Homeಅಂತರಾಷ್ಟ್ರೀಯಕದನ ವಿರಾಮದ ನಡುವೆ ಪ್ಯಾಲೆಸ್ತೀನ್‌ನ ಪ್ರಮುಖ ಪತ್ರಕರ್ತನ ಗುಂಡಿಕ್ಕಿ ಹತ್ಯೆ

ಕದನ ವಿರಾಮದ ನಡುವೆ ಪ್ಯಾಲೆಸ್ತೀನ್‌ನ ಪ್ರಮುಖ ಪತ್ರಕರ್ತನ ಗುಂಡಿಕ್ಕಿ ಹತ್ಯೆ

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮ ಜಾರಿಯಾಗುತ್ತಿರುವ ನಡುವೆ, ಪ್ಯಾಲೆಸ್ತೀನ್‌ನ ಪ್ರಮುಖ ಪತ್ರಕರ್ತ ಸಾಲೇಹ್ ಅಲ್‌-ಜಾಫರಾವಿ ಅವರನ್ನು ಶಸ್ತ್ರದಾರಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ.

ಯುದ್ಧದ ವರದಿ ಮಾಡುವ ವಿಡಿಯೋಗಳಿಂದ ಖ್ಯಾತಿ ಗಳಿಸಿದ್ದ 28 ವರ್ಷದ ಜಾಫರಾವಿ ಅವರನ್ನು, ಗಾಝಾ ನಗರದ ಸಬ್ರಾ ಸಮೀಪ ನಡೆದ ಘರ್ಷಣೆಗಳ ವರದಿ ಮಾಡುವಾಗ ಸಶಸ್ತ್ರ ಗುಂಪಿನ ಸದಸ್ಯ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ತನ್ನ ಸನದ್ ಏಜೆನ್ಸಿಯು ಕೆಲವು ವರದಿಗಾರರು ಮತ್ತು ಹೋರಾಟಗಾರರು ಹಂಚಿಕೊಂಡಿರುವ ವಿಡಿಯೋಗಳನ್ನು ಪರಿಶೀಲಿಸಿದೆ. ಆ ವಿಡಿಯೋದಲ್ಲಿ ‘ಪ್ರೆಸ್’ ಎಂದು ಬರೆದ ಜಾಕೆಟ್ ಧರಿಸಿರುವ ಒಬ್ಬರು ವ್ಯಕ್ತಿಯ ದೇಹ ಟ್ರಕ್ ಒಂದರ ಹಿಂದೆ ಬಿದ್ದಿರುವುದು ಕಾಣಿಸಿದೆ. ಸಾಲೇಹ್ ಅಲ್‌-ಜಾಫರಾವಿ ಭಾನುವಾರ ಬೆಳಿಗ್ಗೆಯಿಂದ ಕಾಣಿಯಾಗಿದ್ದಾರೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ವಿವರಿಸಿದೆ.

ಭಾನುವಾರ ಸಬ್ರಾದಲ್ಲಿ ಹಮಾಸ್, ಭದ್ರತಾ ಪಡೆಗಳು ಮತ್ತು ಡೋಗ್ಮುಶ್ ಕುಟುಂಬದ ಹೋರಾಟಗಾರರ ನಡುವೆ ಘರ್ಷಣೆಗಳು ನಡೆದಿವೆ ಎಂದು ಪ್ಯಾಲೆಸ್ತೀನ್ ಮೂಲಗಳು ತಿಳಿಸಿವೆ. ಆದರೆ, ಸ್ಥಳೀಯ ಅಧಿಕಾರಿಗಳು ಇದನ್ನು ದೃಢಪಡಿಸಿಲ್ಲ ಎಂದು ಅಲ್‌-ಜಝೀರಾ ಹೇಳಿದೆ.

ಸಬ್ರಾದಲ್ಲಿ ನಡೆದ ಘರ್ಷಣೆ ಇಸ್ರೇಲ್ ಬೆಂಬಲಿತ ಶಸಸ್ತ್ರ ಗುಂಪೊಂದಕ್ಕೆ ಸಂಬಂಧಿಸಿದೆ ಎಂದು ಗಾಝಾದ ಒಳಾಡಳಿತ ಸಚಿವಾಲಯದ ಮೂಲವೊಂದು ಹೇಳಿರುವುದಾಗಿ ಆಲ್- ಜಝೀರಾ ತಿಳಿಸಿದೆ.

ದಕ್ಷಿಣ ಗಾಝಾದಿಂದ ಗಾಝಾ ನಗರಕ್ಕೆ ಹಿಂತಿರುಗುತ್ತಿರುವ ಸ್ಥಳಾಂತರಗೊಂಡ ಜನರನ್ನು ಶಸಸ್ತ್ರ ಗುಂಪಿನ ಸದಸ್ಯರು ಹತ್ಯೆಗೈದಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಆ ಗುಂಪಿನ ಮೇಲೆ ಮುತ್ತಿಗೆ ಹಾಕಿದವು ಎಂದು ಮೂಲಗಳನ್ನು ಉಲ್ಲೇಖಿಸಿ ಅಲ್‌-ಜಝೀರಾ ಹೇಳಿದೆ.

“ನಾನು ಪ್ರತಿ ಕ್ಷಣವೂ ಭಯದಲ್ಲಿ ಬದುಕುತ್ತಿದ್ದೇನೆ”

ಕಳೆದ ಜನವರಿಯಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಿಸಿದ್ದಾಗ ಅಲ್‌-ಜಝೀರಾ ಜೊತೆ ಮಾತನಾಡಿದ್ದ ಅಲ್‌-ಜಾಫರಾವಿ, ಉತ್ತರ ಗಾಝಾದಿಂದ ಸ್ಥಳಾಂತರಗೊಂಡ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು.

ತನ್ನ ಕೆಲಸದ ಕಾರಣದಿಂದಾಗಿ ಇಸ್ರೇಲ್‌ನಿಂದ ಹಲವಾರು ಬೆದರಿಕೆಗಳು ಬಂದಿವೆ ಎಂದು ಹೇಳಿಕೊಂಡಿದ್ದರು.

“ನಿಜ ಹೇಳಬೇಕೆಂದರೆ, ನಾನು ಪ್ರತಿ ಸೆಕೆಂಡ್ ಭಯದಲ್ಲಿ ಬದುಕುತ್ತಿದ್ದೇನೆ. ವಿಶೇಷವಾಗಿ ಇಸ್ರೇಲಿ ಪಡೆಗಳು ನನ್ನ ಬಗ್ಗೆ ಏನು ಹೇಳುತ್ತಿದೆ ಎಂದು ಕೇಳಿದ ನಂತರ. ಮುಂದಿನ ಸೆಕೆಂಡ್ ಏನಾಗುತ್ತದೆ ಎಂದು ತಿಳಿಯದೆ ನಾನು ಎರಡನೇ ದರ್ಜೆಯ ಜೀವನ ನಡೆಸುತ್ತಿದ್ದೇನೆ” ಎಂದಿದ್ದರು.

ಅಕ್ಟೋಬರ್ 2023ರಲ್ಲಿ ಇಸ್ರೇಲ್ ಗಾಝಾ ಮೇಲೆ ಆಕ್ರಮಣ ಪ್ರಾರಂಭಿಸಿದಾಗಿನಿಂದ ಗಾಝಾದಲ್ಲಿ 270ಕ್ಕೂ ಹೆಚ್ಚು ಮಾಧ್ಯಮ ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಕದನ ವಿರಾಮ: ಮೊದಲ ಹಂತದಲ್ಲಿ 7 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಹಸ್ತಾಂತರಿಸಿದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...