Homeಮುಖಪುಟಸಂತ್ರಸ್ತೆಯು ವಿವಾಹಿತೆಯಾಗಿದ್ದರೆ ಮದುವೆಯಾಗುವುದಾಗಿ ನೀಡಿದ ಭರವಸೆ ಕಾನೂನಿನ ಅಡಿ ಬರುವುದಿಲ್ಲ: ಕೇರಳ ಹೈಕೋರ್ಟ್

ಸಂತ್ರಸ್ತೆಯು ವಿವಾಹಿತೆಯಾಗಿದ್ದರೆ ಮದುವೆಯಾಗುವುದಾಗಿ ನೀಡಿದ ಭರವಸೆ ಕಾನೂನಿನ ಅಡಿ ಬರುವುದಿಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ವಿವಾಹದ ಭರವಸೆ ನೀಡಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ಕೇರಳ ಹೈಕೋರ್ಟ್, 25 ವರ್ಷದ ಯುವಕನ ವಿರುದ್ಧದ ಅತ್ಯಾಚಾರದ ಆರೋಪವನ್ನು ನವೆಂಬರ್ 22ರಂದು ರದ್ದುಗೊಳಿಸಿದೆ.

ತನ್ನ ಪತಿಯಿಂದ ಬೇರ್ಪಟ್ಟಿದ್ದ ಮಹಿಳೆಯು ವಿಚ್ಛೇದನ ಪ್ರಕ್ರಿಯೆಯಲ್ಲಿದ್ದರು. ಇದೇ ವೇಳೆ ಲೈಂಗಿಕ ಆರೋಪದ ಪ್ರಕರಣ ದಾಖಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಿ ಹಾಗೂ ಅರ್ಜಿದಾರರು ಇಬ್ಬರೂ ಸಾಮಾಜಿಕ ಮಾಧ್ಯಮಗಳ ಮೂಲಕ ಪರಸ್ಪರ ಭೇಟಿಯಾದಾಗ ಆಸ್ಟ್ರೇಲಿಯಾದಲ್ಲಿದ್ದರು. ಆರೋಪಿಯು ತನ್ನನ್ನು ಮದುವೆಯಾಗುವುದಾಗಿ ನೀಡಿದ ಭರವಸೆಯ ಮೇರೆಗೆ ಆಸ್ಟ್ರೇಲಿಯದಲ್ಲಿದ್ದಾಗ ಎರಡು ಸಂದರ್ಭಗಳಲ್ಲಿ ಆತನೊಂದಿಗೆ ಸಮ್ಮತಿಯ ಲೈಂಗಿಕ ಸಂಪರ್ಕವನ್ನು ಹೊಂದಿರುವುದಾಗಿ ಮಹಿಳೆ ತಿಳಿಸಿದ್ದರು.

ತನ್ನ ಮೇಲೆ ಬಲವಂತವಾಗಿ ಲೈಂಗಿಕತೆ ನಡೆಸಲಾಗಿದೆ ಎಂದು ಮಹಿಳೆ ಆರೋಪಿಸಿದ್ದರೂ, ಮೊದಲ ಮಾಹಿತಿ ಹೇಳಿಕೆಯನ್ನು (ಎಫ್‌ಐಎಸ್) ಓದುವಾಗ “ಲೈಂಗಿಕ ಸಂಬಂಧವು ಸಹಮತದ ಸ್ವರೂಪದ್ದಾಗಿದೆ ಎಂಬುದು ಸ್ಪಷ್ಟವಾಗಿದೆ” ಎಂದು ಹೈಕೋರ್ಟ್ ಹೇಳಿದೆ.

“ವಿವಾಹಿತ ಮಹಿಳೆಯಾಗಿರುವ ದೂರುದಾರರು ತನ್ನ ಪತಿಗೆ ಇನ್ನೂ ವಿಚ್ಛೇದನ ನೀಡದ ಕಾರಣ ಆ ವ್ಯಕ್ತಿಯೊಂದಿಗೆ ಕಾನೂನುಬದ್ಧ ವಿವಾಹವಾಗಲು ಸಾಧ್ಯವಿಲ್ಲ. ಇದನ್ನು ತಿಳಿದಾಗ ಆ ವ್ಯಕ್ತಿಯೊಂದಿಗೆ ಸ್ವಯಂಪ್ರೇರಣೆಯಿಂದ ಲೈಂಗಿಕ ಸಂಬಂಧ ಸಾಧಿಸಿದ್ದಾರೆ” ಎಂದು ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರ ಏಕಸದಸ್ಯ ಪೀಠವು ಅಭಿಪ್ರಾಯಪಟ್ಟಿದೆ.

“ಆರೋಪಿಯು ವಿವಾಹಿತ ಮಹಿಳೆಗೆ ತಾನು ಮದುವೆಯಾಗುತ್ತೇನೆಂದು ಭರವಸೆ ನೀಡಿದ್ದನೆಂಬ ಆರೋಪವು ಕಾನೂನಿನ ಅಡಿ ಜಾರಿಯಾಗದ ಭರವಸೆಯಾಗಿದೆ” ಎಂದು ಈ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ಭೀಮಾ ಕೊರೆಗಾಂವ್‌ – ಎಲ್ಗಾರ್ ಪರಿಷತ್ ಪ್ರಕರಣ: ಚಿಂತಕ ಆನಂದ್ ತೇಲ್ತುಂಬ್ಡೆ ಜಾಮೀನಿಗೆ ಸುಪ್ರೀಂಕೋರ್ಟ್ ಸಮ್ಮತಿ

ಅಂತಹ ಜಾರಿಗೊಳಿಸಲಾಗದ ಮತ್ತು ಕಾನೂನುಬಾಹಿರ ಭರವಸೆಯು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಕಾನೂನು ಕ್ರಮಕ್ಕೆ ಆಧಾರವಾಗುವುದಿಲ್ಲ. ಇಲ್ಲಿ, ಮದುವೆಯಾಗುವ ಭರವಸೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಏಕೆಂದರೆ ಸಂತ್ರಸ್ತೆ ವಿವಾಹಿತ ಮಹಿಳೆಯು ಕಾನೂನಿನ ಅಡಿಯಲ್ಲಿ ಆರೋಪಿಯ ಜೊತೆ ಕಾನೂನುಬದ್ಧ ವಿವಾಹವಾಗಲು ಸಾಧ್ಯವಿಲ್ಲ ಎಂದು ತಿಳಿದಿದ್ದರು ಎಂದು ನ್ಯಾಯಮೂರ್ತಿ ಎಡಪ್ಪಗತ್ ಹೇಳಿದ್ದಾರೆ.

ಈ ಕಾರಣಗಳಿಗಾಗಿ ಐಪಿಸಿಯ ಸೆಕ್ಷನ್ 376, 417 (ವಂಚನೆ), ಮತ್ತು 493 (ಕಾನೂನುಬದ್ಧ ವಿವಾಹದ ನಂಬಿಕೆಯನ್ನು ಮೋಸಗೊಳಿಸುವುದು) ಅಡಿಯಲ್ಲಿನ ಅಪರಾಧಗಳನ್ನು ಆರೋಪಿಯ ವಿರುದ್ಧ ಹೊರಿಸಲು ಸಾಧ್ಯವಿಲ್ಲ. ಆತನ ಮನವಿಯನ್ನು ಅನುಮತಿಸಲಾಗಿದೆ. ಆತನ ವಿರುದ್ಧದ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರ್ಟ್ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....