Homeಮುಖಪುಟಪ್ಯಾಲೆಸ್ತೀನ್ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ಗುರುಗ್ರಾಮ್ ವಿಶ್ವವಿದ್ಯಾನಿಲಯ

ಪ್ಯಾಲೆಸ್ತೀನ್ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ಗುರುಗ್ರಾಮ್ ವಿಶ್ವವಿದ್ಯಾನಿಲಯ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಪ್ರೊಫೆಸರ್ ಜೋಯಾ ಹಸನ್ ಅವರು ಪ್ಯಾಲೆಸ್ತೀನ್ ಸಂಘರ್ಷದ ಕುರಿತು ನಡೆಸಬೇಕಿದ್ದ ಭಾಷಣವನ್ನು ಗುರುಗ್ರಾಮ್ ವಿಶ್ವವಿದ್ಯಾಲಯವು ಇತ್ತೀಚೆಗೆ ರದ್ದುಗೊಳಿಸಿದೆ ಎಂದು ದಿ ವೈರ್ ಬುಧವಾರ ವರದಿ ಮಾಡಿದೆ. “ಸಮಾನ ಹಕ್ಕುಗಳಿಗಾಗಿ ಪ್ಯಾಲೆಸ್ಟೀನಿಯನ್ ಹೋರಾಟ: ಭಾರತ ಮತ್ತು ಜಾಗತಿಕ ಪ್ರತಿಕ್ರಿಯೆ” ಎಂಬ ಶೀರ್ಷಿಕೆಯಡಿಯಲ್ಲಿ, ನವೆಂಬರ್ 12 ರಂದು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗವು ಈ ಭಾಷಣವನ್ನು ಆಯೋಜಿಸಿತ್ತು.

ನವೆಂಬರ್ 10 ರಂದು ಸಂಘಟಕರು ಜೋಯಾ ಅವರಿಗೆ ಕರೆ ಮಾಡಿದ್ದು, ಕಾರ್ಯಕ್ರಮ ರದ್ದು ಮಾಡಲಾಗಿರುವ ಬಗ್ಗೆ ತಿಳಿಸಲಾಗಿತ್ತು. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ವಿಶ್ವವಿದ್ಯಾನಿಲಯದ ಉಪಕುಲಪತಿ ದಿನೇಶ್ ಕುಮಾರ್, ಆಹ್ವಾನ ಪತ್ರಿಕೆಯಲ್ಲಿ ತನ್ನನ್ನು “ಮುಖ್ಯ ಪೋಷಕ” ಎಂದು ವಿವರಿಸಲಾಗಿತ್ತಾದರೂ, ಈ ಕಾರ್ಯಕ್ರಮಕ್ಕೆ ಅವರ ಅನುಮೋದನೆಯನ್ನು ಕೋರಲಾಗಿರಲಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಿಶ್ವವಿದ್ಯಾನಿಲಯದ ಶಿಕ್ಷಕರೊಬ್ಬರು ಚರ್ಚೆಯನ್ನು ಏರ್ಪಡಿಸಿದ್ದರು. ಅಂದು ನಾನು ಕ್ಯಾಂಪಸ್‌ನಲ್ಲಿ ಇರಲಿಲ್ಲವಾದ್ದರಿಂದ ಇದು ನನಗೆ ತಿಳಿದಿರಲಿಲ್ಲ. ಆದರೆ ಭಾಷಣದ ವಿಷಯವು ವಿವಾದಾಸ್ಪದವಾಗಿರುವುದರಿಂದ ನಾವು ಅದನ್ನು ನಂತರ ರದ್ದುಗೊಳಿಸಿದ್ದೇವೆ.” ಎಂದು ಅವರು ತಿಳಿಸಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಆಗಿರುವ ಜೋಯಾ ಅವರು ಪ್ಯಾಲೆಸ್ತೀನ್ ಸಂಘರ್ಷದ ಕುರಿತು ಪತ್ರಿಕೆಯಲ್ಲಿ ಬರೆದ ಬರಹದ ನಂತರ ಗುರುಗ್ರಾಲ್‌ ಯುನಿವರ್ಸಿಟಿಯ ರಾಜ್ಯಶಾಸ್ತ್ರ ವಿಭಾಗವು ತನ್ನನ್ನು ಸಂಪರ್ಕಿಸಿತ್ತು ಎಂದು ಹೇಳಿದ್ದಾರೆ.

“ಪ್ಯಾಲೆಸ್ತೀನ್ ಸಂಘರ್ಷಕ್ಕೆ ಭಾರತದ ಪ್ರತಿಕ್ರಿಯೆಯ ಕುರಿತು ಸರ್ಕಾರ ಮತ್ತು ಸರ್ಕಾರೇತರ ಮಟ್ಟದಲ್ಲಿ ಈ ಚರ್ಚೆಯನ್ನು ನಡೆಸುವುದು ಬಹಳ ಮುಖ್ಯ ಎಂದು ಅವರು ನನಗೆ ಹೇಳಿದ್ದರು. ಹಾಗಾಗಿ ನಾನು ಅದಕ್ಕೆ ತಕ್ಷಣ ಒಪ್ಪಿಕೊಂಡೆ” ಎಂದು ಜೋಯಾ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

“ಉಪನ್ಯಾಸ ಶೀರ್ಷಿಕೆಯ ಬಗ್ಗೆ ವಿಚಾರಿಸಲು ನವೆಂಬರ್ 5 ರಂದು ಸಂಘಟಕರು ಮತ್ತೆ ನನಗೆ ಕರೆ ಮಾಡಿದ್ದರು. ಅಂದು ಅವರು ನವೆಂಬರ್ 12 ರಂದು ನಿಗದಿಯಾಗಿದ್ದ ಕಾರ್ಯಕ್ರಮದ ಸಾರಿಗೆ ಸೇರಿದಂತೆ ಭಾಷಣದ ವ್ಯವಸ್ಥೆಯನ್ನು ಖಚಿತಪಡಿಸಿದ್ದರು” ಎಂದು ಅವರು ಹೇಳಿದ್ದಾರೆ. ಅಲ್ಲದೆ, ಅದೇ ವೇಳೆ ಅವರು ಕಾರ್ಯಕ್ರಮಕ್ಕೆ ಅನುಮೋದನೆ ಪಡೆದಿದ್ದಾರೆ ಎಂದು ಹೇಳಿದ್ದರು ಎಂದು ಅವರು ತಿಳಿಸಿದ್ದಾರೆ.

ಅದಾಗ್ಯೂ, ನವೆಂಬರ್ 10 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಆಯೋಜಕರಿಗೆ ಆರೋಗ್ಯ ಸರಿಯಾಗಿಲ್ಲ ಎಂದು ತಿಳಿಸಲಾಯಿತು. “ಆರೋಗ್ಯದ ಸಮಸ್ಯೆಯಾಗಿದ್ದರೆ, ನೀವು ಮೊದಲೇ ಏರ್ಪಡಿಸಿದ ಈವೆಂಟ್ ಅನ್ನು ರದ್ದುಗೊಳಿಸುವುದು ಯಾಕೆ? ಅವರು ಪ್ಯಾಲೆಸ್ಟೈನ್ ಕುರಿತು ಭಾಷಣವನ್ನು ನಡೆಸಲು ಆಸಕ್ತಿ ಹೊಂದಿದ್ದರು ಎಂಬುದು ಅಧ್ಯಾಪಕರ ಹೇಳಿಕೆಯಾಗಿದೆ, ಆದರೂ ಅಂತಿಮವಾಗಿ ಅದು ನಡೆಯಲಿಲ್ಲ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ, ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಪಶ್ಚಿಮ ಏಷ್ಯಾದ ಅಧ್ಯಯನಗಳ ಕೇಂದ್ರದಲ್ಲಿ ಭಾರತ, ಇರಾನ್, ಪ್ಯಾಲೇಸ್ಟಿನಿಯನ್ ಮತ್ತು ಲೆಬನಾನಿನ ರಾಯಭಾರಿಗಳನ್ನು ಒಳಗೊಂಡ ಮೂರು ಸೆಮಿನಾರ್‌ಗಳನ್ನು ರದ್ದುಗೊಳಿಸಲಾಗಿತ್ತು.

ಅಕ್ಟೋಬರ್ 7, 2023 ರಂದು ಪ್ರಾರಂಭವಾದ ಗಾಜಾ ವಿರುದ್ಧದ ಇಸ್ರೇಲ್‌ನ ಮಿಲಿಟರಿ ಆಕ್ರಮಣದ ಹಿನ್ನೆಲೆಯಲ್ಲಿ ಇದು ನಡೆದಿದೆ. 2023ರ ಅಕ್ಟೋಬರ್‌ನಿಂದ ಗಾಝಾದ ಮೇಲೆ ಇಸ್ರೇಲ್ ನಡೆಸುತ್ತಿರುವ ನಿರಂತರ ದಾಳಿಗಳಿಂದ 16,500 ಮಕ್ಕಳು ಸೇರಿದಂತೆ 40,000 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ‘ಮುರಿದ ಮೂಳೆಗಳು, ದೇಹದಿಂದ ಬೇರ್ಪಟ್ಟ ತಲೆಬುರುಡೆ..’; ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟ ಮಹಿಳೆಯ ಶವಪರೀಕ್ಷೆ ವರದಿ ಬಹಿರಂಗ

‘ಮುರಿದ ಮೂಳೆಗಳು, ದೇಹದಿಂದ ಬೇರ್ಪಟ್ಟ ತಲೆಬುರುಡೆ..’; ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟ ಮಹಿಳೆಯ ಶವಪರೀಕ್ಷೆ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...