Homeಮುಖಪುಟಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿಯವರ ಪರ ಪ್ರಗತಿಪರರ ಟ್ವಿಟ್ಟರ್‌ & ಸಹಿಸಂಗ್ರಹ ಅಭಿಯಾನ

ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿಯವರ ಪರ ಪ್ರಗತಿಪರರ ಟ್ವಿಟ್ಟರ್‌ & ಸಹಿಸಂಗ್ರಹ ಅಭಿಯಾನ

- Advertisement -
- Advertisement -

ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿಯವರ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಆಡಿದ ಮಾತುಗಳಿಗೆ ರಾಜ್ಯದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಚಿತ್ರದುರ್ಗ ಮತ್ತು ರಾಯಚೂರಿನಲ್ಲಿ ಪತ್ರಿಕಾಗೋಷ್ಠಿಗಳು ನಡೆದಿದ್ದು ಪ್ರತಿಭಟನೆಗೆ ಕರೆ ಕೊಡಲಾಗಿದೆ.

ಬಹಳಷ್ಟು ಜನರು ಯತ್ನಾಳ್‌ ಮತ್ತು ಬಿಜೆಪಿ ಸಿಟ್ಟಿಗೆದ್ದಿದ್ದು ಟ್ವಿಟ್ಟರ್‌ ಅಭಿಯಾನಕ್ಕೆ ಕರೆ ಕೊಡಲಾಗಿದೆ. ಅಲ್ಲದೇ ಬರಗೂರು ರಾಮಚಂದ್ರಪ್ಪ, ಬಿ.ಟಿ. ಲಲಿತಾನಾಯಕ್, ಸಿದ್ಧನಗೌಡ ಪಾಟೀಲ್, ಕೆ.ಪಿ.ಸುರೇಶ, ಬಿ ಟಿ ಜಾಹ್ನವಿ, ಬಸೂ, ದಿನೇಶ್ ಅಮಿನ್ ಮಟ್ಟು, ಅರುಣ್ ಜೋಳದಕೂಡ್ಲಿಗಿ, ಬಿ. ಶ್ರೀಪಾದ ಭಟ್, ಅಕ್ಷತಾ ಹುಂಚದಕಟ್ಟೆ, ಬಿದಲೋಟಿ ರಂಗನಾಥ್, ಎಲ್.ಎನ್. ಮುಕುಂದರಾಜ್ ಸೇರಿದಂತೆ ನೂರಾರು ಪ್ರಗತಿಪರರು ಸಹಿ ಮಾಡಿರುವ ಖಂಡನಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಖಂಡನಾ ಹೇಳಿಕೆ ಕೆಳಗಿನಂತಿದೆ.

ನಾಡಿನ ಸಾಕ್ಷಿಪ್ರಜ್ಞೆ, ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ, ಶ್ರೀ ಎಚ್.ಎಸ್. ದೊರೆಸ್ವಾಮಿಯವರ ಕುರಿತು ಶಾಸಕ ಬಸನಗೌಡ ಯತ್ನಾಳ್ ಅವಹೇಳನಕಾರಿ ಮಾತುಗಳ ವಿರುದ್ಧ ಖಂಡನಾ ಹೇಳಿಕೆ ಕೆಳಗಿನಂತಿದೆ.

ನಿಮಗೆ ತಿಳಿದಿರುವಂತೆ ನಿನ್ನೆ ಬಿಜಾಪುರದ ಒಂದು ಸಭೆಯಲ್ಲಿ ಶಾಸಕ ಬಸನಗೌಡ ಯತ್ನಾಳ್, ಸಂದರ್ಭವೇ ಇಲ್ಲದಿದ್ದರೂ ಸ್ವಾತಂತ್ರ್ಯ ಹೋರಾಟಗಾರ ಶ್ರೀ ದೊರೆಸ್ವಾಮಿಯವರ ವಿಚಾರ ಎಳೆತಂದು, ಅತ್ಯಂತ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. 102 ವರ್ಷಗಳ ಹಿರಿಯ ಜೀವ, ನಾಡಿನ ಸಾಕ್ಷಿಪ್ರಜ್ಞೆ, ಎಲ್ಲ ಜನಪರ ಚಿಂತನೆ-ಚಳವಳಿಗಳ ಒಡನಾಡಿಯಾಗಿರುವ ಶ್ರೀ ದೊರೆಸ್ವಾಮಿಯವರು ಕರ್ನಾಟಕಕ್ಕೆ ಮಾತ್ರವಲ್ಲ, ನಮ್ಮ ದೇಶದ ಆಸ್ತಿ.‌ ನಮ್ಮೆಲ್ಲರ ಹೆಮ್ಮೆ.‌ ಅಂತಹವರ ಕುರಿತಾಗಿ, ಸ್ವತಃ ಯಾವುದೇ ಒಳ್ಳೆಯ ಕೆಲಸ ಮಾಡಿರದ, ಜನರ ಪರವಾದ ಚಿಂತನೆಯಾಗಲಿ, ಕ್ರಿಯೆಯಾಗಲಿ ಇಲ್ಲದ ಒಬ್ಬ ವ್ಯಕ್ತಿ ಈ ರೀತಿಯ ಮಾತುಗಳನ್ನಾಡುವುದು ಅತ್ಯಂತ ಆಕ್ಷೇಪಾರ್ಹವಾದುದು.

ಈಗ ಶಾಸಕನಾಗಿರುವ ಈ ಬಸನಗೌಡ ಯತ್ನಾಳ್ ತಾನೇ ಚುನಾವಣಾ ಆಯೋಗಕ್ಕೆ ಕೊಟ್ಟ ಮಾಹಿತಿಯ ಪ್ರಕಾರ, ಆತನ ವಿರುದ್ಧ ‘ವಂಚನೆ, ಶಾಂತಿಗೆ ಭಂಗ ತಂದಿರುವುದು, ಗಲಭೆಗೆ ಕುಮ್ಮಕ್ಕು’ ಸೇರಿದಂತೆ ಸುಮಾರು 23 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇಂತಹ ವ್ಯಕ್ತಿ ಶ್ರೀ ದೊರೆಸ್ವಾಮಿಯಂತಹ ಪ್ರಮಾಣಿಕ, ಸಜ್ಜನ, ಬದ್ಧತೆಯುಳ್ಳ ಹೋರಾಟಗಾರರನ್ನು “ಪಾಕಿಸ್ತಾನದ ಏಜೆಂಟ್, ಆತ ಸ್ವಾತಂತ್ರ್ಯ ಹೋರಾಟಗಾರನೇ ಅಲ್ಲ, ಅವನು ಗುಂಡಿಗೆ ಬಲಿಯಾಗುತ್ತಾನೆ” ಇತ್ಯಾದಿಯಾಗಿ ಏಕವಚನದಲ್ಲಿ ಮಾತಾಡಿರುವುದು ಕನ್ನಡಿಗರಾದ ನಮ್ಮೆಲ್ಲರಲ್ಲಿ ಅಪಾರ ಆಕ್ರೋಶ ಹುಟ್ಟಿಸಿದೆ.

ಸ್ವಾತಂತ್ರ್ಯ ಚಳವಳಿಯಲ್ಲಿ ಶ್ರೀ ದೊರೆಸ್ವಾಮಿಯವರ ಪಾತ್ರವೇನು ಎಂಬ ಬಗ್ಗೆ ಅಧಿಕೃತ ದಾಖಲೆಗಳು ಲಭ್ಯವಿದ್ದು, ಅದು ಚರಿತ್ರೆಯಲ್ಲಿ ಈಗಾಗಲೇ ಗಟ್ಟಿಯಾಗಿ ದಾಖಲಾಗಿರುವ ಸಂಗತಿಯಾಗಿದೆ. ಅವರು ಕೇವಲ ಬ್ರಿಟೀಷರನ್ನು ಭಾರತದಿಂದ ಓಡಿಸುವುದಕ್ಕಷ್ಟೆ ಸೀಮಿತವಾಗದೆ, ಒಂದು ಸುಂದರ, ಸಮಾನ, ಸಹಬಾಳ್ವೆಯ ಭಾರತವನ್ನು ಕಟ್ಟುವ ಕನಸನ್ನಿಟ್ಟುಕೊಂಡು ನಿರಂತರವಾಗಿ ಶ್ರಮಿಸುತ್ತಾ ಬಂದ ಅಪರೂಪದ ಗಾಂಧಿವಾದಿ ಹೋರಾಟಗಾರರು. ಮಹಾತ್ಮಾ ಗಾಂಧೀಜಿಯವರ ಒಡನಾಡಿಯಾಗಿದ್ದ ಈ ಮಹಾನ್‌ ಚೇತನ ಇಂದಿಗೂ ಅವರಂತೆಯೆ ಸತ್ಯಪಕ್ಷಪಾತಿಯಾಗಿ, ನೇರನಿಷ್ಠುರಿಯಾಗಿ, ನಾಡಿನ ಜನತೆಯ ಹಿತಾಸಕ್ತಿಗೆ ಮತ್ತು ಸಂವಿಧಾನದ ಆಶಯಗಳಿಗೆ ಬದ್ಧರಾಗಿ ನುಡಿಯುತ್ತಾ, ನಡೆಯುತ್ತಾ ಬಂದಿರುವುದು, ಯತ್ನಾಳನಂತಹ ಹೊಣೆಗೇಡಿಗಳಿಗೆ ನುಂಗಲಾರದ ತುತ್ತಾಗಿದೆ. ಆತನ ಇಂತಹ ಮಾತುಗಳು ಶ್ರೀ ದೊರೆಸ್ವಾಮಿಯವರಿಗೆ ಮಾತ್ರವಲ್ಲ, ಇಡೀ ಸ್ವಾತಂತ್ರ್ಯ ಚಳವಳಿಗೇ ಬಗೆದ ಅಪಚಾರವಾಗಿದೆ.

ಯತ್ನಾಳನಿಗಾಗಲಿ ಅವರ ಪಕ್ಷಕ್ಕಾಗಲೀ, ಸ್ವಾತಂತ್ರ್ಯ ಚಳವಳಿಯ ಗಂಧಗಾಳಿ ಗೊತ್ತಿಲ್ಲ. ಇಡೀ ಭಾರತದ ಜನತೆ ಜಾತಿ-ಧರ್ಮ ಬೇಧಬಿಟ್ಟು ಒಗ್ಗೂಡಿ, ಪರಕೀಯರನ್ನು ಭಾರತ ಬಿಟ್ಟು ತೊಲಗಿಸುವ ಮತ್ತು ಸ್ವತಂತ್ರ, ಸಮಾನ ಭಾರತ ಕಟ್ಟುವ ಉದ್ದೇಶದಿಂದ ಪ್ರಾಣವನ್ನು‌ ಲೆಕ್ಕಿಸದೆ ಹೋರಾಡುತ್ತಿರುವಾಗ, ಅದರಲ್ಲೇ ಕೋಮುವಾದದ ಹುಳಿಹಿಂಡುತ್ತಾ ಸ್ವಾತಂತ್ರ್ಯ ಚಳವಳಿಗೇ ದ್ರೋಹ ಬಗೆದ ಪಕ್ಷ ಅದು. ಅಂತಹ ಪಕ್ಷದೊಳಗೆ ಯತ್ನಾಳನಂತಹವರನ್ನೇ ಸಾಕಿಕೊಂಡಿರುವುದರಲ್ಲಿ ಆಶ್ಚರ್ಯವಿಲ್ಲ. ಇಂತಹ ಅನೇಕರು ಇತ್ತೀಚೆಗೆ ಜೀವಪರವಾದ ಅಭಿಪ್ರಾಯ ವ್ಯಕ್ತಪಡಿಸುವವರ ಮೇಲೆ, ಎನ್‌ಪಿಆರ್-ಎನ್‌ಆರ್‌ಸಿಯಂತಹ ಜೀವವಿರೋಧಿತನವನ್ನು ವಿರೋಧಿಸುವವರ ಮೇಲೆ ದಾಳಿ ಮಾಡುತ್ತಿರುವುದನ್ನು, ಸ್ವತಂತ್ರ ಚಿಂತನೆಗೆ ಬೆದರಿಕೆ ಒಡ್ಡುತ್ತಿರುವುದನ್ನು ನೋಡುತ್ತಿದ್ದೇವೆ.‌ ಅಷ್ಟೇ ಏಕೆ, ಸರ್ಕಾರದ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕವಿಗಳು, ಪತ್ರಕರ್ತರು, ಶಿಕ್ಷಕರು, ಹೋರಾಟಗಾರರು, ಸಾರ್ವಜನಿಕರು- ಎಲ್ಲರ ಮೇಲೆ ದೇಶದ್ರೋಹದ ಆರೋಪ ಹೊರಿಸುತ್ತಾ ಬಂಧಿಸುತ್ತಿರುವುದನ್ನೂ ನೋಡುತ್ತಿದ್ದೇವೆ. ಇದು ಭಯಭೀತಿಯ ವಾತಾವರಣ ಸೃಷ್ಟಿಸುತ್ತಾ, ಕೋಮುಗಲಭೆಗಳಿಗೆ ಪ್ರಚೋದನೆ ನೀಡುತ್ತಾ, ಭಾರತದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಪ್ರಯತ್ನ.

ಆದ್ದರಿಂದ, ಸಂವಿಧಾನ ವಿರೋಧಿಯಾದ ಈ ಎಲ್ಲ ಬೆಳವಣಿಗೆಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಭಾರತವು, ಎಂದಿಗೂ ಶಾಂತಿ-ಸಹಬಾಳ್ವೆಯ ನಾಡಾಗಿ ಉಳಿಯಬೇಕು ಮತ್ತು ಹಾಗಾದಾಗ ನಾವು ನಿಜವಾಗಿಯೂ ಅಭಿವೃದ್ಧಿಪಥದಲ್ಲಿ ಸಾಗಲು ಸಾಧ್ಯ ಎಂದು ಭಾವಿಸುತ್ತೇವೆ.

ಆದ್ದರಿಂದ, ಕೆಳಗೆ ಸಹಿ ಮಾಡಿರುವ‌ ನಾವೆಲ್ಲರೂ, ಈ ಆಗ್ರಹಗಳನ್ನು ಮುಂದಿಡುತ್ತಿದ್ದೇವೆ.

1.ಶಾಸಕ ಬಸನಗೌಡ ಯತ್ನಾಳ್ ಮೇಲೆ, ದೇಶದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಕ್ಕೆ, ಸ್ವಾತಂತ್ರ್ಯ ಚಳವಳಿಯನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದಕ್ಕೆ ಮತ್ತು ಸ್ವಾತಂತ್ರ್ಯ ಹೋರಾಟಗಾರ ಶ್ರೀ ದೊರೆಸ್ವಾಮಿಯವರ ಬಗ್ಗೆ ಅತ್ಯಂತ ಆಕ್ಷೇಪಾರ್ಹವಾಗಿ ಮಾತನಾಡಿದ್ದಕ್ಕೆ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು.

2.ಶ್ರೀ ದೊರೆಸ್ವಾಮಿಯವರ ಕುರಿತು “ಅವನು ಗುಂಡಿಗೆ ಬಲಿಯಾಗುತ್ತಾನೆ” ಎಂದು ಹೇಳಿರುವುದು ಕೊಲೆಗೆ ಪ್ರಚೋದನೆ ಮಾಡುವಂತಹ ಹೇಳಿಕೆಯಾಗಿದೆ.‌ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಯತ್ನಾಳ್ ಮೇಲೆ ಕೊಲೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆಯೂ ಕ್ರಮ ಕೈಗೊಳ್ಳಬೇಕು.

3.ಯತ್ನಾಳ್ ಸಂವಿಧಾನದ 51 ಎ (ಬಿ) ಉಲ್ಲಂಘಿಸಿದ್ದು ಅವರ ಶಾಸಕ ಸ್ಥಾನದಿಂದ ಪದಚ್ಯುತಗೊಳಿಸಿ

4.ಯತ್ನಾಳ್ ಮಾತನಾಡಿದ ಅಪಾಯಕಾರಿ ಮಾತುಗಳ ಹೊಣೆ ಹೊತ್ತು, ಗೃಹಮಂತ್ರಿ ರಾಜೀನಾಮೆ ನೀಡಬೇಕು.

5.ಹೀಗೆಯೆ ಬೇಕಾಬಿಟ್ಟಿ ಮಾತಾನಾಡುತ್ತಿರುವ, ಬಿಜೆಪಿ ಪಕ್ಷದ ಅನೇಕ ಪದಾಧಿಕಾರಿಗಳು ಮತ್ತು ಇನ್ನಿತರರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು.

6. ಶ್ರೀ ದೊರೆಸ್ವಾಮಿಯವರು, ನಮ್ಮೆಲ್ಲರಿಗೂ ಮಾರ್ಗದರ್ಶಕರೂ ನಮ್ಮ ಸ್ಫೂರ್ತಿಯ ಸೆಲೆಯೂ ಆಗಿದ್ದಾರೆ. ಆದ್ದರಿಂದ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮತ್ತು ಸರ್ಕಾರ ಕ್ರಮ ಜರುಗಿಸುವವರೆಗೆ ರಾಜ್ಯದ ಎಲ್ಲ ಜನಪರ ಸಂಘಟನೆಗಳು, ಚಿಂತಕರು, ಗಾಂಧಿವಾದಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಜವಾಬ್ದಾರಿಯುಳ್ಳ ನಾಗರೀಕರ ಒಗ್ಗಟ್ಟಿನ ಹೋರಾಟ ಈ ನಿಟ್ಟಿನಲ್ಲಿ ನಿರಂತರವಾಗಿ ನಡೆಯಲಿದೆ.

ನಮ್ಮ ದೊರೆಸ್ವಾಮಿ, ನಮ್ಮ ಹೆಮ್ಮೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...