Homeಕರ್ನಾಟಕರಂಗಾಯಣ ನಿರ್ದೇಶಕರ ವಜಾಕ್ಕೆ ಪ್ರಗತಿಪರ ಚಿಂತಕರ ಆಗ್ರಹ; ಬಹುರೂಪಿ ಬಹಿಷ್ಕರಿಸಲು ನಿರ್ಧಾರ

ರಂಗಾಯಣ ನಿರ್ದೇಶಕರ ವಜಾಕ್ಕೆ ಪ್ರಗತಿಪರ ಚಿಂತಕರ ಆಗ್ರಹ; ಬಹುರೂಪಿ ಬಹಿಷ್ಕರಿಸಲು ನಿರ್ಧಾರ

ರಂಗಾಯಣ ಮತ್ತು ಬಹುರೂಪಿ ತನ್ನ ಸಾಂಸ್ಕೃತಿಕ ಚಹರೆಗಳನ್ನು ಕಳೆದುಕೊಳ್ಳುತ್ತಿವೆ ಎಂದು ಆತಂಕ ವ್ಯಕ್ತಪಡಿಸಿ ಚಿಂತಕರು ಸಭೆ ನಡೆಸಿದ್ದು, ಬಳಿಕ ಬಹಿರಂಗ ಪತ್ರವನ್ನೂ ಬರೆದಿದ್ದಾರೆ.

- Advertisement -
- Advertisement -

ವಿವಾದಗಳಿಂದಲೇ ಸದಾ ಸುದ್ದಿಯಲ್ಲಿರುವ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರನ್ನು ವಜಾ ಮಾಡಬೇಕು ಹಾಗೂ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಸಾಂಸ್ಕೃತಿಕ ಮಹತ್ವವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಗತಿಪರ ಚಿಂತಕರು ಆಗ್ರಹಿಸಿದ್ದಾರೆ.

ಕಲಾಮಂದಿರ ಆವರಣದಲ್ಲಿರುವ ರಂಗಾಯಣ ಸಮೀಪದ ಕಿಂದರಿಜೋಗಿ ಬಳಿ ಶನಿವಾರ ಸಂಜೆ ಸಭೆ ನಡೆಸಿದ ಪ್ರಗತಿಪರ ಚಿಂತಕರು, ಸಮಾನ ಮನಸ್ಕರು, “ಬಹುತ್ವವನ್ನು ಪ್ರತಿಪಾದಿಸುವ ನಿಟ್ಟಿನಲ್ಲಿ ಮೈಸೂರು ರಂಗಾಯಣ ಈವರೆಗೆ ನಡೆಸಿಕೊಂಡು ಬಂದಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಈ ಬಾರಿ ವ್ಯಕ್ತಗತ, ಏಕಮುಖ ನಿರ್ಣಯ ಹಾಗೂ ಸೈದ್ಧಾಂತಿಕ ಹಿನ್ನೆಲೆಯಿಂದ ಕೂಡಿದೆ. ಹೀಗಾಗಿ ಈ ಬಾರಿಯ ಬಹುರೂಪಿಯನ್ನು ಬಹಿಷ್ಕರಿಸುತ್ತೇವೆ” ಎಂದು ತಿಳಿಸಿದರು.

ಯಾವುದೇ ಪಕ್ಷ ಹಾಗೂ ಸಿದ್ಧಾಂತ ಹಿನ್ನೆಲೆವುಳ್ಳವರನ್ನು ಹಾಗೂ ರಂಗಭೂಮಿಗೆ ಯಾವುದೇ ಕೊಡುಗೆಯನ್ನು ನೀಡದ ಚಕ್ರವರ್ತಿ ಸೂಲಿಬೆಲೆ ಹಾಗೂ ಮಾಳವಿಕಾ ಅವಿನಾಶ್ ಅವರನ್ನು ಬಹುರೂಪಿಗೆ ಆಹ್ವಾನಿಸಿರುವುದನ್ನು ಖಂಡಿಸಬೇಕು. ಬಹುರೂಪಿಯ ಅತಿಥಿಗಳ ಪಟ್ಟಿಯಲ್ಲಿ ಜಾವೇದ್ ಅಖ್ತರ್, ನಾಸೀರ್ ವುದ್ದೀನ್ ಶಾ ಸೇರಿದಂತೆ ಬಹುದೊಡ್ಡ ಕಲಾವಿದರು ಇದ್ದಾರೆ. ರಂಗಾಯಣ ಇತಿಹಾಸವನ್ನು ಅಲ್ಲಿನ ನಿರ್ದೇಶಕರು ಗೌರವಿಸಬೇಕು ಎಂದು ಆಗ್ರಹಿಸಿದ್ದಾರೆ.

ಆಯ್ಕೆ ನಮ್ಮದು ಎಂದು ಉದ್ದಟತನದಿಂದ ಮಾತನಾಡಬಾರದು. ರಂಗ ಸಮಾಜದ ನಿರ್ದೇಶನದಂತೆ ನಿರ್ಧಾರ ಕೈ ಗೊಳ್ಳಬೇಕು. ಇದರ ವಿರುದ್ಧವಾಗಿ ಪ್ರತಿಭಟಿಸಿದ ಕಿರಿಯ ಕಲಾವಿದರಿಗೆ ಉದ್ದಟತನದಿಂದ ಮಾತನಾಡಿದ ರಂಗಾಯಣ ನಿರ್ದೇಶಕ ರಂಗಾಯಣ ಕಾರ್ಯಪ್ಪ ಅವರ ಕಡೆ ಖಂಡನೀಯ. ಈ ಎಲ್ಲಾ ವಿಚಾರಗಳನ್ನು ಇಟ್ಟುಕೊಂಡು ಬಹುರೂಪಿಯನ್ನು ಸಾರ್ವಜನಿಕವಾಗಿ ಬಹಿಷ್ಕಾರಿಸಬೇಕು ಎಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.


ಇದನ್ನೂ ಓದಿರಿ: ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಮುಂದೂಡಿಕೆ


ಈ ಕುರಿತಂತೆ ಪತ್ರವನ್ನು ಬರೆದಿರುವ ಚಿಂತಕರು, “ಒಂದು ಸ್ವಾಯತ್ತ ಸಾಂಸ್ಕೃತಿಕ ಸಂಸ್ಥೆಯಾಗಿ ರಂಗಾಯಣ ಕನ್ನಡಿಗರ, ಕನ್ನಡದ ಸೃಜನಶೀಲ ಕಲಾವಿದರ ಸ್ವತ್ತಾಗಿದ್ದು ಈ ಸಂಸ್ಥೆಯನ್ನು ದಾರಿತಪ್ಪಿಸುವಂತಹ ನೀತಿಗಳನ್ನು ಅನುಸರಿಸುತ್ತಿರುವ ಅಡ್ಡಂಡ ಕಾರ್ಯಪ್ಪ ಅವರನ್ನು ಕೂಡಲೇ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸುತ್ತೇವೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆಯನ್ನು ನಡೆಸುತ್ತೇವೆ. ರಂಗಾಯಣ ಕನ್ನಡಿಗರ ಆಸ್ತಿ ಇದರ ಸ್ವಾಯತ್ತತೆಯ ರಕ್ಷಣೆಗಾಗಿ ನಮ್ಮ ಹೋರಾಟವನ್ನು ತೀವ್ರಗೊಳಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಪತ್ರದಲ್ಲಿ ಏನಿದೆ?

ಕನ್ನಡ ರಂಗಭೂಮಿಯ ಪ್ರತಿಷ್ಠಿತ ಸಂಸ್ಥೆಯಾಗಿರುವ ಮೈಸೂರಿನ ರಂಗಾಯಣ ಪ್ರತಿವರ್ಷ ನಡೆಸುತ್ತಾ ಬಂದಿರುವ ಬಹುರೂಪಿ ನಾಟಕೋತ್ಸವ ಅನೇಕ ಕಾರಣಗಳಿಗಾಗಿ ಬಹಳ ಮುಖ್ಯವಾದ ಉತ್ಸವ. ವಿಭಿನ್ನ ರಾಜ್ಯಗಳ, ಭಾಷೆಗಳ, ಸಂಸ್ಕøತಿಗಳ ಸಂಗಮವಾಗಿಯೂ ಇದಕ್ಕೆ ಮಹತ್ವ ಇದೆ. ಇಲ್ಲಿ ನಡೆಯುವ ವಿಚಾರ ಸಂಕಿರಣ, ಸಂವಾದ, ಚರ್ಚೆಗಳು ನಮ್ಮ ಚಿಂತನೆಯನ್ನು ಹರಿತಗೊಳಿಸುವ ಹೊಸ ಹೊಸ ಎತ್ತರಗಳಿಗೆ ಕೊಂಡೊಯ್ಯುವ ಆಶಯಕ್ಕೆ ಇಂಬಾಗಲು ನೆರವು ನೀಡುತ್ತವೆ. ಹೀಗಾಗಿ ಇಡೀ ಕರ್ನಾಟಕದ ಜನ ಈ ಹಬ್ಬವನ್ನು ಬಹಳ ಕುತೂಹಲದಿಂದ ಗಮನಿಸುತ್ತಾರೆ ಮತ್ತು ಸಕ್ರಿಯವಾಗಿ ಈ ಹಬ್ಬದಲ್ಲಿ ಭಾಗವಹಿಸುತ್ತಾರೆ.

ಆಡಳಿತ ಪಕ್ಷ ಯಾವುದೇ ಇರಲಿ, ಇಲ್ಲಿಯ ಚಿಂತನೆಗೆ, ಜನತಂತ್ರದ ಆಶಯಕ್ಕೆ, ಸ್ವಾಯತ್ತತೆಗೆ ಧಕ್ಕೆ ಬಾರದ ರೀತಿಯಲ್ಲಿ ಈ ಹಬ್ಬಗಳು ಈವರೆಗೆ ನಡೆದುಕೊಂಡುಬಂದಿವೆ. ಆದರೆ ಈ ಬಾರಿಯ ಬಹುರೂಪಿ ಉತ್ಸವ ಇಂಥ ಆಶಯವನ್ನು ದಿಕ್ಕುತಪ್ಪಿಸುವಂತೆ ಕಾಣುತ್ತಿದೆ. ಬಹುರೂಪಿಯ ಉದ್ಘಾಟನೆ ಮತ್ತು ಸಮಾರೋಪದ ಅತಿಥಿಗಳನ್ನು ಆಯ್ಕೆ ಮಾಡುವ ಸಂದರ್ಭಗಳಲ್ಲಿ ಯಾವುದೇ ನಿರ್ದಿಷ್ಟ ಮಾನದಂಡಗಳು ಇಲ್ಲವಾದರೂ, ಸಾಮಾನ್ಯವಾಗಿ ನಾಟಕ, ರಂಗಭೂಮಿ, ಕಲೆ, ಸಾಹಿತ್ಯ ಮತ್ತಿತರ ಸೃಜನಶೀಲ ಪ್ರಕಾರಗಳಲ್ಲಿ ಕೊಡುಗೆ ನೀಡಿದವರನ್ನು ಆಯ್ಕೆ ಮಾಡುವುದು ವಾಡಿಕೆ. ಎಲ್ಲ ರೀತಿಯ ಚಿಂತನಾ ವಾಹಿನಿಗಳನ್ನು ಪ್ರತಿನಿಧಿಸುವ ದೇಶದ, ರಾಜ್ಯದ ಮಹಾನ್ ಚಿಂತಕರು ಈ ವೇದಿಕೆಗಳನ್ನಲಂಕರಿಸಿ ನಾಟಕೋತ್ಸವದ ಆಶಯಗಳನ್ನು ಬೆಂಬಲಿಸಿದ್ದಾರೆ.

ಈ ಬಾರಿಯ ನಾಟಕೋತ್ಸವಕ್ಕೆ ಆಶಯ ಭಾಷಣ ಮಾಡಲು ಚಿತ್ರನಟಿ ಮತ್ತು ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಅವರನ್ನೂ, ಸಮಾರೋಪ ಭಾಷಣ ಮಾಡಲು ಸಂಘಪರಿವಾರದ ಪರಿಚಾರಕ ಮತ್ತು ಬಲಪಂಥೀಯ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಆಯ್ಕೆ ಮಾಡಿರುವುದು ಸೋಜಿಗ ಹುಟ್ಟಿಸುವಂತಿದೆ. ಈ ಆಯ್ಕೆ ರಂಗಾಯಣದ ಮೂಲ ಆಶಯಗಳಿಗೆ ಮತ್ತು ಕನ್ನಡ ಸಾಂಸ್ಕೃತಿಕ ಲೋಕದ ಆದರ್ಶಗಳಿಗೆ ವ್ಯತಿರಿಕ್ತವಾಗಿದೆ. ಮಾಳವಿಕಾ ಅವಿನಾಶ್ ನೇರವಾಗಿ ಆಡಳಿತಾರೂಢ ರಾಜಕೀಯ ಪಕ್ಷದೊಡನೆ ಮತ್ತು ಅದರ ಮೂಲ ಸಿದ್ಧಾಂತಗಳೊಡನೆ ಗುರುತಿಸಿಕೊಂಡವರಾಗಿದ್ದಾರೆ. ಹಾಗೆಯೇ ಚಕ್ರವರ್ತಿ ಸೂಲಿಬೆಲೆ ತಮ್ಮ ಪ್ರಖರ ಎನ್ನಲಾಗುವ ಭಾಷಣಗಳ ಮೂಲಕ ಕೋಮು ದ್ವೇಷವನ್ನು ಹರಡುವ, ಸುಳ್ಳು ಇತಿಹಾಸವನ್ನು ಪ್ರಚಾರ ಮಾಡುವ ಸಂಘಪರಿವಾರದ ಪರಿಚಾರಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಇಬ್ಬರಿಂದ ರಂಗಭೂಮಿ ಕ್ಷೇತ್ರಕ್ಕೆ ಯಾವುದೇ ವಿಧವಾದ ಕೊಡುಗೆ ಇಲ್ಲ. ತಮ್ಮ ಕೋಮುವಾದಿ ಚಿಂತನೆಗಳ ಮೂಲಕ ಸಮಾಜದಲ್ಲಿ ದ್ವೇಷದ ವಿಷಬೀಜಗಳನ್ನು ಬಿತ್ತುವುದರಲ್ಲಿ ಸಂಘಪರಿವಾರದ ಪರಿಚಾರಕರಾಗಿ ಅವಿರತ ಶ್ರಮಿಸುತ್ತಿರುವ ಶ್ರೀಯುತ ಚಕ್ರವರ್ತಿ ಸೂಲಿಬೆಲೆ ಅವರನ್ನು “ಬಹುರೂಪಿ ನಾಟಕೋತ್ಸವ ”ದಂತಹ ಒಂದು ಸೃಜನಶೀಲ ವೇದಿಕೆಯಲ್ಲಿ ಸಮಾರೋಪ ಅತಿಥಿಯಾಗಿ ಆಹ್ವಾನಿಸಿರುವುದು ಖಂಡಿತಾ ಒಪ್ಪುವ ಮಾತಲ್ಲ. ಈ ನಡೆಯನ್ನು ನಾವು ಖಂಡಿಸುತ್ತೇವೆ.


ಇದನ್ನೂ ಓದಿರಿ: ಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ


ರಂಗಾಯಣ ಕನ್ನಡಿಗರ ಸಾಂಸ್ಕೃತಿಕ ಸಂಸ್ಥೆ ಮಾತ್ರವಲ್ಲ, ಅದೊಂದು ಸ್ವಾಯತ್ತ ಸಂಸ್ಥೆ. ಆಳುವ ಪಕ್ಷ ಯಾವುದೇ ಇರಲಿ, ರಂಗಾಯಣ ನಿದೇರ್ಶಕರ ಒಲವು-ನಿಲುವು ಏನೇ ಇರಲಿ, ರಂಗಾಯಣದ ಮೂಲ ಆಶಯಕ್ಕೆ ಧಕ್ಕೆಯಾಗದ ರೀತಿಯಲ್ಲಿ ರಂಗಾಯಣದ ಚಟುವಟಿಕೆಗಳು ನಡೆಯಬೇಕು. ಇದನ್ನು ಕೋಮುವಾದಿಗಳ ವೇದಿಕೆಯಾಗಿ ಪರಿವರ್ತಿಸುವುದು ಜಾತ್ಯತೀತ ತತ್ವದಲ್ಲಿ ನಂಬಿಕೆ ಇಟ್ಟಿರುವ ನಮ್ಮ ಜನತಂತ್ರ ವ್ಯವಸ್ಥೆಯ ಮುನ್ನಡೆಗೆ ತಡೆಯೊಡ್ಡುತ್ತದೆ. ಇತ್ತೀಚಿನ ದಿನಗಳಲ್ಲಿ ರಂಗಾಯಣ ನಿರ್ದೇಶಕರಾದ ಅಡ್ಡಂಡ ಕಾರ್ಯಪ್ಪ ಅವರು ರಂಗಾಯಣದ ಮೂಲ ಆದರ್ಶಗಳಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದ್ದಾರೆ. ರಂಗಾಯಣ ರಾಜಕೀಯದಿಂದ ಮುಕ್ತವಾದ ಒಂದು ಸ್ವಾಯತ್ತ ಸಾಂಸ್ಕೃತಿಕ ಸಂಸ್ಥೆಯಾಗಿದ್ದು, ಯಾವುದೇ ರೀತಿಯ ರಾಜಕೀಯ ಹಸ್ತಕ್ಷೇಪ ರಂಗಾಯಣದ ಆಡಳಿತ ನಿರ್ವಹಣೆಯಲ್ಲಿ ಸಲ್ಲದು. ಅಡ್ಡಂಡ ಕಾರ್ಯಪ್ಪ ಅವರು ನೇರವಾಗಿಯೇ ತಾವು ರಾಜಕೀಯ ಪಕ್ಷದ ಪ್ರತಿನಿಧಿಯಂತೆ ವರ್ತಿಸುತ್ತಿದ್ದು, ರಂಗಾಯಣದ ನಿರ್ದೇಶಕರಾಗಿ ತಮ್ಮ ಜವಾಬ್ದಾರಿಯನ್ನು ಮರೆತಂತೆ ನಡೆದುಕೊಳ್ಳುತ್ತಿರುವುದನ್ನು ನಾವು ಖಂಡಿಸುತ್ತೇವೆ. ರಂಗಾಯಣದ ಕಿರಿಯ ಕಲಾವಿದರನ್ನು ಬೆದರಿಸುವ ಮೂಲಕ ಅಡ್ಡಂಡ ಕಾರ್ಯಪ್ಪ ಅವರು ಸರ್ವಾಧಿಕಾರಿ ಧೋರಣೆಯನ್ನು ತೋರುತ್ತಿರುವುದನ್ನು ನಾವು ಖಂಡಿಸುತ್ತೇವೆ.

ತನ್ನ ಮೂರು ದಶಕಗಳ ಇತಿಹಾಸದಲ್ಲಿ ರಂಗಾಯಣವನ್ನು ಕಟ್ಟಲು ರಾಜ್ಯದ ಹಲವಾರು ರಂಗಕರ್ಮಿಗಳು, ಸಾಹಿತಿಗಳು, ಚಿಂತಕರು ಶ್ರಮಿಸಿದ್ದು, ಯಾವುದೇ ರೀತಿಯ ರಾಜಕೀಯ ಸೋಂಕು ಇಲ್ಲದೆಯೇ ನಡೆದುಬಂದಿದೆ. ಬಹುರೂಪಿ ನಾಟಕೋತ್ಸವದ ಉದ್ಘಾಟನೆ ಮತ್ತು ಸಮಾರೋಪದ ಅತಿಥಿಗಳಾಗಿ ಈವರೆಗೂ ಯಾವುದೇ ರಾಜಕೀಯ ವ್ಯಕ್ತಿಯನ್ನು ಆಹ್ವಾನಿಸಿದ ಉದಾಹರಣೆಗಳಿರುವುದಿಲ್ಲ. ಆದರೆ ಅಡ್ಡಂಡ ಕಾರ್ಯಪ್ಪ ತಮ್ಮ ವೈಯಕ್ತಿಕ ರಾಜಕೀಯ ನಿಲುವು ಮತ್ತು ಒಲವುಗಳನ್ನ ರಂಗಾಯಣಕ್ಕೂ ಎಳೆದುತಂದಿರುವುದು ಅಕ್ಷಮ್ಯ. ತಮ್ಮ ವ್ಯಕ್ತಿಗತ ರಾಜಕೀಯ-ಸೈದ್ದಾಂತಿಕ ನಿಲುಮೆಗಳನ್ನು ರಂಗಾಯಣದ ಚಟುವಟಿಕೆಗಳ ಮೇಲೆ ಹೇರುವುದನ್ನು ನಾವು ಖಂಡಿಸುತ್ತೇವೆ.

ಒಂದು ಸ್ವಾಯತ್ತ ಸಾಂಸ್ಕೃತಿಕ ಸಂಸ್ಥೆಯಾಗಿ ರಂಗಾಯಣ ಕನ್ನಡಿಗರ,, ಕನ್ನಡದ ಸೃಜನಶೀಲ ಕಲಾವಿದರ ಸ್ವತ್ತಾಗಿದ್ದು ಈ ಸಂಸ್ಥೆಯನ್ನು ದಾರಿತಪ್ಪಿಸುವಂತಹ ನೀತಿಗಳನ್ನು ಅನುಸರಿಸುತ್ತಿರುವ ಅಡ್ಡಂಡ ಕಾರ್ಯಪ್ಪ ಅವರನ್ನು ಕೂಡಲೇ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಈ ಮೂಲಕ ಒತ್ತಾಯಿಸುತ್ತೇವೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆಯನ್ನು ನಡೆಸುತ್ತೇವೆ. ರಂಗಾಯಣ ಕನ್ನಡಿಗರ ಆಸ್ತಿ ಇದರ ಸ್ವಾಯತ್ತತೆಯ ರಕ್ಷಣೆಗಾಗಿ ನಮ್ಮ ಹೋರಾಟವನ್ನು ತೀವ್ರಗೊಳಿಸುತ್ತೇವೆ.

ಇದಿಷ್ಟು ಪತ್ರದ ಪೂರ್ಣಾಂಶ

ಚಿಂತಕರಾದ ಪ.ಮಲ್ಲೇಶ್, ಕಾಳೇಗೌಡ ನಾಗವಾರ, ನಾ. ದಿವಾಕರ, ಕೆ.ಪಿ.ಸುರೇಶ್‌, ಎನ್.ಎಸ್.ಗೋಪಿನಾಥ್, ಮೈಮ್ ರಮೇಶ್, ಮಾಧವ ಖರೆ, ಕೆ.ಎಸ್.ಶಿವರಾಮು, ಭೋ.ಗ.ನಂದೀಶ್, ವಿ.ಪುರುಷೋತ್ತಮ, ರಾಜೇಶ್, ಡಾ.ವಿ.ಲಕ್ಷ್ಮೀನಾರಾಯಣ್, ರತಿರಾವ್, ಪ್ರೊ.ಪಂಡಿತಾರಾಧ್ಯ, ಜಿ.ಪಿ.ಬಸವರಾಜು, ಪ್ರೊ.ವಿ.ಎನ್.ಲಕ್ಷ್ಮೀನಾರಾಯಣ, ಆನಂದ, ಎಂ.ಎಫ್.ಖಲೀಂ, ಖಾದರ್ ಅಹಮದ್, ಜಗದೀಶ್ ಸೂರ್ಯ, ಲ.ಜಗನ್ನಾಥ್, ನ.ಶಿವಮೂರ್ತಿ, ಜನಾರ್ದನ (ಜನ್ನಿ), ಮಂಜು ಮಂಗಲ, ಕಾತ್ಯಾಯಿನಿ, ಕೆ.ಗೋಪಾಲ ಕೃಷ್ಣ, ಸ.ರ.ಸುದರ್ಶನ್‌‌ ಮತ್ತಿತ್ತರು ಶನಿವಾರ ಸಂಜೆ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದು, ಈ ಮೇಲಿನ ಪತ್ರವನ್ನು ಬರೆದಿದ್ದಾರೆ.


ಇದನ್ನೂ ಓದಿರಿ: ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...