Homeಕರ್ನಾಟಕಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ 'ಪ್ರಗತಿಪರ ಸೌಹಾರ್ದ ಸಂಘಟನೆಗಳ' ಆಗ್ರಹ

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

- Advertisement -
- Advertisement -

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯ ಸೌಹಾರ್ದ ಪರಂಪರೆಯನ್ನು ಸಂರಕ್ಷಿಸಲು ಹಾಗೂ ಸಂಪ್ರದಾಯದಂತೆ ಉರುಸ್ ನಡೆಸಲು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ಕಳುಹಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಸೌಹಾರ್ದ ತಾಣವಾದ ಬಾಬಾ ಬುಡನ್ ಗಿರಿ ಉಳಿವಿಗೋಸ್ಕರ ಕರ್ನಾಟಕದ ಎಲ್ಲಾ ಪ್ರಗತಿಪರ ಮನಸ್ಸುಗಳು ಅನೇಕ ದಶಕಗಳ ಕಾಲ ಹೋರಾಟ ಮಾಡಿದ್ದ ಇತಿಹಾಸ ನಮಗೆಲ್ಲರಿಗೂ ಗೊತ್ತೇ ಇದೆ. ಅದರಾಚೆಗೂ ಕೂಡ ಸಂಘಪರಿವಾರದ ಒತ್ತಡಕ್ಕೆ ಮಣಿದ ಕಾಂಗ್ರೆಸ್ ಸರ್ಕಾರ ಒಂದು ರಾಜಿ ಸೂತ್ರವನ್ನು ಮುಂದಿಟ್ಟಿತ್ತು. ಅದರ ಪ್ರಕಾರ ಉರುಸ್ ಹಾಗೂ ದತ್ತಪೂಜೆ ಎರಡನ್ನೂ ನಡೆಸಲು ಅವಕಾಶ ಇರಬೇಕು. ಎರಡನ್ನೂ ಕೂಡ ಜಿಲ್ಲಾಡಳಿತ ಮೇಲ್ವಿಚಾರಣೆ ಮಾಡಬೇಕು ಎನ್ನುವ ತೀರ್ಮಾನಕ್ಕೆ ಇದಾಗಿತ್ತು. ದತ್ತ ಪೂಜೆಯ ಹೆಸರಿನಲ್ಲಿ ಸಂಘಪರಿವಾರಕ್ಕೆ ಬ್ರಾಹ್ಮಣೀಯ ಆಚರಣೆಯನ್ನು ತುರುಕಲು ಇದು ಅವಕಾಶ ನೀಡುವುದಾಗಿದ್ದರೂ, ಒಂದು ರೀತಿಯಲ್ಲಿ ಈಗಾದರೂ ಈ ಸಂಘರ್ಷ ಮುಕ್ತಾಯಗೊಳ್ಳಲಿ ಎಂದು ಅದನ್ನು ಬೆಂಬಲಿಸಿದ ಜನರೂ ಇದ್ದರು. ಆದರೆ ಇದು ಇಬ್ಬರಿಗೂ ಅವಕಾಶ ಮಾಡಿಕೊಡುವ ಜಾತ್ಯಾತೀತ ನಿಲುವಲ್ಲ. ಸಂಘ ಪರಿವಾರಕ್ಕೆ ಮಣೆ ಹಾಕಿ, ಸೂಫಿ ಪರಂಪರೆಯನ್ನು ನಮ ನಿಶೇಧಿಸುವ ತಂತ್ರಗಾರಿಕೆ ಎಂಬುದು ಬಯಲಾಗಿದೆ” ಎಂದು ಬಹಿರಂಗ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಬ್ರಾಹ್ಮಣೀಯ ರೀತಿಯಲ್ಲಿ ದತ್ತ ಜಯಂತಿ ನಡೆಸಲು ಜಿಲ್ಲಾಡಳಿತ ಸಂಪೂರ್ಣ ಅವಕಾಶ ನೀಡಿತ್ತು. ಬಾಬಾ ಬುಡನ್ ಗಿರಿಯನ್ನು ಕೇಸರಿಮಯಗೊಳಿಸಿ ಸಂಘಪರಿವಾರದ ನೇತೃತ್ವದಲ್ಲಿ ದತ್ತ ಜಯಂತಿ ನಡೆಯಿತು. ಆದರೆ, ಅದೇ ಸಂಧರ್ಭದಲ್ಲಿ ನೆನ್ನೆ(ಮಾರ್ಚ್4), ಇಂದು(ಮಾರ್ಚ್5) ಮತ್ತು ನಾಳೆ(ಮಾರ್ಚ್6) ದರ್ಗಾ ಸಮಿತಿ ಕಡೆಯಿಂದ ಉರುಸ್ ಆಯೋಜನೆಗೊಂಡಿತ್ತು. ಆದರೆ ಜಿಲ್ಲಾಡಳಿತ ಉರುಸ್ ನಡೆಯದಂತೆ ತಡೆಯೊಡ್ಡಿದೆ. ಸಜ್ಜಾದೆ ಅವರಿಗೆ ನಿಮಗೆ ಇಲ್ಲಿ ಸಂಪ್ರದಾಯದಂತೆ ಗಂಧ ಹಚ್ಚುವ, ಉರುಸ್ ಅನ್ನು ನಡೆಸಿಕೊಡುವ ಹಕ್ಕು ಇಲ್ಲ ಎಂದು ತಡೆ ಹಿಡಿದು, ಗೋರಿಯ ಮೇಲೆ ಹಸಿರು ಚಾದರ್ ಹಾಕುವುದಕ್ಕಾಗಲಿ, ಅವರ ಸಂಪ್ರದಾಯದಂತೆ ಉರುಸ್ ನಡೆಸಲಾಗಲಿ ಅವಕಾಶ ಕೊಡದೆ ಅವರನ್ನು ಹೊರಗಿಡಲಾಗಿದೆ” ಎಂದು ಆರೋಪಿಸಿದ್ದಾರೆ.

“ಈ ಅನ್ಯಾಯವನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು. ಆ ಪ್ರತಿಭಟನೆಗೂ ಅವಕಾಶ ಕೊಡದಂತೆ ಪೊಲೀಸರು ಪ್ರತಿಭಟನೆಗೆ ಮುಂದಾದ ಹೋರಾಟಗಾರರನ್ನು ಎಳೆದಾಡಿ ಅವಮಾನಕಾರಿಯಾಗಿ ನಡೆಸಿಕೊಂಡಿದ್ದಾರೆ. ಇದು ಹುಸಿ ಜಾತ್ಯಾತೀತ ಹಾಗೂ ದ್ವಂದ್ವ ನೀತಿಯಾಗಿದೆ. ಕಾಂಗ್ರೆಸ್ ಸರ್ಕಾರದ ಈ ನಡವಳಿಕೆಯನ್ನು ನಾವು ಖಂಡಿಸುತ್ತಿದ್ದೇವೆ. ತಾವು ಈ ಕೂಡಲೇ ಮಧ್ಯಪ್ರವೇಶ ಮಾಡಿ ಬಾಬಾ ಬುಡನ್ ಗಿರಿಯಲ್ಲಿ ಸೌಹಾರ್ದ ಪರಂಪರೆಯನ್ನು ಸಂರಕ್ಷಿಸಬೇಕು, ಸುಪ್ರೀಂಕೋರ್ಟ್ ತೀರ್ಪಿನ ಆದೇಶದಂತೆ ನಡೆದುಕೊಳ್ಳಬೇಕು. ಉರುಸ್ ನಡೆಸಲು ಸಜ್ಜಾದೆ ಮತ್ತು ಭಕ್ತಾದಿಗಳಿಗೆ ಅವಕಾಶ ನೀಡಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತಕ್ಕೆ ಸೂಕ್ತ ರೀತಿಯಲ್ಲಿ ನಿರ್ದೇಶನ ನೀಡಬೇಕೆಂದು ಒತ್ತಾಯಿಸುತ್ತಿದ್ದೇವೆ” ಎಂದು ಆಗ್ರಹಿಸಿದ್ದಾರೆ.

ಪತ್ರದಲ್ಲಿ ಸಹಿ ಮಾಡಿದರವರು:

  1. ಡಾ.ವಿಜಯಮ್ಮ, ಹಿರಿಯ ಪತ್ರಕರ್ತರು.
  2. ತಾರಾರಾವ್, ಎದ್ದೇಳು ಕರ್ನಾಟಕ.
  3. ಬಂಜಗೆರೆ ಜಯಪ್ರಕಾಶ್‌
  4. ಪ್ರಕಾಶ್‌ ರಾಜ್
  5. ಕೆ.ಎಲ್.ಅಶೋಕ್, ಕಾರ್ಯದರ್ಶಿ, ಕರ್ನಾಟಕ ಜನಶಕ್ತಿ.
  6. ಗೌಸ್ ಮೊಹಿಯುದ್ಧೀನ್.
  7. ನಗರಗೆರೆ ರಮೇಶ್, ಶಾಂತಿಗಾಗಿ ನಾಗರಿಕರ ವೇದಿಕೆ.
  8. ಪ್ರೊ.ವಿ.ಎಸ್.ಶ್ರೀಧರ್, ಶಾಂತಿಗಾಗಿ ನಾಗರಿಕರ ವೇದಿಕೆ.
  9. ನೂರ್ ಶ್ರೀಧರ್ ರಾಜ್ಯಾಧ್ಯಕ್ಷರು, ಕರ್ನಾಟಕ ಜನಶಕ್ತಿ.
  10. ಶ್ರೀಪಾದ್ ಭಟ್, ಶಿಕ್ಷಣ ತಜ್ಞರು.
  11. ಬಸವರಾಜ್ ಕೌತಾಳ್, ಒಳ ಮೀಸಲಾತಿ ಹೋರಾಟ ಸಮಿತಿ.
  12. ಕರಿಯಪ್ಪ ಗುಡಿಮನಿ, ಒಳಮೀಸಲಾತಿ ಹೋರಾಟಗಾರರು.
  13. ನಿರಂಜನಾರಾಧ್ಯ ವಿ.ಪಿ., ಶಿಕ್ಷಣ ತಜ್ಞರು.
  14. ಸಿರಿಮನೆ ನಾಗರಾಜ್, ಗೌರವಾಧ್ಯಕ್ಷರು, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ.
  15. ಸಿದ್ಗೌಡ ಮೋದಗಿ, ಭಾರತೀಯ ಕೃಷಿಕ ಸಮಾಜ.
  16. ಅನಂತ್, ಯುವಶಕ್ತಿ.
  17. ಮಲ್ಲು ಕುಂಬಾರ್ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ.,
  18. ಬಸವರಾಜ್ ಸೂಳಿಭಾವಿ ಮೇ ಸಾಹಿತ್ಯ ಬಳಗ.,
  19. ಬಸವರಾಜ್, ಬಾದರ್ಲಿ.
  20. ಸಿದ್ಧರಾಜು ಮಂಡ್ಯ, ಕರ್ನಾಟಕ ಜನಶಕ್ತಿ
  21. ಕುಮಾರ್ ಸಮತಳ, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ.
  22. ಲಕ್ಷ್ಮಣ ಮಂಡಲಗೇರಾ, ರಂಗಕರ್ಮಿ-ಪತ್ರಕರ್ತ
  23. ದುರ್ಗೇಶ್ ರಾಜ್ಯ ಸಂಚಾಲಕ ಕೆವಿಎಸ್,
  24. ರಘು ನಂದನ್, ರಂಗಕರ್ಮಿ.
  25. ಡಾ.ಕಿರಣ್ ಕಮಲ್ ಪ್ರಸಾದ್, ಜೀವಿಕ.
  26. ಎ.ಎಸ್.ಪ್ರಭಾಕರ್, ಪ್ರಾಧ್ಯಾಪಕರು.
  27. ಎಂ.ಆರ್.ನAದನ್ ನಿವೃತ್ತ ಪ್ರಾಧ್ಯಾಪಕರು.
  28. ಚೆನ್ನಮ್ಮ, ಮಹಿಳಾ ಮುನ್ನಡೆ.
  29. ಶಿವಣ್ಣ, ಪ್ರಾಧ್ಯಾಪಕ.
  30. ಫಾ.ಸಮೀರ್ ಮಿನ್ಜಿ, ಮೈನ್ ಇಂಡಿಯನ್ ಸೋಸಿಯಲ್ ಇನ್‌ಸ್ಟಿಟ್ಯೂಟ್.
  31. ಖಲೀಂಉಲ್ಲಾ, ಸ್ವರಾಜ್ ಇಂಡಿಯಾ.
  32. ರವಿ ಮೋಹನ್, ಕಾರ್ಮಿಕ ಮುಖಂಡ.
  33. ನಾಗೇಶ್ ಅರಳಕುಪ್ಪೆ
  34. ಪೂರ್ಣಿಮಾ, ಮಹಿಳಾ ಮುನ್ನಡೆ.
  35. ಚಂದ್ರು ತರಹುಣಿಸೆ – ಪತ್ರಕರ್ತ
  36. ಮಂಜುಳಾ ಹುಲಿಕುಂಟೆ – ಕವಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...