Homeಮುಖಪುಟವಿಚಾರಣೆಯಿಲ್ಲದೆ ದೀರ್ಘಾವಧಿ ಜೈಲಿನಲ್ಲಿಡುವುದು 'ಬದುಕುವ ಹಕ್ಕಿನ' ಉಲ್ಲಂಘನೆ : ಬಾಂಬೆ ಹೈಕೋರ್ಟ್

ವಿಚಾರಣೆಯಿಲ್ಲದೆ ದೀರ್ಘಾವಧಿ ಜೈಲಿನಲ್ಲಿಡುವುದು ‘ಬದುಕುವ ಹಕ್ಕಿನ’ ಉಲ್ಲಂಘನೆ : ಬಾಂಬೆ ಹೈಕೋರ್ಟ್

ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಇಬ್ಬರಿಗೆ ಜಾಮೀನು

- Advertisement -
- Advertisement -

‘ವಿಚಾರಣೆಯಿಲ್ಲದೆ ದೀರ್ಘಕಾಲದವರೆಗೆ ಜೈಲಿನಲ್ಲಿಡುವುದು’ ಸಂವಿಧಾನದ ಅಡಿಯಲ್ಲಿ ಬದುಕುವ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. 2018ರ ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸಲು ವಿಶೇಷ ನ್ಯಾಯಾಲಯಕ್ಕೆ ಸೂಚಿಸಿದೆ.

ವಿಶೇಷ ನ್ಯಾಯಾಲಯವು ಒಂಬತ್ತು ತಿಂಗಳಲ್ಲಿ ಆರೋಪ ರೂಪಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಆರೋಪ ರೂಪಿಸುವುದು ಪ್ರಕರಣದ ವಿಚಾರಣೆ ಆರಂಭದ ಮೊದಲ ಹೆಜ್ಜೆಯಾಗಿದೆ ಎಂದಿದೆ.

ನ್ಯಾಯಮೂರ್ತಿಗಳಾದ ಎ.ಎಸ್ ಗಡ್ಕರಿ ಮತ್ತು ಕಮಲ್ ಖಾಟಾ ಅವರ ಬಾಂಬೆ ಹೈಕೋರ್ಟ್ ವಿಭಾಗೀಯ ಪೀಠವು ಎಲ್ಗರ್ ಪರಿಷತ್ ಪ್ರಕರಣದಲ್ಲಿ ಜನವರಿ 8ರಂದು ಸಂಶೋಧಕ ರೋನಾ ವಿಲ್ಸನ್ ಮತ್ತು ಹೋರಾಟಗಾರ ಸುಧೀರ್ ಧಾವಳೆ ಅವರಿಗೆ ಜಾಮೀನು ನೀಡಿದೆ.

ಈ ಇಬ್ಬರು ದೀರ್ಘ ಕಾಲದಿಂದ ಸೆರೆವಾಸ ಅನುಭವಿಸುತ್ತಿರುವುದು ಮತ್ತು ಪ್ರಕರಣದ ವಿಚಾರಣೆ ಶೀಘ್ರದಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿಲ್ಲ ಎಂಬ ಅಂಶಗಳನ್ನು ಗಮನಿಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ವಿಲ್ಸನ್ ಮತ್ತು ಧಾವಳೆ ಅವರು ಈಗಾಗಲೇ ಆರು ವರ್ಷಗಳಿಗೂ ಹೆಚ್ಚು ಸಮಯವನ್ನು ವಿಚಾರಣೆಗೆ ಮುನ್ನ ಜೈಲಿನಲ್ಲಿ ಕಳೆದಿದ್ದಾರೆ ಎಂಬುವುದನ್ನು ಹೈಕೋರ್ಟ್ ಗಮನಿಸಿದೆ.

ಮಂಗಳವಾರ (ಜ.14) ಲಭ್ಯವಾದ ನ್ಯಾಯಾಲಯದ ವಿವರವಾದ ಆದೇಶ ಪ್ರತಿಯಲ್ಲಿ, ಆರೋಪಿಯನ್ನು ವಿಚಾರಣೆಯಿಲ್ಲದೆ ದೀರ್ಘಕಾಲದವರೆಗೆ ಸೆರೆಮನೆಯಲ್ಲಿಡುವುದು ಸಂವಿಧಾನದ 21ನೇ ವಿಧಿಯ ಉಲ್ಲಂಘನೆಯಾಗಿದೆ ಎಂಬುದು ಕಾನೂನಿನ ಸ್ಥಿರ ಮತ್ತು ಮಾನ್ಯತೆ ಪಡೆದ ತತ್ವವಾಗಿದೆ ಎಂದು ಹೈಕೋರ್ಟ್ ಹೇಳಿದೆ.

“ದೀರ್ಘಕಾಲದ ಸೆರೆವಾಸ ಮತ್ತು ವಿಚಾರಣೆ ಶೀಘ್ರದಲ್ಲೇ ಪೂರ್ಣಗೊಳ್ಳುವ ಸಾಧ್ಯತೆಯಿಲ್ಲದ ಕಾರಣ, ವಿಚಾರಣಾಧೀನ ಕೈದಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವ ಅವಶ್ಯಕತೆಯಿದೆ” ಎಂದು ಪೀಠ ಅಭಿಪ್ರಾಯಪಟ್ಟಿದೆ.

“ವಿಶೇಷ ನ್ಯಾಯಾಧೀಶರು (ಎನ್‌ಐಎ) ಆರೋಪಪಟ್ಟಿ ಸಲ್ಲಿಸುವ ಹಂತವನ್ನು ಮತ್ತು ಸಾಧ್ಯವಾದಷ್ಟು ವಿಚಾರಣೆಯನ್ನು ತ್ವರಿತಗೊಳಿಸುವಂತೆ ನಾವು ವಿನಂತಿಸುತ್ತೇವೆ. ಇಂದಿನಿಂದ 9 ತಿಂಗಳ ಅವಧಿಯಲ್ಲಿ ಆರೋಪಪಟ್ಟಿ ಸಲ್ಲಿಸುವ ಹಂತವನ್ನು ಪೂರ್ಣಗೊಳಿಸಬೇಕು” ಎಂದು ಹೈಕೋರ್ಟ್ ಹೇಳಿದೆ.

ನ್ಯಾಯಾಲಯವು ವಿಲ್ಸನ್ ಮತ್ತು ಧಾವಳೆ ಅವರಿಗೆ ತಲಾ 1 ಲಕ್ಷ ರೂಪಾಯಿಗಳ ಭದ್ರತಾ ಠೇವಣಿ ಇಡುವಂತೆ ಸೂಚಿಸಿದೆ.

ಆದೇಶದ ಪ್ರತಿ ಈಗ ಲಭ್ಯವಿದ್ದು, ಇಬ್ಬರೂ ತಮ್ಮ ಜಾಮೀನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ವಿಶೇಷ ನ್ಯಾಯಾಲಯವನ್ನು ಸಂಪರ್ಕಿಸಬಹುದು. ನಂತರ ಅವರನ್ನು ನವಿ ಮುಂಬೈನ ತಲೋಜಾ ಜೈಲಿನಿಂದ ಬಿಡುಗಡೆ ಮಾಡಲಾಗುತ್ತದೆ.

ವಿಚಾರಣೆಯ ಸಮಯದಲ್ಲಿ ವಿಲ್ಸನ್ ಮತ್ತು ಧಾವಳೆ ಅವರು ವಿಶೇಷ ಎನ್‌ಐಎ ನ್ಯಾಯಾಲಯದ ಮುಂದೆ ಹಾಜರಾಗಬೇಕು. ತಮ್ಮ ಪಾಸ್‌ಪೋರ್ಟ್‌ಗಳನ್ನು ಒಪ್ಪಿಸಬೇಕು ಮತ್ತು ವಿಚಾರಣೆ ಮುಗಿಯುವವರೆಗೆ ನಗರವನ್ನು ಬಿಟ್ಟು ಹೋಗಬಾರದು ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿಸಲ್ಪಟ್ಟ 16 ಜನರಲ್ಲಿ ವಿಲ್ಸನ್ ಮತ್ತು ಧಾವಳೆ ಸೇರಿದಂತೆ ಹತ್ತು ಮಂದಿ ಇಲ್ಲಿಯವರೆಗೆ ಜಾಮೀನು ಪಡೆದಿದ್ದಾರೆ.

ಡಿಸೆಂಬರ್ 31, 2017ರಂದು ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಆರೋಪಿಗಳು ಪ್ರಚೋದನಕಾರಿ ಭಾಷಣಗಳನ್ನು ಮಾಡಿ, ಮರುದಿನ ಜಿಲ್ಲೆಯ ಕೋರೆಗಾಂವ್-ಭೀಮಾದಲ್ಲಿ ಹಿಂಸಾಚಾರಕ್ಕೆ ಕಾರಣರಾದರು ಎಂದು ಆರೋಪಿಸಿ ಪುಣೆ ಪೊಲೀಸರು 2018ರಲ್ಲಿ ಪ್ರಕರಣ ದಾಖಲಿಸಿದ್ದರು.

ಪೊಲೀಸರ ಪ್ರಕಾರ, ಎಲ್ಗರ್ ಪರಿಷತ್ ಸಮಾವೇಶಕ್ಕೆ ಮಾವೋವಾದಿಗಳು ಬೆಂಬಲ ನೀಡಿದ್ದರು.

ಪ್ರಕರಣದಲ್ಲಿ ಜಾಮೀನು ಪಡೆದ ಇತರ ಆರೋಪಿಗಳಲ್ಲಿ ವರವರ ರಾವ್, ಸುಧಾ ಭಾರದ್ವಾಜ್, ಆನಂದ್ ತೇಲ್ತುಂಬ್ಡೆ, ವೆರ್ನಾನ್ ಗೊನ್ಸಾಲ್ವೆಸ್, ಅರುಣ್ ಫೆರೇರಾ, ಶೋಮಾ ಸೇನ್, ಗೌತಮ್ ನವಲಖಾ ಮತ್ತು ಮಹೇಶ್ ರಾವತ್ ಸೇರಿದ್ದಾರೆ.

ಆದಾಗ್ಯೂ, ಎನ್‌ಐಎ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಆದೇಶವನ್ನು ಪ್ರಶ್ನಿಸಿದ ನಂತರ ಮಹೇಶ್ ರಾವತ್ ಅವರು ಜೈಲಿನಲ್ಲೇ ಇದ್ದರು. ಎಲ್‌ಎಲ್‌ಬಿ ಪರೀಕ್ಷೆಗೆ ಹಾಜರಾಗಲು ಅನುವು ಮಾಡಿಕೊಡಲು ವಿಶೇಷ ಎನ್‌ಐಎ ನ್ಯಾಯಾಲಯ ಮಂಗಳವಾರ (ಜ.14) ಅವರಿಗೆ 18 ದಿನಗಳ ಮಧ್ಯಂತರ ಜಾಮೀನು ನೀಡಿದೆ.

ಆರೋಪಿಗಳಲ್ಲಿ ಒಬ್ಬರಾದ ಸ್ಟಾನ್ ಸ್ವಾಮಿ 2021ರಲ್ಲಿ ಜೈಲಿನಲ್ಲಿದ್ದಾಗ ನಿಧನರಾದರು.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣದ ತನಿಖೆಯನ್ನು ಪುಣೆ ಪೊಲೀಸರಿಂದ ವಹಿಸಿಕೊಂಡು ಆರೋಪಪಟ್ಟಿ ಸಲ್ಲಿಸಿತ್ತು. ಆದರೆ, ವಿಶೇಷ ನ್ಯಾಯಾಲಯವು ಇನ್ನೂ ಆರೋಪಗಳನ್ನು ರೂಪಿಸಿಲ್ಲ.

ಜೂನ್ 2018ರಲ್ಲಿ ದೆಹಲಿಯ ತಮ್ಮ ಮನೆಯಿಂದ ಬಂಧಿಸಲ್ಪಟ್ಟ ವಿಲ್ಸನ್ ಅವರನ್ನು ತನಿಖಾ ಸಂಸ್ಥೆಗಳು ನಗರ ಮಾವೋವಾದಿಗಳ ಪ್ರಮುಖ ನಾಯಕರಲ್ಲಿ ಒಬ್ಬರು ಎಂದು ಬಣ್ಣಿಸಿವೆ. ಧಾವಳೆ ನಿಷೇಧಿತ ಕಮ್ಯುನಿಸ್ಟ್ ಪಕ್ಷ (ಮಾವೋವಾದಿ) ದ ಸಕ್ರಿಯ ಸದಸ್ಯರಾಗಿದ್ದರು ಎಂದು ಆರೋಪಿಸಲಾಗಿದೆ.

ಆಗಸ್ಟ್ 2021ರಲ್ಲಿ ಸಲ್ಲಿಸಲಾದ ಎನ್‌ಐಎ ಆರೋಪಪಟ್ಟಿಯಲ್ಲಿ, ವಿಲ್ಸನ್ ಮತ್ತು ಇತರ ಆರೋಪಿಗಳು ನಿಷೇಧಿತ ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದರು, ಅವರು ಸರ್ಕಾರವನ್ನು ದುರ್ಬಲಗೊಳಿಸಲು ಮತ್ತು ರಾಜ್ಯವನ್ನು ತಮ್ಮ ವಶಕ್ಕೆ ಪಡೆಯಲು ಸಶಸ್ತ್ರ ಹೋರಾಟದ ಮೂಲಕ ‘ಜನತಾ ಸರ್ಕಾರ್’ ಸ್ಥಾಪಿಸಲು ಬಯಸಿದ್ದರು ಎಂದು ಆರೋಪಿಸಲಾಗಿದೆ.

ಆರೋಪಿಗಳ ವಿರುದ್ಧ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಸಾಮರಸ್ಯ ಕಾಪಾಡಿಕೊಳ್ಳಲು ಹಾನಿಕರವಾದ ಕೃತ್ಯಗಳನ್ನು ಮಾಡುವುದು, ಸರ್ಕಾರದ ವಿರುದ್ಧ ಯುದ್ಧ ನಡೆಸುವುದು ಮತ್ತು ಕಠಿಣ ಭಯೋತ್ಪಾದನಾ ವಿರೋಧಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ (ಯುಎಪಿಎ) ವಿವಿಧ ಸೆಕ್ಷನ್‌ಗಳಡಿ ಒಂದು ಡಜನ್‌ಗೂ ಹೆಚ್ಚು ಆರೋಪಗಳನ್ನು ಹೊರಿಸಲಾಗಿದೆ.

ಮಣಿಪುರದ ಜನರನ್ನು ಭೇಟಿ ಮಾಡಲು ಮೋದಿಗೆ ಇನ್ನೂ ಸಮಯ ಸಿಕ್ಕಿಲ್ಲ – ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...