Homeಮುಖಪುಟಪ್ಯಾಲೆಸ್ತೀನ್ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ಗುರುಗ್ರಾಮ್ ವಿಶ್ವವಿದ್ಯಾನಿಲಯ

ಪ್ಯಾಲೆಸ್ತೀನ್ ಕುರಿತ ಕಾರ್ಯಕ್ರಮ ರದ್ದುಗೊಳಿಸಿದ ಗುರುಗ್ರಾಮ್ ವಿಶ್ವವಿದ್ಯಾನಿಲಯ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಪ್ರೊಫೆಸರ್ ಜೋಯಾ ಹಸನ್ ಅವರು ಪ್ಯಾಲೆಸ್ತೀನ್ ಸಂಘರ್ಷದ ಕುರಿತು ನಡೆಸಬೇಕಿದ್ದ ಭಾಷಣವನ್ನು ಗುರುಗ್ರಾಮ್ ವಿಶ್ವವಿದ್ಯಾಲಯವು ಇತ್ತೀಚೆಗೆ ರದ್ದುಗೊಳಿಸಿದೆ ಎಂದು ದಿ ವೈರ್ ಬುಧವಾರ ವರದಿ ಮಾಡಿದೆ. “ಸಮಾನ ಹಕ್ಕುಗಳಿಗಾಗಿ ಪ್ಯಾಲೆಸ್ಟೀನಿಯನ್ ಹೋರಾಟ: ಭಾರತ ಮತ್ತು ಜಾಗತಿಕ ಪ್ರತಿಕ್ರಿಯೆ” ಎಂಬ ಶೀರ್ಷಿಕೆಯಡಿಯಲ್ಲಿ, ನವೆಂಬರ್ 12 ರಂದು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗವು ಈ ಭಾಷಣವನ್ನು ಆಯೋಜಿಸಿತ್ತು.

ನವೆಂಬರ್ 10 ರಂದು ಸಂಘಟಕರು ಜೋಯಾ ಅವರಿಗೆ ಕರೆ ಮಾಡಿದ್ದು, ಕಾರ್ಯಕ್ರಮ ರದ್ದು ಮಾಡಲಾಗಿರುವ ಬಗ್ಗೆ ತಿಳಿಸಲಾಗಿತ್ತು. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ವಿಶ್ವವಿದ್ಯಾನಿಲಯದ ಉಪಕುಲಪತಿ ದಿನೇಶ್ ಕುಮಾರ್, ಆಹ್ವಾನ ಪತ್ರಿಕೆಯಲ್ಲಿ ತನ್ನನ್ನು “ಮುಖ್ಯ ಪೋಷಕ” ಎಂದು ವಿವರಿಸಲಾಗಿತ್ತಾದರೂ, ಈ ಕಾರ್ಯಕ್ರಮಕ್ಕೆ ಅವರ ಅನುಮೋದನೆಯನ್ನು ಕೋರಲಾಗಿರಲಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಿಶ್ವವಿದ್ಯಾನಿಲಯದ ಶಿಕ್ಷಕರೊಬ್ಬರು ಚರ್ಚೆಯನ್ನು ಏರ್ಪಡಿಸಿದ್ದರು. ಅಂದು ನಾನು ಕ್ಯಾಂಪಸ್‌ನಲ್ಲಿ ಇರಲಿಲ್ಲವಾದ್ದರಿಂದ ಇದು ನನಗೆ ತಿಳಿದಿರಲಿಲ್ಲ. ಆದರೆ ಭಾಷಣದ ವಿಷಯವು ವಿವಾದಾಸ್ಪದವಾಗಿರುವುದರಿಂದ ನಾವು ಅದನ್ನು ನಂತರ ರದ್ದುಗೊಳಿಸಿದ್ದೇವೆ.” ಎಂದು ಅವರು ತಿಳಿಸಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಆಗಿರುವ ಜೋಯಾ ಅವರು ಪ್ಯಾಲೆಸ್ತೀನ್ ಸಂಘರ್ಷದ ಕುರಿತು ಪತ್ರಿಕೆಯಲ್ಲಿ ಬರೆದ ಬರಹದ ನಂತರ ಗುರುಗ್ರಾಲ್‌ ಯುನಿವರ್ಸಿಟಿಯ ರಾಜ್ಯಶಾಸ್ತ್ರ ವಿಭಾಗವು ತನ್ನನ್ನು ಸಂಪರ್ಕಿಸಿತ್ತು ಎಂದು ಹೇಳಿದ್ದಾರೆ.

“ಪ್ಯಾಲೆಸ್ತೀನ್ ಸಂಘರ್ಷಕ್ಕೆ ಭಾರತದ ಪ್ರತಿಕ್ರಿಯೆಯ ಕುರಿತು ಸರ್ಕಾರ ಮತ್ತು ಸರ್ಕಾರೇತರ ಮಟ್ಟದಲ್ಲಿ ಈ ಚರ್ಚೆಯನ್ನು ನಡೆಸುವುದು ಬಹಳ ಮುಖ್ಯ ಎಂದು ಅವರು ನನಗೆ ಹೇಳಿದ್ದರು. ಹಾಗಾಗಿ ನಾನು ಅದಕ್ಕೆ ತಕ್ಷಣ ಒಪ್ಪಿಕೊಂಡೆ” ಎಂದು ಜೋಯಾ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

“ಉಪನ್ಯಾಸ ಶೀರ್ಷಿಕೆಯ ಬಗ್ಗೆ ವಿಚಾರಿಸಲು ನವೆಂಬರ್ 5 ರಂದು ಸಂಘಟಕರು ಮತ್ತೆ ನನಗೆ ಕರೆ ಮಾಡಿದ್ದರು. ಅಂದು ಅವರು ನವೆಂಬರ್ 12 ರಂದು ನಿಗದಿಯಾಗಿದ್ದ ಕಾರ್ಯಕ್ರಮದ ಸಾರಿಗೆ ಸೇರಿದಂತೆ ಭಾಷಣದ ವ್ಯವಸ್ಥೆಯನ್ನು ಖಚಿತಪಡಿಸಿದ್ದರು” ಎಂದು ಅವರು ಹೇಳಿದ್ದಾರೆ. ಅಲ್ಲದೆ, ಅದೇ ವೇಳೆ ಅವರು ಕಾರ್ಯಕ್ರಮಕ್ಕೆ ಅನುಮೋದನೆ ಪಡೆದಿದ್ದಾರೆ ಎಂದು ಹೇಳಿದ್ದರು ಎಂದು ಅವರು ತಿಳಿಸಿದ್ದಾರೆ.

ಅದಾಗ್ಯೂ, ನವೆಂಬರ್ 10 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಆಯೋಜಕರಿಗೆ ಆರೋಗ್ಯ ಸರಿಯಾಗಿಲ್ಲ ಎಂದು ತಿಳಿಸಲಾಯಿತು. “ಆರೋಗ್ಯದ ಸಮಸ್ಯೆಯಾಗಿದ್ದರೆ, ನೀವು ಮೊದಲೇ ಏರ್ಪಡಿಸಿದ ಈವೆಂಟ್ ಅನ್ನು ರದ್ದುಗೊಳಿಸುವುದು ಯಾಕೆ? ಅವರು ಪ್ಯಾಲೆಸ್ಟೈನ್ ಕುರಿತು ಭಾಷಣವನ್ನು ನಡೆಸಲು ಆಸಕ್ತಿ ಹೊಂದಿದ್ದರು ಎಂಬುದು ಅಧ್ಯಾಪಕರ ಹೇಳಿಕೆಯಾಗಿದೆ, ಆದರೂ ಅಂತಿಮವಾಗಿ ಅದು ನಡೆಯಲಿಲ್ಲ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ, ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಪಶ್ಚಿಮ ಏಷ್ಯಾದ ಅಧ್ಯಯನಗಳ ಕೇಂದ್ರದಲ್ಲಿ ಭಾರತ, ಇರಾನ್, ಪ್ಯಾಲೇಸ್ಟಿನಿಯನ್ ಮತ್ತು ಲೆಬನಾನಿನ ರಾಯಭಾರಿಗಳನ್ನು ಒಳಗೊಂಡ ಮೂರು ಸೆಮಿನಾರ್‌ಗಳನ್ನು ರದ್ದುಗೊಳಿಸಲಾಗಿತ್ತು.

ಅಕ್ಟೋಬರ್ 7, 2023 ರಂದು ಪ್ರಾರಂಭವಾದ ಗಾಜಾ ವಿರುದ್ಧದ ಇಸ್ರೇಲ್‌ನ ಮಿಲಿಟರಿ ಆಕ್ರಮಣದ ಹಿನ್ನೆಲೆಯಲ್ಲಿ ಇದು ನಡೆದಿದೆ. 2023ರ ಅಕ್ಟೋಬರ್‌ನಿಂದ ಗಾಝಾದ ಮೇಲೆ ಇಸ್ರೇಲ್ ನಡೆಸುತ್ತಿರುವ ನಿರಂತರ ದಾಳಿಗಳಿಂದ 16,500 ಮಕ್ಕಳು ಸೇರಿದಂತೆ 40,000 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ‘ಮುರಿದ ಮೂಳೆಗಳು, ದೇಹದಿಂದ ಬೇರ್ಪಟ್ಟ ತಲೆಬುರುಡೆ..’; ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟ ಮಹಿಳೆಯ ಶವಪರೀಕ್ಷೆ ವರದಿ ಬಹಿರಂಗ

‘ಮುರಿದ ಮೂಳೆಗಳು, ದೇಹದಿಂದ ಬೇರ್ಪಟ್ಟ ತಲೆಬುರುಡೆ..’; ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟ ಮಹಿಳೆಯ ಶವಪರೀಕ್ಷೆ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...