Homeಮುಖಪುಟಪ್ಯಾಲೆಸ್ತೀನ್ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ಗುರುಗ್ರಾಮ್ ವಿಶ್ವವಿದ್ಯಾನಿಲಯ

ಪ್ಯಾಲೆಸ್ತೀನ್ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ಗುರುಗ್ರಾಮ್ ವಿಶ್ವವಿದ್ಯಾನಿಲಯ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಪ್ರೊಫೆಸರ್ ಜೋಯಾ ಹಸನ್ ಅವರು ಪ್ಯಾಲೆಸ್ತೀನ್ ಸಂಘರ್ಷದ ಕುರಿತು ನಡೆಸಬೇಕಿದ್ದ ಭಾಷಣವನ್ನು ಗುರುಗ್ರಾಮ್ ವಿಶ್ವವಿದ್ಯಾಲಯವು ಇತ್ತೀಚೆಗೆ ರದ್ದುಗೊಳಿಸಿದೆ ಎಂದು ದಿ ವೈರ್ ಬುಧವಾರ ವರದಿ ಮಾಡಿದೆ. “ಸಮಾನ ಹಕ್ಕುಗಳಿಗಾಗಿ ಪ್ಯಾಲೆಸ್ಟೀನಿಯನ್ ಹೋರಾಟ: ಭಾರತ ಮತ್ತು ಜಾಗತಿಕ ಪ್ರತಿಕ್ರಿಯೆ” ಎಂಬ ಶೀರ್ಷಿಕೆಯಡಿಯಲ್ಲಿ, ನವೆಂಬರ್ 12 ರಂದು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗವು ಈ ಭಾಷಣವನ್ನು ಆಯೋಜಿಸಿತ್ತು.

ನವೆಂಬರ್ 10 ರಂದು ಸಂಘಟಕರು ಜೋಯಾ ಅವರಿಗೆ ಕರೆ ಮಾಡಿದ್ದು, ಕಾರ್ಯಕ್ರಮ ರದ್ದು ಮಾಡಲಾಗಿರುವ ಬಗ್ಗೆ ತಿಳಿಸಲಾಗಿತ್ತು. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ವಿಶ್ವವಿದ್ಯಾನಿಲಯದ ಉಪಕುಲಪತಿ ದಿನೇಶ್ ಕುಮಾರ್, ಆಹ್ವಾನ ಪತ್ರಿಕೆಯಲ್ಲಿ ತನ್ನನ್ನು “ಮುಖ್ಯ ಪೋಷಕ” ಎಂದು ವಿವರಿಸಲಾಗಿತ್ತಾದರೂ, ಈ ಕಾರ್ಯಕ್ರಮಕ್ಕೆ ಅವರ ಅನುಮೋದನೆಯನ್ನು ಕೋರಲಾಗಿರಲಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಿಶ್ವವಿದ್ಯಾನಿಲಯದ ಶಿಕ್ಷಕರೊಬ್ಬರು ಚರ್ಚೆಯನ್ನು ಏರ್ಪಡಿಸಿದ್ದರು. ಅಂದು ನಾನು ಕ್ಯಾಂಪಸ್‌ನಲ್ಲಿ ಇರಲಿಲ್ಲವಾದ್ದರಿಂದ ಇದು ನನಗೆ ತಿಳಿದಿರಲಿಲ್ಲ. ಆದರೆ ಭಾಷಣದ ವಿಷಯವು ವಿವಾದಾಸ್ಪದವಾಗಿರುವುದರಿಂದ ನಾವು ಅದನ್ನು ನಂತರ ರದ್ದುಗೊಳಿಸಿದ್ದೇವೆ.” ಎಂದು ಅವರು ತಿಳಿಸಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಆಗಿರುವ ಜೋಯಾ ಅವರು ಪ್ಯಾಲೆಸ್ತೀನ್ ಸಂಘರ್ಷದ ಕುರಿತು ಪತ್ರಿಕೆಯಲ್ಲಿ ಬರೆದ ಬರಹದ ನಂತರ ಗುರುಗ್ರಾಲ್‌ ಯುನಿವರ್ಸಿಟಿಯ ರಾಜ್ಯಶಾಸ್ತ್ರ ವಿಭಾಗವು ತನ್ನನ್ನು ಸಂಪರ್ಕಿಸಿತ್ತು ಎಂದು ಹೇಳಿದ್ದಾರೆ.

“ಪ್ಯಾಲೆಸ್ತೀನ್ ಸಂಘರ್ಷಕ್ಕೆ ಭಾರತದ ಪ್ರತಿಕ್ರಿಯೆಯ ಕುರಿತು ಸರ್ಕಾರ ಮತ್ತು ಸರ್ಕಾರೇತರ ಮಟ್ಟದಲ್ಲಿ ಈ ಚರ್ಚೆಯನ್ನು ನಡೆಸುವುದು ಬಹಳ ಮುಖ್ಯ ಎಂದು ಅವರು ನನಗೆ ಹೇಳಿದ್ದರು. ಹಾಗಾಗಿ ನಾನು ಅದಕ್ಕೆ ತಕ್ಷಣ ಒಪ್ಪಿಕೊಂಡೆ” ಎಂದು ಜೋಯಾ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

“ಉಪನ್ಯಾಸ ಶೀರ್ಷಿಕೆಯ ಬಗ್ಗೆ ವಿಚಾರಿಸಲು ನವೆಂಬರ್ 5 ರಂದು ಸಂಘಟಕರು ಮತ್ತೆ ನನಗೆ ಕರೆ ಮಾಡಿದ್ದರು. ಅಂದು ಅವರು ನವೆಂಬರ್ 12 ರಂದು ನಿಗದಿಯಾಗಿದ್ದ ಕಾರ್ಯಕ್ರಮದ ಸಾರಿಗೆ ಸೇರಿದಂತೆ ಭಾಷಣದ ವ್ಯವಸ್ಥೆಯನ್ನು ಖಚಿತಪಡಿಸಿದ್ದರು” ಎಂದು ಅವರು ಹೇಳಿದ್ದಾರೆ. ಅಲ್ಲದೆ, ಅದೇ ವೇಳೆ ಅವರು ಕಾರ್ಯಕ್ರಮಕ್ಕೆ ಅನುಮೋದನೆ ಪಡೆದಿದ್ದಾರೆ ಎಂದು ಹೇಳಿದ್ದರು ಎಂದು ಅವರು ತಿಳಿಸಿದ್ದಾರೆ.

ಅದಾಗ್ಯೂ, ನವೆಂಬರ್ 10 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಆಯೋಜಕರಿಗೆ ಆರೋಗ್ಯ ಸರಿಯಾಗಿಲ್ಲ ಎಂದು ತಿಳಿಸಲಾಯಿತು. “ಆರೋಗ್ಯದ ಸಮಸ್ಯೆಯಾಗಿದ್ದರೆ, ನೀವು ಮೊದಲೇ ಏರ್ಪಡಿಸಿದ ಈವೆಂಟ್ ಅನ್ನು ರದ್ದುಗೊಳಿಸುವುದು ಯಾಕೆ? ಅವರು ಪ್ಯಾಲೆಸ್ಟೈನ್ ಕುರಿತು ಭಾಷಣವನ್ನು ನಡೆಸಲು ಆಸಕ್ತಿ ಹೊಂದಿದ್ದರು ಎಂಬುದು ಅಧ್ಯಾಪಕರ ಹೇಳಿಕೆಯಾಗಿದೆ, ಆದರೂ ಅಂತಿಮವಾಗಿ ಅದು ನಡೆಯಲಿಲ್ಲ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ, ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಪಶ್ಚಿಮ ಏಷ್ಯಾದ ಅಧ್ಯಯನಗಳ ಕೇಂದ್ರದಲ್ಲಿ ಭಾರತ, ಇರಾನ್, ಪ್ಯಾಲೇಸ್ಟಿನಿಯನ್ ಮತ್ತು ಲೆಬನಾನಿನ ರಾಯಭಾರಿಗಳನ್ನು ಒಳಗೊಂಡ ಮೂರು ಸೆಮಿನಾರ್‌ಗಳನ್ನು ರದ್ದುಗೊಳಿಸಲಾಗಿತ್ತು.

ಅಕ್ಟೋಬರ್ 7, 2023 ರಂದು ಪ್ರಾರಂಭವಾದ ಗಾಜಾ ವಿರುದ್ಧದ ಇಸ್ರೇಲ್‌ನ ಮಿಲಿಟರಿ ಆಕ್ರಮಣದ ಹಿನ್ನೆಲೆಯಲ್ಲಿ ಇದು ನಡೆದಿದೆ. 2023ರ ಅಕ್ಟೋಬರ್‌ನಿಂದ ಗಾಝಾದ ಮೇಲೆ ಇಸ್ರೇಲ್ ನಡೆಸುತ್ತಿರುವ ನಿರಂತರ ದಾಳಿಗಳಿಂದ 16,500 ಮಕ್ಕಳು ಸೇರಿದಂತೆ 40,000 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ‘ಮುರಿದ ಮೂಳೆಗಳು, ದೇಹದಿಂದ ಬೇರ್ಪಟ್ಟ ತಲೆಬುರುಡೆ..’; ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟ ಮಹಿಳೆಯ ಶವಪರೀಕ್ಷೆ ವರದಿ ಬಹಿರಂಗ

‘ಮುರಿದ ಮೂಳೆಗಳು, ದೇಹದಿಂದ ಬೇರ್ಪಟ್ಟ ತಲೆಬುರುಡೆ..’; ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟ ಮಹಿಳೆಯ ಶವಪರೀಕ್ಷೆ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...