Homeಕರ್ನಾಟಕರಂಗಾಯಣ ನಿರ್ದೇಶಕರ ವಜಾಕ್ಕೆ ಪ್ರಗತಿಪರ ಚಿಂತಕರ ಆಗ್ರಹ; ಬಹುರೂಪಿ ಬಹಿಷ್ಕರಿಸಲು ನಿರ್ಧಾರ

ರಂಗಾಯಣ ನಿರ್ದೇಶಕರ ವಜಾಕ್ಕೆ ಪ್ರಗತಿಪರ ಚಿಂತಕರ ಆಗ್ರಹ; ಬಹುರೂಪಿ ಬಹಿಷ್ಕರಿಸಲು ನಿರ್ಧಾರ

ರಂಗಾಯಣ ಮತ್ತು ಬಹುರೂಪಿ ತನ್ನ ಸಾಂಸ್ಕೃತಿಕ ಚಹರೆಗಳನ್ನು ಕಳೆದುಕೊಳ್ಳುತ್ತಿವೆ ಎಂದು ಆತಂಕ ವ್ಯಕ್ತಪಡಿಸಿ ಚಿಂತಕರು ಸಭೆ ನಡೆಸಿದ್ದು, ಬಳಿಕ ಬಹಿರಂಗ ಪತ್ರವನ್ನೂ ಬರೆದಿದ್ದಾರೆ.

- Advertisement -
- Advertisement -

ವಿವಾದಗಳಿಂದಲೇ ಸದಾ ಸುದ್ದಿಯಲ್ಲಿರುವ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರನ್ನು ವಜಾ ಮಾಡಬೇಕು ಹಾಗೂ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಸಾಂಸ್ಕೃತಿಕ ಮಹತ್ವವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಗತಿಪರ ಚಿಂತಕರು ಆಗ್ರಹಿಸಿದ್ದಾರೆ.

ಕಲಾಮಂದಿರ ಆವರಣದಲ್ಲಿರುವ ರಂಗಾಯಣ ಸಮೀಪದ ಕಿಂದರಿಜೋಗಿ ಬಳಿ ಶನಿವಾರ ಸಂಜೆ ಸಭೆ ನಡೆಸಿದ ಪ್ರಗತಿಪರ ಚಿಂತಕರು, ಸಮಾನ ಮನಸ್ಕರು, “ಬಹುತ್ವವನ್ನು ಪ್ರತಿಪಾದಿಸುವ ನಿಟ್ಟಿನಲ್ಲಿ ಮೈಸೂರು ರಂಗಾಯಣ ಈವರೆಗೆ ನಡೆಸಿಕೊಂಡು ಬಂದಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಈ ಬಾರಿ ವ್ಯಕ್ತಗತ, ಏಕಮುಖ ನಿರ್ಣಯ ಹಾಗೂ ಸೈದ್ಧಾಂತಿಕ ಹಿನ್ನೆಲೆಯಿಂದ ಕೂಡಿದೆ. ಹೀಗಾಗಿ ಈ ಬಾರಿಯ ಬಹುರೂಪಿಯನ್ನು ಬಹಿಷ್ಕರಿಸುತ್ತೇವೆ” ಎಂದು ತಿಳಿಸಿದರು.

ಯಾವುದೇ ಪಕ್ಷ ಹಾಗೂ ಸಿದ್ಧಾಂತ ಹಿನ್ನೆಲೆವುಳ್ಳವರನ್ನು ಹಾಗೂ ರಂಗಭೂಮಿಗೆ ಯಾವುದೇ ಕೊಡುಗೆಯನ್ನು ನೀಡದ ಚಕ್ರವರ್ತಿ ಸೂಲಿಬೆಲೆ ಹಾಗೂ ಮಾಳವಿಕಾ ಅವಿನಾಶ್ ಅವರನ್ನು ಬಹುರೂಪಿಗೆ ಆಹ್ವಾನಿಸಿರುವುದನ್ನು ಖಂಡಿಸಬೇಕು. ಬಹುರೂಪಿಯ ಅತಿಥಿಗಳ ಪಟ್ಟಿಯಲ್ಲಿ ಜಾವೇದ್ ಅಖ್ತರ್, ನಾಸೀರ್ ವುದ್ದೀನ್ ಶಾ ಸೇರಿದಂತೆ ಬಹುದೊಡ್ಡ ಕಲಾವಿದರು ಇದ್ದಾರೆ. ರಂಗಾಯಣ ಇತಿಹಾಸವನ್ನು ಅಲ್ಲಿನ ನಿರ್ದೇಶಕರು ಗೌರವಿಸಬೇಕು ಎಂದು ಆಗ್ರಹಿಸಿದ್ದಾರೆ.

ಆಯ್ಕೆ ನಮ್ಮದು ಎಂದು ಉದ್ದಟತನದಿಂದ ಮಾತನಾಡಬಾರದು. ರಂಗ ಸಮಾಜದ ನಿರ್ದೇಶನದಂತೆ ನಿರ್ಧಾರ ಕೈ ಗೊಳ್ಳಬೇಕು. ಇದರ ವಿರುದ್ಧವಾಗಿ ಪ್ರತಿಭಟಿಸಿದ ಕಿರಿಯ ಕಲಾವಿದರಿಗೆ ಉದ್ದಟತನದಿಂದ ಮಾತನಾಡಿದ ರಂಗಾಯಣ ನಿರ್ದೇಶಕ ರಂಗಾಯಣ ಕಾರ್ಯಪ್ಪ ಅವರ ಕಡೆ ಖಂಡನೀಯ. ಈ ಎಲ್ಲಾ ವಿಚಾರಗಳನ್ನು ಇಟ್ಟುಕೊಂಡು ಬಹುರೂಪಿಯನ್ನು ಸಾರ್ವಜನಿಕವಾಗಿ ಬಹಿಷ್ಕಾರಿಸಬೇಕು ಎಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.


ಇದನ್ನೂ ಓದಿರಿ: ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಮುಂದೂಡಿಕೆ


ಈ ಕುರಿತಂತೆ ಪತ್ರವನ್ನು ಬರೆದಿರುವ ಚಿಂತಕರು, “ಒಂದು ಸ್ವಾಯತ್ತ ಸಾಂಸ್ಕೃತಿಕ ಸಂಸ್ಥೆಯಾಗಿ ರಂಗಾಯಣ ಕನ್ನಡಿಗರ, ಕನ್ನಡದ ಸೃಜನಶೀಲ ಕಲಾವಿದರ ಸ್ವತ್ತಾಗಿದ್ದು ಈ ಸಂಸ್ಥೆಯನ್ನು ದಾರಿತಪ್ಪಿಸುವಂತಹ ನೀತಿಗಳನ್ನು ಅನುಸರಿಸುತ್ತಿರುವ ಅಡ್ಡಂಡ ಕಾರ್ಯಪ್ಪ ಅವರನ್ನು ಕೂಡಲೇ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸುತ್ತೇವೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆಯನ್ನು ನಡೆಸುತ್ತೇವೆ. ರಂಗಾಯಣ ಕನ್ನಡಿಗರ ಆಸ್ತಿ ಇದರ ಸ್ವಾಯತ್ತತೆಯ ರಕ್ಷಣೆಗಾಗಿ ನಮ್ಮ ಹೋರಾಟವನ್ನು ತೀವ್ರಗೊಳಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಪತ್ರದಲ್ಲಿ ಏನಿದೆ?

ಕನ್ನಡ ರಂಗಭೂಮಿಯ ಪ್ರತಿಷ್ಠಿತ ಸಂಸ್ಥೆಯಾಗಿರುವ ಮೈಸೂರಿನ ರಂಗಾಯಣ ಪ್ರತಿವರ್ಷ ನಡೆಸುತ್ತಾ ಬಂದಿರುವ ಬಹುರೂಪಿ ನಾಟಕೋತ್ಸವ ಅನೇಕ ಕಾರಣಗಳಿಗಾಗಿ ಬಹಳ ಮುಖ್ಯವಾದ ಉತ್ಸವ. ವಿಭಿನ್ನ ರಾಜ್ಯಗಳ, ಭಾಷೆಗಳ, ಸಂಸ್ಕøತಿಗಳ ಸಂಗಮವಾಗಿಯೂ ಇದಕ್ಕೆ ಮಹತ್ವ ಇದೆ. ಇಲ್ಲಿ ನಡೆಯುವ ವಿಚಾರ ಸಂಕಿರಣ, ಸಂವಾದ, ಚರ್ಚೆಗಳು ನಮ್ಮ ಚಿಂತನೆಯನ್ನು ಹರಿತಗೊಳಿಸುವ ಹೊಸ ಹೊಸ ಎತ್ತರಗಳಿಗೆ ಕೊಂಡೊಯ್ಯುವ ಆಶಯಕ್ಕೆ ಇಂಬಾಗಲು ನೆರವು ನೀಡುತ್ತವೆ. ಹೀಗಾಗಿ ಇಡೀ ಕರ್ನಾಟಕದ ಜನ ಈ ಹಬ್ಬವನ್ನು ಬಹಳ ಕುತೂಹಲದಿಂದ ಗಮನಿಸುತ್ತಾರೆ ಮತ್ತು ಸಕ್ರಿಯವಾಗಿ ಈ ಹಬ್ಬದಲ್ಲಿ ಭಾಗವಹಿಸುತ್ತಾರೆ.

ಆಡಳಿತ ಪಕ್ಷ ಯಾವುದೇ ಇರಲಿ, ಇಲ್ಲಿಯ ಚಿಂತನೆಗೆ, ಜನತಂತ್ರದ ಆಶಯಕ್ಕೆ, ಸ್ವಾಯತ್ತತೆಗೆ ಧಕ್ಕೆ ಬಾರದ ರೀತಿಯಲ್ಲಿ ಈ ಹಬ್ಬಗಳು ಈವರೆಗೆ ನಡೆದುಕೊಂಡುಬಂದಿವೆ. ಆದರೆ ಈ ಬಾರಿಯ ಬಹುರೂಪಿ ಉತ್ಸವ ಇಂಥ ಆಶಯವನ್ನು ದಿಕ್ಕುತಪ್ಪಿಸುವಂತೆ ಕಾಣುತ್ತಿದೆ. ಬಹುರೂಪಿಯ ಉದ್ಘಾಟನೆ ಮತ್ತು ಸಮಾರೋಪದ ಅತಿಥಿಗಳನ್ನು ಆಯ್ಕೆ ಮಾಡುವ ಸಂದರ್ಭಗಳಲ್ಲಿ ಯಾವುದೇ ನಿರ್ದಿಷ್ಟ ಮಾನದಂಡಗಳು ಇಲ್ಲವಾದರೂ, ಸಾಮಾನ್ಯವಾಗಿ ನಾಟಕ, ರಂಗಭೂಮಿ, ಕಲೆ, ಸಾಹಿತ್ಯ ಮತ್ತಿತರ ಸೃಜನಶೀಲ ಪ್ರಕಾರಗಳಲ್ಲಿ ಕೊಡುಗೆ ನೀಡಿದವರನ್ನು ಆಯ್ಕೆ ಮಾಡುವುದು ವಾಡಿಕೆ. ಎಲ್ಲ ರೀತಿಯ ಚಿಂತನಾ ವಾಹಿನಿಗಳನ್ನು ಪ್ರತಿನಿಧಿಸುವ ದೇಶದ, ರಾಜ್ಯದ ಮಹಾನ್ ಚಿಂತಕರು ಈ ವೇದಿಕೆಗಳನ್ನಲಂಕರಿಸಿ ನಾಟಕೋತ್ಸವದ ಆಶಯಗಳನ್ನು ಬೆಂಬಲಿಸಿದ್ದಾರೆ.

ಈ ಬಾರಿಯ ನಾಟಕೋತ್ಸವಕ್ಕೆ ಆಶಯ ಭಾಷಣ ಮಾಡಲು ಚಿತ್ರನಟಿ ಮತ್ತು ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಅವರನ್ನೂ, ಸಮಾರೋಪ ಭಾಷಣ ಮಾಡಲು ಸಂಘಪರಿವಾರದ ಪರಿಚಾರಕ ಮತ್ತು ಬಲಪಂಥೀಯ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಆಯ್ಕೆ ಮಾಡಿರುವುದು ಸೋಜಿಗ ಹುಟ್ಟಿಸುವಂತಿದೆ. ಈ ಆಯ್ಕೆ ರಂಗಾಯಣದ ಮೂಲ ಆಶಯಗಳಿಗೆ ಮತ್ತು ಕನ್ನಡ ಸಾಂಸ್ಕೃತಿಕ ಲೋಕದ ಆದರ್ಶಗಳಿಗೆ ವ್ಯತಿರಿಕ್ತವಾಗಿದೆ. ಮಾಳವಿಕಾ ಅವಿನಾಶ್ ನೇರವಾಗಿ ಆಡಳಿತಾರೂಢ ರಾಜಕೀಯ ಪಕ್ಷದೊಡನೆ ಮತ್ತು ಅದರ ಮೂಲ ಸಿದ್ಧಾಂತಗಳೊಡನೆ ಗುರುತಿಸಿಕೊಂಡವರಾಗಿದ್ದಾರೆ. ಹಾಗೆಯೇ ಚಕ್ರವರ್ತಿ ಸೂಲಿಬೆಲೆ ತಮ್ಮ ಪ್ರಖರ ಎನ್ನಲಾಗುವ ಭಾಷಣಗಳ ಮೂಲಕ ಕೋಮು ದ್ವೇಷವನ್ನು ಹರಡುವ, ಸುಳ್ಳು ಇತಿಹಾಸವನ್ನು ಪ್ರಚಾರ ಮಾಡುವ ಸಂಘಪರಿವಾರದ ಪರಿಚಾರಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಇಬ್ಬರಿಂದ ರಂಗಭೂಮಿ ಕ್ಷೇತ್ರಕ್ಕೆ ಯಾವುದೇ ವಿಧವಾದ ಕೊಡುಗೆ ಇಲ್ಲ. ತಮ್ಮ ಕೋಮುವಾದಿ ಚಿಂತನೆಗಳ ಮೂಲಕ ಸಮಾಜದಲ್ಲಿ ದ್ವೇಷದ ವಿಷಬೀಜಗಳನ್ನು ಬಿತ್ತುವುದರಲ್ಲಿ ಸಂಘಪರಿವಾರದ ಪರಿಚಾರಕರಾಗಿ ಅವಿರತ ಶ್ರಮಿಸುತ್ತಿರುವ ಶ್ರೀಯುತ ಚಕ್ರವರ್ತಿ ಸೂಲಿಬೆಲೆ ಅವರನ್ನು “ಬಹುರೂಪಿ ನಾಟಕೋತ್ಸವ ”ದಂತಹ ಒಂದು ಸೃಜನಶೀಲ ವೇದಿಕೆಯಲ್ಲಿ ಸಮಾರೋಪ ಅತಿಥಿಯಾಗಿ ಆಹ್ವಾನಿಸಿರುವುದು ಖಂಡಿತಾ ಒಪ್ಪುವ ಮಾತಲ್ಲ. ಈ ನಡೆಯನ್ನು ನಾವು ಖಂಡಿಸುತ್ತೇವೆ.


ಇದನ್ನೂ ಓದಿರಿ: ಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ


ರಂಗಾಯಣ ಕನ್ನಡಿಗರ ಸಾಂಸ್ಕೃತಿಕ ಸಂಸ್ಥೆ ಮಾತ್ರವಲ್ಲ, ಅದೊಂದು ಸ್ವಾಯತ್ತ ಸಂಸ್ಥೆ. ಆಳುವ ಪಕ್ಷ ಯಾವುದೇ ಇರಲಿ, ರಂಗಾಯಣ ನಿದೇರ್ಶಕರ ಒಲವು-ನಿಲುವು ಏನೇ ಇರಲಿ, ರಂಗಾಯಣದ ಮೂಲ ಆಶಯಕ್ಕೆ ಧಕ್ಕೆಯಾಗದ ರೀತಿಯಲ್ಲಿ ರಂಗಾಯಣದ ಚಟುವಟಿಕೆಗಳು ನಡೆಯಬೇಕು. ಇದನ್ನು ಕೋಮುವಾದಿಗಳ ವೇದಿಕೆಯಾಗಿ ಪರಿವರ್ತಿಸುವುದು ಜಾತ್ಯತೀತ ತತ್ವದಲ್ಲಿ ನಂಬಿಕೆ ಇಟ್ಟಿರುವ ನಮ್ಮ ಜನತಂತ್ರ ವ್ಯವಸ್ಥೆಯ ಮುನ್ನಡೆಗೆ ತಡೆಯೊಡ್ಡುತ್ತದೆ. ಇತ್ತೀಚಿನ ದಿನಗಳಲ್ಲಿ ರಂಗಾಯಣ ನಿರ್ದೇಶಕರಾದ ಅಡ್ಡಂಡ ಕಾರ್ಯಪ್ಪ ಅವರು ರಂಗಾಯಣದ ಮೂಲ ಆದರ್ಶಗಳಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದ್ದಾರೆ. ರಂಗಾಯಣ ರಾಜಕೀಯದಿಂದ ಮುಕ್ತವಾದ ಒಂದು ಸ್ವಾಯತ್ತ ಸಾಂಸ್ಕೃತಿಕ ಸಂಸ್ಥೆಯಾಗಿದ್ದು, ಯಾವುದೇ ರೀತಿಯ ರಾಜಕೀಯ ಹಸ್ತಕ್ಷೇಪ ರಂಗಾಯಣದ ಆಡಳಿತ ನಿರ್ವಹಣೆಯಲ್ಲಿ ಸಲ್ಲದು. ಅಡ್ಡಂಡ ಕಾರ್ಯಪ್ಪ ಅವರು ನೇರವಾಗಿಯೇ ತಾವು ರಾಜಕೀಯ ಪಕ್ಷದ ಪ್ರತಿನಿಧಿಯಂತೆ ವರ್ತಿಸುತ್ತಿದ್ದು, ರಂಗಾಯಣದ ನಿರ್ದೇಶಕರಾಗಿ ತಮ್ಮ ಜವಾಬ್ದಾರಿಯನ್ನು ಮರೆತಂತೆ ನಡೆದುಕೊಳ್ಳುತ್ತಿರುವುದನ್ನು ನಾವು ಖಂಡಿಸುತ್ತೇವೆ. ರಂಗಾಯಣದ ಕಿರಿಯ ಕಲಾವಿದರನ್ನು ಬೆದರಿಸುವ ಮೂಲಕ ಅಡ್ಡಂಡ ಕಾರ್ಯಪ್ಪ ಅವರು ಸರ್ವಾಧಿಕಾರಿ ಧೋರಣೆಯನ್ನು ತೋರುತ್ತಿರುವುದನ್ನು ನಾವು ಖಂಡಿಸುತ್ತೇವೆ.

ತನ್ನ ಮೂರು ದಶಕಗಳ ಇತಿಹಾಸದಲ್ಲಿ ರಂಗಾಯಣವನ್ನು ಕಟ್ಟಲು ರಾಜ್ಯದ ಹಲವಾರು ರಂಗಕರ್ಮಿಗಳು, ಸಾಹಿತಿಗಳು, ಚಿಂತಕರು ಶ್ರಮಿಸಿದ್ದು, ಯಾವುದೇ ರೀತಿಯ ರಾಜಕೀಯ ಸೋಂಕು ಇಲ್ಲದೆಯೇ ನಡೆದುಬಂದಿದೆ. ಬಹುರೂಪಿ ನಾಟಕೋತ್ಸವದ ಉದ್ಘಾಟನೆ ಮತ್ತು ಸಮಾರೋಪದ ಅತಿಥಿಗಳಾಗಿ ಈವರೆಗೂ ಯಾವುದೇ ರಾಜಕೀಯ ವ್ಯಕ್ತಿಯನ್ನು ಆಹ್ವಾನಿಸಿದ ಉದಾಹರಣೆಗಳಿರುವುದಿಲ್ಲ. ಆದರೆ ಅಡ್ಡಂಡ ಕಾರ್ಯಪ್ಪ ತಮ್ಮ ವೈಯಕ್ತಿಕ ರಾಜಕೀಯ ನಿಲುವು ಮತ್ತು ಒಲವುಗಳನ್ನ ರಂಗಾಯಣಕ್ಕೂ ಎಳೆದುತಂದಿರುವುದು ಅಕ್ಷಮ್ಯ. ತಮ್ಮ ವ್ಯಕ್ತಿಗತ ರಾಜಕೀಯ-ಸೈದ್ದಾಂತಿಕ ನಿಲುಮೆಗಳನ್ನು ರಂಗಾಯಣದ ಚಟುವಟಿಕೆಗಳ ಮೇಲೆ ಹೇರುವುದನ್ನು ನಾವು ಖಂಡಿಸುತ್ತೇವೆ.

ಒಂದು ಸ್ವಾಯತ್ತ ಸಾಂಸ್ಕೃತಿಕ ಸಂಸ್ಥೆಯಾಗಿ ರಂಗಾಯಣ ಕನ್ನಡಿಗರ,, ಕನ್ನಡದ ಸೃಜನಶೀಲ ಕಲಾವಿದರ ಸ್ವತ್ತಾಗಿದ್ದು ಈ ಸಂಸ್ಥೆಯನ್ನು ದಾರಿತಪ್ಪಿಸುವಂತಹ ನೀತಿಗಳನ್ನು ಅನುಸರಿಸುತ್ತಿರುವ ಅಡ್ಡಂಡ ಕಾರ್ಯಪ್ಪ ಅವರನ್ನು ಕೂಡಲೇ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಈ ಮೂಲಕ ಒತ್ತಾಯಿಸುತ್ತೇವೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆಯನ್ನು ನಡೆಸುತ್ತೇವೆ. ರಂಗಾಯಣ ಕನ್ನಡಿಗರ ಆಸ್ತಿ ಇದರ ಸ್ವಾಯತ್ತತೆಯ ರಕ್ಷಣೆಗಾಗಿ ನಮ್ಮ ಹೋರಾಟವನ್ನು ತೀವ್ರಗೊಳಿಸುತ್ತೇವೆ.

ಇದಿಷ್ಟು ಪತ್ರದ ಪೂರ್ಣಾಂಶ

ಚಿಂತಕರಾದ ಪ.ಮಲ್ಲೇಶ್, ಕಾಳೇಗೌಡ ನಾಗವಾರ, ನಾ. ದಿವಾಕರ, ಕೆ.ಪಿ.ಸುರೇಶ್‌, ಎನ್.ಎಸ್.ಗೋಪಿನಾಥ್, ಮೈಮ್ ರಮೇಶ್, ಮಾಧವ ಖರೆ, ಕೆ.ಎಸ್.ಶಿವರಾಮು, ಭೋ.ಗ.ನಂದೀಶ್, ವಿ.ಪುರುಷೋತ್ತಮ, ರಾಜೇಶ್, ಡಾ.ವಿ.ಲಕ್ಷ್ಮೀನಾರಾಯಣ್, ರತಿರಾವ್, ಪ್ರೊ.ಪಂಡಿತಾರಾಧ್ಯ, ಜಿ.ಪಿ.ಬಸವರಾಜು, ಪ್ರೊ.ವಿ.ಎನ್.ಲಕ್ಷ್ಮೀನಾರಾಯಣ, ಆನಂದ, ಎಂ.ಎಫ್.ಖಲೀಂ, ಖಾದರ್ ಅಹಮದ್, ಜಗದೀಶ್ ಸೂರ್ಯ, ಲ.ಜಗನ್ನಾಥ್, ನ.ಶಿವಮೂರ್ತಿ, ಜನಾರ್ದನ (ಜನ್ನಿ), ಮಂಜು ಮಂಗಲ, ಕಾತ್ಯಾಯಿನಿ, ಕೆ.ಗೋಪಾಲ ಕೃಷ್ಣ, ಸ.ರ.ಸುದರ್ಶನ್‌‌ ಮತ್ತಿತ್ತರು ಶನಿವಾರ ಸಂಜೆ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದು, ಈ ಮೇಲಿನ ಪತ್ರವನ್ನು ಬರೆದಿದ್ದಾರೆ.


ಇದನ್ನೂ ಓದಿರಿ: ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...