Homeಮುಖಪುಟಸಂತ್ರಸ್ತೆಯು ವಿವಾಹಿತೆಯಾಗಿದ್ದರೆ ಮದುವೆಯಾಗುವುದಾಗಿ ನೀಡಿದ ಭರವಸೆ ಕಾನೂನಿನ ಅಡಿ ಬರುವುದಿಲ್ಲ: ಕೇರಳ ಹೈಕೋರ್ಟ್

ಸಂತ್ರಸ್ತೆಯು ವಿವಾಹಿತೆಯಾಗಿದ್ದರೆ ಮದುವೆಯಾಗುವುದಾಗಿ ನೀಡಿದ ಭರವಸೆ ಕಾನೂನಿನ ಅಡಿ ಬರುವುದಿಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ವಿವಾಹದ ಭರವಸೆ ನೀಡಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ಕೇರಳ ಹೈಕೋರ್ಟ್, 25 ವರ್ಷದ ಯುವಕನ ವಿರುದ್ಧದ ಅತ್ಯಾಚಾರದ ಆರೋಪವನ್ನು ನವೆಂಬರ್ 22ರಂದು ರದ್ದುಗೊಳಿಸಿದೆ.

ತನ್ನ ಪತಿಯಿಂದ ಬೇರ್ಪಟ್ಟಿದ್ದ ಮಹಿಳೆಯು ವಿಚ್ಛೇದನ ಪ್ರಕ್ರಿಯೆಯಲ್ಲಿದ್ದರು. ಇದೇ ವೇಳೆ ಲೈಂಗಿಕ ಆರೋಪದ ಪ್ರಕರಣ ದಾಖಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಿ ಹಾಗೂ ಅರ್ಜಿದಾರರು ಇಬ್ಬರೂ ಸಾಮಾಜಿಕ ಮಾಧ್ಯಮಗಳ ಮೂಲಕ ಪರಸ್ಪರ ಭೇಟಿಯಾದಾಗ ಆಸ್ಟ್ರೇಲಿಯಾದಲ್ಲಿದ್ದರು. ಆರೋಪಿಯು ತನ್ನನ್ನು ಮದುವೆಯಾಗುವುದಾಗಿ ನೀಡಿದ ಭರವಸೆಯ ಮೇರೆಗೆ ಆಸ್ಟ್ರೇಲಿಯದಲ್ಲಿದ್ದಾಗ ಎರಡು ಸಂದರ್ಭಗಳಲ್ಲಿ ಆತನೊಂದಿಗೆ ಸಮ್ಮತಿಯ ಲೈಂಗಿಕ ಸಂಪರ್ಕವನ್ನು ಹೊಂದಿರುವುದಾಗಿ ಮಹಿಳೆ ತಿಳಿಸಿದ್ದರು.

ತನ್ನ ಮೇಲೆ ಬಲವಂತವಾಗಿ ಲೈಂಗಿಕತೆ ನಡೆಸಲಾಗಿದೆ ಎಂದು ಮಹಿಳೆ ಆರೋಪಿಸಿದ್ದರೂ, ಮೊದಲ ಮಾಹಿತಿ ಹೇಳಿಕೆಯನ್ನು (ಎಫ್‌ಐಎಸ್) ಓದುವಾಗ “ಲೈಂಗಿಕ ಸಂಬಂಧವು ಸಹಮತದ ಸ್ವರೂಪದ್ದಾಗಿದೆ ಎಂಬುದು ಸ್ಪಷ್ಟವಾಗಿದೆ” ಎಂದು ಹೈಕೋರ್ಟ್ ಹೇಳಿದೆ.

“ವಿವಾಹಿತ ಮಹಿಳೆಯಾಗಿರುವ ದೂರುದಾರರು ತನ್ನ ಪತಿಗೆ ಇನ್ನೂ ವಿಚ್ಛೇದನ ನೀಡದ ಕಾರಣ ಆ ವ್ಯಕ್ತಿಯೊಂದಿಗೆ ಕಾನೂನುಬದ್ಧ ವಿವಾಹವಾಗಲು ಸಾಧ್ಯವಿಲ್ಲ. ಇದನ್ನು ತಿಳಿದಾಗ ಆ ವ್ಯಕ್ತಿಯೊಂದಿಗೆ ಸ್ವಯಂಪ್ರೇರಣೆಯಿಂದ ಲೈಂಗಿಕ ಸಂಬಂಧ ಸಾಧಿಸಿದ್ದಾರೆ” ಎಂದು ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರ ಏಕಸದಸ್ಯ ಪೀಠವು ಅಭಿಪ್ರಾಯಪಟ್ಟಿದೆ.

“ಆರೋಪಿಯು ವಿವಾಹಿತ ಮಹಿಳೆಗೆ ತಾನು ಮದುವೆಯಾಗುತ್ತೇನೆಂದು ಭರವಸೆ ನೀಡಿದ್ದನೆಂಬ ಆರೋಪವು ಕಾನೂನಿನ ಅಡಿ ಜಾರಿಯಾಗದ ಭರವಸೆಯಾಗಿದೆ” ಎಂದು ಈ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ಭೀಮಾ ಕೊರೆಗಾಂವ್‌ – ಎಲ್ಗಾರ್ ಪರಿಷತ್ ಪ್ರಕರಣ: ಚಿಂತಕ ಆನಂದ್ ತೇಲ್ತುಂಬ್ಡೆ ಜಾಮೀನಿಗೆ ಸುಪ್ರೀಂಕೋರ್ಟ್ ಸಮ್ಮತಿ

ಅಂತಹ ಜಾರಿಗೊಳಿಸಲಾಗದ ಮತ್ತು ಕಾನೂನುಬಾಹಿರ ಭರವಸೆಯು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಕಾನೂನು ಕ್ರಮಕ್ಕೆ ಆಧಾರವಾಗುವುದಿಲ್ಲ. ಇಲ್ಲಿ, ಮದುವೆಯಾಗುವ ಭರವಸೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಏಕೆಂದರೆ ಸಂತ್ರಸ್ತೆ ವಿವಾಹಿತ ಮಹಿಳೆಯು ಕಾನೂನಿನ ಅಡಿಯಲ್ಲಿ ಆರೋಪಿಯ ಜೊತೆ ಕಾನೂನುಬದ್ಧ ವಿವಾಹವಾಗಲು ಸಾಧ್ಯವಿಲ್ಲ ಎಂದು ತಿಳಿದಿದ್ದರು ಎಂದು ನ್ಯಾಯಮೂರ್ತಿ ಎಡಪ್ಪಗತ್ ಹೇಳಿದ್ದಾರೆ.

ಈ ಕಾರಣಗಳಿಗಾಗಿ ಐಪಿಸಿಯ ಸೆಕ್ಷನ್ 376, 417 (ವಂಚನೆ), ಮತ್ತು 493 (ಕಾನೂನುಬದ್ಧ ವಿವಾಹದ ನಂಬಿಕೆಯನ್ನು ಮೋಸಗೊಳಿಸುವುದು) ಅಡಿಯಲ್ಲಿನ ಅಪರಾಧಗಳನ್ನು ಆರೋಪಿಯ ವಿರುದ್ಧ ಹೊರಿಸಲು ಸಾಧ್ಯವಿಲ್ಲ. ಆತನ ಮನವಿಯನ್ನು ಅನುಮತಿಸಲಾಗಿದೆ. ಆತನ ವಿರುದ್ಧದ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರ್ಟ್ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...