Homeಕರ್ನಾಟಕಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ 'ಪ್ರಗತಿಪರ ಸೌಹಾರ್ದ ಸಂಘಟನೆಗಳ' ಆಗ್ರಹ

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

- Advertisement -
- Advertisement -

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯ ಸೌಹಾರ್ದ ಪರಂಪರೆಯನ್ನು ಸಂರಕ್ಷಿಸಲು ಹಾಗೂ ಸಂಪ್ರದಾಯದಂತೆ ಉರುಸ್ ನಡೆಸಲು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ಕಳುಹಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಸೌಹಾರ್ದ ತಾಣವಾದ ಬಾಬಾ ಬುಡನ್ ಗಿರಿ ಉಳಿವಿಗೋಸ್ಕರ ಕರ್ನಾಟಕದ ಎಲ್ಲಾ ಪ್ರಗತಿಪರ ಮನಸ್ಸುಗಳು ಅನೇಕ ದಶಕಗಳ ಕಾಲ ಹೋರಾಟ ಮಾಡಿದ್ದ ಇತಿಹಾಸ ನಮಗೆಲ್ಲರಿಗೂ ಗೊತ್ತೇ ಇದೆ. ಅದರಾಚೆಗೂ ಕೂಡ ಸಂಘಪರಿವಾರದ ಒತ್ತಡಕ್ಕೆ ಮಣಿದ ಕಾಂಗ್ರೆಸ್ ಸರ್ಕಾರ ಒಂದು ರಾಜಿ ಸೂತ್ರವನ್ನು ಮುಂದಿಟ್ಟಿತ್ತು. ಅದರ ಪ್ರಕಾರ ಉರುಸ್ ಹಾಗೂ ದತ್ತಪೂಜೆ ಎರಡನ್ನೂ ನಡೆಸಲು ಅವಕಾಶ ಇರಬೇಕು. ಎರಡನ್ನೂ ಕೂಡ ಜಿಲ್ಲಾಡಳಿತ ಮೇಲ್ವಿಚಾರಣೆ ಮಾಡಬೇಕು ಎನ್ನುವ ತೀರ್ಮಾನಕ್ಕೆ ಇದಾಗಿತ್ತು. ದತ್ತ ಪೂಜೆಯ ಹೆಸರಿನಲ್ಲಿ ಸಂಘಪರಿವಾರಕ್ಕೆ ಬ್ರಾಹ್ಮಣೀಯ ಆಚರಣೆಯನ್ನು ತುರುಕಲು ಇದು ಅವಕಾಶ ನೀಡುವುದಾಗಿದ್ದರೂ, ಒಂದು ರೀತಿಯಲ್ಲಿ ಈಗಾದರೂ ಈ ಸಂಘರ್ಷ ಮುಕ್ತಾಯಗೊಳ್ಳಲಿ ಎಂದು ಅದನ್ನು ಬೆಂಬಲಿಸಿದ ಜನರೂ ಇದ್ದರು. ಆದರೆ ಇದು ಇಬ್ಬರಿಗೂ ಅವಕಾಶ ಮಾಡಿಕೊಡುವ ಜಾತ್ಯಾತೀತ ನಿಲುವಲ್ಲ. ಸಂಘ ಪರಿವಾರಕ್ಕೆ ಮಣೆ ಹಾಕಿ, ಸೂಫಿ ಪರಂಪರೆಯನ್ನು ನಮ ನಿಶೇಧಿಸುವ ತಂತ್ರಗಾರಿಕೆ ಎಂಬುದು ಬಯಲಾಗಿದೆ” ಎಂದು ಬಹಿರಂಗ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಬ್ರಾಹ್ಮಣೀಯ ರೀತಿಯಲ್ಲಿ ದತ್ತ ಜಯಂತಿ ನಡೆಸಲು ಜಿಲ್ಲಾಡಳಿತ ಸಂಪೂರ್ಣ ಅವಕಾಶ ನೀಡಿತ್ತು. ಬಾಬಾ ಬುಡನ್ ಗಿರಿಯನ್ನು ಕೇಸರಿಮಯಗೊಳಿಸಿ ಸಂಘಪರಿವಾರದ ನೇತೃತ್ವದಲ್ಲಿ ದತ್ತ ಜಯಂತಿ ನಡೆಯಿತು. ಆದರೆ, ಅದೇ ಸಂಧರ್ಭದಲ್ಲಿ ನೆನ್ನೆ(ಮಾರ್ಚ್4), ಇಂದು(ಮಾರ್ಚ್5) ಮತ್ತು ನಾಳೆ(ಮಾರ್ಚ್6) ದರ್ಗಾ ಸಮಿತಿ ಕಡೆಯಿಂದ ಉರುಸ್ ಆಯೋಜನೆಗೊಂಡಿತ್ತು. ಆದರೆ ಜಿಲ್ಲಾಡಳಿತ ಉರುಸ್ ನಡೆಯದಂತೆ ತಡೆಯೊಡ್ಡಿದೆ. ಸಜ್ಜಾದೆ ಅವರಿಗೆ ನಿಮಗೆ ಇಲ್ಲಿ ಸಂಪ್ರದಾಯದಂತೆ ಗಂಧ ಹಚ್ಚುವ, ಉರುಸ್ ಅನ್ನು ನಡೆಸಿಕೊಡುವ ಹಕ್ಕು ಇಲ್ಲ ಎಂದು ತಡೆ ಹಿಡಿದು, ಗೋರಿಯ ಮೇಲೆ ಹಸಿರು ಚಾದರ್ ಹಾಕುವುದಕ್ಕಾಗಲಿ, ಅವರ ಸಂಪ್ರದಾಯದಂತೆ ಉರುಸ್ ನಡೆಸಲಾಗಲಿ ಅವಕಾಶ ಕೊಡದೆ ಅವರನ್ನು ಹೊರಗಿಡಲಾಗಿದೆ” ಎಂದು ಆರೋಪಿಸಿದ್ದಾರೆ.

“ಈ ಅನ್ಯಾಯವನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು. ಆ ಪ್ರತಿಭಟನೆಗೂ ಅವಕಾಶ ಕೊಡದಂತೆ ಪೊಲೀಸರು ಪ್ರತಿಭಟನೆಗೆ ಮುಂದಾದ ಹೋರಾಟಗಾರರನ್ನು ಎಳೆದಾಡಿ ಅವಮಾನಕಾರಿಯಾಗಿ ನಡೆಸಿಕೊಂಡಿದ್ದಾರೆ. ಇದು ಹುಸಿ ಜಾತ್ಯಾತೀತ ಹಾಗೂ ದ್ವಂದ್ವ ನೀತಿಯಾಗಿದೆ. ಕಾಂಗ್ರೆಸ್ ಸರ್ಕಾರದ ಈ ನಡವಳಿಕೆಯನ್ನು ನಾವು ಖಂಡಿಸುತ್ತಿದ್ದೇವೆ. ತಾವು ಈ ಕೂಡಲೇ ಮಧ್ಯಪ್ರವೇಶ ಮಾಡಿ ಬಾಬಾ ಬುಡನ್ ಗಿರಿಯಲ್ಲಿ ಸೌಹಾರ್ದ ಪರಂಪರೆಯನ್ನು ಸಂರಕ್ಷಿಸಬೇಕು, ಸುಪ್ರೀಂಕೋರ್ಟ್ ತೀರ್ಪಿನ ಆದೇಶದಂತೆ ನಡೆದುಕೊಳ್ಳಬೇಕು. ಉರುಸ್ ನಡೆಸಲು ಸಜ್ಜಾದೆ ಮತ್ತು ಭಕ್ತಾದಿಗಳಿಗೆ ಅವಕಾಶ ನೀಡಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತಕ್ಕೆ ಸೂಕ್ತ ರೀತಿಯಲ್ಲಿ ನಿರ್ದೇಶನ ನೀಡಬೇಕೆಂದು ಒತ್ತಾಯಿಸುತ್ತಿದ್ದೇವೆ” ಎಂದು ಆಗ್ರಹಿಸಿದ್ದಾರೆ.

ಪತ್ರದಲ್ಲಿ ಸಹಿ ಮಾಡಿದರವರು:

  1. ಡಾ.ವಿಜಯಮ್ಮ, ಹಿರಿಯ ಪತ್ರಕರ್ತರು.
  2. ತಾರಾರಾವ್, ಎದ್ದೇಳು ಕರ್ನಾಟಕ.
  3. ಬಂಜಗೆರೆ ಜಯಪ್ರಕಾಶ್‌
  4. ಪ್ರಕಾಶ್‌ ರಾಜ್
  5. ಕೆ.ಎಲ್.ಅಶೋಕ್, ಕಾರ್ಯದರ್ಶಿ, ಕರ್ನಾಟಕ ಜನಶಕ್ತಿ.
  6. ಗೌಸ್ ಮೊಹಿಯುದ್ಧೀನ್.
  7. ನಗರಗೆರೆ ರಮೇಶ್, ಶಾಂತಿಗಾಗಿ ನಾಗರಿಕರ ವೇದಿಕೆ.
  8. ಪ್ರೊ.ವಿ.ಎಸ್.ಶ್ರೀಧರ್, ಶಾಂತಿಗಾಗಿ ನಾಗರಿಕರ ವೇದಿಕೆ.
  9. ನೂರ್ ಶ್ರೀಧರ್ ರಾಜ್ಯಾಧ್ಯಕ್ಷರು, ಕರ್ನಾಟಕ ಜನಶಕ್ತಿ.
  10. ಶ್ರೀಪಾದ್ ಭಟ್, ಶಿಕ್ಷಣ ತಜ್ಞರು.
  11. ಬಸವರಾಜ್ ಕೌತಾಳ್, ಒಳ ಮೀಸಲಾತಿ ಹೋರಾಟ ಸಮಿತಿ.
  12. ಕರಿಯಪ್ಪ ಗುಡಿಮನಿ, ಒಳಮೀಸಲಾತಿ ಹೋರಾಟಗಾರರು.
  13. ನಿರಂಜನಾರಾಧ್ಯ ವಿ.ಪಿ., ಶಿಕ್ಷಣ ತಜ್ಞರು.
  14. ಸಿರಿಮನೆ ನಾಗರಾಜ್, ಗೌರವಾಧ್ಯಕ್ಷರು, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ.
  15. ಸಿದ್ಗೌಡ ಮೋದಗಿ, ಭಾರತೀಯ ಕೃಷಿಕ ಸಮಾಜ.
  16. ಅನಂತ್, ಯುವಶಕ್ತಿ.
  17. ಮಲ್ಲು ಕುಂಬಾರ್ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ.,
  18. ಬಸವರಾಜ್ ಸೂಳಿಭಾವಿ ಮೇ ಸಾಹಿತ್ಯ ಬಳಗ.,
  19. ಬಸವರಾಜ್, ಬಾದರ್ಲಿ.
  20. ಸಿದ್ಧರಾಜು ಮಂಡ್ಯ, ಕರ್ನಾಟಕ ಜನಶಕ್ತಿ
  21. ಕುಮಾರ್ ಸಮತಳ, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ.
  22. ಲಕ್ಷ್ಮಣ ಮಂಡಲಗೇರಾ, ರಂಗಕರ್ಮಿ-ಪತ್ರಕರ್ತ
  23. ದುರ್ಗೇಶ್ ರಾಜ್ಯ ಸಂಚಾಲಕ ಕೆವಿಎಸ್,
  24. ರಘು ನಂದನ್, ರಂಗಕರ್ಮಿ.
  25. ಡಾ.ಕಿರಣ್ ಕಮಲ್ ಪ್ರಸಾದ್, ಜೀವಿಕ.
  26. ಎ.ಎಸ್.ಪ್ರಭಾಕರ್, ಪ್ರಾಧ್ಯಾಪಕರು.
  27. ಎಂ.ಆರ್.ನAದನ್ ನಿವೃತ್ತ ಪ್ರಾಧ್ಯಾಪಕರು.
  28. ಚೆನ್ನಮ್ಮ, ಮಹಿಳಾ ಮುನ್ನಡೆ.
  29. ಶಿವಣ್ಣ, ಪ್ರಾಧ್ಯಾಪಕ.
  30. ಫಾ.ಸಮೀರ್ ಮಿನ್ಜಿ, ಮೈನ್ ಇಂಡಿಯನ್ ಸೋಸಿಯಲ್ ಇನ್‌ಸ್ಟಿಟ್ಯೂಟ್.
  31. ಖಲೀಂಉಲ್ಲಾ, ಸ್ವರಾಜ್ ಇಂಡಿಯಾ.
  32. ರವಿ ಮೋಹನ್, ಕಾರ್ಮಿಕ ಮುಖಂಡ.
  33. ನಾಗೇಶ್ ಅರಳಕುಪ್ಪೆ
  34. ಪೂರ್ಣಿಮಾ, ಮಹಿಳಾ ಮುನ್ನಡೆ.
  35. ಚಂದ್ರು ತರಹುಣಿಸೆ – ಪತ್ರಕರ್ತ
  36. ಮಂಜುಳಾ ಹುಲಿಕುಂಟೆ – ಕವಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ...

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...