Homeಮುಖಪುಟವಿಚಾರಣೆಯಿಲ್ಲದೆ ದೀರ್ಘಾವಧಿ ಜೈಲಿನಲ್ಲಿಡುವುದು 'ಬದುಕುವ ಹಕ್ಕಿನ' ಉಲ್ಲಂಘನೆ : ಬಾಂಬೆ ಹೈಕೋರ್ಟ್

ವಿಚಾರಣೆಯಿಲ್ಲದೆ ದೀರ್ಘಾವಧಿ ಜೈಲಿನಲ್ಲಿಡುವುದು ‘ಬದುಕುವ ಹಕ್ಕಿನ’ ಉಲ್ಲಂಘನೆ : ಬಾಂಬೆ ಹೈಕೋರ್ಟ್

ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಇಬ್ಬರಿಗೆ ಜಾಮೀನು

- Advertisement -
- Advertisement -

‘ವಿಚಾರಣೆಯಿಲ್ಲದೆ ದೀರ್ಘಕಾಲದವರೆಗೆ ಜೈಲಿನಲ್ಲಿಡುವುದು’ ಸಂವಿಧಾನದ ಅಡಿಯಲ್ಲಿ ಬದುಕುವ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. 2018ರ ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸಲು ವಿಶೇಷ ನ್ಯಾಯಾಲಯಕ್ಕೆ ಸೂಚಿಸಿದೆ.

ವಿಶೇಷ ನ್ಯಾಯಾಲಯವು ಒಂಬತ್ತು ತಿಂಗಳಲ್ಲಿ ಆರೋಪ ರೂಪಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಆರೋಪ ರೂಪಿಸುವುದು ಪ್ರಕರಣದ ವಿಚಾರಣೆ ಆರಂಭದ ಮೊದಲ ಹೆಜ್ಜೆಯಾಗಿದೆ ಎಂದಿದೆ.

ನ್ಯಾಯಮೂರ್ತಿಗಳಾದ ಎ.ಎಸ್ ಗಡ್ಕರಿ ಮತ್ತು ಕಮಲ್ ಖಾಟಾ ಅವರ ಬಾಂಬೆ ಹೈಕೋರ್ಟ್ ವಿಭಾಗೀಯ ಪೀಠವು ಎಲ್ಗರ್ ಪರಿಷತ್ ಪ್ರಕರಣದಲ್ಲಿ ಜನವರಿ 8ರಂದು ಸಂಶೋಧಕ ರೋನಾ ವಿಲ್ಸನ್ ಮತ್ತು ಹೋರಾಟಗಾರ ಸುಧೀರ್ ಧಾವಳೆ ಅವರಿಗೆ ಜಾಮೀನು ನೀಡಿದೆ.

ಈ ಇಬ್ಬರು ದೀರ್ಘ ಕಾಲದಿಂದ ಸೆರೆವಾಸ ಅನುಭವಿಸುತ್ತಿರುವುದು ಮತ್ತು ಪ್ರಕರಣದ ವಿಚಾರಣೆ ಶೀಘ್ರದಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿಲ್ಲ ಎಂಬ ಅಂಶಗಳನ್ನು ಗಮನಿಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ವಿಲ್ಸನ್ ಮತ್ತು ಧಾವಳೆ ಅವರು ಈಗಾಗಲೇ ಆರು ವರ್ಷಗಳಿಗೂ ಹೆಚ್ಚು ಸಮಯವನ್ನು ವಿಚಾರಣೆಗೆ ಮುನ್ನ ಜೈಲಿನಲ್ಲಿ ಕಳೆದಿದ್ದಾರೆ ಎಂಬುವುದನ್ನು ಹೈಕೋರ್ಟ್ ಗಮನಿಸಿದೆ.

ಮಂಗಳವಾರ (ಜ.14) ಲಭ್ಯವಾದ ನ್ಯಾಯಾಲಯದ ವಿವರವಾದ ಆದೇಶ ಪ್ರತಿಯಲ್ಲಿ, ಆರೋಪಿಯನ್ನು ವಿಚಾರಣೆಯಿಲ್ಲದೆ ದೀರ್ಘಕಾಲದವರೆಗೆ ಸೆರೆಮನೆಯಲ್ಲಿಡುವುದು ಸಂವಿಧಾನದ 21ನೇ ವಿಧಿಯ ಉಲ್ಲಂಘನೆಯಾಗಿದೆ ಎಂಬುದು ಕಾನೂನಿನ ಸ್ಥಿರ ಮತ್ತು ಮಾನ್ಯತೆ ಪಡೆದ ತತ್ವವಾಗಿದೆ ಎಂದು ಹೈಕೋರ್ಟ್ ಹೇಳಿದೆ.

“ದೀರ್ಘಕಾಲದ ಸೆರೆವಾಸ ಮತ್ತು ವಿಚಾರಣೆ ಶೀಘ್ರದಲ್ಲೇ ಪೂರ್ಣಗೊಳ್ಳುವ ಸಾಧ್ಯತೆಯಿಲ್ಲದ ಕಾರಣ, ವಿಚಾರಣಾಧೀನ ಕೈದಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವ ಅವಶ್ಯಕತೆಯಿದೆ” ಎಂದು ಪೀಠ ಅಭಿಪ್ರಾಯಪಟ್ಟಿದೆ.

“ವಿಶೇಷ ನ್ಯಾಯಾಧೀಶರು (ಎನ್‌ಐಎ) ಆರೋಪಪಟ್ಟಿ ಸಲ್ಲಿಸುವ ಹಂತವನ್ನು ಮತ್ತು ಸಾಧ್ಯವಾದಷ್ಟು ವಿಚಾರಣೆಯನ್ನು ತ್ವರಿತಗೊಳಿಸುವಂತೆ ನಾವು ವಿನಂತಿಸುತ್ತೇವೆ. ಇಂದಿನಿಂದ 9 ತಿಂಗಳ ಅವಧಿಯಲ್ಲಿ ಆರೋಪಪಟ್ಟಿ ಸಲ್ಲಿಸುವ ಹಂತವನ್ನು ಪೂರ್ಣಗೊಳಿಸಬೇಕು” ಎಂದು ಹೈಕೋರ್ಟ್ ಹೇಳಿದೆ.

ನ್ಯಾಯಾಲಯವು ವಿಲ್ಸನ್ ಮತ್ತು ಧಾವಳೆ ಅವರಿಗೆ ತಲಾ 1 ಲಕ್ಷ ರೂಪಾಯಿಗಳ ಭದ್ರತಾ ಠೇವಣಿ ಇಡುವಂತೆ ಸೂಚಿಸಿದೆ.

ಆದೇಶದ ಪ್ರತಿ ಈಗ ಲಭ್ಯವಿದ್ದು, ಇಬ್ಬರೂ ತಮ್ಮ ಜಾಮೀನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ವಿಶೇಷ ನ್ಯಾಯಾಲಯವನ್ನು ಸಂಪರ್ಕಿಸಬಹುದು. ನಂತರ ಅವರನ್ನು ನವಿ ಮುಂಬೈನ ತಲೋಜಾ ಜೈಲಿನಿಂದ ಬಿಡುಗಡೆ ಮಾಡಲಾಗುತ್ತದೆ.

ವಿಚಾರಣೆಯ ಸಮಯದಲ್ಲಿ ವಿಲ್ಸನ್ ಮತ್ತು ಧಾವಳೆ ಅವರು ವಿಶೇಷ ಎನ್‌ಐಎ ನ್ಯಾಯಾಲಯದ ಮುಂದೆ ಹಾಜರಾಗಬೇಕು. ತಮ್ಮ ಪಾಸ್‌ಪೋರ್ಟ್‌ಗಳನ್ನು ಒಪ್ಪಿಸಬೇಕು ಮತ್ತು ವಿಚಾರಣೆ ಮುಗಿಯುವವರೆಗೆ ನಗರವನ್ನು ಬಿಟ್ಟು ಹೋಗಬಾರದು ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿಸಲ್ಪಟ್ಟ 16 ಜನರಲ್ಲಿ ವಿಲ್ಸನ್ ಮತ್ತು ಧಾವಳೆ ಸೇರಿದಂತೆ ಹತ್ತು ಮಂದಿ ಇಲ್ಲಿಯವರೆಗೆ ಜಾಮೀನು ಪಡೆದಿದ್ದಾರೆ.

ಡಿಸೆಂಬರ್ 31, 2017ರಂದು ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಆರೋಪಿಗಳು ಪ್ರಚೋದನಕಾರಿ ಭಾಷಣಗಳನ್ನು ಮಾಡಿ, ಮರುದಿನ ಜಿಲ್ಲೆಯ ಕೋರೆಗಾಂವ್-ಭೀಮಾದಲ್ಲಿ ಹಿಂಸಾಚಾರಕ್ಕೆ ಕಾರಣರಾದರು ಎಂದು ಆರೋಪಿಸಿ ಪುಣೆ ಪೊಲೀಸರು 2018ರಲ್ಲಿ ಪ್ರಕರಣ ದಾಖಲಿಸಿದ್ದರು.

ಪೊಲೀಸರ ಪ್ರಕಾರ, ಎಲ್ಗರ್ ಪರಿಷತ್ ಸಮಾವೇಶಕ್ಕೆ ಮಾವೋವಾದಿಗಳು ಬೆಂಬಲ ನೀಡಿದ್ದರು.

ಪ್ರಕರಣದಲ್ಲಿ ಜಾಮೀನು ಪಡೆದ ಇತರ ಆರೋಪಿಗಳಲ್ಲಿ ವರವರ ರಾವ್, ಸುಧಾ ಭಾರದ್ವಾಜ್, ಆನಂದ್ ತೇಲ್ತುಂಬ್ಡೆ, ವೆರ್ನಾನ್ ಗೊನ್ಸಾಲ್ವೆಸ್, ಅರುಣ್ ಫೆರೇರಾ, ಶೋಮಾ ಸೇನ್, ಗೌತಮ್ ನವಲಖಾ ಮತ್ತು ಮಹೇಶ್ ರಾವತ್ ಸೇರಿದ್ದಾರೆ.

ಆದಾಗ್ಯೂ, ಎನ್‌ಐಎ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಆದೇಶವನ್ನು ಪ್ರಶ್ನಿಸಿದ ನಂತರ ಮಹೇಶ್ ರಾವತ್ ಅವರು ಜೈಲಿನಲ್ಲೇ ಇದ್ದರು. ಎಲ್‌ಎಲ್‌ಬಿ ಪರೀಕ್ಷೆಗೆ ಹಾಜರಾಗಲು ಅನುವು ಮಾಡಿಕೊಡಲು ವಿಶೇಷ ಎನ್‌ಐಎ ನ್ಯಾಯಾಲಯ ಮಂಗಳವಾರ (ಜ.14) ಅವರಿಗೆ 18 ದಿನಗಳ ಮಧ್ಯಂತರ ಜಾಮೀನು ನೀಡಿದೆ.

ಆರೋಪಿಗಳಲ್ಲಿ ಒಬ್ಬರಾದ ಸ್ಟಾನ್ ಸ್ವಾಮಿ 2021ರಲ್ಲಿ ಜೈಲಿನಲ್ಲಿದ್ದಾಗ ನಿಧನರಾದರು.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣದ ತನಿಖೆಯನ್ನು ಪುಣೆ ಪೊಲೀಸರಿಂದ ವಹಿಸಿಕೊಂಡು ಆರೋಪಪಟ್ಟಿ ಸಲ್ಲಿಸಿತ್ತು. ಆದರೆ, ವಿಶೇಷ ನ್ಯಾಯಾಲಯವು ಇನ್ನೂ ಆರೋಪಗಳನ್ನು ರೂಪಿಸಿಲ್ಲ.

ಜೂನ್ 2018ರಲ್ಲಿ ದೆಹಲಿಯ ತಮ್ಮ ಮನೆಯಿಂದ ಬಂಧಿಸಲ್ಪಟ್ಟ ವಿಲ್ಸನ್ ಅವರನ್ನು ತನಿಖಾ ಸಂಸ್ಥೆಗಳು ನಗರ ಮಾವೋವಾದಿಗಳ ಪ್ರಮುಖ ನಾಯಕರಲ್ಲಿ ಒಬ್ಬರು ಎಂದು ಬಣ್ಣಿಸಿವೆ. ಧಾವಳೆ ನಿಷೇಧಿತ ಕಮ್ಯುನಿಸ್ಟ್ ಪಕ್ಷ (ಮಾವೋವಾದಿ) ದ ಸಕ್ರಿಯ ಸದಸ್ಯರಾಗಿದ್ದರು ಎಂದು ಆರೋಪಿಸಲಾಗಿದೆ.

ಆಗಸ್ಟ್ 2021ರಲ್ಲಿ ಸಲ್ಲಿಸಲಾದ ಎನ್‌ಐಎ ಆರೋಪಪಟ್ಟಿಯಲ್ಲಿ, ವಿಲ್ಸನ್ ಮತ್ತು ಇತರ ಆರೋಪಿಗಳು ನಿಷೇಧಿತ ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದರು, ಅವರು ಸರ್ಕಾರವನ್ನು ದುರ್ಬಲಗೊಳಿಸಲು ಮತ್ತು ರಾಜ್ಯವನ್ನು ತಮ್ಮ ವಶಕ್ಕೆ ಪಡೆಯಲು ಸಶಸ್ತ್ರ ಹೋರಾಟದ ಮೂಲಕ ‘ಜನತಾ ಸರ್ಕಾರ್’ ಸ್ಥಾಪಿಸಲು ಬಯಸಿದ್ದರು ಎಂದು ಆರೋಪಿಸಲಾಗಿದೆ.

ಆರೋಪಿಗಳ ವಿರುದ್ಧ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಸಾಮರಸ್ಯ ಕಾಪಾಡಿಕೊಳ್ಳಲು ಹಾನಿಕರವಾದ ಕೃತ್ಯಗಳನ್ನು ಮಾಡುವುದು, ಸರ್ಕಾರದ ವಿರುದ್ಧ ಯುದ್ಧ ನಡೆಸುವುದು ಮತ್ತು ಕಠಿಣ ಭಯೋತ್ಪಾದನಾ ವಿರೋಧಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ (ಯುಎಪಿಎ) ವಿವಿಧ ಸೆಕ್ಷನ್‌ಗಳಡಿ ಒಂದು ಡಜನ್‌ಗೂ ಹೆಚ್ಚು ಆರೋಪಗಳನ್ನು ಹೊರಿಸಲಾಗಿದೆ.

ಮಣಿಪುರದ ಜನರನ್ನು ಭೇಟಿ ಮಾಡಲು ಮೋದಿಗೆ ಇನ್ನೂ ಸಮಯ ಸಿಕ್ಕಿಲ್ಲ – ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...