Homeಮುಖಪುಟಚುನಾವಣೆಯಲ್ಲಿ ಮಹಿಳೆಯರಿಗೆ ಭರವಸೆ ನೀಡಿದ್ದಷ್ಟೆ ಹಣ ಪಾವತಿ ಅಸಾಧ್ಯ: ಒಪ್ಪಿಕೊಂಡ ಮಹಾರಾಷ್ಟ್ರ ಸರ್ಕಾರ

ಚುನಾವಣೆಯಲ್ಲಿ ಮಹಿಳೆಯರಿಗೆ ಭರವಸೆ ನೀಡಿದ್ದಷ್ಟೆ ಹಣ ಪಾವತಿ ಅಸಾಧ್ಯ: ಒಪ್ಪಿಕೊಂಡ ಮಹಾರಾಷ್ಟ್ರ ಸರ್ಕಾರ

- Advertisement -
- Advertisement -

ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಆಡಳಿತರೂಢ ಮೈತ್ರಿಕೂಟವು ಕಳೆದ ವರ್ಷದ ವಿಧಾನಸಭಾ ಚುನಾವಣೆಗೆ ಮುನ್ನ ಭರವಸೆ ನೀಡಿದಂತೆ, ಲಡ್ಕಿ ಬಹಿನ್ ಯೋಜನೆಯಡಿ ಮಹಿಳೆಯರಿಗೆ ಮಾಸಿಕ ಆರ್ಥಿಕ ಸಹಾಯವನ್ನು 2,100 ರೂ.ಗಳಿಗೆ ಹೆಚ್ಚಿಸಲು ಸಾಧ್ಯವಿಲ್ಲ ಎಂದು ರಾಜ್ಯದ ಸಚಿವ ಸಂಜಯ್ ಶಿರ್ಸಾತ್ ಸೋಮವಾರ, ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಚುನಾವಣೆಯಲ್ಲಿ ಮಹಿಳೆಯರಿಗೆ

ಆದಾಗ್ಯೂ, ಪ್ರಸ್ತುತ ತಿಂಗಳಿಗೆ 1,500 ರೂ.ಗಳ ಮೊತ್ತವನ್ನು ವಿತರಿಸಲಾಗುವುದು ಎಂದು ಅವರು ಹೇಳಿದ್ದಾರೆ. ಯೋಜನೆಗೆ ಸಂಬಂಧಿಸಿದ ಚುನಾವಣಾ ಭರವಸೆಯನ್ನು ಸರ್ಕಾರವು ಈಡೇರಿಸಲು ಸಾಧ್ಯವಾಗುವುದಿಲ್ಲ ಎಂದು ಸಚಿವರು ಸಾರ್ವಜನಿಕವಾಗಿ ಒಪ್ಪಿಕೊಂಡಿರುವುದು ಇದೇ ಮೊದಲು.

“ಮಾಸಿಕ 1,500 ರೂ.ಗಳನ್ನು 2,100 ರೂ.ಗಳಿಗೆ ಹೆಚ್ಚಿಸಲಾಗುವುದಿಲ್ಲ ಎಂಬುದು ವಾಸ್ತವ” ಎಂದು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಗುಂಪಿನ ಸದಸ್ಯ ಶಿರ್ಸಾತ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. “ಈ ಯೋಜನೆಯನ್ನು ನಿಲ್ಲಿಸಲಾಗುತ್ತದೆ ಅಥವಾ ಮೊತ್ತವನ್ನು ಕಡಿತಗೊಳಿಸಲಾಗುತ್ತದೆ ಎಂದು ಹೇಳುತ್ತಾ ಸಮಸ್ಯೆ ಸೃಷ್ಟಿಸಲಾಗುತ್ತದೆ. ಅದರೆ, ಲಡ್ಕಿ ಬಹಿನ್ ಯೋಜನೆಯಡಿಯಲ್ಲಿನ ಬದ್ಧತೆಯನ್ನು ಈಡೇರಿಸಲಾಗುತ್ತದೆ.” ಎಂದು ಅವರು ಹೇಳಿದ್ದಾರೆ.

ತಮ್ಮ ಸಚಿವಾಲಯವು ಸುಮಾರು 3,000 ಕೋಟಿ ರೂಪಾಯಿಗಳ ಬಾಕಿ ಉಳಿಸಿಕೊಂಡಿದೆ ಎಂದು ಸಚಿವ ಶಿರ್ಸತ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನನ್ನ ಇಲಾಖೆಯ ಅಗತ್ಯಗಳನ್ನು ಸಹಾನುಭೂತಿಯಿಂದ ಪರಿಗಣಿಸಲು ಮತ್ತು ನಿಯಮಗಳ ಪ್ರಕಾರ ಸರಿಯಾದ ಹಣವನ್ನು ಬಿಡುಗಡೆ ಮಾಡುವುದನ್ನು ಖಚಿತಪಡಿಸಿಕೊಳ್ಳಲು ನಾನು ಸುಮಾರು ಒಂದು ತಿಂಗಳ ಹಿಂದೆ ಮುಖ್ಯಮಂತ್ರಿ [ದೇವೇಂದ್ರ ಫಡ್ನವಿಸ್] ಅವರನ್ನು ವಿನಂತಿಸಿದ್ದೆ” ಎಂದು ಅವರು ಹೇಳಿರುವುದಾಗಿ ವರದಿಯಾಗಿದೆ.

“ನಾನು ಇದನ್ನು ಲಿಖಿತವಾಗಿ ತಿಳಿಸಿದ್ದೇನೆ ಮತ್ತು [ರಾಜ್ಯ ಹಣಕಾಸು ಸಚಿವ ಅಜಿತ್ ಪವಾರ್] ಅವರೊಂದಿಗೆ ಮಾತನಾಡಿದ್ದೇನೆ” ಎಂದು ಅವರು ಹೇಳಿದ್ದಾರೆ.

ಮೇ 3 ರಂದು, ಅಜಿತ್ ಪವಾರ್ ನೇತೃತ್ವದ ಹಣಕಾಸು ಇಲಾಖೆಯು ಅವರಿಗೆ ತಿಳಿಸದೆ ತಮ್ಮ ಸಚಿವಾಲಯದಿಂದ ಹಣವನ್ನು ಅಕ್ರಮವಾಗಿ ತಿರುಗಿಸಿದೆ ಎಂದು ಶಿರ್ಸತ್ ಆರೋಪಿಸಿದ್ದರು. “ಅವರು [ಬಜೆಟ್ ಸಮಯದಲ್ಲಿ] ನನನಗೆ ತಿಳಿಸದೆ ನನ್ನ ಇಲಾಖೆಯಿಂದ 7,000 ಕೋಟಿ ರೂಪಾಯಿಗಳನ್ನು ತಿರುಗಿಸಿದ್ದಾರೆ” ಎಂದು ಅವರು ಹೇಳಿದ್ದರು.

“ಸರ್ಕಾರವು ಸಾಮಾಜಿಕ ನ್ಯಾಯ ಇಲಾಖೆ ಕಾರ್ಯನಿರ್ವಹಿಸಲು ಬಯಸದಿದ್ದರೆ ಅಥವಾ ಅವರು ಹಣವನ್ನು ಖರ್ಚು ಮಾಡಲು ಬಯಸದಿದ್ದರೆ, ಅವರು ಈ ಇಲಾಖೆಯನ್ನು ಮುಚ್ಚಬೇಕು.” ಎಂದು ಅವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗೆ ಹಣವನ್ನು ತಿರುಗಿಸುವುದು ಮುಂದುವರಿದರೆ, ಹಲವಾರು ಯೋಜನೆಗಳು ಸ್ಥಗಿತಗೊಳ್ಳಬಹುದು ಎಂದು ಶಿರ್ಸತ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಲಡ್ಕಿ ಬಹಿನ್ ಯೋಜನೆಯನ್ನು ತಾನು ವಿರೋಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಚುನಾವಣೆಯಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಇದು ಸಹಾಯ ಮಾಡಿದೆ ಎಂದು ಹೇಳಿದ್ದಾರೆ.

ಲಡ್ಕಿ ಬಹಿನ್ ಯೋಜನೆಯಡಿಯಲ್ಲಿ, ವಾರ್ಷಿಕ ಕುಟುಂಬ ಆದಾಯ 2.5 ಲಕ್ಷ ರೂ.ಗಿಂತ ಕಡಿಮೆ ಇರುವ 21 ರಿಂದ 65 ವರ್ಷದೊಳಗಿನ ಮಹಿಳೆಯರು ನೇರ ಬ್ಯಾಂಕ್ ವರ್ಗಾವಣೆಯ ರೂಪದಲ್ಲಿ ತಿಂಗಳಿಗೆ 1,500 ರೂ.ಗಳನ್ನು ಪಡೆಯುತ್ತಾರೆ.

ನವೆಂಬರ್‌ನಲ್ಲಿ ನಡೆದ 288 ಸದಸ್ಯರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಮಹಾಯುತಿ ಮೈತ್ರಿಕೂಟ 230 ಸ್ಥಾನಗಳನ್ನು ಗೆಲ್ಲುವಲ್ಲಿ ಈ ನಗದು ವರ್ಗಾವಣೆ ಯೋಜನೆ ನಿರ್ಣಾಯಕ ಪಾತ್ರ ವಹಿಸಿದೆ ಎಂದು ಹೇಳಲಾಗುತ್ತದೆ. ಮೈತ್ರಿಯಲ್ಲಿ ಬಿಜೆಪಿ, ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಬಣ ಇವೆ. ಚುನಾವಣೆಯಲ್ಲಿ ಮಹಿಳೆಯರಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕ್ ನಟನ ‘ಅಬೀರ್ ಗುಲಾಲ್’ ಚಿತ್ರ ನಿಷೇಧ: ‘ದಿ ಕಾಶ್ಮೀರ್ ಫೈಲ್ಸ್’ ತೊಂದರೆಯಿಲ್ಲದೆ ಬಿಡುಗಡೆಯಾಗುತ್ತೆ ಎಂದ ಪ್ರಕಾಶ್ ರಾಜ್

ಪಾಕ್ ನಟನ ‘ಅಬೀರ್ ಗುಲಾಲ್’ ಚಿತ್ರ ನಿಷೇಧ: ‘ದಿ ಕಾಶ್ಮೀರ್ ಫೈಲ್ಸ್’ ತೊಂದರೆಯಿಲ್ಲದೆ ಬಿಡುಗಡೆಯಾಗುತ್ತೆ ಎಂದ ಪ್ರಕಾಶ್ ರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...