Homeಮುಖಪುಟಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿಯವರ ಪರ ಪ್ರಗತಿಪರರ ಟ್ವಿಟ್ಟರ್‌ & ಸಹಿಸಂಗ್ರಹ ಅಭಿಯಾನ

ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿಯವರ ಪರ ಪ್ರಗತಿಪರರ ಟ್ವಿಟ್ಟರ್‌ & ಸಹಿಸಂಗ್ರಹ ಅಭಿಯಾನ

- Advertisement -
- Advertisement -

ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿಯವರ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಆಡಿದ ಮಾತುಗಳಿಗೆ ರಾಜ್ಯದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಚಿತ್ರದುರ್ಗ ಮತ್ತು ರಾಯಚೂರಿನಲ್ಲಿ ಪತ್ರಿಕಾಗೋಷ್ಠಿಗಳು ನಡೆದಿದ್ದು ಪ್ರತಿಭಟನೆಗೆ ಕರೆ ಕೊಡಲಾಗಿದೆ.

ಬಹಳಷ್ಟು ಜನರು ಯತ್ನಾಳ್‌ ಮತ್ತು ಬಿಜೆಪಿ ಸಿಟ್ಟಿಗೆದ್ದಿದ್ದು ಟ್ವಿಟ್ಟರ್‌ ಅಭಿಯಾನಕ್ಕೆ ಕರೆ ಕೊಡಲಾಗಿದೆ. ಅಲ್ಲದೇ ಬರಗೂರು ರಾಮಚಂದ್ರಪ್ಪ, ಬಿ.ಟಿ. ಲಲಿತಾನಾಯಕ್, ಸಿದ್ಧನಗೌಡ ಪಾಟೀಲ್, ಕೆ.ಪಿ.ಸುರೇಶ, ಬಿ ಟಿ ಜಾಹ್ನವಿ, ಬಸೂ, ದಿನೇಶ್ ಅಮಿನ್ ಮಟ್ಟು, ಅರುಣ್ ಜೋಳದಕೂಡ್ಲಿಗಿ, ಬಿ. ಶ್ರೀಪಾದ ಭಟ್, ಅಕ್ಷತಾ ಹುಂಚದಕಟ್ಟೆ, ಬಿದಲೋಟಿ ರಂಗನಾಥ್, ಎಲ್.ಎನ್. ಮುಕುಂದರಾಜ್ ಸೇರಿದಂತೆ ನೂರಾರು ಪ್ರಗತಿಪರರು ಸಹಿ ಮಾಡಿರುವ ಖಂಡನಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಖಂಡನಾ ಹೇಳಿಕೆ ಕೆಳಗಿನಂತಿದೆ.

ನಾಡಿನ ಸಾಕ್ಷಿಪ್ರಜ್ಞೆ, ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ, ಶ್ರೀ ಎಚ್.ಎಸ್. ದೊರೆಸ್ವಾಮಿಯವರ ಕುರಿತು ಶಾಸಕ ಬಸನಗೌಡ ಯತ್ನಾಳ್ ಅವಹೇಳನಕಾರಿ ಮಾತುಗಳ ವಿರುದ್ಧ ಖಂಡನಾ ಹೇಳಿಕೆ ಕೆಳಗಿನಂತಿದೆ.

ನಿಮಗೆ ತಿಳಿದಿರುವಂತೆ ನಿನ್ನೆ ಬಿಜಾಪುರದ ಒಂದು ಸಭೆಯಲ್ಲಿ ಶಾಸಕ ಬಸನಗೌಡ ಯತ್ನಾಳ್, ಸಂದರ್ಭವೇ ಇಲ್ಲದಿದ್ದರೂ ಸ್ವಾತಂತ್ರ್ಯ ಹೋರಾಟಗಾರ ಶ್ರೀ ದೊರೆಸ್ವಾಮಿಯವರ ವಿಚಾರ ಎಳೆತಂದು, ಅತ್ಯಂತ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. 102 ವರ್ಷಗಳ ಹಿರಿಯ ಜೀವ, ನಾಡಿನ ಸಾಕ್ಷಿಪ್ರಜ್ಞೆ, ಎಲ್ಲ ಜನಪರ ಚಿಂತನೆ-ಚಳವಳಿಗಳ ಒಡನಾಡಿಯಾಗಿರುವ ಶ್ರೀ ದೊರೆಸ್ವಾಮಿಯವರು ಕರ್ನಾಟಕಕ್ಕೆ ಮಾತ್ರವಲ್ಲ, ನಮ್ಮ ದೇಶದ ಆಸ್ತಿ.‌ ನಮ್ಮೆಲ್ಲರ ಹೆಮ್ಮೆ.‌ ಅಂತಹವರ ಕುರಿತಾಗಿ, ಸ್ವತಃ ಯಾವುದೇ ಒಳ್ಳೆಯ ಕೆಲಸ ಮಾಡಿರದ, ಜನರ ಪರವಾದ ಚಿಂತನೆಯಾಗಲಿ, ಕ್ರಿಯೆಯಾಗಲಿ ಇಲ್ಲದ ಒಬ್ಬ ವ್ಯಕ್ತಿ ಈ ರೀತಿಯ ಮಾತುಗಳನ್ನಾಡುವುದು ಅತ್ಯಂತ ಆಕ್ಷೇಪಾರ್ಹವಾದುದು.

ಈಗ ಶಾಸಕನಾಗಿರುವ ಈ ಬಸನಗೌಡ ಯತ್ನಾಳ್ ತಾನೇ ಚುನಾವಣಾ ಆಯೋಗಕ್ಕೆ ಕೊಟ್ಟ ಮಾಹಿತಿಯ ಪ್ರಕಾರ, ಆತನ ವಿರುದ್ಧ ‘ವಂಚನೆ, ಶಾಂತಿಗೆ ಭಂಗ ತಂದಿರುವುದು, ಗಲಭೆಗೆ ಕುಮ್ಮಕ್ಕು’ ಸೇರಿದಂತೆ ಸುಮಾರು 23 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇಂತಹ ವ್ಯಕ್ತಿ ಶ್ರೀ ದೊರೆಸ್ವಾಮಿಯಂತಹ ಪ್ರಮಾಣಿಕ, ಸಜ್ಜನ, ಬದ್ಧತೆಯುಳ್ಳ ಹೋರಾಟಗಾರರನ್ನು “ಪಾಕಿಸ್ತಾನದ ಏಜೆಂಟ್, ಆತ ಸ್ವಾತಂತ್ರ್ಯ ಹೋರಾಟಗಾರನೇ ಅಲ್ಲ, ಅವನು ಗುಂಡಿಗೆ ಬಲಿಯಾಗುತ್ತಾನೆ” ಇತ್ಯಾದಿಯಾಗಿ ಏಕವಚನದಲ್ಲಿ ಮಾತಾಡಿರುವುದು ಕನ್ನಡಿಗರಾದ ನಮ್ಮೆಲ್ಲರಲ್ಲಿ ಅಪಾರ ಆಕ್ರೋಶ ಹುಟ್ಟಿಸಿದೆ.

ಸ್ವಾತಂತ್ರ್ಯ ಚಳವಳಿಯಲ್ಲಿ ಶ್ರೀ ದೊರೆಸ್ವಾಮಿಯವರ ಪಾತ್ರವೇನು ಎಂಬ ಬಗ್ಗೆ ಅಧಿಕೃತ ದಾಖಲೆಗಳು ಲಭ್ಯವಿದ್ದು, ಅದು ಚರಿತ್ರೆಯಲ್ಲಿ ಈಗಾಗಲೇ ಗಟ್ಟಿಯಾಗಿ ದಾಖಲಾಗಿರುವ ಸಂಗತಿಯಾಗಿದೆ. ಅವರು ಕೇವಲ ಬ್ರಿಟೀಷರನ್ನು ಭಾರತದಿಂದ ಓಡಿಸುವುದಕ್ಕಷ್ಟೆ ಸೀಮಿತವಾಗದೆ, ಒಂದು ಸುಂದರ, ಸಮಾನ, ಸಹಬಾಳ್ವೆಯ ಭಾರತವನ್ನು ಕಟ್ಟುವ ಕನಸನ್ನಿಟ್ಟುಕೊಂಡು ನಿರಂತರವಾಗಿ ಶ್ರಮಿಸುತ್ತಾ ಬಂದ ಅಪರೂಪದ ಗಾಂಧಿವಾದಿ ಹೋರಾಟಗಾರರು. ಮಹಾತ್ಮಾ ಗಾಂಧೀಜಿಯವರ ಒಡನಾಡಿಯಾಗಿದ್ದ ಈ ಮಹಾನ್‌ ಚೇತನ ಇಂದಿಗೂ ಅವರಂತೆಯೆ ಸತ್ಯಪಕ್ಷಪಾತಿಯಾಗಿ, ನೇರನಿಷ್ಠುರಿಯಾಗಿ, ನಾಡಿನ ಜನತೆಯ ಹಿತಾಸಕ್ತಿಗೆ ಮತ್ತು ಸಂವಿಧಾನದ ಆಶಯಗಳಿಗೆ ಬದ್ಧರಾಗಿ ನುಡಿಯುತ್ತಾ, ನಡೆಯುತ್ತಾ ಬಂದಿರುವುದು, ಯತ್ನಾಳನಂತಹ ಹೊಣೆಗೇಡಿಗಳಿಗೆ ನುಂಗಲಾರದ ತುತ್ತಾಗಿದೆ. ಆತನ ಇಂತಹ ಮಾತುಗಳು ಶ್ರೀ ದೊರೆಸ್ವಾಮಿಯವರಿಗೆ ಮಾತ್ರವಲ್ಲ, ಇಡೀ ಸ್ವಾತಂತ್ರ್ಯ ಚಳವಳಿಗೇ ಬಗೆದ ಅಪಚಾರವಾಗಿದೆ.

ಯತ್ನಾಳನಿಗಾಗಲಿ ಅವರ ಪಕ್ಷಕ್ಕಾಗಲೀ, ಸ್ವಾತಂತ್ರ್ಯ ಚಳವಳಿಯ ಗಂಧಗಾಳಿ ಗೊತ್ತಿಲ್ಲ. ಇಡೀ ಭಾರತದ ಜನತೆ ಜಾತಿ-ಧರ್ಮ ಬೇಧಬಿಟ್ಟು ಒಗ್ಗೂಡಿ, ಪರಕೀಯರನ್ನು ಭಾರತ ಬಿಟ್ಟು ತೊಲಗಿಸುವ ಮತ್ತು ಸ್ವತಂತ್ರ, ಸಮಾನ ಭಾರತ ಕಟ್ಟುವ ಉದ್ದೇಶದಿಂದ ಪ್ರಾಣವನ್ನು‌ ಲೆಕ್ಕಿಸದೆ ಹೋರಾಡುತ್ತಿರುವಾಗ, ಅದರಲ್ಲೇ ಕೋಮುವಾದದ ಹುಳಿಹಿಂಡುತ್ತಾ ಸ್ವಾತಂತ್ರ್ಯ ಚಳವಳಿಗೇ ದ್ರೋಹ ಬಗೆದ ಪಕ್ಷ ಅದು. ಅಂತಹ ಪಕ್ಷದೊಳಗೆ ಯತ್ನಾಳನಂತಹವರನ್ನೇ ಸಾಕಿಕೊಂಡಿರುವುದರಲ್ಲಿ ಆಶ್ಚರ್ಯವಿಲ್ಲ. ಇಂತಹ ಅನೇಕರು ಇತ್ತೀಚೆಗೆ ಜೀವಪರವಾದ ಅಭಿಪ್ರಾಯ ವ್ಯಕ್ತಪಡಿಸುವವರ ಮೇಲೆ, ಎನ್‌ಪಿಆರ್-ಎನ್‌ಆರ್‌ಸಿಯಂತಹ ಜೀವವಿರೋಧಿತನವನ್ನು ವಿರೋಧಿಸುವವರ ಮೇಲೆ ದಾಳಿ ಮಾಡುತ್ತಿರುವುದನ್ನು, ಸ್ವತಂತ್ರ ಚಿಂತನೆಗೆ ಬೆದರಿಕೆ ಒಡ್ಡುತ್ತಿರುವುದನ್ನು ನೋಡುತ್ತಿದ್ದೇವೆ.‌ ಅಷ್ಟೇ ಏಕೆ, ಸರ್ಕಾರದ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕವಿಗಳು, ಪತ್ರಕರ್ತರು, ಶಿಕ್ಷಕರು, ಹೋರಾಟಗಾರರು, ಸಾರ್ವಜನಿಕರು- ಎಲ್ಲರ ಮೇಲೆ ದೇಶದ್ರೋಹದ ಆರೋಪ ಹೊರಿಸುತ್ತಾ ಬಂಧಿಸುತ್ತಿರುವುದನ್ನೂ ನೋಡುತ್ತಿದ್ದೇವೆ. ಇದು ಭಯಭೀತಿಯ ವಾತಾವರಣ ಸೃಷ್ಟಿಸುತ್ತಾ, ಕೋಮುಗಲಭೆಗಳಿಗೆ ಪ್ರಚೋದನೆ ನೀಡುತ್ತಾ, ಭಾರತದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಪ್ರಯತ್ನ.

ಆದ್ದರಿಂದ, ಸಂವಿಧಾನ ವಿರೋಧಿಯಾದ ಈ ಎಲ್ಲ ಬೆಳವಣಿಗೆಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಭಾರತವು, ಎಂದಿಗೂ ಶಾಂತಿ-ಸಹಬಾಳ್ವೆಯ ನಾಡಾಗಿ ಉಳಿಯಬೇಕು ಮತ್ತು ಹಾಗಾದಾಗ ನಾವು ನಿಜವಾಗಿಯೂ ಅಭಿವೃದ್ಧಿಪಥದಲ್ಲಿ ಸಾಗಲು ಸಾಧ್ಯ ಎಂದು ಭಾವಿಸುತ್ತೇವೆ.

ಆದ್ದರಿಂದ, ಕೆಳಗೆ ಸಹಿ ಮಾಡಿರುವ‌ ನಾವೆಲ್ಲರೂ, ಈ ಆಗ್ರಹಗಳನ್ನು ಮುಂದಿಡುತ್ತಿದ್ದೇವೆ.

1.ಶಾಸಕ ಬಸನಗೌಡ ಯತ್ನಾಳ್ ಮೇಲೆ, ದೇಶದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಕ್ಕೆ, ಸ್ವಾತಂತ್ರ್ಯ ಚಳವಳಿಯನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದಕ್ಕೆ ಮತ್ತು ಸ್ವಾತಂತ್ರ್ಯ ಹೋರಾಟಗಾರ ಶ್ರೀ ದೊರೆಸ್ವಾಮಿಯವರ ಬಗ್ಗೆ ಅತ್ಯಂತ ಆಕ್ಷೇಪಾರ್ಹವಾಗಿ ಮಾತನಾಡಿದ್ದಕ್ಕೆ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು.

2.ಶ್ರೀ ದೊರೆಸ್ವಾಮಿಯವರ ಕುರಿತು “ಅವನು ಗುಂಡಿಗೆ ಬಲಿಯಾಗುತ್ತಾನೆ” ಎಂದು ಹೇಳಿರುವುದು ಕೊಲೆಗೆ ಪ್ರಚೋದನೆ ಮಾಡುವಂತಹ ಹೇಳಿಕೆಯಾಗಿದೆ.‌ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಯತ್ನಾಳ್ ಮೇಲೆ ಕೊಲೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆಯೂ ಕ್ರಮ ಕೈಗೊಳ್ಳಬೇಕು.

3.ಯತ್ನಾಳ್ ಸಂವಿಧಾನದ 51 ಎ (ಬಿ) ಉಲ್ಲಂಘಿಸಿದ್ದು ಅವರ ಶಾಸಕ ಸ್ಥಾನದಿಂದ ಪದಚ್ಯುತಗೊಳಿಸಿ

4.ಯತ್ನಾಳ್ ಮಾತನಾಡಿದ ಅಪಾಯಕಾರಿ ಮಾತುಗಳ ಹೊಣೆ ಹೊತ್ತು, ಗೃಹಮಂತ್ರಿ ರಾಜೀನಾಮೆ ನೀಡಬೇಕು.

5.ಹೀಗೆಯೆ ಬೇಕಾಬಿಟ್ಟಿ ಮಾತಾನಾಡುತ್ತಿರುವ, ಬಿಜೆಪಿ ಪಕ್ಷದ ಅನೇಕ ಪದಾಧಿಕಾರಿಗಳು ಮತ್ತು ಇನ್ನಿತರರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು.

6. ಶ್ರೀ ದೊರೆಸ್ವಾಮಿಯವರು, ನಮ್ಮೆಲ್ಲರಿಗೂ ಮಾರ್ಗದರ್ಶಕರೂ ನಮ್ಮ ಸ್ಫೂರ್ತಿಯ ಸೆಲೆಯೂ ಆಗಿದ್ದಾರೆ. ಆದ್ದರಿಂದ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮತ್ತು ಸರ್ಕಾರ ಕ್ರಮ ಜರುಗಿಸುವವರೆಗೆ ರಾಜ್ಯದ ಎಲ್ಲ ಜನಪರ ಸಂಘಟನೆಗಳು, ಚಿಂತಕರು, ಗಾಂಧಿವಾದಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಜವಾಬ್ದಾರಿಯುಳ್ಳ ನಾಗರೀಕರ ಒಗ್ಗಟ್ಟಿನ ಹೋರಾಟ ಈ ನಿಟ್ಟಿನಲ್ಲಿ ನಿರಂತರವಾಗಿ ನಡೆಯಲಿದೆ.

ನಮ್ಮ ದೊರೆಸ್ವಾಮಿ, ನಮ್ಮ ಹೆಮ್ಮೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...