Homeಮುಖಪುಟಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿಯವರ ಪರ ಪ್ರಗತಿಪರರ ಟ್ವಿಟ್ಟರ್‌ & ಸಹಿಸಂಗ್ರಹ ಅಭಿಯಾನ

ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿಯವರ ಪರ ಪ್ರಗತಿಪರರ ಟ್ವಿಟ್ಟರ್‌ & ಸಹಿಸಂಗ್ರಹ ಅಭಿಯಾನ

- Advertisement -
- Advertisement -

ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿಯವರ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಆಡಿದ ಮಾತುಗಳಿಗೆ ರಾಜ್ಯದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಚಿತ್ರದುರ್ಗ ಮತ್ತು ರಾಯಚೂರಿನಲ್ಲಿ ಪತ್ರಿಕಾಗೋಷ್ಠಿಗಳು ನಡೆದಿದ್ದು ಪ್ರತಿಭಟನೆಗೆ ಕರೆ ಕೊಡಲಾಗಿದೆ.

ಬಹಳಷ್ಟು ಜನರು ಯತ್ನಾಳ್‌ ಮತ್ತು ಬಿಜೆಪಿ ಸಿಟ್ಟಿಗೆದ್ದಿದ್ದು ಟ್ವಿಟ್ಟರ್‌ ಅಭಿಯಾನಕ್ಕೆ ಕರೆ ಕೊಡಲಾಗಿದೆ. ಅಲ್ಲದೇ ಬರಗೂರು ರಾಮಚಂದ್ರಪ್ಪ, ಬಿ.ಟಿ. ಲಲಿತಾನಾಯಕ್, ಸಿದ್ಧನಗೌಡ ಪಾಟೀಲ್, ಕೆ.ಪಿ.ಸುರೇಶ, ಬಿ ಟಿ ಜಾಹ್ನವಿ, ಬಸೂ, ದಿನೇಶ್ ಅಮಿನ್ ಮಟ್ಟು, ಅರುಣ್ ಜೋಳದಕೂಡ್ಲಿಗಿ, ಬಿ. ಶ್ರೀಪಾದ ಭಟ್, ಅಕ್ಷತಾ ಹುಂಚದಕಟ್ಟೆ, ಬಿದಲೋಟಿ ರಂಗನಾಥ್, ಎಲ್.ಎನ್. ಮುಕುಂದರಾಜ್ ಸೇರಿದಂತೆ ನೂರಾರು ಪ್ರಗತಿಪರರು ಸಹಿ ಮಾಡಿರುವ ಖಂಡನಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಖಂಡನಾ ಹೇಳಿಕೆ ಕೆಳಗಿನಂತಿದೆ.

ನಾಡಿನ ಸಾಕ್ಷಿಪ್ರಜ್ಞೆ, ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ, ಶ್ರೀ ಎಚ್.ಎಸ್. ದೊರೆಸ್ವಾಮಿಯವರ ಕುರಿತು ಶಾಸಕ ಬಸನಗೌಡ ಯತ್ನಾಳ್ ಅವಹೇಳನಕಾರಿ ಮಾತುಗಳ ವಿರುದ್ಧ ಖಂಡನಾ ಹೇಳಿಕೆ ಕೆಳಗಿನಂತಿದೆ.

ನಿಮಗೆ ತಿಳಿದಿರುವಂತೆ ನಿನ್ನೆ ಬಿಜಾಪುರದ ಒಂದು ಸಭೆಯಲ್ಲಿ ಶಾಸಕ ಬಸನಗೌಡ ಯತ್ನಾಳ್, ಸಂದರ್ಭವೇ ಇಲ್ಲದಿದ್ದರೂ ಸ್ವಾತಂತ್ರ್ಯ ಹೋರಾಟಗಾರ ಶ್ರೀ ದೊರೆಸ್ವಾಮಿಯವರ ವಿಚಾರ ಎಳೆತಂದು, ಅತ್ಯಂತ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. 102 ವರ್ಷಗಳ ಹಿರಿಯ ಜೀವ, ನಾಡಿನ ಸಾಕ್ಷಿಪ್ರಜ್ಞೆ, ಎಲ್ಲ ಜನಪರ ಚಿಂತನೆ-ಚಳವಳಿಗಳ ಒಡನಾಡಿಯಾಗಿರುವ ಶ್ರೀ ದೊರೆಸ್ವಾಮಿಯವರು ಕರ್ನಾಟಕಕ್ಕೆ ಮಾತ್ರವಲ್ಲ, ನಮ್ಮ ದೇಶದ ಆಸ್ತಿ.‌ ನಮ್ಮೆಲ್ಲರ ಹೆಮ್ಮೆ.‌ ಅಂತಹವರ ಕುರಿತಾಗಿ, ಸ್ವತಃ ಯಾವುದೇ ಒಳ್ಳೆಯ ಕೆಲಸ ಮಾಡಿರದ, ಜನರ ಪರವಾದ ಚಿಂತನೆಯಾಗಲಿ, ಕ್ರಿಯೆಯಾಗಲಿ ಇಲ್ಲದ ಒಬ್ಬ ವ್ಯಕ್ತಿ ಈ ರೀತಿಯ ಮಾತುಗಳನ್ನಾಡುವುದು ಅತ್ಯಂತ ಆಕ್ಷೇಪಾರ್ಹವಾದುದು.

ಈಗ ಶಾಸಕನಾಗಿರುವ ಈ ಬಸನಗೌಡ ಯತ್ನಾಳ್ ತಾನೇ ಚುನಾವಣಾ ಆಯೋಗಕ್ಕೆ ಕೊಟ್ಟ ಮಾಹಿತಿಯ ಪ್ರಕಾರ, ಆತನ ವಿರುದ್ಧ ‘ವಂಚನೆ, ಶಾಂತಿಗೆ ಭಂಗ ತಂದಿರುವುದು, ಗಲಭೆಗೆ ಕುಮ್ಮಕ್ಕು’ ಸೇರಿದಂತೆ ಸುಮಾರು 23 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇಂತಹ ವ್ಯಕ್ತಿ ಶ್ರೀ ದೊರೆಸ್ವಾಮಿಯಂತಹ ಪ್ರಮಾಣಿಕ, ಸಜ್ಜನ, ಬದ್ಧತೆಯುಳ್ಳ ಹೋರಾಟಗಾರರನ್ನು “ಪಾಕಿಸ್ತಾನದ ಏಜೆಂಟ್, ಆತ ಸ್ವಾತಂತ್ರ್ಯ ಹೋರಾಟಗಾರನೇ ಅಲ್ಲ, ಅವನು ಗುಂಡಿಗೆ ಬಲಿಯಾಗುತ್ತಾನೆ” ಇತ್ಯಾದಿಯಾಗಿ ಏಕವಚನದಲ್ಲಿ ಮಾತಾಡಿರುವುದು ಕನ್ನಡಿಗರಾದ ನಮ್ಮೆಲ್ಲರಲ್ಲಿ ಅಪಾರ ಆಕ್ರೋಶ ಹುಟ್ಟಿಸಿದೆ.

ಸ್ವಾತಂತ್ರ್ಯ ಚಳವಳಿಯಲ್ಲಿ ಶ್ರೀ ದೊರೆಸ್ವಾಮಿಯವರ ಪಾತ್ರವೇನು ಎಂಬ ಬಗ್ಗೆ ಅಧಿಕೃತ ದಾಖಲೆಗಳು ಲಭ್ಯವಿದ್ದು, ಅದು ಚರಿತ್ರೆಯಲ್ಲಿ ಈಗಾಗಲೇ ಗಟ್ಟಿಯಾಗಿ ದಾಖಲಾಗಿರುವ ಸಂಗತಿಯಾಗಿದೆ. ಅವರು ಕೇವಲ ಬ್ರಿಟೀಷರನ್ನು ಭಾರತದಿಂದ ಓಡಿಸುವುದಕ್ಕಷ್ಟೆ ಸೀಮಿತವಾಗದೆ, ಒಂದು ಸುಂದರ, ಸಮಾನ, ಸಹಬಾಳ್ವೆಯ ಭಾರತವನ್ನು ಕಟ್ಟುವ ಕನಸನ್ನಿಟ್ಟುಕೊಂಡು ನಿರಂತರವಾಗಿ ಶ್ರಮಿಸುತ್ತಾ ಬಂದ ಅಪರೂಪದ ಗಾಂಧಿವಾದಿ ಹೋರಾಟಗಾರರು. ಮಹಾತ್ಮಾ ಗಾಂಧೀಜಿಯವರ ಒಡನಾಡಿಯಾಗಿದ್ದ ಈ ಮಹಾನ್‌ ಚೇತನ ಇಂದಿಗೂ ಅವರಂತೆಯೆ ಸತ್ಯಪಕ್ಷಪಾತಿಯಾಗಿ, ನೇರನಿಷ್ಠುರಿಯಾಗಿ, ನಾಡಿನ ಜನತೆಯ ಹಿತಾಸಕ್ತಿಗೆ ಮತ್ತು ಸಂವಿಧಾನದ ಆಶಯಗಳಿಗೆ ಬದ್ಧರಾಗಿ ನುಡಿಯುತ್ತಾ, ನಡೆಯುತ್ತಾ ಬಂದಿರುವುದು, ಯತ್ನಾಳನಂತಹ ಹೊಣೆಗೇಡಿಗಳಿಗೆ ನುಂಗಲಾರದ ತುತ್ತಾಗಿದೆ. ಆತನ ಇಂತಹ ಮಾತುಗಳು ಶ್ರೀ ದೊರೆಸ್ವಾಮಿಯವರಿಗೆ ಮಾತ್ರವಲ್ಲ, ಇಡೀ ಸ್ವಾತಂತ್ರ್ಯ ಚಳವಳಿಗೇ ಬಗೆದ ಅಪಚಾರವಾಗಿದೆ.

ಯತ್ನಾಳನಿಗಾಗಲಿ ಅವರ ಪಕ್ಷಕ್ಕಾಗಲೀ, ಸ್ವಾತಂತ್ರ್ಯ ಚಳವಳಿಯ ಗಂಧಗಾಳಿ ಗೊತ್ತಿಲ್ಲ. ಇಡೀ ಭಾರತದ ಜನತೆ ಜಾತಿ-ಧರ್ಮ ಬೇಧಬಿಟ್ಟು ಒಗ್ಗೂಡಿ, ಪರಕೀಯರನ್ನು ಭಾರತ ಬಿಟ್ಟು ತೊಲಗಿಸುವ ಮತ್ತು ಸ್ವತಂತ್ರ, ಸಮಾನ ಭಾರತ ಕಟ್ಟುವ ಉದ್ದೇಶದಿಂದ ಪ್ರಾಣವನ್ನು‌ ಲೆಕ್ಕಿಸದೆ ಹೋರಾಡುತ್ತಿರುವಾಗ, ಅದರಲ್ಲೇ ಕೋಮುವಾದದ ಹುಳಿಹಿಂಡುತ್ತಾ ಸ್ವಾತಂತ್ರ್ಯ ಚಳವಳಿಗೇ ದ್ರೋಹ ಬಗೆದ ಪಕ್ಷ ಅದು. ಅಂತಹ ಪಕ್ಷದೊಳಗೆ ಯತ್ನಾಳನಂತಹವರನ್ನೇ ಸಾಕಿಕೊಂಡಿರುವುದರಲ್ಲಿ ಆಶ್ಚರ್ಯವಿಲ್ಲ. ಇಂತಹ ಅನೇಕರು ಇತ್ತೀಚೆಗೆ ಜೀವಪರವಾದ ಅಭಿಪ್ರಾಯ ವ್ಯಕ್ತಪಡಿಸುವವರ ಮೇಲೆ, ಎನ್‌ಪಿಆರ್-ಎನ್‌ಆರ್‌ಸಿಯಂತಹ ಜೀವವಿರೋಧಿತನವನ್ನು ವಿರೋಧಿಸುವವರ ಮೇಲೆ ದಾಳಿ ಮಾಡುತ್ತಿರುವುದನ್ನು, ಸ್ವತಂತ್ರ ಚಿಂತನೆಗೆ ಬೆದರಿಕೆ ಒಡ್ಡುತ್ತಿರುವುದನ್ನು ನೋಡುತ್ತಿದ್ದೇವೆ.‌ ಅಷ್ಟೇ ಏಕೆ, ಸರ್ಕಾರದ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕವಿಗಳು, ಪತ್ರಕರ್ತರು, ಶಿಕ್ಷಕರು, ಹೋರಾಟಗಾರರು, ಸಾರ್ವಜನಿಕರು- ಎಲ್ಲರ ಮೇಲೆ ದೇಶದ್ರೋಹದ ಆರೋಪ ಹೊರಿಸುತ್ತಾ ಬಂಧಿಸುತ್ತಿರುವುದನ್ನೂ ನೋಡುತ್ತಿದ್ದೇವೆ. ಇದು ಭಯಭೀತಿಯ ವಾತಾವರಣ ಸೃಷ್ಟಿಸುತ್ತಾ, ಕೋಮುಗಲಭೆಗಳಿಗೆ ಪ್ರಚೋದನೆ ನೀಡುತ್ತಾ, ಭಾರತದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಪ್ರಯತ್ನ.

ಆದ್ದರಿಂದ, ಸಂವಿಧಾನ ವಿರೋಧಿಯಾದ ಈ ಎಲ್ಲ ಬೆಳವಣಿಗೆಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಭಾರತವು, ಎಂದಿಗೂ ಶಾಂತಿ-ಸಹಬಾಳ್ವೆಯ ನಾಡಾಗಿ ಉಳಿಯಬೇಕು ಮತ್ತು ಹಾಗಾದಾಗ ನಾವು ನಿಜವಾಗಿಯೂ ಅಭಿವೃದ್ಧಿಪಥದಲ್ಲಿ ಸಾಗಲು ಸಾಧ್ಯ ಎಂದು ಭಾವಿಸುತ್ತೇವೆ.

ಆದ್ದರಿಂದ, ಕೆಳಗೆ ಸಹಿ ಮಾಡಿರುವ‌ ನಾವೆಲ್ಲರೂ, ಈ ಆಗ್ರಹಗಳನ್ನು ಮುಂದಿಡುತ್ತಿದ್ದೇವೆ.

1.ಶಾಸಕ ಬಸನಗೌಡ ಯತ್ನಾಳ್ ಮೇಲೆ, ದೇಶದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಕ್ಕೆ, ಸ್ವಾತಂತ್ರ್ಯ ಚಳವಳಿಯನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದಕ್ಕೆ ಮತ್ತು ಸ್ವಾತಂತ್ರ್ಯ ಹೋರಾಟಗಾರ ಶ್ರೀ ದೊರೆಸ್ವಾಮಿಯವರ ಬಗ್ಗೆ ಅತ್ಯಂತ ಆಕ್ಷೇಪಾರ್ಹವಾಗಿ ಮಾತನಾಡಿದ್ದಕ್ಕೆ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು.

2.ಶ್ರೀ ದೊರೆಸ್ವಾಮಿಯವರ ಕುರಿತು “ಅವನು ಗುಂಡಿಗೆ ಬಲಿಯಾಗುತ್ತಾನೆ” ಎಂದು ಹೇಳಿರುವುದು ಕೊಲೆಗೆ ಪ್ರಚೋದನೆ ಮಾಡುವಂತಹ ಹೇಳಿಕೆಯಾಗಿದೆ.‌ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಯತ್ನಾಳ್ ಮೇಲೆ ಕೊಲೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆಯೂ ಕ್ರಮ ಕೈಗೊಳ್ಳಬೇಕು.

3.ಯತ್ನಾಳ್ ಸಂವಿಧಾನದ 51 ಎ (ಬಿ) ಉಲ್ಲಂಘಿಸಿದ್ದು ಅವರ ಶಾಸಕ ಸ್ಥಾನದಿಂದ ಪದಚ್ಯುತಗೊಳಿಸಿ

4.ಯತ್ನಾಳ್ ಮಾತನಾಡಿದ ಅಪಾಯಕಾರಿ ಮಾತುಗಳ ಹೊಣೆ ಹೊತ್ತು, ಗೃಹಮಂತ್ರಿ ರಾಜೀನಾಮೆ ನೀಡಬೇಕು.

5.ಹೀಗೆಯೆ ಬೇಕಾಬಿಟ್ಟಿ ಮಾತಾನಾಡುತ್ತಿರುವ, ಬಿಜೆಪಿ ಪಕ್ಷದ ಅನೇಕ ಪದಾಧಿಕಾರಿಗಳು ಮತ್ತು ಇನ್ನಿತರರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು.

6. ಶ್ರೀ ದೊರೆಸ್ವಾಮಿಯವರು, ನಮ್ಮೆಲ್ಲರಿಗೂ ಮಾರ್ಗದರ್ಶಕರೂ ನಮ್ಮ ಸ್ಫೂರ್ತಿಯ ಸೆಲೆಯೂ ಆಗಿದ್ದಾರೆ. ಆದ್ದರಿಂದ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮತ್ತು ಸರ್ಕಾರ ಕ್ರಮ ಜರುಗಿಸುವವರೆಗೆ ರಾಜ್ಯದ ಎಲ್ಲ ಜನಪರ ಸಂಘಟನೆಗಳು, ಚಿಂತಕರು, ಗಾಂಧಿವಾದಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಜವಾಬ್ದಾರಿಯುಳ್ಳ ನಾಗರೀಕರ ಒಗ್ಗಟ್ಟಿನ ಹೋರಾಟ ಈ ನಿಟ್ಟಿನಲ್ಲಿ ನಿರಂತರವಾಗಿ ನಡೆಯಲಿದೆ.

ನಮ್ಮ ದೊರೆಸ್ವಾಮಿ, ನಮ್ಮ ಹೆಮ್ಮೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...