಿತ್ತು ಎಂದು ಅನಿಸಿತು. ಹಾಗಾಗಿ, ಅದನ್ನು ಡಿಲಿಟ್ ಮಾಡಿದೆ” ಎಂದು ಹೇಳಿದ್ದರು.

ಶೈಜಾ ಅವರನ್ನು ಡೀನ್ ಆಗಿ ಭಡ್ತಿ ನೀಡಿ ನೇಮಕ ಮಾಡಿರುವುದನ್ನು ಹಿಂಪಡೆಯುವಂತೆ ಒತ್ತಾಯಿಸಿ ಎನ್‌ಐಟಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ. “ಕೇಂದ್ರ ಸರ್ಕಾರದ ಅಡಿಯಲ್ಲಿರುವ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಕಾರ್ಯಸೂಚಿಯನ್ನು ಜಾರಿಗೊಳಿಸಲಾಗುತ್ತಿದೆ ಎಂಬುವುದನ್ನು ಶೈಜಾ ಅವರ ನೇಮಕಾತಿ ತೋರಿಸುತ್ತದೆ. ಗಾಂಧೀಜಿಯನ್ನು ಅವಮಾನಿಸಿದ ಪ್ರಾಧ್ಯಾಪಕಿಗೆ ಬಡ್ತಿ ನೀಡಲಾಗಿದೆ. ಅವರ ನೇಮಕಾತಿ ಹಿಂಪಡೆಯುವವರೆಗೆ ನಾವು ಹೋರಾಟ ನಡೆಸುತ್ತೇವೆ” ಎಂದು ಕಾಂಗ್ರೆಸ್ ಕೋಝಿಕ್ಕೋಡ್ ಜಿಲ್ಲಾ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಹೇಳಿದ್ದಾರೆ.

ಜಗ್ಗಿ ವಾಸುದೇವ್ ನೇತೃತ್ವದ ಶಿವರಾತ್ರಿಯಲ್ಲಿ ಪಾಲ್ಗೊಂಡ ಡಿಕೆಶಿ : ಕಾಂಗ್ರೆಸ್ ನಾಯಕರು, ಪ್ರಗತಿಪರರಿಂದ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...