Homeಅಂತರಾಷ್ಟ್ರೀಯಕದನ ವಿರಾಮದ ನಡುವೆ ಪ್ಯಾಲೆಸ್ತೀನ್‌ನ ಪ್ರಮುಖ ಪತ್ರಕರ್ತನ ಗುಂಡಿಕ್ಕಿ ಹತ್ಯೆ

ಕದನ ವಿರಾಮದ ನಡುವೆ ಪ್ಯಾಲೆಸ್ತೀನ್‌ನ ಪ್ರಮುಖ ಪತ್ರಕರ್ತನ ಗುಂಡಿಕ್ಕಿ ಹತ್ಯೆ

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮ ಜಾರಿಯಾಗುತ್ತಿರುವ ನಡುವೆ, ಪ್ಯಾಲೆಸ್ತೀನ್‌ನ ಪ್ರಮುಖ ಪತ್ರಕರ್ತ ಸಾಲೇಹ್ ಅಲ್‌-ಜಾಫರಾವಿ ಅವರನ್ನು ಶಸ್ತ್ರದಾರಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ.

ಯುದ್ಧದ ವರದಿ ಮಾಡುವ ವಿಡಿಯೋಗಳಿಂದ ಖ್ಯಾತಿ ಗಳಿಸಿದ್ದ 28 ವರ್ಷದ ಜಾಫರಾವಿ ಅವರನ್ನು, ಗಾಝಾ ನಗರದ ಸಬ್ರಾ ಸಮೀಪ ನಡೆದ ಘರ್ಷಣೆಗಳ ವರದಿ ಮಾಡುವಾಗ ಸಶಸ್ತ್ರ ಗುಂಪಿನ ಸದಸ್ಯ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ತನ್ನ ಸನದ್ ಏಜೆನ್ಸಿಯು ಕೆಲವು ವರದಿಗಾರರು ಮತ್ತು ಹೋರಾಟಗಾರರು ಹಂಚಿಕೊಂಡಿರುವ ವಿಡಿಯೋಗಳನ್ನು ಪರಿಶೀಲಿಸಿದೆ. ಆ ವಿಡಿಯೋದಲ್ಲಿ ‘ಪ್ರೆಸ್’ ಎಂದು ಬರೆದ ಜಾಕೆಟ್ ಧರಿಸಿರುವ ಒಬ್ಬರು ವ್ಯಕ್ತಿಯ ದೇಹ ಟ್ರಕ್ ಒಂದರ ಹಿಂದೆ ಬಿದ್ದಿರುವುದು ಕಾಣಿಸಿದೆ. ಸಾಲೇಹ್ ಅಲ್‌-ಜಾಫರಾವಿ ಭಾನುವಾರ ಬೆಳಿಗ್ಗೆಯಿಂದ ಕಾಣಿಯಾಗಿದ್ದಾರೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ವಿವರಿಸಿದೆ.

ಭಾನುವಾರ ಸಬ್ರಾದಲ್ಲಿ ಹಮಾಸ್, ಭದ್ರತಾ ಪಡೆಗಳು ಮತ್ತು ಡೋಗ್ಮುಶ್ ಕುಟುಂಬದ ಹೋರಾಟಗಾರರ ನಡುವೆ ಘರ್ಷಣೆಗಳು ನಡೆದಿವೆ ಎಂದು ಪ್ಯಾಲೆಸ್ತೀನ್ ಮೂಲಗಳು ತಿಳಿಸಿವೆ. ಆದರೆ, ಸ್ಥಳೀಯ ಅಧಿಕಾರಿಗಳು ಇದನ್ನು ದೃಢಪಡಿಸಿಲ್ಲ ಎಂದು ಅಲ್‌-ಜಝೀರಾ ಹೇಳಿದೆ.

ಸಬ್ರಾದಲ್ಲಿ ನಡೆದ ಘರ್ಷಣೆ ಇಸ್ರೇಲ್ ಬೆಂಬಲಿತ ಶಸಸ್ತ್ರ ಗುಂಪೊಂದಕ್ಕೆ ಸಂಬಂಧಿಸಿದೆ ಎಂದು ಗಾಝಾದ ಒಳಾಡಳಿತ ಸಚಿವಾಲಯದ ಮೂಲವೊಂದು ಹೇಳಿರುವುದಾಗಿ ಆಲ್- ಜಝೀರಾ ತಿಳಿಸಿದೆ.

ದಕ್ಷಿಣ ಗಾಝಾದಿಂದ ಗಾಝಾ ನಗರಕ್ಕೆ ಹಿಂತಿರುಗುತ್ತಿರುವ ಸ್ಥಳಾಂತರಗೊಂಡ ಜನರನ್ನು ಶಸಸ್ತ್ರ ಗುಂಪಿನ ಸದಸ್ಯರು ಹತ್ಯೆಗೈದಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಆ ಗುಂಪಿನ ಮೇಲೆ ಮುತ್ತಿಗೆ ಹಾಕಿದವು ಎಂದು ಮೂಲಗಳನ್ನು ಉಲ್ಲೇಖಿಸಿ ಅಲ್‌-ಜಝೀರಾ ಹೇಳಿದೆ.

“ನಾನು ಪ್ರತಿ ಕ್ಷಣವೂ ಭಯದಲ್ಲಿ ಬದುಕುತ್ತಿದ್ದೇನೆ”

ಕಳೆದ ಜನವರಿಯಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಿಸಿದ್ದಾಗ ಅಲ್‌-ಜಝೀರಾ ಜೊತೆ ಮಾತನಾಡಿದ್ದ ಅಲ್‌-ಜಾಫರಾವಿ, ಉತ್ತರ ಗಾಝಾದಿಂದ ಸ್ಥಳಾಂತರಗೊಂಡ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು.

ತನ್ನ ಕೆಲಸದ ಕಾರಣದಿಂದಾಗಿ ಇಸ್ರೇಲ್‌ನಿಂದ ಹಲವಾರು ಬೆದರಿಕೆಗಳು ಬಂದಿವೆ ಎಂದು ಹೇಳಿಕೊಂಡಿದ್ದರು.

“ನಿಜ ಹೇಳಬೇಕೆಂದರೆ, ನಾನು ಪ್ರತಿ ಸೆಕೆಂಡ್ ಭಯದಲ್ಲಿ ಬದುಕುತ್ತಿದ್ದೇನೆ. ವಿಶೇಷವಾಗಿ ಇಸ್ರೇಲಿ ಪಡೆಗಳು ನನ್ನ ಬಗ್ಗೆ ಏನು ಹೇಳುತ್ತಿದೆ ಎಂದು ಕೇಳಿದ ನಂತರ. ಮುಂದಿನ ಸೆಕೆಂಡ್ ಏನಾಗುತ್ತದೆ ಎಂದು ತಿಳಿಯದೆ ನಾನು ಎರಡನೇ ದರ್ಜೆಯ ಜೀವನ ನಡೆಸುತ್ತಿದ್ದೇನೆ” ಎಂದಿದ್ದರು.

ಅಕ್ಟೋಬರ್ 2023ರಲ್ಲಿ ಇಸ್ರೇಲ್ ಗಾಝಾ ಮೇಲೆ ಆಕ್ರಮಣ ಪ್ರಾರಂಭಿಸಿದಾಗಿನಿಂದ ಗಾಝಾದಲ್ಲಿ 270ಕ್ಕೂ ಹೆಚ್ಚು ಮಾಧ್ಯಮ ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಕದನ ವಿರಾಮ: ಮೊದಲ ಹಂತದಲ್ಲಿ 7 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಹಸ್ತಾಂತರಿಸಿದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...