Homeಕರ್ನಾಟಕಪ್ರಗತಿಪರ ಚಿಂತಕ, ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ ಮಹೇಶ್‌ ಚಂದ್ರಗುರು ನಿಧನ; ಸಿಎಂ ಸೇರಿದಂತೆ ಹಲವರಿಂದ ಸಂತಾಪ

ಪ್ರಗತಿಪರ ಚಿಂತಕ, ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ ಮಹೇಶ್‌ ಚಂದ್ರಗುರು ನಿಧನ; ಸಿಎಂ ಸೇರಿದಂತೆ ಹಲವರಿಂದ ಸಂತಾಪ

- Advertisement -
- Advertisement -

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಪ್ರಾಧ್ಯಾಪಕ, ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ಅವರು ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎಚ್‌ಸಿ ಮಹದೇವಪ್ಪ ಸೇರಿದಂತೆ ಅವರ ಅಪಾರ ಪ್ರಮಾಣದ ಶಿಷ್ಯವೃಂದ ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಗ್ಯಾಂಗ್ರೀನ್‌ ಕಾರಣದಿಂದ ಕಾಲುನೋವಿನ ಸಮಸ್ಯೆ ಎದುರಿಸುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ (ಆ.17) ಸಂಜೆ 7:30ರ ಸುಮಾರಿಗೆ ಅವರು ಹೃದಯಘಾತದಿಂದ ತಮ್ಮ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ.

ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಪ್ರೊ.ಮಹೇಶ್ ಚಂದ್ರಗುರು ನಂತರ ಮಂಗಳೂರು ವಿ.ವಿಯ ಪತ್ರಿಕೋದ್ಯಮ ಪ್ರಾಧ್ಯಾಪಕರಾಗಿದ್ದರು. ನಂತರ ಮೈಸೂರು ವಿವಿಗೆ ವರ್ಗಾವಣೆಗೊಂಡು ವಿವಿಯ ಪತ್ರಿಕೋದ್ಯಮದಲ್ಲಿ ಹಲವಾರು ಕಾರ್ಯಗಳನ್ನು ಕೈಗೊಳ್ಳಲಾಯಿತು. ಜೊತೆಗೆ ಸದಾಕಾಲ ವಿದ್ಯಾರ್ಥಿ ಸ್ನೇಹಿತರಾಗಿದ್ದ ಅವರು, ವಿವಿ ಅಷ್ಟೇ ಅಲ್ಲದೆ ರಾಜ್ಯದಾದ್ಯಂತ ಅಪಾರ ಪ್ರಮಾಣದ ವಿದ್ಯಾರ್ಥಿ ಬಳಗವನ್ನೇ ಸಂಪಾದಿಸಿದ್ದರು. 2019ರಲ್ಲಿ ಸೇವೆಯಿಂದ ನಿವೃತ್ತರಾದ ಅವರು, ಸಾಮಾಜಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಕೋಮುವಾದದ ವಿರುದ್ಧ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿದ್ದರು. ಜೊತೆಗೆ, ಮೈಸೂರು ದಸರಾ ವೇಳೆ ಮಹಿಷಾ ದಸರಾ ಆಚರಣೆಯಲ್ಲಿ ಇವರ ಪಾತ್ರ ಪ್ರಮುಖವಾದದ್ದು.

ಸಂತಾಪ ಸೂಚಿಸಿದ ಸಿಎಂ

ಪ್ರೊ. ಮಹೇಶ್‌ ಚಂದ್ರ ಗುರು ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಡಾ.ಮಹೇಶ್ ಚಂದ್ರ ಗುರು ಅವರ ನಿಧನದಿಂದ ಸಮಾಜ ಒಬ್ಬ ಚಿಂತನಶೀಲ ಮಾರ್ಗದರ್ಶಕನನ್ನು ಕಳೆದುಕೊಂಡಿದೆ” ಎಂದು ಕಂಬನಿ ಮಿಡಿದಿದ್ದಾರೆ.

“ನನಗೆ ಆತ್ಮೀಯರಾಗಿದ್ದ ಮೈಸೂರಿನ ಪ್ರಗತಿಪರ ಚಿಂತಕ ಡಾ.ಮಹೇಶ್ ಚಂದ್ರಗುರು ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಮಹೇಶ್ ಚಂದ್ರ ಗುರು ಅವರು ತರಗತಿಗಳಿಂದ ಹೊರಗೆ ಕೂಡಾ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು. ಬುದ್ದ, ಬಸವ, ಅಂಬೇಡ್ಕರ್ ಚಿಂತನೆಗಳಿಂದ ಪ್ರಭಾವಿತರಾಗಿದ್ದ ಡಾ.ಮಹೇಶ್ ಚಂದ್ರ ಗುರು ಎಂದೂ ಮೌನಕ್ಕೆ ಮೊರೆಹೋಗದೆ ಮತ್ತು ಪರಿಣಾಮವನ್ನೂ ಲೆಕ್ಕಿಸದೆ ನೇರವಾಗಿ ಮತ್ತು ನಿಷ್ಠುರವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು. ಡಾ.ಮಹೇಶ್ ಚಂದ್ರ ಗುರು ಅವರ ನಿಧನದಿಂದ ಸಮಾಜ ಒಬ್ಬ ಚಿಂತನಶೀಲ ಮಾರ್ಗದರ್ಶಕನನ್ನು ಕಳೆದುಕೊಂಡಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಹೇಳಿದ್ದಾರೆ.

“ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿ, ಪ್ರಸ್ತುತ ವಿದ್ಯಮಾನಗಳಿಗೆ ಪ್ರಖರವಾಗಿ ಸ್ಪಂದಿಸುತ್ತಿದ್ದ ಸೈದ್ಧಾಂತಿಕ ವ್ಯಕ್ತಿ, ಆತ್ಮೀಯರೂ ಆಗಿದ್ದ ಪ್ರೊ.ಮಹೇಶ್ ಚಂದ್ರ ಗುರು ಅವರು ನಮ್ಮನ್ನು ಅಗಲಿದ್ದು ಅತ್ಯಂತ ನೋವಿನ ಸಂಗತಿ.
ಇನ್ನಷ್ಟು ಕಾಲ ಅವರು ನಮ್ಮೊಡನೆ ಮಾರ್ಗದರ್ಶಿ ಶಕ್ತಿಯಾಗಿ ಇರಬೇಕಿತ್ತು. ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಅವರ ವಿದ್ಯಾರ್ಥಿಗಳು, ಸ್ನೇಹಿತರು ಮತ್ತು ಕುಟುಂಬ ವರ್ಗದವರಿಗೆ ದೊರೆಯಲಿ ಎಂದು ನಾನು ಪ್ರಾರ್ಥಿಸುವೆನು” ಎಂದು ಸಚಿವ ಎಚ್‌ಸಿ ಮಹದೇವಪ್ಪ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಆರ್‌ಜಿ ಕರ್ ಹಾಸ್ಪಿಟಲ್ ಕ್ರೈಮ್ ಸ್ಪಾಟ್ ನವೀಕರಣ; ‘ಅವಸರ ಏನಿತ್ತು..?’ ಎಂದು ಪ್ರಶ್ನಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...