Homeಮುಖಪುಟಪ್ಯಾಲೆಸ್ತೀನ್ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ಗುರುಗ್ರಾಮ್ ವಿಶ್ವವಿದ್ಯಾನಿಲಯ

ಪ್ಯಾಲೆಸ್ತೀನ್ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ಗುರುಗ್ರಾಮ್ ವಿಶ್ವವಿದ್ಯಾನಿಲಯ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಪ್ರೊಫೆಸರ್ ಜೋಯಾ ಹಸನ್ ಅವರು ಪ್ಯಾಲೆಸ್ತೀನ್ ಸಂಘರ್ಷದ ಕುರಿತು ನಡೆಸಬೇಕಿದ್ದ ಭಾಷಣವನ್ನು ಗುರುಗ್ರಾಮ್ ವಿಶ್ವವಿದ್ಯಾಲಯವು ಇತ್ತೀಚೆಗೆ ರದ್ದುಗೊಳಿಸಿದೆ ಎಂದು ದಿ ವೈರ್ ಬುಧವಾರ ವರದಿ ಮಾಡಿದೆ. “ಸಮಾನ ಹಕ್ಕುಗಳಿಗಾಗಿ ಪ್ಯಾಲೆಸ್ಟೀನಿಯನ್ ಹೋರಾಟ: ಭಾರತ ಮತ್ತು ಜಾಗತಿಕ ಪ್ರತಿಕ್ರಿಯೆ” ಎಂಬ ಶೀರ್ಷಿಕೆಯಡಿಯಲ್ಲಿ, ನವೆಂಬರ್ 12 ರಂದು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗವು ಈ ಭಾಷಣವನ್ನು ಆಯೋಜಿಸಿತ್ತು.

ನವೆಂಬರ್ 10 ರಂದು ಸಂಘಟಕರು ಜೋಯಾ ಅವರಿಗೆ ಕರೆ ಮಾಡಿದ್ದು, ಕಾರ್ಯಕ್ರಮ ರದ್ದು ಮಾಡಲಾಗಿರುವ ಬಗ್ಗೆ ತಿಳಿಸಲಾಗಿತ್ತು. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ವಿಶ್ವವಿದ್ಯಾನಿಲಯದ ಉಪಕುಲಪತಿ ದಿನೇಶ್ ಕುಮಾರ್, ಆಹ್ವಾನ ಪತ್ರಿಕೆಯಲ್ಲಿ ತನ್ನನ್ನು “ಮುಖ್ಯ ಪೋಷಕ” ಎಂದು ವಿವರಿಸಲಾಗಿತ್ತಾದರೂ, ಈ ಕಾರ್ಯಕ್ರಮಕ್ಕೆ ಅವರ ಅನುಮೋದನೆಯನ್ನು ಕೋರಲಾಗಿರಲಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಿಶ್ವವಿದ್ಯಾನಿಲಯದ ಶಿಕ್ಷಕರೊಬ್ಬರು ಚರ್ಚೆಯನ್ನು ಏರ್ಪಡಿಸಿದ್ದರು. ಅಂದು ನಾನು ಕ್ಯಾಂಪಸ್‌ನಲ್ಲಿ ಇರಲಿಲ್ಲವಾದ್ದರಿಂದ ಇದು ನನಗೆ ತಿಳಿದಿರಲಿಲ್ಲ. ಆದರೆ ಭಾಷಣದ ವಿಷಯವು ವಿವಾದಾಸ್ಪದವಾಗಿರುವುದರಿಂದ ನಾವು ಅದನ್ನು ನಂತರ ರದ್ದುಗೊಳಿಸಿದ್ದೇವೆ.” ಎಂದು ಅವರು ತಿಳಿಸಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಆಗಿರುವ ಜೋಯಾ ಅವರು ಪ್ಯಾಲೆಸ್ತೀನ್ ಸಂಘರ್ಷದ ಕುರಿತು ಪತ್ರಿಕೆಯಲ್ಲಿ ಬರೆದ ಬರಹದ ನಂತರ ಗುರುಗ್ರಾಲ್‌ ಯುನಿವರ್ಸಿಟಿಯ ರಾಜ್ಯಶಾಸ್ತ್ರ ವಿಭಾಗವು ತನ್ನನ್ನು ಸಂಪರ್ಕಿಸಿತ್ತು ಎಂದು ಹೇಳಿದ್ದಾರೆ.

“ಪ್ಯಾಲೆಸ್ತೀನ್ ಸಂಘರ್ಷಕ್ಕೆ ಭಾರತದ ಪ್ರತಿಕ್ರಿಯೆಯ ಕುರಿತು ಸರ್ಕಾರ ಮತ್ತು ಸರ್ಕಾರೇತರ ಮಟ್ಟದಲ್ಲಿ ಈ ಚರ್ಚೆಯನ್ನು ನಡೆಸುವುದು ಬಹಳ ಮುಖ್ಯ ಎಂದು ಅವರು ನನಗೆ ಹೇಳಿದ್ದರು. ಹಾಗಾಗಿ ನಾನು ಅದಕ್ಕೆ ತಕ್ಷಣ ಒಪ್ಪಿಕೊಂಡೆ” ಎಂದು ಜೋಯಾ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

“ಉಪನ್ಯಾಸ ಶೀರ್ಷಿಕೆಯ ಬಗ್ಗೆ ವಿಚಾರಿಸಲು ನವೆಂಬರ್ 5 ರಂದು ಸಂಘಟಕರು ಮತ್ತೆ ನನಗೆ ಕರೆ ಮಾಡಿದ್ದರು. ಅಂದು ಅವರು ನವೆಂಬರ್ 12 ರಂದು ನಿಗದಿಯಾಗಿದ್ದ ಕಾರ್ಯಕ್ರಮದ ಸಾರಿಗೆ ಸೇರಿದಂತೆ ಭಾಷಣದ ವ್ಯವಸ್ಥೆಯನ್ನು ಖಚಿತಪಡಿಸಿದ್ದರು” ಎಂದು ಅವರು ಹೇಳಿದ್ದಾರೆ. ಅಲ್ಲದೆ, ಅದೇ ವೇಳೆ ಅವರು ಕಾರ್ಯಕ್ರಮಕ್ಕೆ ಅನುಮೋದನೆ ಪಡೆದಿದ್ದಾರೆ ಎಂದು ಹೇಳಿದ್ದರು ಎಂದು ಅವರು ತಿಳಿಸಿದ್ದಾರೆ.

ಅದಾಗ್ಯೂ, ನವೆಂಬರ್ 10 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಆಯೋಜಕರಿಗೆ ಆರೋಗ್ಯ ಸರಿಯಾಗಿಲ್ಲ ಎಂದು ತಿಳಿಸಲಾಯಿತು. “ಆರೋಗ್ಯದ ಸಮಸ್ಯೆಯಾಗಿದ್ದರೆ, ನೀವು ಮೊದಲೇ ಏರ್ಪಡಿಸಿದ ಈವೆಂಟ್ ಅನ್ನು ರದ್ದುಗೊಳಿಸುವುದು ಯಾಕೆ? ಅವರು ಪ್ಯಾಲೆಸ್ಟೈನ್ ಕುರಿತು ಭಾಷಣವನ್ನು ನಡೆಸಲು ಆಸಕ್ತಿ ಹೊಂದಿದ್ದರು ಎಂಬುದು ಅಧ್ಯಾಪಕರ ಹೇಳಿಕೆಯಾಗಿದೆ, ಆದರೂ ಅಂತಿಮವಾಗಿ ಅದು ನಡೆಯಲಿಲ್ಲ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ, ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಪಶ್ಚಿಮ ಏಷ್ಯಾದ ಅಧ್ಯಯನಗಳ ಕೇಂದ್ರದಲ್ಲಿ ಭಾರತ, ಇರಾನ್, ಪ್ಯಾಲೇಸ್ಟಿನಿಯನ್ ಮತ್ತು ಲೆಬನಾನಿನ ರಾಯಭಾರಿಗಳನ್ನು ಒಳಗೊಂಡ ಮೂರು ಸೆಮಿನಾರ್‌ಗಳನ್ನು ರದ್ದುಗೊಳಿಸಲಾಗಿತ್ತು.

ಅಕ್ಟೋಬರ್ 7, 2023 ರಂದು ಪ್ರಾರಂಭವಾದ ಗಾಜಾ ವಿರುದ್ಧದ ಇಸ್ರೇಲ್‌ನ ಮಿಲಿಟರಿ ಆಕ್ರಮಣದ ಹಿನ್ನೆಲೆಯಲ್ಲಿ ಇದು ನಡೆದಿದೆ. 2023ರ ಅಕ್ಟೋಬರ್‌ನಿಂದ ಗಾಝಾದ ಮೇಲೆ ಇಸ್ರೇಲ್ ನಡೆಸುತ್ತಿರುವ ನಿರಂತರ ದಾಳಿಗಳಿಂದ 16,500 ಮಕ್ಕಳು ಸೇರಿದಂತೆ 40,000 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ‘ಮುರಿದ ಮೂಳೆಗಳು, ದೇಹದಿಂದ ಬೇರ್ಪಟ್ಟ ತಲೆಬುರುಡೆ..’; ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟ ಮಹಿಳೆಯ ಶವಪರೀಕ್ಷೆ ವರದಿ ಬಹಿರಂಗ

‘ಮುರಿದ ಮೂಳೆಗಳು, ದೇಹದಿಂದ ಬೇರ್ಪಟ್ಟ ತಲೆಬುರುಡೆ..’; ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟ ಮಹಿಳೆಯ ಶವಪರೀಕ್ಷೆ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...