Homeಮುಖಪುಟವೈಯಕ್ತಿಕ ಕಾನೂನುಗಳಿಂದ ಬಾಲ್ಯವಿವಾಹ ನಿಷೇಧ ಕಾಯ್ದೆಯನ್ನು ತಡೆಯಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ವೈಯಕ್ತಿಕ ಕಾನೂನುಗಳಿಂದ ಬಾಲ್ಯವಿವಾಹ ನಿಷೇಧ ಕಾಯ್ದೆಯನ್ನು ತಡೆಯಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

- Advertisement -
- Advertisement -

“ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಯಾವುದೇ ವೈಯಕ್ತಿಕ ಕಾನೂನಿನಡಿ ಸಂಪ್ರದಾಯಗಳ ಹೆಸರಿನಲ್ಲಿ ದುರ್ಬಲಗೊಳಿಸಲು ಸಾಧ್ಯವಿಲ್ಲ. ಬಾಲ್ಯ ವಿವಾಹಗಳು ಜೀವನ ಸಂಗಾತಿಯನ್ನು ಆಯ್ಕೆ ಮಾಡುವ ವ್ಯಕ್ತಿಯ ಸ್ವಾತಂತ್ರ್ಯವನ್ನು ಹರಣ ಮಾಡುತ್ತವೆ” ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಅ.18) ಹೇಳಿದೆ.

ಭಾರತದಲ್ಲಿನ ವೈಯಕ್ತಿಕ ಕಾನೂನುಗಳು ಮದುವೆ, ವಿಚ್ಛೇದನ, ಉತ್ತರಾಧಿಕಾರ, ದತ್ತು ಮತ್ತು ಪಾಲಕತ್ವದಂತಹ ವಿಷಯಗಳಲ್ಲಿ ವ್ಯಕ್ತಿಗಳನ್ನು ನಿಯಂತ್ರಿಸುವ ಕಾನೂನುಗಳ ಗುಂಪಾಗಿದೆ. ಅವು ಧಾರ್ಮಿಕ ಗ್ರಂಥಗಳನ್ನು ಆಧರಿಸಿವೆ. ಗೋವಾ ಮತ್ತು ಉತ್ತರಾಖಂಡಗಳು ಮಾತ್ರ ಇಂತಹ ವಿಷಯಗಳಿಗೆ ವೈಯಕ್ತಿಕ ಕಾನೂನುಗಳನ್ನು ಅನುಸರಿಸುವುದಿಲ್ಲ, ಬದಲಿಗೆ ಏಕರೂಪ ನಾಗರಿಕ ಸಂಹಿತೆಯನ್ನು ಅವಲಂಬಿಸಿವೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯ ಪೀಠವು ದೇಶದಲ್ಲಿ ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಕಾನೂನಿನ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಬಾಲ್ಯ ವಿವಾಹ ತಡೆಗಟ್ಟುವ ತಂತ್ರವು ವಿವಿಧ ಸಮುದಾಯಗಳಿಗೆ ಅನುಗುಣವಾಗಿರಬೇಕು. ಬಹು-ವಲಯಗಳ ಸಮನ್ವಯತೆ ಇದ್ದಾಗ ಮಾತ್ರ ಕಾನೂನು ಯಶಸ್ವಿಯಾಗುತ್ತದೆ. ಕಾನೂನು ಜಾರಿ ಅಧಿಕಾರಿಗಳ ತರಬೇತಿ ಮತ್ತು ಸಾಮರ್ಥ್ಯ ವೃದ್ಧಿ ಆಗಬೇಕು. ಸಮುದಾಯ-ಚಾಲಿತ ವಿಧಾನದ ಅಗತ್ಯವಿದೆ ಇತ್ಯಾದಿ ಮಾರ್ಗಸೂಚಿಗಳನ್ನು ಸುಪ್ರಿಂ ಕೋರ್ಟ್ ನೀಡಿದೆ.

ವೈಯಕ್ತಿಕ ಕಾನೂನುಗಳ ಮೇಲೆ ಬಾಲ್ಯ ವಿವಾಹ ನಿಷೇಧ ಕಾಯ್ದೆ (ಪಿಸಿಎಂಎ) ಮೇಲುಗೈ ಸಾಧಿಸುತ್ತದೆಯೇ? ಎಂಬ ವಿಷಯವು ಸಂಸತ್ತಿನಲ್ಲಿ ಪರಿಗಣನೆಗಾಗಿ ಬಾಕಿ ಇದೆ ಎಂಬುವುದನ್ನು ನ್ಯಾಯಪೀಠ ಉಲ್ಲೇಖಿಸಿದೆ. ವೈಯಕ್ತಿಕ ಕಾನೂನುಗಳಿಗಿಂತ ಬಾಲ್ಯ ವಿವಾಹ ನಿಷೇಧ ಕಾಯ್ದೆಯೇ ಮೇಲ್ಮಟ್ಟದ್ದು ಎಂದು ಪರಿಗಣಿಸುವಂತೆ ಕೇಂದ್ರವು ಸುಪ್ರೀಂ ಕೋರ್ಟ್​ಗೆ ಒತ್ತಾಯಿಸಿದೆ ಎಂಬುವುದು ಇಲ್ಲಿ ಗಮನಾರ್ಹ.

ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಕಾನೂನು, ಮಕ್ಕಳ ಮೇಲೆ ವಿವಾಹದ ದೊಡ್ಡ ಸಾಮಾಜಿಕ ಹೊರೆಯನ್ನು ಹೊರಿಸುವುದನ್ನು ತಡೆಗಟ್ಟುವುದು ಮಾತ್ರವಲ್ಲದೆ, ಇದು ಆಯ್ಕೆಯ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟುವ ಉದ್ದೇಶಗಳನ್ನು ಕೂಡ ಹೊಂದಿದೆ. ಬಾಲ್ಯ ವಿವಾಹಗಳು ಮಗು ಪ್ರಬುದ್ಧ ಆಗುವ ಮೊದಲು ಸಂಗಾತಿಯ ಆಯ್ಕೆ ಮತ್ತು ಜೀವನ ಮಾರ್ಗಗಳನ್ನು ಕಸಿದುಕೊಳ್ಳುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕೆಂದು ಕೋರಿ ಸೊಸೈಟಿ ಫಾರ್ ಎನ್‌ಲೈಟೆನ್​ಮೆಂಟ್ ಅಂಡ್ ವಾಲೆಂಟರಿ ಆಕ್ಷನ್ ಸಲ್ಲಿಸಿದ ಪಿಐಎಲ್ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್​ ಮೇಲಿನಂತೆ ಹೇಳಿದೆ.

ಇದನ್ನೂ ಓದಿ : ಮಹಿಳೆಯರ ಅಕ್ರಮ ಬಂಧನ ಆರೋಪ : ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...