Homeಮುಖಪುಟಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿಯವರ ಪರ ಪ್ರಗತಿಪರರ ಟ್ವಿಟ್ಟರ್‌ & ಸಹಿಸಂಗ್ರಹ ಅಭಿಯಾನ

ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿಯವರ ಪರ ಪ್ರಗತಿಪರರ ಟ್ವಿಟ್ಟರ್‌ & ಸಹಿಸಂಗ್ರಹ ಅಭಿಯಾನ

- Advertisement -
- Advertisement -

ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿಯವರ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಆಡಿದ ಮಾತುಗಳಿಗೆ ರಾಜ್ಯದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಚಿತ್ರದುರ್ಗ ಮತ್ತು ರಾಯಚೂರಿನಲ್ಲಿ ಪತ್ರಿಕಾಗೋಷ್ಠಿಗಳು ನಡೆದಿದ್ದು ಪ್ರತಿಭಟನೆಗೆ ಕರೆ ಕೊಡಲಾಗಿದೆ.

ಬಹಳಷ್ಟು ಜನರು ಯತ್ನಾಳ್‌ ಮತ್ತು ಬಿಜೆಪಿ ಸಿಟ್ಟಿಗೆದ್ದಿದ್ದು ಟ್ವಿಟ್ಟರ್‌ ಅಭಿಯಾನಕ್ಕೆ ಕರೆ ಕೊಡಲಾಗಿದೆ. ಅಲ್ಲದೇ ಬರಗೂರು ರಾಮಚಂದ್ರಪ್ಪ, ಬಿ.ಟಿ. ಲಲಿತಾನಾಯಕ್, ಸಿದ್ಧನಗೌಡ ಪಾಟೀಲ್, ಕೆ.ಪಿ.ಸುರೇಶ, ಬಿ ಟಿ ಜಾಹ್ನವಿ, ಬಸೂ, ದಿನೇಶ್ ಅಮಿನ್ ಮಟ್ಟು, ಅರುಣ್ ಜೋಳದಕೂಡ್ಲಿಗಿ, ಬಿ. ಶ್ರೀಪಾದ ಭಟ್, ಅಕ್ಷತಾ ಹುಂಚದಕಟ್ಟೆ, ಬಿದಲೋಟಿ ರಂಗನಾಥ್, ಎಲ್.ಎನ್. ಮುಕುಂದರಾಜ್ ಸೇರಿದಂತೆ ನೂರಾರು ಪ್ರಗತಿಪರರು ಸಹಿ ಮಾಡಿರುವ ಖಂಡನಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಖಂಡನಾ ಹೇಳಿಕೆ ಕೆಳಗಿನಂತಿದೆ.

ನಾಡಿನ ಸಾಕ್ಷಿಪ್ರಜ್ಞೆ, ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ, ಶ್ರೀ ಎಚ್.ಎಸ್. ದೊರೆಸ್ವಾಮಿಯವರ ಕುರಿತು ಶಾಸಕ ಬಸನಗೌಡ ಯತ್ನಾಳ್ ಅವಹೇಳನಕಾರಿ ಮಾತುಗಳ ವಿರುದ್ಧ ಖಂಡನಾ ಹೇಳಿಕೆ ಕೆಳಗಿನಂತಿದೆ.

ನಿಮಗೆ ತಿಳಿದಿರುವಂತೆ ನಿನ್ನೆ ಬಿಜಾಪುರದ ಒಂದು ಸಭೆಯಲ್ಲಿ ಶಾಸಕ ಬಸನಗೌಡ ಯತ್ನಾಳ್, ಸಂದರ್ಭವೇ ಇಲ್ಲದಿದ್ದರೂ ಸ್ವಾತಂತ್ರ್ಯ ಹೋರಾಟಗಾರ ಶ್ರೀ ದೊರೆಸ್ವಾಮಿಯವರ ವಿಚಾರ ಎಳೆತಂದು, ಅತ್ಯಂತ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. 102 ವರ್ಷಗಳ ಹಿರಿಯ ಜೀವ, ನಾಡಿನ ಸಾಕ್ಷಿಪ್ರಜ್ಞೆ, ಎಲ್ಲ ಜನಪರ ಚಿಂತನೆ-ಚಳವಳಿಗಳ ಒಡನಾಡಿಯಾಗಿರುವ ಶ್ರೀ ದೊರೆಸ್ವಾಮಿಯವರು ಕರ್ನಾಟಕಕ್ಕೆ ಮಾತ್ರವಲ್ಲ, ನಮ್ಮ ದೇಶದ ಆಸ್ತಿ.‌ ನಮ್ಮೆಲ್ಲರ ಹೆಮ್ಮೆ.‌ ಅಂತಹವರ ಕುರಿತಾಗಿ, ಸ್ವತಃ ಯಾವುದೇ ಒಳ್ಳೆಯ ಕೆಲಸ ಮಾಡಿರದ, ಜನರ ಪರವಾದ ಚಿಂತನೆಯಾಗಲಿ, ಕ್ರಿಯೆಯಾಗಲಿ ಇಲ್ಲದ ಒಬ್ಬ ವ್ಯಕ್ತಿ ಈ ರೀತಿಯ ಮಾತುಗಳನ್ನಾಡುವುದು ಅತ್ಯಂತ ಆಕ್ಷೇಪಾರ್ಹವಾದುದು.

ಈಗ ಶಾಸಕನಾಗಿರುವ ಈ ಬಸನಗೌಡ ಯತ್ನಾಳ್ ತಾನೇ ಚುನಾವಣಾ ಆಯೋಗಕ್ಕೆ ಕೊಟ್ಟ ಮಾಹಿತಿಯ ಪ್ರಕಾರ, ಆತನ ವಿರುದ್ಧ ‘ವಂಚನೆ, ಶಾಂತಿಗೆ ಭಂಗ ತಂದಿರುವುದು, ಗಲಭೆಗೆ ಕುಮ್ಮಕ್ಕು’ ಸೇರಿದಂತೆ ಸುಮಾರು 23 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇಂತಹ ವ್ಯಕ್ತಿ ಶ್ರೀ ದೊರೆಸ್ವಾಮಿಯಂತಹ ಪ್ರಮಾಣಿಕ, ಸಜ್ಜನ, ಬದ್ಧತೆಯುಳ್ಳ ಹೋರಾಟಗಾರರನ್ನು “ಪಾಕಿಸ್ತಾನದ ಏಜೆಂಟ್, ಆತ ಸ್ವಾತಂತ್ರ್ಯ ಹೋರಾಟಗಾರನೇ ಅಲ್ಲ, ಅವನು ಗುಂಡಿಗೆ ಬಲಿಯಾಗುತ್ತಾನೆ” ಇತ್ಯಾದಿಯಾಗಿ ಏಕವಚನದಲ್ಲಿ ಮಾತಾಡಿರುವುದು ಕನ್ನಡಿಗರಾದ ನಮ್ಮೆಲ್ಲರಲ್ಲಿ ಅಪಾರ ಆಕ್ರೋಶ ಹುಟ್ಟಿಸಿದೆ.

ಸ್ವಾತಂತ್ರ್ಯ ಚಳವಳಿಯಲ್ಲಿ ಶ್ರೀ ದೊರೆಸ್ವಾಮಿಯವರ ಪಾತ್ರವೇನು ಎಂಬ ಬಗ್ಗೆ ಅಧಿಕೃತ ದಾಖಲೆಗಳು ಲಭ್ಯವಿದ್ದು, ಅದು ಚರಿತ್ರೆಯಲ್ಲಿ ಈಗಾಗಲೇ ಗಟ್ಟಿಯಾಗಿ ದಾಖಲಾಗಿರುವ ಸಂಗತಿಯಾಗಿದೆ. ಅವರು ಕೇವಲ ಬ್ರಿಟೀಷರನ್ನು ಭಾರತದಿಂದ ಓಡಿಸುವುದಕ್ಕಷ್ಟೆ ಸೀಮಿತವಾಗದೆ, ಒಂದು ಸುಂದರ, ಸಮಾನ, ಸಹಬಾಳ್ವೆಯ ಭಾರತವನ್ನು ಕಟ್ಟುವ ಕನಸನ್ನಿಟ್ಟುಕೊಂಡು ನಿರಂತರವಾಗಿ ಶ್ರಮಿಸುತ್ತಾ ಬಂದ ಅಪರೂಪದ ಗಾಂಧಿವಾದಿ ಹೋರಾಟಗಾರರು. ಮಹಾತ್ಮಾ ಗಾಂಧೀಜಿಯವರ ಒಡನಾಡಿಯಾಗಿದ್ದ ಈ ಮಹಾನ್‌ ಚೇತನ ಇಂದಿಗೂ ಅವರಂತೆಯೆ ಸತ್ಯಪಕ್ಷಪಾತಿಯಾಗಿ, ನೇರನಿಷ್ಠುರಿಯಾಗಿ, ನಾಡಿನ ಜನತೆಯ ಹಿತಾಸಕ್ತಿಗೆ ಮತ್ತು ಸಂವಿಧಾನದ ಆಶಯಗಳಿಗೆ ಬದ್ಧರಾಗಿ ನುಡಿಯುತ್ತಾ, ನಡೆಯುತ್ತಾ ಬಂದಿರುವುದು, ಯತ್ನಾಳನಂತಹ ಹೊಣೆಗೇಡಿಗಳಿಗೆ ನುಂಗಲಾರದ ತುತ್ತಾಗಿದೆ. ಆತನ ಇಂತಹ ಮಾತುಗಳು ಶ್ರೀ ದೊರೆಸ್ವಾಮಿಯವರಿಗೆ ಮಾತ್ರವಲ್ಲ, ಇಡೀ ಸ್ವಾತಂತ್ರ್ಯ ಚಳವಳಿಗೇ ಬಗೆದ ಅಪಚಾರವಾಗಿದೆ.

ಯತ್ನಾಳನಿಗಾಗಲಿ ಅವರ ಪಕ್ಷಕ್ಕಾಗಲೀ, ಸ್ವಾತಂತ್ರ್ಯ ಚಳವಳಿಯ ಗಂಧಗಾಳಿ ಗೊತ್ತಿಲ್ಲ. ಇಡೀ ಭಾರತದ ಜನತೆ ಜಾತಿ-ಧರ್ಮ ಬೇಧಬಿಟ್ಟು ಒಗ್ಗೂಡಿ, ಪರಕೀಯರನ್ನು ಭಾರತ ಬಿಟ್ಟು ತೊಲಗಿಸುವ ಮತ್ತು ಸ್ವತಂತ್ರ, ಸಮಾನ ಭಾರತ ಕಟ್ಟುವ ಉದ್ದೇಶದಿಂದ ಪ್ರಾಣವನ್ನು‌ ಲೆಕ್ಕಿಸದೆ ಹೋರಾಡುತ್ತಿರುವಾಗ, ಅದರಲ್ಲೇ ಕೋಮುವಾದದ ಹುಳಿಹಿಂಡುತ್ತಾ ಸ್ವಾತಂತ್ರ್ಯ ಚಳವಳಿಗೇ ದ್ರೋಹ ಬಗೆದ ಪಕ್ಷ ಅದು. ಅಂತಹ ಪಕ್ಷದೊಳಗೆ ಯತ್ನಾಳನಂತಹವರನ್ನೇ ಸಾಕಿಕೊಂಡಿರುವುದರಲ್ಲಿ ಆಶ್ಚರ್ಯವಿಲ್ಲ. ಇಂತಹ ಅನೇಕರು ಇತ್ತೀಚೆಗೆ ಜೀವಪರವಾದ ಅಭಿಪ್ರಾಯ ವ್ಯಕ್ತಪಡಿಸುವವರ ಮೇಲೆ, ಎನ್‌ಪಿಆರ್-ಎನ್‌ಆರ್‌ಸಿಯಂತಹ ಜೀವವಿರೋಧಿತನವನ್ನು ವಿರೋಧಿಸುವವರ ಮೇಲೆ ದಾಳಿ ಮಾಡುತ್ತಿರುವುದನ್ನು, ಸ್ವತಂತ್ರ ಚಿಂತನೆಗೆ ಬೆದರಿಕೆ ಒಡ್ಡುತ್ತಿರುವುದನ್ನು ನೋಡುತ್ತಿದ್ದೇವೆ.‌ ಅಷ್ಟೇ ಏಕೆ, ಸರ್ಕಾರದ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕವಿಗಳು, ಪತ್ರಕರ್ತರು, ಶಿಕ್ಷಕರು, ಹೋರಾಟಗಾರರು, ಸಾರ್ವಜನಿಕರು- ಎಲ್ಲರ ಮೇಲೆ ದೇಶದ್ರೋಹದ ಆರೋಪ ಹೊರಿಸುತ್ತಾ ಬಂಧಿಸುತ್ತಿರುವುದನ್ನೂ ನೋಡುತ್ತಿದ್ದೇವೆ. ಇದು ಭಯಭೀತಿಯ ವಾತಾವರಣ ಸೃಷ್ಟಿಸುತ್ತಾ, ಕೋಮುಗಲಭೆಗಳಿಗೆ ಪ್ರಚೋದನೆ ನೀಡುತ್ತಾ, ಭಾರತದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಪ್ರಯತ್ನ.

ಆದ್ದರಿಂದ, ಸಂವಿಧಾನ ವಿರೋಧಿಯಾದ ಈ ಎಲ್ಲ ಬೆಳವಣಿಗೆಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಭಾರತವು, ಎಂದಿಗೂ ಶಾಂತಿ-ಸಹಬಾಳ್ವೆಯ ನಾಡಾಗಿ ಉಳಿಯಬೇಕು ಮತ್ತು ಹಾಗಾದಾಗ ನಾವು ನಿಜವಾಗಿಯೂ ಅಭಿವೃದ್ಧಿಪಥದಲ್ಲಿ ಸಾಗಲು ಸಾಧ್ಯ ಎಂದು ಭಾವಿಸುತ್ತೇವೆ.

ಆದ್ದರಿಂದ, ಕೆಳಗೆ ಸಹಿ ಮಾಡಿರುವ‌ ನಾವೆಲ್ಲರೂ, ಈ ಆಗ್ರಹಗಳನ್ನು ಮುಂದಿಡುತ್ತಿದ್ದೇವೆ.

1.ಶಾಸಕ ಬಸನಗೌಡ ಯತ್ನಾಳ್ ಮೇಲೆ, ದೇಶದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಕ್ಕೆ, ಸ್ವಾತಂತ್ರ್ಯ ಚಳವಳಿಯನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದಕ್ಕೆ ಮತ್ತು ಸ್ವಾತಂತ್ರ್ಯ ಹೋರಾಟಗಾರ ಶ್ರೀ ದೊರೆಸ್ವಾಮಿಯವರ ಬಗ್ಗೆ ಅತ್ಯಂತ ಆಕ್ಷೇಪಾರ್ಹವಾಗಿ ಮಾತನಾಡಿದ್ದಕ್ಕೆ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು.

2.ಶ್ರೀ ದೊರೆಸ್ವಾಮಿಯವರ ಕುರಿತು “ಅವನು ಗುಂಡಿಗೆ ಬಲಿಯಾಗುತ್ತಾನೆ” ಎಂದು ಹೇಳಿರುವುದು ಕೊಲೆಗೆ ಪ್ರಚೋದನೆ ಮಾಡುವಂತಹ ಹೇಳಿಕೆಯಾಗಿದೆ.‌ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಯತ್ನಾಳ್ ಮೇಲೆ ಕೊಲೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆಯೂ ಕ್ರಮ ಕೈಗೊಳ್ಳಬೇಕು.

3.ಯತ್ನಾಳ್ ಸಂವಿಧಾನದ 51 ಎ (ಬಿ) ಉಲ್ಲಂಘಿಸಿದ್ದು ಅವರ ಶಾಸಕ ಸ್ಥಾನದಿಂದ ಪದಚ್ಯುತಗೊಳಿಸಿ

4.ಯತ್ನಾಳ್ ಮಾತನಾಡಿದ ಅಪಾಯಕಾರಿ ಮಾತುಗಳ ಹೊಣೆ ಹೊತ್ತು, ಗೃಹಮಂತ್ರಿ ರಾಜೀನಾಮೆ ನೀಡಬೇಕು.

5.ಹೀಗೆಯೆ ಬೇಕಾಬಿಟ್ಟಿ ಮಾತಾನಾಡುತ್ತಿರುವ, ಬಿಜೆಪಿ ಪಕ್ಷದ ಅನೇಕ ಪದಾಧಿಕಾರಿಗಳು ಮತ್ತು ಇನ್ನಿತರರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು.

6. ಶ್ರೀ ದೊರೆಸ್ವಾಮಿಯವರು, ನಮ್ಮೆಲ್ಲರಿಗೂ ಮಾರ್ಗದರ್ಶಕರೂ ನಮ್ಮ ಸ್ಫೂರ್ತಿಯ ಸೆಲೆಯೂ ಆಗಿದ್ದಾರೆ. ಆದ್ದರಿಂದ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮತ್ತು ಸರ್ಕಾರ ಕ್ರಮ ಜರುಗಿಸುವವರೆಗೆ ರಾಜ್ಯದ ಎಲ್ಲ ಜನಪರ ಸಂಘಟನೆಗಳು, ಚಿಂತಕರು, ಗಾಂಧಿವಾದಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಜವಾಬ್ದಾರಿಯುಳ್ಳ ನಾಗರೀಕರ ಒಗ್ಗಟ್ಟಿನ ಹೋರಾಟ ಈ ನಿಟ್ಟಿನಲ್ಲಿ ನಿರಂತರವಾಗಿ ನಡೆಯಲಿದೆ.

ನಮ್ಮ ದೊರೆಸ್ವಾಮಿ, ನಮ್ಮ ಹೆಮ್ಮೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...