Homeಮುಖಪುಟಪ್ಯಾಲೆಸ್ತೀನ್ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ಗುರುಗ್ರಾಮ್ ವಿಶ್ವವಿದ್ಯಾನಿಲಯ

ಪ್ಯಾಲೆಸ್ತೀನ್ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ಗುರುಗ್ರಾಮ್ ವಿಶ್ವವಿದ್ಯಾನಿಲಯ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಪ್ರೊಫೆಸರ್ ಜೋಯಾ ಹಸನ್ ಅವರು ಪ್ಯಾಲೆಸ್ತೀನ್ ಸಂಘರ್ಷದ ಕುರಿತು ನಡೆಸಬೇಕಿದ್ದ ಭಾಷಣವನ್ನು ಗುರುಗ್ರಾಮ್ ವಿಶ್ವವಿದ್ಯಾಲಯವು ಇತ್ತೀಚೆಗೆ ರದ್ದುಗೊಳಿಸಿದೆ ಎಂದು ದಿ ವೈರ್ ಬುಧವಾರ ವರದಿ ಮಾಡಿದೆ. “ಸಮಾನ ಹಕ್ಕುಗಳಿಗಾಗಿ ಪ್ಯಾಲೆಸ್ಟೀನಿಯನ್ ಹೋರಾಟ: ಭಾರತ ಮತ್ತು ಜಾಗತಿಕ ಪ್ರತಿಕ್ರಿಯೆ” ಎಂಬ ಶೀರ್ಷಿಕೆಯಡಿಯಲ್ಲಿ, ನವೆಂಬರ್ 12 ರಂದು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗವು ಈ ಭಾಷಣವನ್ನು ಆಯೋಜಿಸಿತ್ತು.

ನವೆಂಬರ್ 10 ರಂದು ಸಂಘಟಕರು ಜೋಯಾ ಅವರಿಗೆ ಕರೆ ಮಾಡಿದ್ದು, ಕಾರ್ಯಕ್ರಮ ರದ್ದು ಮಾಡಲಾಗಿರುವ ಬಗ್ಗೆ ತಿಳಿಸಲಾಗಿತ್ತು. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ವಿಶ್ವವಿದ್ಯಾನಿಲಯದ ಉಪಕುಲಪತಿ ದಿನೇಶ್ ಕುಮಾರ್, ಆಹ್ವಾನ ಪತ್ರಿಕೆಯಲ್ಲಿ ತನ್ನನ್ನು “ಮುಖ್ಯ ಪೋಷಕ” ಎಂದು ವಿವರಿಸಲಾಗಿತ್ತಾದರೂ, ಈ ಕಾರ್ಯಕ್ರಮಕ್ಕೆ ಅವರ ಅನುಮೋದನೆಯನ್ನು ಕೋರಲಾಗಿರಲಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಿಶ್ವವಿದ್ಯಾನಿಲಯದ ಶಿಕ್ಷಕರೊಬ್ಬರು ಚರ್ಚೆಯನ್ನು ಏರ್ಪಡಿಸಿದ್ದರು. ಅಂದು ನಾನು ಕ್ಯಾಂಪಸ್‌ನಲ್ಲಿ ಇರಲಿಲ್ಲವಾದ್ದರಿಂದ ಇದು ನನಗೆ ತಿಳಿದಿರಲಿಲ್ಲ. ಆದರೆ ಭಾಷಣದ ವಿಷಯವು ವಿವಾದಾಸ್ಪದವಾಗಿರುವುದರಿಂದ ನಾವು ಅದನ್ನು ನಂತರ ರದ್ದುಗೊಳಿಸಿದ್ದೇವೆ.” ಎಂದು ಅವರು ತಿಳಿಸಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಆಗಿರುವ ಜೋಯಾ ಅವರು ಪ್ಯಾಲೆಸ್ತೀನ್ ಸಂಘರ್ಷದ ಕುರಿತು ಪತ್ರಿಕೆಯಲ್ಲಿ ಬರೆದ ಬರಹದ ನಂತರ ಗುರುಗ್ರಾಲ್‌ ಯುನಿವರ್ಸಿಟಿಯ ರಾಜ್ಯಶಾಸ್ತ್ರ ವಿಭಾಗವು ತನ್ನನ್ನು ಸಂಪರ್ಕಿಸಿತ್ತು ಎಂದು ಹೇಳಿದ್ದಾರೆ.

“ಪ್ಯಾಲೆಸ್ತೀನ್ ಸಂಘರ್ಷಕ್ಕೆ ಭಾರತದ ಪ್ರತಿಕ್ರಿಯೆಯ ಕುರಿತು ಸರ್ಕಾರ ಮತ್ತು ಸರ್ಕಾರೇತರ ಮಟ್ಟದಲ್ಲಿ ಈ ಚರ್ಚೆಯನ್ನು ನಡೆಸುವುದು ಬಹಳ ಮುಖ್ಯ ಎಂದು ಅವರು ನನಗೆ ಹೇಳಿದ್ದರು. ಹಾಗಾಗಿ ನಾನು ಅದಕ್ಕೆ ತಕ್ಷಣ ಒಪ್ಪಿಕೊಂಡೆ” ಎಂದು ಜೋಯಾ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

“ಉಪನ್ಯಾಸ ಶೀರ್ಷಿಕೆಯ ಬಗ್ಗೆ ವಿಚಾರಿಸಲು ನವೆಂಬರ್ 5 ರಂದು ಸಂಘಟಕರು ಮತ್ತೆ ನನಗೆ ಕರೆ ಮಾಡಿದ್ದರು. ಅಂದು ಅವರು ನವೆಂಬರ್ 12 ರಂದು ನಿಗದಿಯಾಗಿದ್ದ ಕಾರ್ಯಕ್ರಮದ ಸಾರಿಗೆ ಸೇರಿದಂತೆ ಭಾಷಣದ ವ್ಯವಸ್ಥೆಯನ್ನು ಖಚಿತಪಡಿಸಿದ್ದರು” ಎಂದು ಅವರು ಹೇಳಿದ್ದಾರೆ. ಅಲ್ಲದೆ, ಅದೇ ವೇಳೆ ಅವರು ಕಾರ್ಯಕ್ರಮಕ್ಕೆ ಅನುಮೋದನೆ ಪಡೆದಿದ್ದಾರೆ ಎಂದು ಹೇಳಿದ್ದರು ಎಂದು ಅವರು ತಿಳಿಸಿದ್ದಾರೆ.

ಅದಾಗ್ಯೂ, ನವೆಂಬರ್ 10 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಆಯೋಜಕರಿಗೆ ಆರೋಗ್ಯ ಸರಿಯಾಗಿಲ್ಲ ಎಂದು ತಿಳಿಸಲಾಯಿತು. “ಆರೋಗ್ಯದ ಸಮಸ್ಯೆಯಾಗಿದ್ದರೆ, ನೀವು ಮೊದಲೇ ಏರ್ಪಡಿಸಿದ ಈವೆಂಟ್ ಅನ್ನು ರದ್ದುಗೊಳಿಸುವುದು ಯಾಕೆ? ಅವರು ಪ್ಯಾಲೆಸ್ಟೈನ್ ಕುರಿತು ಭಾಷಣವನ್ನು ನಡೆಸಲು ಆಸಕ್ತಿ ಹೊಂದಿದ್ದರು ಎಂಬುದು ಅಧ್ಯಾಪಕರ ಹೇಳಿಕೆಯಾಗಿದೆ, ಆದರೂ ಅಂತಿಮವಾಗಿ ಅದು ನಡೆಯಲಿಲ್ಲ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ, ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಪಶ್ಚಿಮ ಏಷ್ಯಾದ ಅಧ್ಯಯನಗಳ ಕೇಂದ್ರದಲ್ಲಿ ಭಾರತ, ಇರಾನ್, ಪ್ಯಾಲೇಸ್ಟಿನಿಯನ್ ಮತ್ತು ಲೆಬನಾನಿನ ರಾಯಭಾರಿಗಳನ್ನು ಒಳಗೊಂಡ ಮೂರು ಸೆಮಿನಾರ್‌ಗಳನ್ನು ರದ್ದುಗೊಳಿಸಲಾಗಿತ್ತು.

ಅಕ್ಟೋಬರ್ 7, 2023 ರಂದು ಪ್ರಾರಂಭವಾದ ಗಾಜಾ ವಿರುದ್ಧದ ಇಸ್ರೇಲ್‌ನ ಮಿಲಿಟರಿ ಆಕ್ರಮಣದ ಹಿನ್ನೆಲೆಯಲ್ಲಿ ಇದು ನಡೆದಿದೆ. 2023ರ ಅಕ್ಟೋಬರ್‌ನಿಂದ ಗಾಝಾದ ಮೇಲೆ ಇಸ್ರೇಲ್ ನಡೆಸುತ್ತಿರುವ ನಿರಂತರ ದಾಳಿಗಳಿಂದ 16,500 ಮಕ್ಕಳು ಸೇರಿದಂತೆ 40,000 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ‘ಮುರಿದ ಮೂಳೆಗಳು, ದೇಹದಿಂದ ಬೇರ್ಪಟ್ಟ ತಲೆಬುರುಡೆ..’; ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟ ಮಹಿಳೆಯ ಶವಪರೀಕ್ಷೆ ವರದಿ ಬಹಿರಂಗ

‘ಮುರಿದ ಮೂಳೆಗಳು, ದೇಹದಿಂದ ಬೇರ್ಪಟ್ಟ ತಲೆಬುರುಡೆ..’; ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟ ಮಹಿಳೆಯ ಶವಪರೀಕ್ಷೆ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...